Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಚೋಟುದ್ದ ಬೆಂಡೆಕಾಯಿಯಲ್ಲಿದೆ, ಬೆಟ್ಟದಷ್ಟು ಆರೋಗ್ಯಕರ ಗುಣಗಳು
ಮೂತ್ರಪಿಂಡಗಳಲ್ಲಿರುವ (ಕಿಡ್ನಿ) ಕಲ್ಮಶಗಳನ್ನು ಹೊರಹಾಕಲು ಕೆಲವಾರು ವಿಧಾನಗಳಿವೆ. ಇದರಲ್ಲಿ ಅತಿ ಸುಲಭವಾದ ವಿಧಾನವೆಂದರೆ ಎಳೆಯ ಬೆಂಡೆಕಾಯಿಯ ಬಳಕೆ. ಇದು ಮಧುಮೇಹ, ಅಸ್ತಮಾ ಮತ್ತು ಕೊಲೆಸ್ಟ್ರಾಲ್ ಹೆಚ್ಚಳದ ತೊಂದರೆಯನ್ನು ಸಮರ್ಥವಾಗಿ ನಿವಾರಿಸುತ್ತದೆ. ಆರೋಗ್ಯದ ಗಣಿ-ಎಲೆಮರೆ ಕಾಯಿಯಂತಿರುವ ಬೆಂಡೆಕಾಯಿ

ಬೆಂಡೆಕಾಯಿಯಲ್ಲಿ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ತೂಕ ಹೆಚ್ಚದೇ ಇರಲು ಇದರ ಖಾದ್ಯಗಳು ನೆರವಾಗುತ್ತವೆ. ಬೆಂಡೆಯ ಇನ್ನೊಂದು ಒಳ್ಳೆಯ ಗುಣವೆಂದರೆ ಇದನ್ನು ಯಾವ ರೂಪದಲ್ಲಿ ಸೇವಿಸಿದರೂ, ಅಂದರೆ ಬೇಯಿಸಿ, ಹುರಿದು, ಕರಿದು ಅಥವಾ ಅರೆಬೇಯಿಸಿ ತಿಂದರೂ ಇದರ ಗುಣಗಳು ಬದಲಾಗುವುದಿಲ್ಲ.
ಎಳೆಬೆಂಡೆಯನ್ನು ಹಸಿಯಾಗಿಯೂ ತಿನ್ನಬಹುದು. ಉಪ್ಪಿನ ಕಾಯಿಯ ರೂಪದಲ್ಲಿಯೂ ನಂಜಿಕೊಳ್ಳಬಹುದು. ಒಂದು ಕಪ್ ಬೆಂಡೆಕಾಯಿಯಲ್ಲಿ ಎರಡು ಗ್ರಾಂ ಪ್ರೋಟೀನ್, ಏಳು ಗ್ರಾಂ ಕಾರ್ಬೋಹೈಡ್ರೇಟುಗಳು, ಮೂರು ಗ್ರಾಂ ಕರಗದ ನಾರು, 0.1 ಗ್ರಾಮ್ ಕೊಬ್ಬು, 30 ಕ್ಯಾಲೋರಿ ಶಕ್ತಿ, 60ಮಿಲಿಗ್ರಾಂ ಮೆಗ್ನೀಶಿಯಂ ಮತ್ತು 21ಮಿಲಿಗ್ರಾಂ ವಿಟಮಿನ್ ಸಿ ಇವೆ. ಬೆಂಡೆಕಾಯಿ ನೆನೆಸಿಟ್ಟ ನೀರು ಕುಡಿದರೆ ಹತ್ತಾರು ಲಾಭ
ಒಂದು ವೇಳೆ ನಿಮ್ಮ ರಕ್ತದಲ್ಲಿರುವ ಕೊಲೆಸ್ಟ್ರಾಲ್ ಮಟ್ಟ ಆರೋಗ್ಯಕರವಾಗಿಲ್ಲದಿದ್ದರೆ, ನಿತ್ಯವೂ ಬೆಂಡೆಕಾಯಿಯನ್ನು ಸೇವಿಸಲು ಮರೆಯದಿರಿ. ಅಷ್ಟೇ ಅಲ್ಲದೆ, ಮಧುಮೇಹಿಗಳೂ ನಿಯಮಿತವಾಗಿ ಸೇವಿಸುತ್ತಾ ಬಂದರೆ ಮಧುಮೇಹ ಸುಲಭವಾಗಿ ನಿಯಂತ್ರಣಕ್ಕೆ ಬರುತ್ತದೆ. ಮಧುಮೇಹ, ಅಸ್ತಮಾ ನಿಯಂತ್ರಣಕ್ಕೆ ಬೆಂಡೆಕಾಯಿ ರಾಮಬಾಣ
ಒಂದು ವೇಳೆ ನಿಮ್ಮ ರಕ್ತದ ಸಕ್ಕರೆಯ ಪ್ರಮಾಣ ಏರುಪೇರಾಗುತ್ತಿದ್ದರೆ ಇದನ್ನು ಸರಿಪಡಿಸಲು ಬೆಂಡೆಯಿಂದ ತಯಾರಿಸಬಹುದಾದ ಒಂದು ಸುಲಭ ವಿಧಾನವಿದೆ. ಸುಮಾರು ಆರು ಎಳೆ ಬೆಂಡೆಕಾಯಿಗಳನ್ನು ಚಿಕ್ಕದಾಗಿ ತುಂಡರಿಸಿ ಈ ತುಂಡುಗಳನ್ನು ಒಂದು ಪಾತ್ರೆ ನೀರಿನಲ್ಲಿ ಹಾಕಿ ಇಡಿಯ ರಾತ್ರಿ ನೆನೆಸಿಡಬೇಕು. ಸರ್ವ ರೋಗಕ್ಕೂ ರಾಮಬಾಣವಾಗಿರುವ ಬೆಂಡೆಕಾಯಿಯ ಪ್ರಯೋಜನಗಳೇನು?
ಮರುದಿನ ಬೆಳಿಗ್ಗೆ ಎದ್ದ ತಕ್ಷಣ ಬೇರಾವುದನ್ನೂ ಮಾಡುವುದಕ್ಕೂ ಮುನ್ನವೇ ಅಂದರೆ ಕಣ್ಣುಜ್ಜಿಕೊಳ್ಳುತ್ತಿದ್ದಂತೆಯೇ ಈ ನೀರನ್ನು ಸೋಸಿ ಗಟಗಟ ಕುಡಿದುಬಿಡಬೇಕು. ಇದರಿಂದ ರಕ್ತದಲ್ಲಿ ಸಕ್ಕರೆಯ ಪ್ರಮಾಣ ನಿಯಂತ್ರಣಕ್ಕೆ ಬರುವುದು ಮಾತ್ರವಲ್ಲ, ಇಡಿಯ ದಿನ ಅನಗತ್ಯವಾಗಿ ತಿನ್ನುವ ಬಯಕೆಯೂ ಕಡಿಮೆಯಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


