Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಏನಿದು ದಡಾರ ರೋಗ..? ಇದರ ಲಕ್ಷಣಗಳೇನು?
ರೋಗಗಳು ಹೇಳಿ ಕೇಳಿ ಬರುವುದಿಲ್ಲಾ ಎಂಬ ಮಾತಿನಂತೆ ನಮ್ಮ ದೇಹಕ್ಕೆ ದಾಳಿ ಮಾಡುವ ಕಾಯಿಲೆಗಳು ಹಠಾತ್ತನೇ ತಮ್ಮ ಇರುವಿಕೆಯನ್ನು ಘೋಷಿಸಿಬಿಡುತ್ತವೆ. ಅದರಲ್ಲೂ ದೇಹವು ಸಾಕಷ್ಟು ರೋಗನಿರೋಧಕ ಶಕ್ತಿಯನ್ನು ಹೊಂದಿಲ್ಲ ಎಂದಾದಲ್ಲಿ ಈ ರೋಗಗಳು ಉಲ್ಬಣಗೊಂಡು ಚೇತರಿಕೆಯನ್ನು ಕಾಣದೇ ದೇಹಕ್ಕೆ ಮಾರಕವಾಗಬಲ್ಲುದು. ಆದ್ದರಿಂದ ರೋಗ ಯಾವುದೇ ಬರಲಿ ಅದನ್ನು ಪ್ರತಿರೋಧಿಸುವ ಚೈತನ್ಯ ನಮ್ಮಲ್ಲಿರಬೇಕು. ರೋಗ ನಿರೋಧಕ ಶಕ್ತಿಯು ನಾವು ಸೇವಿಸುವ ಆಹಾರವನ್ನು ಅವಲಂಬಿಸಿಕೊಂಡು ಇರುತ್ತವೆ. ನಮ್ಮ ದೇಹಕ್ಕೆ ಸಾಕಷ್ಟು ಪ್ರೋಟೀನ್ ನ್ಯೂಟ್ರೀನ್ಗಳನ್ನು ನಾವು ನೀಡುತ್ತಿಲ್ಲ ಎಂದಾದಲ್ಲಿ ಕಾಯಿಲೆಗಳನ್ನು ಸಹಿಸುವ ಶಕ್ತಿಯನ್ನು ದೇಹ ಕಳೆದುಕೊಳ್ಳುತ್ತದೆ.
ಸಾಮಾನ್ಯವಾಗಿ, ಬರಿಯ ಶೀತ, ನೆಗಡಿ, ಕೆಮ್ಮು ಮುಂತಾದವುಗಳಾದರೆ ಅದಕ್ಕೆ ಸೂಕ್ತ ಔಷಧಿಯನ್ನು ತೆಗೆದುಕೊಂಡು ಪರಿಹಾರವನ್ನು ಕಂಡುಕೊಳ್ಳಹುದು. ಆದರೆ ಕೆಲವೊಂದು ರೋಗಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಇನ್ನಷ್ಟು ಜರ್ಝರಿತಗೊಳಿಸುತ್ತವೆ. ಅಂತಹ ರೋಗಗಳ ಪಟ್ಟಿಯಲ್ಲಿ ದಡಾರ ಎಂಬ ಸಾಂಕ್ರಾಮಿಕ ರೋಗ ಕೂಡ ಒಂದು. ಹೌದು ಈ ರೋಗವು ಹೆಚ್ಚು ಕಾಣಿಸಿಕೊಳ್ಳುವುದೇ ಮಕ್ಕಳಲ್ಲಿ. ಮಕ್ಕಳಲ್ಲಿ ಈ ಶಕ್ತಿ ಒಮ್ಮೊಮ್ಮೆ ಅತಿಕಡಿಮೆ ಇರುವುದು ಅಂತೆಯೇ ಬೇಗನೇ ಹರಡುವ ಸ್ವಭಾವವನ್ನು ಈ ರೋಗವು ಪಡೆದುಕೊಂಡಿರುವುದರಿಂದ ಮಕ್ಕಳು ಈ ರೋಗಕ್ಕೆ ಶೀಘ್ರವೇ ತುತ್ತಾಗುತ್ತಾರೆ.
ದಡಾರ ಒಂದು ಸಾಂಕ್ರಾಮಿಕ ರೋಗವಾಗಿದ್ದು ಪ್ಯಾರೊಮಿಕ್ಸ್ ಎಂಬ ವೈರಸ್ ಈ ರೋಗಕ್ಕೆ ಕಾರಣವಾಗಿದೆ. ಈ ಕಾಯಿಲೆ ಹೆಚ್ಚಾಗಿ ಮಕ್ಕಳನ್ನು ಕಾಡುತ್ತದೆ. ರೋಗವಿರುವ ಬೇರೊಂದು ಮಗುವಿನ ಜೊತೆಗೆ ಇತರ ಮಕ್ಕಳೂ ಬೆರೆಯುವುದರಿಂದ ಈ ರೋಗ ಕೂಡಲೇ ಹರಡುತ್ತದೆ. ವ್ಯಾಕ್ಸಿನೇಷನ್ (ಚುಚ್ಚುಮದ್ದು) ಒಂದೇ ಈ ರೋಗಕ್ಕೆ ಪರಿಹಾರವಾಗಿದ್ದು ಪ್ರಥಮ ವರ್ಷದಲ್ಲಿ ಮಗುವಿಗೆ ಚುಚ್ಚುಮದ್ದನ್ನು ನೀಡಲೇಬೇಕು. ರುಬೆಲ್ಲಾ ಹಾಗೂ ಮಂಪ್ಸ್ ಹೆಸರಿನ ಎರಡು ಲಸಿಕೆಗಳ ಮಿಶ್ರಣವಾಗಿ ಈ ಚುಚ್ಚುಮದ್ದನ್ನು ಮಕ್ಕಳಿಗೆ ನೀಡಲಾಗುತ್ತದೆ. ಒಬ್ಬ ವ್ಯಕ್ತಿ ಈ ರೋಗಕ್ಕೆ ಗುರಿಯಾದರು ಎಂದಾದಲ್ಲಿ ಆಕೆ/ಆತ ಜೀವನ ಪರ್ಯಂತ ಈ ರೋಗಕ್ಕಾಗಿ ಪ್ರತಿರಕ್ಷಣೆಯನ್ನು ಪಡೆದುಕೊಳ್ಳಲೇಬೇಕು.

ದಡಾರ ರೋಗಲಕ್ಷಣಗಳು
ವೈರಸ್ ದಾಳಿ ಮಾಡಿದ ಏಳರಿಂದ ಹದಿನಾಲ್ಕು ದಿನಗಳಲ್ಲಿ ದಡಾರ ರೋಗ ಲಕ್ಷಣಗಳು ಕಾಣಿಸಿಕೊಳ್ಳಬಹುದು. ತ್ವಚೆಯಲ್ಲಿ ಸಣ್ಣ ವೃತ್ತಾಕಾರದ ಮಾದರಿಯಲ್ಲಿ ಕೆಂಪು ಗುಳ್ಳೆಗಳು ಉಂಟಾಗುತ್ತವೆ. ಇದು ಮೊದಲಿಗೆ ಗುಲಾಬಿ ಬಣ್ಣದಲ್ಲಿದ್ದು ನಂತರ ಸಮಯ ಕಳೆದಂತೆ ಗಾಢ ಕೆಂಪು ಬಣ್ಣಕ್ಕೆ ಇದು ತಿರುಗುತ್ತದೆ. ಈ ಕೆಂಪು ಗುಳ್ಳೆಗಳು ಮೊದಲು ಮುಖದ ಎರಡೂ ಬದಿಗಳಲ್ಲಿ ಕಾಣಿಸಿಕೊಳ್ಳುತ್ತವೆ ನಂತರ ಕುತ್ತಿಗೆಯ ಭಾಗ ಹಾಗೂ ನಿಧಾನಕ್ಕೆ ದೇಹವನ್ನು ವ್ಯಾಪಿಸಿಕೊಳ್ಳುತ್ತದೆ. ದಡಾರದ ಇನ್ನೊಂದು ರೋಗ ಲಕ್ಷಣವೆಂದರೆ ತೀವ್ರ ಜ್ವರ ಕಾಣಿಸಿಕೊಳ್ಳುವುದು ಇದು 104 ಡಿಗ್ರಿಯನ್ನು ತಲುಪುವ ಸಾಧ್ಯತೆ ಕೂಡ ಇರುತ್ತದೆ. ಸುರಿಯುತ್ತಿರುವ ಮೂಗು, ನೋಯುತ್ತಿರುವ ಗಂಟಲು, ನಿರಂತರ ಒಣ ಕೆಮ್ಮು, ಕಣ್ಣುಗಳ ಕೆಂಪು ಹಾಗೂ ನೀರು ಸುರಿಯುವುದು, ಹಸಿವು ಇಲ್ಲದಿರುವುದು ಭೇದಿ, ವಾಂತಿ ಮತ್ತು ಡಿಲೀರಿಯಂ ತೀವ್ರ ಸಂದರ್ಭಗಳಲ್ಲಿ ಉಂಟಾಗುತ್ತದೆ.
ದಡಾರಕ್ಕೆ ಪರಿಹಾರಗಳು
ಹುಣಸೇ ಹಣ್ಣಿನ ಬೀಜಗಳು ಮತ್ತು ಅರಿಶಿನ
ದಡಾರವನ್ನು ಹೋಗಲಾಡಿಸಲು ಹುಣಸೇ ಹಣ್ಣಿನ ಬೀಜಗಳು ಮತ್ತು ಅರಶಿನ ಅತ್ಯುತ್ತಮವಾಗಿದೆ. ಹುಣಸೇ ಹಣ್ಣಿನ ಬೀಜಗಳನ್ನು ಕುಟ್ಟಿ ಹುಡಿಮಾಡಿಟ್ಟುಕೊಳ್ಳಿ ನಂತರ ಸಮಪ್ರಮಾಣದಲ್ಲಿ ಹುಡಿ ಮಾಡಿದ ಬೀಜಗಳು ಮತ್ತು ಅರಿಶಿನವನ್ನು ತೆಗೆದುಕೊಳ್ಳಿ ಈ ಮಿಶ್ರಣವನ್ನು 350 ಗ್ರಾಮ್ನಿಂದ 425 ಗ್ರಾಮ್ವರೆಗೆ ನಿತ್ಯವೂ ಮೂರು ಹೊತ್ತು ರೋಗಿಗೆ ನೀಡಬೇಕು.
ಮಾರ್ಗೋಸಾ ಎಲೆಗಳು
ವೈರಸ್ ನಿರೋಧಕ ಮತ್ತು ನಂಜು ನಿರೋಧಕ ಗುಣವನ್ನು ಹೊಂದಿರುವ ಮಾರ್ಗೋಸಾ ಎಲೆಗಳು ದಡಾರದ ಉಪಶಮನಕ್ಕೆ ಹೇಳಿಮಾಡಿಸಿದ್ದಾಗಿದೆ. ರೋಗಿಗೆ ಕೆಂಪು ಗುಳ್ಳೆಗಳಿಂದ ಉಂಟಾಗುವ ತುರಿಕೆಯನ್ನು ನಿವಾರಿಸಲು ಸ್ನಾನದ ಬಿಸಿ ನೀರಿಗೆ ಮಾರ್ಗೋಸಾ ಎಲೆಗಳನ್ನು ಹಾಕಬೇಕು. ಉತ್ತಮ ಫಲಿತಾಂಶಕ್ಕಾಗಿ ರೋಗಿಯು ಕನಿಷ್ಟ ಪಕ್ಷ 20 ನಿಮಿಷಗಳ ಕಾಲ ನೀರಿನಲ್ಲಿ ಮುಳುಗಿರಬೇಕಾಗುತ್ತದೆ.
ಬೆಳ್ಳುಳ್ಳಿ
ದಡಾರದ ಶಮನಕ್ಕಾಗಿ ಬೆಳ್ಳುಳ್ಳಿ ಕೂಡ ಅತ್ಯುತ್ತಮವಾದುದಾಗಿದೆ. ಬೆಳ್ಳುಳ್ಳಿಯ ಹುಡಿ ಸಿದ್ಧಮಾಡಿ ಇದನ್ನು ಜೇನಿನೊಂದಿಗೆ ಸೇರಿಸಿ ನಂತರ ರೋಗಿಗೆ ಇದನ್ನು ನಿತ್ಯವೂ ನೀಡಿ.
ಲಿಂಬೆ ರಸ
ದಡಾರಕ್ಕೆ ನೈಸರ್ಗಿಕ ಪರಿಹಾರವನ್ನು ಒದಗಿಸಲು ಲಿಂಬೆ ರಸ ಸೂಕ್ತವಾದುದಾಗಿದೆ. 15-25 ಎಮ್ಎಲ್ನಷ್ಟು ಲಿಂಬೆ ರಸವನ್ನು ತೆಗೆದುಕೊಂಡು ನೀರಿನೊಂದಿಗೆ ಬೆರೆಸಿ ತೆಗೆದುಕೊಳ್ಳಬೇಕು. ಇದೂ ಕೂಡ ದಡಾರಕ್ಕೆ ಶೀಘ್ರ ಪರಿಹಾರವನ್ನು ಒದಗಿಸುತ್ತದೆ.
ಹಾಗಲಕಾಯಿ ಎಲೆಗಳು ಮತ್ತು ಅರಿಶಿನದ ಬೇರು
ಎಳನೀರು ಮತ್ತು ಗಂಜಿ
ಬಾರ್ಲಿ
ದಡಾರವು ಉಂಟುಮಾಡುವ ಒಣಕೆಮ್ಮನ್ನು ನಿವಾರಿಸಲು ಬಾರ್ಲಿ ನೀರು ಸೂಕ್ತವಾದುದಾಗಿದೆ. ಸಿಹಿಯಾದ ಬಾದಾಮಿ ಎಣ್ಣೆ ಸೇರಿಸಿದ ಬಾರ್ಲಿ ನೀರನ್ನು ರೋಗಿಯು ಆಗಾಗ್ಗೆ ಸೇವಿಸುವುದರಿಂದ ದಡಾರದಿಂದ ಉಪಶಮವನ್ನು ಪಡೆಯಲು ಸಾಧ್ಯ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


