Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಲಕ್ಷ್ಯ ಮಾಡಬೇಡಿ, ಕಣ್ಣುಗಳೇ ನಮ್ಮ ಅಮೂಲ್ಯ ಸಂಪತ್ತು
ಕಣ್ಣು ತುಂಬಾ ಸೂಕ್ಷ್ಮ ಮತ್ತು ಪ್ರಮುಖ ಅಂಗವಾದ್ದರಿಂದ ಇದರೆಡೆಗಿನ ನಿರ್ಲಕ್ಷ್ಯ ಸಲ್ಲದು. ಕಣ್ಣಿನ ಮೇಲಿನ ಅತಿಯಾದ ಒತ್ತಡ ಕಣ್ಣು ನೋವಿಗೆ ಕಾರಣವಾಗಬಹುದು. ಆದ್ದರಿಂದ ಕಣ್ಣಿಗೂ ಸ್ಪೆಷಲ್ ಕೇರ್ ಅಗತ್ಯವಿದೆ...
ದೇಹದಲ್ಲಿ ಕಣ್ಣುಗಳು ಸೂರ್ಯ-ಚಂದ್ರರು ಇದ್ದಂತೆ. ಆಕಾಶದಲ್ಲಿ ಸೂರ್ಯ ಚಂದ್ರರು ಇಲ್ಲದೆ ಭೂಮಿಯ ಮೇಲೆ ಯಾವ ಪರಿಣಾಮ ಬೀರಬಹುದೋ ಅದೇ ಕಣ್ಣುಗಳು ಇಲ್ಲದೆ ದೇಹದ ಮೇಲೆ ಅದೇ ಪರಿಣಾಮ ಉಂಟಾಗಬಹುದು. ಕಣ್ಣುಗಳ ಆರೋಗ್ಯ ಹಾಗೂ ಅವುಗಳ ಆರೈಕೆ ತುಂಬಾ ಮುಖ್ಯವಾಗಿದೆ. ಕಣ್ಣುಗಳಿಗೆ ತೊಂದರೆಯಾದರೆ ಅದರಿಂದ ದೇಹಕ್ಕೆ ದೊಡ್ಡ ಅಡ್ಡಪರಿಣಾಮ ಬೀರಲಿದೆ. ಕಣ್ಣುಗಳೇ ನಮ್ಮ ಅಮೂಲ್ಯ ಸಂಪತ್ತು- ನಿರ್ಲಕ್ಷ್ಯ ಮಾಡದಿರಿ....
ದೃಷ್ಟಿ ಸರಿಯಿಲ್ಲದೆ ಇದ್ದಾಗ ನಮಗೆ ಸುತ್ತಮುತ್ತಲಿನಲ್ಲಿರುವ ವಸ್ತುಗಳನ್ನು ನೋಡಲು ಸಾಧ್ಯವಾಗುತ್ತದೆ. ಇಲ್ಲವೆಂದಾದರೆ ನಮ್ಮ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವೇ ಇಲ್ಲ. ಇಂದಿನ ದಿನಗಳಲ್ಲಿ ಅತಿಯಾಗಿ ಕಂಪ್ಯೂಟರ್ ಮತ್ತು ಮೊಬೈಲ್ ಅನ್ನು ಬಳಸುವುದರಿಂದ ಕಣ್ಣಿನ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ.

ಹಲವಾರು ಸಮಸ್ಯೆಗಳು ಕಣ್ಣುಗಳನ್ನು ಕಾಡುವುದರಲ್ಲಿ ಸಂಶಯವೇ ಇಲ್ಲ. ಕಣ್ಣು ಒಣಗುವುದು, ಕಣ್ಣು ನೋವು ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಕೆಲವೊಂದು ಮನೆಮದ್ದನ್ನು ಬಳಸಬಹುದು. ಇದು ಯಾವುದೆಂದು ಈ ಲೇಖನದ ಮೂಲಕ ನೀವು ತಿಳಿಯಿರಿ. ಇಂತಹ ಲಕ್ಷಣಗಳು ಕಂಡುಬಂದರೆ 'ಓದುವ ಕನ್ನಡಕ' ಅತ್ಯವಶ್ಯಕ...
ಮನೆಮದ್ದು ತಯಾರಿಸಲು ಬೇಕಾಗುವ ಸಾಮಗ್ರಿಗಳು
ಕ್ಯಾಮೊಮೈಲ್ ಟೀ ಬ್ಯಾಗ್ -2
ರೋಸ್ ವಾಟರ್ -2 ಚಮಚ
ಕಂಪ್ಯೂಟರ್ ಹಾಗೂ ಮೊಬೈಲ್ನಲ್ಲಿ ಕಡಿಮೆ ಸಮಯ ವ್ಯಯ ಮಾಡಿ, ಕಲುಷಿತ ವಾತಾವರಣಕ್ಕೆ ಕಣ್ಣುಗಳನ್ನು ಬಿಟ್ಟುಕೊಡಬಾರದು. ಹೀಗೆ ಮಾಡಿದಲ್ಲಿ ಈ ನೈಸರ್ಗಿಕ ಮನೆಮದ್ದು ಕಣ್ಣಿನ ಒತ್ತಡ ಕಡಿಮೆ ಮಾಡಿ ಆರೋಗ್ಯ ನೀಡುವಲ್ಲಿ ತುಂಬಾ ಪರಿಣಾಮಕಾರಿಯಾಗಲಿದೆ.
ಕ್ಯಾಮೊಮೈಲ್ ಮತ್ತು ರೋಸ್ ವಾಟರ್ ಕಣ್ಣಿಗೆ ಶಮನ ನೀಡಿ ಒತ್ತಡ ಕಡಿಮೆ ಮಾಡುವುದು. ಇದು ಉರಿಯೂತವನ್ನು ಕಡಿಮೆ ಮಾಡುವುದರಿಂದ ಕಣ್ಣು ಕೆಂಪಾಗುವುದು ಮತ್ತು ಕಣ್ಣು ಒಣಗುವುದನ್ನು ಇದು ತಡೆಯುವುದು. ಈ ಮನೆಮದ್ದನ್ನು ಕೋಶಗಳು ಹೀರಿಕೊಂಡಾಗ ಇದು ದೃಷ್ಟಿಯ ನರಗಳನ್ನು ಬಲಗೊಳಿಸಿ ಕಣ್ಣುಗಳನ್ನು ಆರೋಗ್ಯವಾಗಿಡುತ್ತದೆ.
ಮನೆಮದ್ದು ತಯಾರಿಸುವ ಮತ್ತು ಬಳಸುವ ವಿಧಾನ
*ಕ್ಯಾಮೊಮೈಲ್ ಟೀ ಬ್ಯಾಗ್ ಗಳನ್ನು ಬಿಸಿ ನೀರಿನಲ್ಲಿ ಮುಳುಗಿಸಿ.
ಸ್ವಲ್ಪ ಸಮಯ ಹಾಗೆ ಇರಲಿ.
*ಹತ್ತಿಯ ಉಂಡೆಯನ್ನು ರೋಸ್ ವಾಟರ್ನಲ್ಲಿ ಅದ್ದಿ ಅದನ್ನು ಕಣ್ಣಿನ ರೆಪ್ಪೆಗಳ ಒಳಭಾಗಕ್ಕೆ ಹಚ್ಚಿಕೊಳ್ಳಿ.
*ಎರಡು ಟೀ ಬ್ಯಾಗ್ಗಳನ್ನು ಕಣ್ಣಿನ ಮೇಲಿಡಿ.
*30 ನಿಮಿಷಗಳ ಕಾಲ ಹಾಗೆ ಇರಲಿ. ಕಣ್ಣುಗಳು ಮುಚ್ಚಿರಲಿ. ಒಂದು ತಿಂಗಳ ಕಾಲ ಪ್ರತೀ ದಿನ ಹೀಗೆ ಮಾಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


