Latest Updates
-
ಬಿಸಿಗಾಳಿಯ ಅಬ್ಬರ: ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸದಿದ್ದರೆ ಕಾದಿದೆ ದೊಡ್ಡ ಅಪಾಯ! -
ಸಲಿಂಗ ಜೋಡಿಗಳಿಗೆ ಸಿಕ್ತು ಭದ್ರತೆ: ಹೈಕೋರ್ಟ್ನ ಈ ತೀರ್ಪು ನಿಮ್ಮ ಬದುಕನ್ನೇ ಬದಲಿಸಬಹುದು! -
ಸುಡುವ ಬಿಸಿಲಿಗೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ನಕಲಿ ಜಿಮ್ ಸಪ್ಲಿಮೆಂಟ್ ಬಳಸುತ್ತಿದ್ದೀರಾ? ದೆಹಲಿಯ ಈ ದಾಳಿ ನಿಮ್ಮ ಕಣ್ಣು ತೆರೆಸುತ್ತದೆ! -
40 ಡಿಗ್ರಿ ಬಿಸಿಲಲ್ಲೂ ಫ್ರೆಶ್ ಆಗಿರಬೇಕಾ? ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ! -
ಹೀಟ್ವೇವ್ ಅಲರ್ಟ್: ಬಿಸಿಲ ಬೇಗೆಯಲ್ಲಿ ಫಿಟ್ನೆಸ್ ಕಾಪಾಡಿಕೊಳ್ಳಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ಡೇಟಿಂಗ್ ಪ್ಲಾನ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಬೇಡಿ! -
ಬಿಸಿಗಾಳಿಯ ಅಬ್ಬರ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಉಪಾಯಗಳು -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮ ಪಾಲಿಸಿ -
ಫ್ಯಾಶನ್ ರೆವಲ್ಯೂಷನ್ ಡೇ: ಬಟ್ಟೆಯನ್ನು ಉಲ್ಟಾ ಧರಿಸಿ ಫೋಟೋ ಹಾಕುತ್ತಿರುವುದೇಕೆ? ಈ ಟ್ರೆಂಡ್ ಹಿಂದಿದೆ ದೊಡ್ಡ ಕಥೆ!
ಗಂಟಲು ನೋವಿನ ಕಿರಿಕಿರಿಯೇ? ಹಾಗಾದರೆ ಇನ್ನು ಚಿಂತೆ ಬಿಡಿ!
ಕಿರಿಕಿರಿ ತರಿಸುವ ತೊಂದರೆಗಳು ಎಂದರೆ ಸೋರುವ ಮೂಗು, ಗಂಟಲಲ್ಲಿ ತುರಿಕೆ ಇತ್ಯಾದಿ. ನಾಲ್ಕು ಜನರ ನಡುವೆ ಇರುವಾಗ ಗಂಟಲಲ್ಲಿ ತುರಿಕೆಯಾದರೆ ಕೆಮ್ಮಲೂ ಆಗದೇ ಕೆಮ್ಮದಿರಲೂ ಆಗದೇ ಇಬ್ಬಂದಿ ಅನುಭವಿಸುವಂತಾಗುತ್ತದೆ. ತಕ್ಷಣ ಇದನ್ನು ಕಡಿಮೆ ಮಾಡಬೇಕೆಂದರೆ ಹೇಗೆ ಎಂದು ಆ ಕ್ಷಣ ಎಲ್ಲರೂ ಯೋಚಿಸುತ್ತಾರೆ.
ಆದರೆ ಹೊರಬಂದ ಬಳಿಕ ಮರೆತೇ ಬಿಡುತ್ತಾರೆ. ಜಾಣರು ಮಾತ್ರ ಮರೆಯದೇ ಇದಕ್ಕೆ ಸೂಕ್ತ ವಿಧಾನವನ್ನು ಅನುಸರಿಸುತ್ತಾರೆ. ನೀವು ಜಾಣರಾಗಬೇಕಾದರೆ ಹಲವಾರು ವರ್ಷಗಳಿಂದ ನಮ್ಮ ಹಿರಿಯರು ಈ ತೊಂದರೆಯನ್ನು ಹೇಗೆ ಸಮರ್ಥವಾಗಿ ನಿಭಾಯಿಸಿದ್ದರು ಎಂಬುದನ್ನು ಕಂಡುಕೊಂಡರೆ ಸಾಕು. ನಿಮಗೆ ಸೂಕ್ತವಾದ ವಿಧಾನ ಅನುಸರಿಸಿದರೆ ಈ ಗಂಟಲ ಕೆರೆತ ಸುಲಭವಾಗಿ ಇಲ್ಲವಾಗುತ್ತದೆ. ಇನ್ನು ಗಂಟಲು ನೋವಿಗೆ ವೈದ್ಯರ ಬಳಿ ಓಡಬೇಡಿ...!
ಆದರೆ ಗಂಟಲ ಕೆರೆತ ತಕ್ಷಣ ನಿವಾರಣೆಯಾಗಬೇಕೆಂದರೆ ಕೊಂಚ ಕಹಿಯನ್ನು ಅನುಭವಿಸುವುದು ಅನಿವಾರ್ಯ. ಅಂದರೆ ಕಹಿಬೇವಿನ ಬಳಕೆಯಿಂದ ಗಂಟಲ ಕೆರೆತ ಶೀಘ್ರವಾಗಿ ಇಲ್ಲವಾಗುತ್ತದೆ. ಬನ್ನಿ, ಇದನ್ನು ಹೇಗೆ ಬಳಸಬಹುದು ಎಂಬುದನ್ನು ನೋಡೋಣ...

ಬೇವಿನ ನೀರಿನಿಂದ ಗಳಗಳ ಮಾಡುವುದು
ಬೇವಿನ ನೀರಿನಿಂದ ಗಳಗಳ ಅಥವಾ ಗಲಬರಿಕೆ ಮಾಡಿಕೊಳ್ಳುವ ಮೂಲಕ ಗಂಟಲ ಕೆರೆತ ಶೀಘ್ರವಾಗಿ ಗುಣವಾಗುತ್ತದೆ. ಸುಮಾರು ಇಪ್ಪತ್ತರಿಂದ ಮೂವತ್ತು ಎಲೆಗಳನ್ನು ಕೊಂಚ ನೀರಿನಲ್ಲಿ ಚೆನ್ನಾಗಿ ಹಾಕಿ ಐದು ನಿಮಿಷ ಕುದಿಯುತ್ತಿರುವಂತೆ ಮಾಡಿ. ಬಳಿಕ ಉರಿ ಆರಿಸಿ ತಣಿಯಲು ಬಿಡಿ.

ಬೇವಿನ ನೀರಿನಿಂದ ಗಳಗಳ ಮಾಡುವುದು
ನೀರು ಸುಮಾರು ಉಗುರುಬೆಚ್ಚಾಗಾಗುವಷ್ಟು ತಣಿದ ಬಳಿಕ ಈ ನೀರನ್ನು ಸೋಸಿ ಬಾಟಲಿಯಲ್ಲಿ ಸಂಗ್ರಹಿಸಿ. ಈ ನೀರಿನಿಂದ ಗಂಟಲ ಕೆರೆತವಿದ್ದಾಗ ಮುಕ್ಕಳಿಸಿ, ವಿಶೇಷವಾಗಿ ಬಾಯಿ ಮೇಲೆತ್ತಿ ಗಂಟಲಿನಲ್ಲಿ ಗಳಗಳ ಮಾಡಿ. ಇದರ ಅದ್ಭುತ ಪರಿಣಾಮವನ್ನು ತಕ್ಷಣವೇ ಅರಿಯಿರಿ.

ಜೇನಿನೊಂದಿಗೆ ಬರೆಸಿ ಕುಡಿಯಿರಿ
ಬೇವು ಮತ್ತು ಜೇನಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಗಂಟಲ ಕೆರೆತವಾಗದಂತೆ ನೋಡಿಕೊಳ್ಳುತ್ತದೆ.

ಜೇನಿನೊಂದಿಗೆ ಬರೆಸಿ ಕುಡಿಯಿರಿ
ಹಿಂದಿನ ವಿಧಾನದಂತೆ ಬೇವು ಬೇಯಿಸಿ ತಣಿಸಿ ಸೋಸಿದ ನೀರಿಗೆ ಕೊಂಚ ಜೇನು ಬೆರೆಸಿ ಒಂದು ಚಿಕ್ಕ ಲೋಟದಷ್ಟು ಕುಡಿಯಿರಿ. ಈ ವಿಧಾನದಿಂದಲೂ ಗಂಟಲ ಕೆರೆತ ತಕ್ಷಣ ಗುಣವಾಗುತ್ತದೆ.

ಕಹಿಬೇವನ್ನು ಅಗಿಯಿರಿ!
ಈ ವಿಧಾನ ಕೊಂಚ ಕಹಿಯಾದರೂ ಇದರ ಪರಿಣಾಮ ಮಾತ್ರ ಸಿಹಿ. ಹಸಿ ಅಥವಾ ಒಣಗಿರುವ ಕೆಲವು ಎಲೆಗಳನ್ನು ಬಾಯಿಯಲ್ಲಿ ಹಾಕಿ ಅಗಿದು ರಸವನ್ನು ನುಂಗಿರಿ, ನಾರನ್ನು ಉಗಿಯಿರಿ.

ಕಹಿಬೇವನ್ನು ಅಗಿಯಿರಿ!
ಈ ವಿಧಾನದಿಂದ ಭಾರಿಯಾದ ಗಂಟಲ ಕೆರೆತವೂ ತಕ್ಷಣವೇ ಮಾಯವಾಗುತ್ತದೆ. ಉತ್ತಮ ಪರಿಣಾಮಕ್ಕಾಗಿ ದಿನಕ್ಕೆ ಮೂರು ಹೊತ್ತು ಈ ವಿಧಾನ ಅನುಸರಿಸಿ.



Click it and Unblock the Notifications