Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ನಿತ್ಯ ಹಣ್ಣು-ತರಕಾರಿ ತಿಂದು ಸಂತೋಷವಾಗಿರಿ
ಜೀವನದಲ್ಲಿ ಪ್ರತಿಯೊಬ್ಬರು ಸಂತೋಷವಾಗಿರಬೇಕೆಂದು ಬಯಸುತ್ತಾರೆ. ಸಂತೋಷವಾಗಿರಬೇಕೆಂದರೆ ಬಯಸಿದೆಲ್ಲವೂ ಸಿಗುತ್ತಿರಬೇಕು. ಆದರೆ ಕೆಲವೊಂದು ಸಲ ಇದು ಲಭ್ಯವಾಗುವುದಿಲ್ಲ. ಕೆಲವರು ಎಲ್ಲವನ್ನು ಪಡೆದುಕೊಂಡು ಸಂತೋಷವಾಗಿರುತ್ತಾರೆ. ಹೀಗೆ ಖುಷಿಯಾಗಿರಲು ಹಲವಾರು ರೀತಿಯ ಕಾರಣಗಳು ಇರುತ್ತದೆ.
ಆದರೆ ಅಧ್ಯಯನವೊಂದರ ಪ್ರಕಾರ ಹಣ್ಣುಗಳು ಹಾಗೂ ತರಕಾರಿಯನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ಮತ್ತು ಹೃದಯಾಘಾತದ ಅಪಾಯ ಕಡಿಮೆಯಾಗುವುದು ಮಾತ್ರವಲ್ಲದೆ ಜನರ ಸಂತೋಷದ ಮಟ್ಟವು ಹೆಚ್ಚಾಗುತ್ತದೆಯಂತೆ.

ಹಣ್ಣುಗಳು ಹಾಗೂ ತರಕಾರಿ ಸೇವನೆ ಮಾಡುವುದರಿಂದ ಅದು ಆರೋಗ್ಯಕ್ಕೆ ಒಳ್ಳೆಯದು ಮಾಡುವುದಕ್ಕಿಂತ ಹೆಚ್ಚಾಗಿ ಸಂತೋಷವನ್ನು ಉಂಟು ಮಾಡುತ್ತದೆ ಎಂದು ಲಂಡನ್ನ ವಾರ್ವಿಕ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಆಂಡ್ರೂ ಒಸ್ವಾಲ್ಡ್ ಅಭಿಪ್ರಾಯಪಟ್ಟಿದ್ದಾರೆ.
ಸಂತೋಷದ ಮಟ್ಟವು ಪ್ರತೀ ಸಲ ಹಣ್ಣು ಮತ್ತು ತರಕಾರಿ ಸೇವನೆ ಮಾಡುವಾಗ ವೃದ್ಧಿಯಾಗುವುದು ಎಂದು ಅಧ್ಯಯನಗಳಿಂದ ತಿಳಿದುಬಂದಿದೆ. ಹಣ್ಣು ಮತ್ತು ತರಕಾರಿ ಸೇವನೆ ಮಾಡದೆ ಇರುವವರಿಗಿಂತ ಹೆಚ್ಚಾಗಿ ದಿನದಲ್ಲಿ ಎಂಟು ಸಲ ಹಣ್ಣು ಮತ್ತು ತರಕಾರಿ ಸೇವನೆ ಮಾಡುವವರ ಸಂತೋಷವು ಉತ್ತಮವಾಗಿರುತ್ತದೆ.
ಆರೋಗ್ಯಕರ ಆಹಾರವನ್ನು ಸೇವನೆ ಮಾಡಬೇಕೆಂದು ಪ್ರತಿಯೊಬ್ಬರು ಹೇಳುತ್ತಾ ಇರುತ್ತಾರೆ. ಆದರೆ ಜೀವನದಲ್ಲಿ ಸುಖ ಹಾಗೂ ಸಂತೋಷಕ್ಕಾಗಿ ಹಣ್ಣು ಮತ್ತು ತರಕಾರಿ ಸೇವನೆ ಮಾಡಬೇಕು. ಹಣ್ಣುಗಳು ಹಾಗೂ ತರಕಾರಿ ಸೇವನೆಯಿಂದಾಗಿ ಜನರಲ್ಲಿ ಸಂತೋಷದ ಮಟ್ಟವು ಹೆಚ್ಚಾಗಿದೆ ಎಂದು ಒಸ್ವಾಲ್ಡ್ ಅಧ್ಯಯನದಿಂದ ತಿಳಿದುಕೊಂಡಿದ್ದಾರೆ.
ನಿಯಮಿತವಾಗಿ ಹಣ್ಣುಗಳು ಹಾಗೂ ತರಕಾರಿ ಸೇವನೆ ಮಾಡಲು ಆರಂಭಿಸಿದ ಜನರಲ್ಲಿ ಎರಡೇ ವರ್ಷದಲ್ಲಿ ಸಾಕಷ್ಟು ಸುಧಾರಣೆ ಕಂಡು ಬಂದಿದೆ ಎಂದು ಅಧ್ಯಯನಗಳು ಹೇಳಿವೆ. ಹಣ್ಣುಗಳು ಮತ್ತು ತರಕಾರಿಗಳು ಕೇವಲ ಕಾಯಿಲೆಗಳನ್ನು ದೂರವಿಡುವುದಿಲ್ಲ. ಇದು ಜನರ ಮನಸ್ಸಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ಯೂನಿರ್ವಸಿಟಿಯ ಸಂಶೋಧಕ ರೆಡ್ಜೊ ಮುಜಿಕಿಕ್ ತಿಳಿಸಿದ್ದಾರೆ.
ಪ್ರಗತಿಪರ ರಾಷ್ಟ್ರಗಳಲ್ಲಿ ಹೆಚ್ಚಾಗಿ ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಅಭ್ಯಾಸ ಬೆಳೆಸಿಕೊಂಡಿರುವ ಕಾರಣದಿಂದ ಅಲ್ಲಿನ ವೈದ್ಯರು ಹೆಚ್ಚು ಹಣ್ಣು ಹಾಗೂ ತರಕಾರಿಗಳ ಸೇವನೆ ಮಾಡಲು ಸೂಚಿಸಬಹುದು ಎಂದು ಅಮೆರಿನ್ ಜರ್ನಲ್ ಆಫ್ ಪಬ್ಲಿಕ್ ಹೆಲ್ತ್ನಲ್ಲಿ ಪ್ರಕಟನೆಯಾಗಿರುವ ಲೇಖನದಲ್ಲಿ ತಿಳಿಸಿದೆ.
ಈ ಅಧ್ಯಯನಕ್ಕಾಗಿ ಆಯ್ಕೆಯಾದ ಸುಮಾರು 12,835 ಜನರ ಆಹಾರ ಕ್ರಮವನ್ನು ಸರಿಯಾಗಿ ಅಧ್ಯಯನ ಮಾಡಲಾಗಿದೆ. ಸಂತೋಷ ಮತ್ತು ಜೀವನ ತೃಪ್ತಿಗಾಗಿ ಆದಾಯದಲ್ಲಿ ಹೆಚ್ಚಳ ಮತ್ತು ವೈಯಕ್ತಿಕ ಸನ್ನಿವೇಶಗಳಲ್ಲಿ ಜನರು ಬದಲಾಗುವುದರಿಂದ ಆಗುವ ಪರಿಣಾಮವನ್ನು ಲೇಖಕರು ಸರಿಪಡಿಸಿಕೊಂಡಿದ್ದಾರೆ.
(ಐಎಎನ್ಎಸ್ ವರದಿ)
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


