Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಒಣದ್ರಾಕ್ಷಿ ನೆನೆಸಿದ ನೀರು- ದೇಹದ ಲಿವರ್ನ ಆಯಸ್ಸು ನೂರು!
ಒಣದ್ರಾಕ್ಷಿ ಎಂದರೆ ನಾವೆಲ್ಲರೂ ಸಿಹಿತಿಂಡಿಯ ಸೊಗಡು ಹೆಚ್ಚಿಸುವ ಪದಾರ್ಥವೆಂದೇ ಪರಿಗಣಿಸಿದ್ದೇವೆ. ಆದರೆ ಒಣದ್ರಾಕ್ಷಿಯನ್ನು ನೆನೆಸಿಟ್ಟ ನೀರು ಮಾತ್ರ ಆರೋಗ್ಯಕ್ಕೆ ತುಂಬಾ ಉತ್ತಮ. ಎಚ್ಚರ: ನಿಮ್ಮ ಲಿವರ್ ಕೂಡ ಅಪಾಯದಲ್ಲಿ ಸಿಲುಕಿರಬಹುದು!
ಅದರಲ್ಲೂ ವಿಶೇಷವಾಗಿ ಯಕೃತ್ತಿನ ಅಥವಾ ಲಿವರ್ನ ಆರೋಗ್ಯ ಈ ನೀರಿನ ನಿಯಮಿತ ಸೇವನೆಯಿಂದ ಉತ್ತಮಗೊಳ್ಳುತ್ತದೆ. ಯಕೃತ್ನ ಸ್ವಚ್ಛತೆಗೆ ಕೆಲವಾರು ವಿಧಾನಗಳಿವೆ. ಆದರೆ ಒಣದ್ರಾಕ್ಷಿ ನೆನೆಸಿದ ನೀರು ನೀಡುವಂತಹ ಪರಿಣಾಮವನ್ನು ಉಳಿದವು ನೀಡಲಾರವು. ಎಚ್ಚರ: ನಿಮ್ಮ ಲಿವರ್ ಕೂಡ ಅಪಾಯದಲ್ಲಿ ಸಿಲುಕಿರಬಹುದು!
ಈ ನೀರಿಗೆ ಒದಗಿರುವ ಔಷಧೀಯ ಪರಿಣಾಮಕ್ಕೆ ಒಣದ್ರಾಕ್ಷಿಯಲ್ಲಿರುವ ಪೋಷಕಾಂಶಗಳು ಕಾರಣ. ಈ ನೀರನ್ನು ಸೇವಿಸತೊಡಗಿದ ನಾಲ್ಕೇ ದಿನದಲ್ಲಿ ನಿಮ್ಮ ಜೀರ್ಣಕ್ರಿಯೆ ಉತ್ತಮಗೊಂಡಿರುವುದನ್ನು ಗಮನಿಸಬಹುದು. ಅಲ್ಲದೇ ದಿನದ ಚಟುವಟಿಕೆಗಳು ಹೆಚ್ಚು ಉಲ್ಲಾಸದಾಯಕವಾಗಿಯೂ ಇರುತ್ತದೆ. ಬನ್ನಿ, ಈ ಅದ್ಭುತ ಪೇಯವನ್ನು ತಯಾರಿಸುವುದು ಹೇಗೆ ಎಂಬುದನ್ನು ನೋಡೋಣ....

ಅಗತ್ಯವಿರುವ ಸಾಮಾಗ್ರಿಗಳು
*ನೀರು ಎರಡು ಕಪ್
*ಒಣದ್ರಾಕ್ಷಿ ಒಂದಿಷ್ಟು (ಸುಮಾರು 8 ರಿಂದ 10ರಷ್ಟು ಸಾಕು)

ಒಣದ್ರಾಕ್ಷಿ ಹೀಗಿರಬೇಕು?
ಇವು ತುಂಬಾ ಹೊಳಪುಳ್ಳದ್ದಾಗಿರಬಾರದು. ಅತಿ ಪ್ರಖರ ಬಣ್ಣದ್ದೂ ಆಗಿರಬಾರದು. ಏಕೆಂದರೆ ಈ ಹೊಳಪು ಬರಲಿಕ್ಕೆ ಕೆಲವರು ಕೃತಕ ರಾಸಾಯನಿಕಗಳನ್ನು ಬಳಸಿರಬಹುದು. ಆದರೆ ಗಾಢ ಕಂಡು ಬಣ್ಣಕ್ಕಿದ್ದು ಹೊಳಪು ಇಲ್ಲದೇ ಸಾಕಷ್ಟು ಸಂಕುಚಿತವಾಗಿರುವ ಒಣದ್ರಾಕ್ಷಿ ಉತ್ತಮ. ಇವು ಅತಿ ಗಟ್ಟಿಯಾಗಿಯೂ ಇರಬಾರದು, ತೀರಾ ಮೃದುವಾಗಿಯೂ ಇರಬಾರದು. ಅಷ್ಟೇ ಅಲ್ಲ, ಇದರಲ್ಲಿ ಮಣ್ಣು, ಮರಳು, ಧೂಳು ಮೊದಲಾದವು ಇಲ್ಲವೆಂದೂ ಖಚಿತಪಡಿಸಿಕೊಳ್ಳಿ.

ತಯಾರಿಸುವ ವಿಧಾನ
ಮೊದಲಿಗೆ ಒಣದ್ರಾಕ್ಷಿಯನ್ನು ಚೆನ್ನಾಗಿ ತೊಳೆದು ನೀರು ಬಸಿದು ಬದಿಯಲ್ಲಿಡಿ

ತಯಾರಿಸುವ ವಿಧಾನ
ಒಂದು ಚಿಕ್ಕ ಪಾತ್ರೆಯಲ್ಲಿ ನೀರನ್ನು ಹಾಕಿ ಬಿಸಿಮಾಡಿ. ನೀರು ಕುದಿಯಲು ಪ್ರಾರಂಭವಾಗುತ್ತಿದ್ದಂತೆಯೇ ಒಣದ್ರಾಕ್ಷಿಯನ್ನು ಹಾಕಿ ಉರಿ ಚಿಕ್ಕದಾಗಿಸಿ.

ಇಪ್ಪತ್ತು ನಿಮಿಷ ಕುದಿಸಿ....
ಈ ನೀರನ್ನು ಸುಮಾರು ಇಪ್ಪತ್ತು ನಿಮಿಷ ಕುದಿಯಲು ಬಿಡಿ. ಬಳಿಕ ಉರಿ ಆರಿಸಿ ಇಡಿಯ ರಾತ್ರಿ ಹಾಗೇ ಬಿಡಿ.

ಮರುದಿನ ಬೆಳಿಗ್ಗೆ...
ಮರುದಿನ ಬೆಳಿಗ್ಗೆ ಈ ನೀರನ್ನು ಸೋಸಿ ಲೋಟದಲ್ಲಿ ಸಂಗ್ರಹಿಸಿ. ಈ ನೀರನ್ನು ಮತ್ತೊಮ್ಮೆ ಉಗುರುಬೆಚ್ಚಗಾಗುವವರೆಗೆ ಬಿಸಿಮಾಡಿ.

ಖಾಲಿ ಹೊಟ್ಟೆಯಲ್ಲಿ ಸೇವಿಸಿ
ಮಗೆ ಇಷ್ಟವಾಗುವಷ್ಟು ಬಿಸಿಯಾಗಿ ಅಥವಾ ಉಗುರುಬೆಚ್ಚನೆ ಇರುವಂತೆಯೇ ಬೆಳಗ್ಗಿನ ಪ್ರಥಮ ಆಹಾರವಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಿ.

ಸ್ವಲ್ಪ ಹೊತ್ತು ಏನೂ ಸೇವಿಸಬೇಡಿ....
ಬಳಿಕ ಸುಮಾರು ಮೂವತ್ತರಿಂದ ಮೂವತ್ತೈದು ನಿಮಿಷಗಳ ಕಾಲ ಏನನ್ನೂ ಸೇವಿಸಬೇಡಿ. ಬಳಿಕ ನಿಮ್ಮ ನಿತ್ಯದ ಉಪಾಹಾರ ಸೇವಿಸಿ.

ಎರಡು ತಿಂಗಳ ಬಳಿಕ....
ಈ ವಿಧಾನವನ್ನು ಕೆಲವಾರು ದಿನಗಳಾದರೂ ಸತತವಾಗಿ ಮಾಡಬೇಕು. ಕನಿಷ್ಠ ನಾಲ್ಕು ದಿನಗಳಾದರೂ ಸರಿ. ಸುಮಾರು ಎರಡು ತಿಂಗಳ ಬಳಿಕ ನಿಮ್ಮ ಆರೋಗ್ಯದಲ್ಲಿ, ವಿಶೇಷವಾಗಿ ಯಕೃತ್ಗಳಲ್ಲಿ ಉತ್ತಮ ಪ್ರಗತಿಯಾಗಿರುವುದನ್ನು ಕಾಣಬಹುದು.

ಸೂಚನೆ:
*ಯಾವುದಕ್ಕೂ ಈ ಮನೆಮದ್ದನ್ನು ಪ್ರಯತ್ನಿಸುವ ಮೊದಲು ನಿಮ್ಮ ಫ್ಯಾಮಿಲಿ ವೈದ್ಯರ ಸಲಹೆ ಪಡೆದುಕೊಳ್ಳಿ
*ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ಬೆಳೆದ, ರಾಸಾಯನಿಕಗಳು ಇಲ್ಲದ ದ್ರಾಕ್ಷಿಯನ್ನೇ ಕೊಳ್ಳಿ. ಒಂದು ವೇಳೆ ಸಾವಯವ ವಿಧಾನದಲ್ಲಿ ಬೆಳೆದಿದ್ದರೆ ಇನ್ನೂ ಉತ್ತಮ.



Click it and Unblock the Notifications