Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಜೀರ್ಣಕ್ರಿಯೆ ಸಮಸ್ಯೆಗೆ ಆಯುರ್ವೇದದ ಉಪಚಾರ...
ತಿನ್ನಲು ಕಷ್ಟಪಡುವವರು ಒಂದು ಕಡೆಯಾದರೆ, ತಿಂದಿದ್ದನ್ನು ಅರಗಿಸಲು ಕಷ್ಟ ಪಡುವವರು ಇನ್ನೊಂದು ಕಡೆ ಎಂಬ ಮಾತನ್ನು ನೀವು ಎಲ್ಲಿಯಾದರು ಕೇಳಿರುತ್ತೀರಿ. ಈ ಆಧುನಿಕ ಜೀವನವೇ ಹೀಗೆ. ಊಟಕ್ಕೆ ಇಲ್ಲದೆ ಪರದಾಡುವವರು ಸಹ ಇಲ್ಲಿ ಕಾಣುತ್ತಾರೆ. ತಿಂದ ಊಟವನ್ನು ಕರಗಿಸಲು ಸಾಧ್ಯವಾಗದೆ ಕಷ್ಟಪಡುವವರು ಒಂದು ಕಡೆ ಇದ್ದಾರೆ. ಜೀರ್ಣಕ್ರಿಯೆ ಸುಧಾರಿಸುವ ಉತ್ತಮ ಆಹಾರಗಳು
ಅದಕ್ಕೆ ನಾವು ನೀವು ಹೊಣೆಯಲ್ಲ ಬಿಡಿ, ನಮ್ಮ ಆಧುನಿಕ ಜೀವನ ನಮಗೆ ನೀಡಿರುವ ಉಡುಗೊರೆ ಅದು. ಒಂದು ವೇಳೆ ನಿಮಗೆ ಸಹ ಅಜೀರ್ಣದ ಸಮಸ್ಯೆ ಇದ್ದಲ್ಲಿ, ಚಿಂತೆ ಮಾಡಬೇಡಿ. ಅಜೀರ್ಣ, ವಾಯು, ತಲೆ ನೋವು, ಸಹಿಸಲಸಾಧ್ಯವಾದ ಎದೆ ಉರಿ, ಇವೆಲ್ಲವು ಜೀರ್ಣಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳು. ಆದರೆ ಇವೇನು ಗುಣಪಡಿಸಲಾಗದ ಸಮಸ್ಯೆಗಳು ಎಂದು ಭಾವಿಸಬೇಡಿ. ನೀವು ಕೆಲವೊಂದು ಆಯುರ್ವೇದದ ಸಲಹೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿದಿರಿ ಎಂದರೆ ನಿಮಗೆ ಇದರಿಂದ ಮುಕ್ತಿ ಖಂಡಿತ ಸಿಕ್ಕುತ್ತದೆ. ಅರೆ ಅದು ಯಾವ ಸಲಹೆಗಳು ಎಂಬ ಕುತೂಹಲ ನಿಮ್ಮಲ್ಲಿ ಇದೆಯಲ್ಲವೇ? ಬನ್ನಿ ಅವು ಯಾವುವು ಎಂದು ತಿಳಿದುಕೊಳ್ಳೋಣ...

ಬೆಳಗ್ಗೆ ಬೇಗ ಏಳಿ
ನೀವು ಬೆಳಗ್ಗೆ ಹೊತ್ತು ಅಲಾರಂ ಅನ್ನು ಸ್ನೂಜ್ ಮಾಡಿ ಮತ್ತೆ ಮಲಗುವ ಅಭ್ಯಾಸವನ್ನು ಇರಿಸಿಕೊಂಡಿದ್ದೀರಾ? ಅದನ್ನು ಮೊದಲು ಬಿಡಿ. ಆಯುರ್ವೇದದ ಪ್ರಕಾರ ಬೆಳಗ್ಗೆ 4-6 ಗಂಟೆಯೊಳಗೆ ಏಳುವ ಅಭ್ಯಾಸ ತುಂಬಾ ಒಳ್ಳೆಯದಂತೆ. ಆಧ್ಯಾತ್ಮಿಕವಾಗಿ ಈ ಅವಧಿಯು ನಿಮ್ಮ ಮನಸ್ಸಿನ ಮೇಲೆ ಅತಿ ಹೆಚ್ಚಿನ ಪ್ರಭಾವ ಬೀರುತ್ತದೆ. ಇದು ನಿಮ್ಮ ಜೀರ್ಣಾಂಗದ ಸಮಸ್ಯೆಗಳನ್ನು ತೊಲಗಿಸುವ ಅತ್ಯುತ್ತಮ ಅಭ್ಯಾಸಗಳಲ್ಲಿ ಮೊದಲನೆಯದಾಗಿರುತ್ತದೆ. ಹಾಗಾಗಿ ದಿನ ಬೇಗ ಏಳಿ.

ಬೆಚ್ಚಗಿನ ನೀರು
ಆಯುರ್ವೇದವು ಜೀರ್ಣಕ್ರಿಯೆಗೆ ಸಹಾಯ ಮಾಡುವ ಶಾಖವನ್ನು "ಅಗ್ನಿ" ಎಂದು ಪರಿಗಣಿಸಿದೆ. ನಾವು ಊಟ ಮಾಡುವಾಗ ತಣ್ಣೀರು ಕುಡಿದರೆ, ಅದರಿಂದ ಹೊಟ್ಟೆಯಲ್ಲಿ ಉತ್ಪತ್ತಿಯಾಗುವ ಈ ಜೀರ್ಣಕ್ರಿಯೆಯ ಅಗ್ನಿಯು ಆರಿ ಹೋಗುತ್ತದೆ. ಅದು ನಮ್ಮ ದೇಹದಲ್ಲಿರುವ ಟಾಕ್ಸಿನ್ಗಳನ್ನು ಹೊರಹಾಕಲು ಅಡ್ಡಗಾಲಾಗಿ ನಿಂತು ಬಿಡುತ್ತದೆ. ಹಾಗಾಗಿ ಊಟ ಮಾಡಿದ ನಂತರ ಮೊದಲು ಬೆಚ್ಚಗಿನ ನೀರನ್ನು ಕುಡಿಯಿರಿ. ನಿಮಗೆ ಬೇಕಾದಲ್ಲಿ ಇದಕ್ಕೆ ಜೇನು ತುಪ್ಪ ಅಥವಾ ನಿಂಬೆರಸವನ್ನು ಬೆರೆಸಿಕೊಳ್ಳಬಹುದು.

ಸಲಾಡ್ಗಳನ್ನು ಸೇವಿಸಿ
ಒಂದು ವೇಳೆ ನೀವು ಅಧಿಕ ಪ್ರಮಾಣದಲ್ಲಿ ಸಲಾಡ್ಗಳನ್ನು ಸೇವಿಸುತ್ತಿದ್ದಲ್ಲಿ, ಒಮ್ಮೆ ಆಲೋಚಿಸಿ. ಸಲಾಡ್ಗಳು ನಿಮ್ಮ ದೇಹದಲ್ಲಿರುವ ಟಾಕ್ಸಿನ್ಗಳನ್ನು ಹೊರಗೆ ಹಾಕುತ್ತದೆ ಎಂಬ ಮೂಢನಂಬಿಕೆಯನ್ನು ಬಿಡಿ. ವಾಸ್ತವದಲ್ಲಿ ಇದನ್ನು ಜೀರ್ಣ ಮಾಡಿಕೊಳ್ಳಲು ನಿಮ್ಮ ದೇಹದಿಂದ ಸಾಧ್ಯವಾಗುವುದಿಲ್ಲ. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ

ಸಲಾಡ್ಗಳನ್ನು ಸೇವಿಸಿ
ಆದ್ದರಿಂದ ನಿಮ್ಮ ದೇಹಕ್ಕೆ ಜೀರ್ಣ ಮಾಡಿಕೊಳ್ಳಲು ಸುಲಭವಾದ ಸಲಾಡ್ ಅನ್ನು ಸೇವಿಸಿ. ಒಂದು ವೇಳೆ ನಿಮಗೆ ಇಷ್ಟವಾದಲ್ಲಿ, ಸಲಾಡ್ ಅನ್ನು ಉಗಿಯಲ್ಲಿ ಬೇಯಿಸಿಕೊಂಡು ಅಥವಾ ಆರೋಗ್ಯಕರವಾದ ಎಣ್ಣೆಯಲ್ಲಿ ಬೇಯಿಸಿಕೊಂಡು ಸೇವಿಸಿ, ಇದು ನಿಮ್ಮ ದೇಹಕ್ಕೆ ಒಳ್ಳೆಯದು.

ಊಟವಾದ ನಂತರ ವಜ್ರಾಸನದಲ್ಲಿ ಕುಳಿತುಕೊಳ್ಳಿ
ಊಟವಾದ ನಂತರ ವಜ್ರಾಸನದಲ್ಲಿ ಕುಳಿತುಕೊಳ್ಳಿ ಎಂದು ಆಯುರ್ವೇದವು ಸೂಚಿಸುತ್ತದೆ. ಇದಕ್ಕಾಗಿ ಮೊದಲು ಮೊಣಕಾಲಿನ ಮೇಲೆ ಕುಳಿತುಕೊಳ್ಳಿ. ನಿಮ್ಮ ಪಾದಗಳು ನಿಮ್ಮ ಸೊಂಟಕ್ಕೆ ಬೆಂಬಲವಾಗಿ ಇರಲಿ. ಈ ಸ್ಥಿತಿಯಲ್ಲಿ ಕುಳಿತುಕೊಂಡು, ನಿಮಗೆ ಆರಾಮವೆನಿಸಿದಾಗ ನಿಮ್ಮ ಹಸ್ತಗಳನ್ನು ಮೊಣಕಾಲಿನ ಮೇಲೆ ಇರಿಸಿಕೊಳ್ಳಿ. ಈ ಸ್ಥಿತಿಯಲ್ಲಿ 5-6 ನಿಮಿಷಗಳ ಕಾಲ ಕುಳಿತುಕೊಳ್ಳಿ. ಇದು ನಿಮಗೆ ಬರುವ ಅಜೀರ್ಣ ಮತ್ತು ಮಲಬದ್ಧತೆಯನ್ನು ತಡೆಗಟ್ಟುತ್ತದೆ.



Click it and Unblock the Notifications
