Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಹಳ್ಳಿಗಾಡಿನ 'ಎತ್ತಿನ ಗಾಡಿಯ ಎಣ್ಣೆ' ನಮ್ಮ ಹರಳೆಣ್ಣೆ!
ಹಿಂದಿನ ಕಾಲದಲ್ಲಿ, ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ಇದೇ ಕಾರಣಕ್ಕೆ ಹಳ್ಳಿಗಳಲ್ಲಿ 'ಹರಳೆಣ್ಣೆಯ' ಇನ್ನೊಂದು ಹೆಸರು ಎತ್ತಿನ ಗಾಡಿಯ ಎಣ್ಣೆ ಎಂದೇ ಪ್ರಸಿದ್ಧಿ ಪಡೆಯಿತು. (ಈಗಲೂ ಕೂಡ ನಮ್ಮ ಕರಾವಳಿಯ ಕಡೆಗಳಲ್ಲಿ, ಎತ್ತಿನ ಗಾಡಿಯ ಎಣ್ಣೆ ಎಂದೇ ಪ್ರಸಿದ್ಧಿ ಪಡೆದಿದೆ). ಹರಳೆಣ್ಣೆ ಬೋಳು ತಲೆಯಲ್ಲಿ ಕೂದಲು ಮೂಡಿಸುವುದೇ?
ಎತ್ತಿನ ಗಾಡಿಯ ಎಣ್ಣೆ ಎಂಬ ಕಾರಣಕ್ಕೇ ಹೆಚ್ಚಿನವರು ಹರಳೆಣ್ಣೆಯನ್ನು ಉಪಯೋಗಿಸದೇ ಮೂಲೆಗುಂಪಾಗಿಸಿದ್ದಾರೆ.
ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ. ಅದರಲ್ಲೂ ಔಷಧಿಗಳು ವಾಸಿ ಮಾಡಲಾಗದಂತಹ ಕೆಲವು ವ್ಯಾಧಿಗಳನ್ನು ಈ ಹರಳೆಣ್ಣೆ ಸುಲಭವಾಗಿ ಗುಣಪಡಿಸುತ್ತದೆ. ಚರ್ಮದ ಕಂದು ಕಲೆ, ಸೊಂಟನೋವು, ಉಳುಕಿದ ಹಿಮ್ಮಡಿ ಮೊದಲಾದವುಗಳಿಗೆ ಹರಳೆಣ್ಣೆ ಅತ್ಯುತ್ತಮವಾಗಿದೆ. ಇದರ ಇನ್ನೂ ಹಲವು ಗುಣಗಳನ್ನು ಕೆಳಗೆ ವಿವರಿಸಲಾಗಿದೆ, ಮುಂದೆ ಓದಿ... ಸ್ಟ್ರೆಚ್ ಮಾರ್ಕ್ ಸಮಸ್ಯೆಗೆ, ಹರಳೆಣ್ಣೆ-ಆಲೂಗಡ್ಡೆ ಪ್ಯಾಕ್

ಗೊರಕೆಯ ಸಮಸ್ಯೆಯಿದ್ದರೆ
ಗೊರಕೆಯ ತೊಂದರೆ ಇದ್ದರೆ ಕೆಳಹೊಟ್ಟೆಗೆ ಎರಡು ವಾರಗಳ ಕಾಲ ಹರಳೆಣ್ಣೆಯಿಂದ ಮಸಾಜ್ ಮಾಡುವ ಮೂಲಕ ಕಡಿಮೆಯಾಗುತ್ತದೆ. ಗೊರಕೆಯ ಅಬ್ಬರಕ್ಕೆ ಕಡಿವಾಣ ಹಾಕುವ ಮನೆಮದ್ದು

ಕಣ್ಣಿನ ಪೊರೆ ಸಮಸ್ಯೆಯಿದ್ದರೆ
ಕಣ್ಣಿನ ಪೊರೆ (cataract) ಇದ್ದರೆ ಪ್ರತಿದಿನ ರಾತ್ರಿ ಮಲಗುವ ಮುನ್ನ ಒಂದು ಹನಿ ಹರಳೆಣ್ಣೆ ಬಿಟ್ಟರೆ ಕಡಿಮೆಯಾಗುತ್ತದೆ. ಕಣ್ಣಿನ ಪೊರೆಗಳ ಸಮಸ್ಯೆಗೆ-ಪಾರ್ಸ್ಲಿ ಎಲೆಗಳಿಂದ ಆರೈಕೆ....

ಚರ್ಮದ ಸಮಸ್ಯೆಗೆ
ಚರ್ಮದ calcification or calcium deposit (ಕ್ಯಾಲ್ಸಿಯಂ ಪ್ರಮಾಣ ಹೆಚ್ಚಾಗಿ ಪ್ರಕಟಗೊಳ್ಳುವುದು) ತೊಂದರೆ ಕಂಡುಬಂದರೆ ಹರಳೆಣ್ಣೆಯಿಂದ ನಿತ್ಯವೂ ಮಸಾಜ್ ಮಾಡಿದರೆ ಕ್ರಮೇಣ ಕಡಿಮೆಯಾಗುತ್ತದೆ.

ಕೂದಲ ಬೆಳವಣಿಗೆಗೆ
ಕೂದಲ ಬೆಳವಣಿಗೆಗೆ ಶಾಂಪೂ ಮಾಡಿಕೊಳ್ಳುವ ಮೊದಲು ಕೂದಲಿಗೆ ಹರಳೆಣ್ಣೆ ಹಚ್ಚಿ ಇಪ್ಪತ್ತು ನಿಮಿಷದ ಬಳಿಕ ಶಾಂಪೂ ಹಾಕಿ ತೊಳೆದುಕೊಂಡರೆ ಉತ್ತಮ ಪರಿಣಾಮ ಪಡೆಯಬಹುದು.

ಗಾಯದ ಸಮಸ್ಯೆಯಿದ್ದರೆ
ಗಾಯ, ಜಜ್ಜಿದ, ಅಥವಾ ಚಿಕ್ಕಪುಟ್ಟ ಚರ್ಮ ತರಚಿದ ಸ್ಥಳದ ಮೇಲೆ ಕೊಂಚ ಹರಳೆಣ್ಣೆ ಸವರಿದರೆ ಬೇಗನೇ ಗುಣವಾಗುತ್ತದೆ.



Click it and Unblock the Notifications