Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬಿಸಿಬಿಸಿ ಅರಿಶಿನ ಹಾಲು-ಗಂಟಲು ಕೆರೆತ ಮಂಗಮಾಯ!
ಬಿಟ್ಟುಬಿಟ್ಟು ಬರುವ ಮಳೆ, ಆಗಾಗ ಬದಲಾಗುತ್ತಿರುವ ಹವಾಮಾನದಿಂದ ಹಲವಾರು ರೀತಿಯ ಅನಾರೋಗ್ಯಗಳು ನಮ್ಮನ್ನು ಕಾಡಲು ಆರಂಭಿಸುತ್ತದೆ. ಅದರಲ್ಲೂ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೆ ಆಗ ಜ್ವರ, ಶೀತ, ನೆಗಡಿ, ಕೆಮ್ಮು ಬೇಗನೆ ಬಂದು ವಕ್ಕರಿಸಿಕೊಳ್ಳುತ್ತದೆ. ಜ್ವರ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಸೂಕ್ತ.
ಆದರೆ ಗಂಟಲು ಕೆರೆತ ಸಮಸ್ಯೆ ಕಾಣಿಸಿಕೊಂಡರೆ ಆಗ ಮನೆ ಹಾಗೂ ಕಚೇರಿಯಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಗಂಟಲು ಕೆರೆತ ಕಾಣಿಸಿಕೊಂಡಾಗ ಮನೆಮದ್ದನ್ನು ಬಳಸಿದರೆ ಅದರಿಂದ ಮುಕ್ತಿ ಪಡೆಯಬಹುದು. ಅರಿಶಿನ ಹಾಕಿದ ಹಾಲನ್ನು ದಿನದಲ್ಲಿ 2-3 ಸಲ ಕುಡಿಯುವುದರಿಂದ ಗಂಟಲು ಕೆರೆತ ನಿವಾರಿಸಬಹುದು.

ಅರಿಶಿನದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಹಾಗೂ ಉರಿಯೂತ ಶಮನಕಾರಿ ಗುಣಗಳಿವೆ. ಇದು ಬ್ಯಾಕ್ಟೀರಿಯಾ ಬೆಳೆಯುವುದನ್ನು ತಡೆದು ಉರಿಯೂತವನ್ನು ಶಮನಗೊಳಿಸುತ್ತದೆ. ಇದರಿಂದ ಗಂಟಲಿನಲ್ಲಿನ ಕೆರೆತ ಕಡಿಮೆಯಾಗುತ್ತದೆ. ನುಂಗುವಾಗ ಉಂಟಾಗುವ ಬಿಸಿಯಾಗುವ ಅನುಭವ, ನೋವು, ಊತವನ್ನು ನಿಯಂತ್ರಿಸುತ್ತದೆ. ಶೀತ, ಗಂಟಲು ಕೆರೆತ ಸಮಸ್ಯೆಗೆ, ಜೀರಿಗೆ ಕಷಾಯ ಸಾಕು
ಗಂಟಲಿನಲ್ಲಿ ಅಂಟಿರುವಂತಹ ಲೋಳೆಯನ್ನು ಕಡಿಮೆ ಮಾಡಲು ನೀವು ಬಿಸಿಯಾಗಿರುವ ಅರಿಶಿನ ಹಾಲನ್ನು ಕುಡಿದರೆ ತುಂಬಾ ಒಳ್ಳೆಯದು. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ಅರಿಶಿನ ಹಾಕಿದ ಹಾಲು ದೇಹದ ಪ್ರತಿರೋಧಕ ವ್ಯವಸ್ಥೆಯನ್ನು ಸುಧಾರಿಸುವ ಕಾರಣದಿಂದ ಬೇಗನೆ ಚೇತರಿಸಿಕೊಳ್ಳಲು ನೆರವಾಗುತ್ತದೆ. ಗಂಟಲು ನೋವಿನ ಕಿರಿಕಿರಿಯೇ? ಹಾಗಾದರೆ ಇನ್ನು ಚಿಂತೆ ಬಿಡಿ!
ತಯಾರಿಸುವುದು ಹೇಗೆ?
*ಒಂದು ಕುಟ್ಟಾಣಿಯನ್ನು ತೆಗೆದುಕೊಂಡು ಅದಕ್ಕೆ ಸುಮಾರು 6-7 ಕರಿಮೆಣಸನ್ನು ಹಾಕಿ ಹುಡಿ ಮಾಡಿಕೊಳ್ಳಿ. ಈಗ ಒಂದು ಲೋಟ ಹಾಲನ್ನು ತೆಗೆದುಕೊಂಡು 5-10 ನಿಮಿಷ ಕುದಿಸಿ.
*ಹಾಲು ಕುದಿಯುತ್ತಿರುವಂತೆ ಅರ್ಧ ಚಮಚ ಅರಿಶಿನ ಮತ್ತು ಸ್ವಲ್ಪ ಹುಡಿ ಮಾಡಿದ ಕರಿಮೆಣಸಿನ ಹುಡಿಯನ್ನು ಹಾಕಿ.
*ಹಾಲಿಗೆ ಒಂದು ಚಮಚ ಸಕ್ಕರೆ ಹಾಕಿ ಸರಿಯಾಗಿ ಮಿಶ್ರಣ ಮಾಡಿ. ಬಳಿಕ ಗ್ಯಾಸ್ ಒಲೆ ಆಫ್ ಮಾಡಿ
*ಬಿಸಿಯಾಗಿರುವಾಗಲೇ ಈ ಮಿಶ್ರಣವನ್ನು ಕುಡಿಯಿರಿ.
*ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ ಮತ್ತು ರಾತ್ರಿ ನಿದ್ರಿಸುವ ಮೊದಲು ಇದನ್ನು ಸೇವಿಸಿ. ಇದು ಗಂಟಲು ಕೆರೆತವನ್ನು ನಿವಾರಿಸುತ್ತದೆ. ಈ ಮನೆಮದ್ದನ್ನು ಪ್ರಯತ್ನಿಸಿ ಫಲಿತಾಂಶ ಸಿಕ್ಕಿದೆಯಾ ಎಂದು ನಮಗೆ ಹೇಳಿ. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications














