Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗಂಟಲು ನೋವಿನ ಕಿರಿಕಿರಿಯೇ? ಹಾಗಾದರೆ ಇನ್ನು ಚಿಂತೆ ಬಿಡಿ!
ಕಿರಿಕಿರಿ ತರಿಸುವ ತೊಂದರೆಗಳು ಎಂದರೆ ಸೋರುವ ಮೂಗು, ಗಂಟಲಲ್ಲಿ ತುರಿಕೆ ಇತ್ಯಾದಿ. ನಾಲ್ಕು ಜನರ ನಡುವೆ ಇರುವಾಗ ಗಂಟಲಲ್ಲಿ ತುರಿಕೆಯಾದರೆ ಕೆಮ್ಮಲೂ ಆಗದೇ ಕೆಮ್ಮದಿರಲೂ ಆಗದೇ ಇಬ್ಬಂದಿ ಅನುಭವಿಸುವಂತಾಗುತ್ತದೆ. ತಕ್ಷಣ ಇದನ್ನು ಕಡಿಮೆ ಮಾಡಬೇಕೆಂದರೆ ಹೇಗೆ ಎಂದು ಆ ಕ್ಷಣ ಎಲ್ಲರೂ ಯೋಚಿಸುತ್ತಾರೆ.
ಆದರೆ ಹೊರಬಂದ ಬಳಿಕ ಮರೆತೇ ಬಿಡುತ್ತಾರೆ. ಜಾಣರು ಮಾತ್ರ ಮರೆಯದೇ ಇದಕ್ಕೆ ಸೂಕ್ತ ವಿಧಾನವನ್ನು ಅನುಸರಿಸುತ್ತಾರೆ. ನೀವು ಜಾಣರಾಗಬೇಕಾದರೆ ಹಲವಾರು ವರ್ಷಗಳಿಂದ ನಮ್ಮ ಹಿರಿಯರು ಈ ತೊಂದರೆಯನ್ನು ಹೇಗೆ ಸಮರ್ಥವಾಗಿ ನಿಭಾಯಿಸಿದ್ದರು ಎಂಬುದನ್ನು ಕಂಡುಕೊಂಡರೆ ಸಾಕು. ನಿಮಗೆ ಸೂಕ್ತವಾದ ವಿಧಾನ ಅನುಸರಿಸಿದರೆ ಈ ಗಂಟಲ ಕೆರೆತ ಸುಲಭವಾಗಿ ಇಲ್ಲವಾಗುತ್ತದೆ. ಇನ್ನು ಗಂಟಲು ನೋವಿಗೆ ವೈದ್ಯರ ಬಳಿ ಓಡಬೇಡಿ...!
ಆದರೆ ಗಂಟಲ ಕೆರೆತ ತಕ್ಷಣ ನಿವಾರಣೆಯಾಗಬೇಕೆಂದರೆ ಕೊಂಚ ಕಹಿಯನ್ನು ಅನುಭವಿಸುವುದು ಅನಿವಾರ್ಯ. ಅಂದರೆ ಕಹಿಬೇವಿನ ಬಳಕೆಯಿಂದ ಗಂಟಲ ಕೆರೆತ ಶೀಘ್ರವಾಗಿ ಇಲ್ಲವಾಗುತ್ತದೆ. ಬನ್ನಿ, ಇದನ್ನು ಹೇಗೆ ಬಳಸಬಹುದು ಎಂಬುದನ್ನು ನೋಡೋಣ...

ಬೇವಿನ ನೀರಿನಿಂದ ಗಳಗಳ ಮಾಡುವುದು
ಬೇವಿನ ನೀರಿನಿಂದ ಗಳಗಳ ಅಥವಾ ಗಲಬರಿಕೆ ಮಾಡಿಕೊಳ್ಳುವ ಮೂಲಕ ಗಂಟಲ ಕೆರೆತ ಶೀಘ್ರವಾಗಿ ಗುಣವಾಗುತ್ತದೆ. ಸುಮಾರು ಇಪ್ಪತ್ತರಿಂದ ಮೂವತ್ತು ಎಲೆಗಳನ್ನು ಕೊಂಚ ನೀರಿನಲ್ಲಿ ಚೆನ್ನಾಗಿ ಹಾಕಿ ಐದು ನಿಮಿಷ ಕುದಿಯುತ್ತಿರುವಂತೆ ಮಾಡಿ. ಬಳಿಕ ಉರಿ ಆರಿಸಿ ತಣಿಯಲು ಬಿಡಿ.

ಬೇವಿನ ನೀರಿನಿಂದ ಗಳಗಳ ಮಾಡುವುದು
ನೀರು ಸುಮಾರು ಉಗುರುಬೆಚ್ಚಾಗಾಗುವಷ್ಟು ತಣಿದ ಬಳಿಕ ಈ ನೀರನ್ನು ಸೋಸಿ ಬಾಟಲಿಯಲ್ಲಿ ಸಂಗ್ರಹಿಸಿ. ಈ ನೀರಿನಿಂದ ಗಂಟಲ ಕೆರೆತವಿದ್ದಾಗ ಮುಕ್ಕಳಿಸಿ, ವಿಶೇಷವಾಗಿ ಬಾಯಿ ಮೇಲೆತ್ತಿ ಗಂಟಲಿನಲ್ಲಿ ಗಳಗಳ ಮಾಡಿ. ಇದರ ಅದ್ಭುತ ಪರಿಣಾಮವನ್ನು ತಕ್ಷಣವೇ ಅರಿಯಿರಿ.

ಜೇನಿನೊಂದಿಗೆ ಬರೆಸಿ ಕುಡಿಯಿರಿ
ಬೇವು ಮತ್ತು ಜೇನಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಗಂಟಲ ಕೆರೆತವಾಗದಂತೆ ನೋಡಿಕೊಳ್ಳುತ್ತದೆ.

ಜೇನಿನೊಂದಿಗೆ ಬರೆಸಿ ಕುಡಿಯಿರಿ
ಹಿಂದಿನ ವಿಧಾನದಂತೆ ಬೇವು ಬೇಯಿಸಿ ತಣಿಸಿ ಸೋಸಿದ ನೀರಿಗೆ ಕೊಂಚ ಜೇನು ಬೆರೆಸಿ ಒಂದು ಚಿಕ್ಕ ಲೋಟದಷ್ಟು ಕುಡಿಯಿರಿ. ಈ ವಿಧಾನದಿಂದಲೂ ಗಂಟಲ ಕೆರೆತ ತಕ್ಷಣ ಗುಣವಾಗುತ್ತದೆ.

ಕಹಿಬೇವನ್ನು ಅಗಿಯಿರಿ!
ಈ ವಿಧಾನ ಕೊಂಚ ಕಹಿಯಾದರೂ ಇದರ ಪರಿಣಾಮ ಮಾತ್ರ ಸಿಹಿ. ಹಸಿ ಅಥವಾ ಒಣಗಿರುವ ಕೆಲವು ಎಲೆಗಳನ್ನು ಬಾಯಿಯಲ್ಲಿ ಹಾಕಿ ಅಗಿದು ರಸವನ್ನು ನುಂಗಿರಿ, ನಾರನ್ನು ಉಗಿಯಿರಿ.

ಕಹಿಬೇವನ್ನು ಅಗಿಯಿರಿ!
ಈ ವಿಧಾನದಿಂದ ಭಾರಿಯಾದ ಗಂಟಲ ಕೆರೆತವೂ ತಕ್ಷಣವೇ ಮಾಯವಾಗುತ್ತದೆ. ಉತ್ತಮ ಪರಿಣಾಮಕ್ಕಾಗಿ ದಿನಕ್ಕೆ ಮೂರು ಹೊತ್ತು ಈ ವಿಧಾನ ಅನುಸರಿಸಿ.



Click it and Unblock the Notifications