Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಆರೋಗ್ಯ ಟಿಪ್ಸ್: ಪುಟ್ಟ ಬೆಳ್ಳುಳ್ಳಿಯ ಚಿನ್ನದಂತಹ ಗುಣಗಳು...
ಒಂದು ವೇಳೆ ಬೆಳ್ಳುಳ್ಳಿಯಲ್ಲಿ ವಾಸನೆಯೇ ಇಲ್ಲದೇ ಇದ್ದರೆ, ಇಂದಿನ ದಿನಗಳಲ್ಲಿ ಇದು ಚಿನ್ನದಂತೆ ಮಾರಾಟವಾಗುತ್ತಿತ್ತು ಎಂದು ಈಗಲೂ ನಮ್ಮ ಕರಾವಳಿಯ ಕಡೆಯ ಹಳ್ಳಿಗಳಲ್ಲಿ ಹೇಳುತ್ತಿರುತ್ತಾರೆ. ಏಕೆಂದರೆ ಬೆಳ್ಳುಳ್ಳಿಯ ಉತ್ತಮ ಗುಣಗಳು ಆರೋಗ್ಯದ ಮಟ್ಟಿಗೆ ಚಿನ್ನದಂತೆಯೇ ಕೆಲಸ ಮಾಡುತ್ತದೆ. ಮಳೆಗಾಲದ ಶೀತ, ಕಫ, ಜ್ವರಕ್ಕೆಲ್ಲಾ-ಬೆಳ್ಳುಳ್ಳಿಯೇ ಸಾಕು
Allium sativum ಎಂಬ ವೈಜ್ಞಾನಿಕ ಹೆಸರು ಹೊಂದಿರುವ ಈ ಸಾಂಬಾರ ಪದಾರ್ಥ ಅತ್ಯುತ್ತಮವಾದ ಆಹಾರವಾಗಿದೆ. ಇದನ್ನು ಆಹಾರಕ್ಕಿಂತಲೂ ಹೆಚ್ಚಾಗಿ ಔಷಧದ ರೂಪದಲ್ಲಿ ಆಯುರ್ವೇದ ಬಳಸುತ್ತಾ ಬಂದಿದೆ. ಬೆಳ್ಳುಳ್ಳಿಯನ್ನು ಆಹಾರದ ಮೂಲಕ ಸೇವಿಸುವ ಮೂಲಕ ಆಹಾರದಲ್ಲಿ ರುಚಿಯ ಜೊತೆಗೇ ಆರೋಗ್ಯವೂ ವೃದ್ಧಿಯಾಗುತ್ತದೆ. ಬನ್ನಿ ಈ ಪುಟ್ಟ ಬೆಳ್ಳುಳ್ಳಿಯ ಇನ್ನಷ್ಟು ಕಾರುಬಾರನ್ನು ಸ್ಲೈಡ್ ಶೋ ಮೂಲಕ ನೋಡೋಣ....
ಬೆಳ್ಳುಳ್ಳಿಯ ಆರೋಗ್ಯಕಾರಿ ಪ್ರಯೋಜನಗಳು

ರಕ್ತದ ಒತ್ತಡದ ನಿಯಂತ್ರಣಕ್ಕೆ
ಬೆಳ್ಳುಳ್ಳಿಯಲ್ಲಿರುವ polysulphide ಎಂಬ ರಾಸಾಯನಿಕಗಳು ದೇಹದಲ್ಲಿ ಪ್ರವೇಶ ಪಡೆದ ಬಳಿಕ ಅನಿಲವಾಗಿ ಪರಿವರ್ತನೆಗೊಂಡು hydrogen sulphide ಎಂಬ ರೂಪ ತಳೆಯುತ್ತವೆ. ಈ ಅನಿಲ ರಕ್ತನಾಳಗಳನ್ನು ಒಳಗಿನಿಂದ ಹಿಗ್ಗಿಸಿ ಹೆಚ್ಚಿನ ರಕ್ತ ಪೂರೈಕೆಗೆ ನೆರವಾಗುತ್ತದೆ. ಪರಿಣಾಮವಾಗಿ ರಕ್ತದ ಒತ್ತಡ ಕಡಿಮೆಯಾಗುತ್ತದೆ. ಹೆಚ್ಚಿನ ರಕ್ತದೊತ್ತಡ ಇರುವ ರೋಗಿಗಳು ತಮ್ಮ ವೈದ್ಯರ ಸಲಹೆ ಪಡೆದು ಬೆಳ್ಳುಳ್ಳಿಯನ್ನು ಔಷಧಿಯಾಗಿ ಸೇವಿಸಬಹುದು.

ಉಪಯೋಗಿಸುವ ವಿಧಾನ
*ಪ್ರತಿ ಊಟದಲ್ಲಿ ಬೆಳ್ಳುಳ್ಳಿಯ ಹಸಿ ಎಸಳುಗಳನ್ನು ಊಟದ ನಡುವೆ ತಿನ್ನಿರಿ.
*ಪ್ರತಿ ಊಟದಲ್ಲಿ ನಾಲ್ಲ್ಕೈದು ಎಸಳುಗಳು ಸಾಕು.
*ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ಅಥವಾ ಎರಡು ಚಿಕ್ಕ ಎಸಳುಗಳನ್ನು ತಿನ್ನುವುದೂ ಫಲಕಾರಿಯಾಗಿದೆ. (ಯಾವುದಕ್ಕೂ ಮೊದಲು ವೈದ್ಯರ ಸಲಹೆ ಪಡೆಯಿರಿ)

ಹಲ್ಲುನೋವಿನ ಶಮನಕ್ಕೆ
ಹಲ್ಲುನೋವನ್ನು ನಿವಾರಿಸಿಕೊಳ್ಳಲೂ ಕೂಡಾ ಬೆಳ್ಳುಳ್ಳಿಯನ್ನು ಬಳಸಿಕೊಳ್ಳಬಹುದು. ಇದಕ್ಕೆ ನೀವು ಮಾಡಬೇಕಾದುದಿಷ್ಟೇ.....ನೋವು೦ಟು ಮಾಡುತ್ತಿರುವ ಹಲ್ಲಿನ ಮೇಲೆ ಬೆಳ್ಳುಳ್ಳಿಯ ಸಣ್ಣ ಚೂರೊ೦ದನ್ನು ಇರಿಸಿಕೊಳ್ಳಿರಿ.

ಮೂಲವ್ಯಾಧಿ ಹಾಗೂ ಮಲಬದ್ಧತೆಗೆ
ಒ೦ದಿಷ್ಟು ನೀರನ್ನು ಕುದಿಸಿ ಅದಕ್ಕೆ ಸಾಕಷ್ಟು ಬೆಳ್ಳುಳ್ಳಿಯನ್ನು ಸೇರಿಸಿಕೊ೦ಡು ಸೇವಿಸಿದಲ್ಲಿ ಮೂಲವ್ಯಾಧಿ ಹಾಗೂ ಮಲಬದ್ಧತೆಗೆ ಸಾಂತ್ವನ ನೀಡುತ್ತದೆ

ಪಚನಕ್ರಿಯೆಗೆ ಸಹಕಾರಿ
ಬೆಳ್ಳುಳ್ಳಿಯು ಸರಿಯಾದ ಪಚನಕ್ರಿಯೆಯನ್ನೂ ಹಾಗೂ ಒಳ್ಳೆಯ ಹಸಿವನ್ನೂ ಉದ್ಧೀಪಿಸುತ್ತದೆ. ಜೊತೆಗೆ ಬೆಳ್ಳುಳ್ಳಿಯು ಮಾನಸಿಕ ಒತ್ತಡವನ್ನು ನಿಯ೦ತ್ರಿಸಲೂ ಕೂಡ ನೆರವಾಗುತ್ತದೆ ಹಾಗೂ ತನ್ಮೂಲಕ ನೀವು ಒತ್ತಡಕ್ಕೊಳಗಾದಾಗಲೆಲ್ಲಾ ನಿಮ್ಮ ಶರೀರವು ಉತ್ಪತ್ತಿ ಮಾಡುವ ಜಠರರಸದ ಉತ್ಪತ್ತಿಯನ್ನು ಹತ್ತಿಕ್ಕುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ
ಬೆಳ್ಳುಳ್ಳಿಯಲ್ಲಿ ಆಲೈಸಿನ್ (Allicin) ಎಂಬ ಇನ್ನೊಂದು ಪೋಷಕಾಂಶವಿದ್ದು ಇದು ರಕ್ತದಲ್ಲಿ ಟ್ರೈಗ್ಲಿಸರೈಡ್ ಪ್ರಮಾಣವನ್ನು ನಿಯಂತ್ರಿಸುವ ಗುಣ ಹೊಂದಿದೆ. ಇದು ಒಟ್ಟು ಕೊಲೆಸ್ಟ್ರಾಲ್ ಮಟ್ಟದ ಮೇಲೆ ಪ್ರಭಾವ ಬೀರುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ನ ಪ್ರಭಾವವನ್ನು ಕಡಿಮೆಗೊಳಿಸುತ್ತದೆ.



Click it and Unblock the Notifications
