Just In
Don't Miss
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಟ್ಟಿನ ದಿನಗಳಲ್ಲಿ ಸೇವಿಸುವ ಆಹಾರ ಕ್ರಮ ಹೀಗಿರಲಿ....
ಹೆಚ್ಚಿನ ಮಹಿಳೆಯರಿಗೆ ಮಾಸಿಕ ದಿನಗಳೆಂದರೆ ಕೇವಲ ನೋವಿನ ದಿನಗಳು ಮಾತ್ರವಲ್ಲ, ಮಾನಸಿಕವಾಗಿಯೂ ಹಲವಾರು ಕಿರಿಕಿರಿಗಳ ದಿನಗಳಾಗಿರುತ್ತವೆ. ಈ ದಿನಗಳೇ ಏಕಪ್ಪಾ ಬರುತ್ತವೆ ಎನ್ನುವಂತಾಗುತ್ತವೆ. ಆದರೆ ಇದು ನಿಸರ್ಗನಿಯಮವಾಗಿದ್ದು ನೋವು ಕೊಡುವ ನಿಸರ್ಗವೇ ಇದರ ಪರಿಹಾರವನ್ನೂ ಒದಗಿಸಿದೆ. ಈ ಸಮಯದಲ್ಲಿ ಕೆಲವು ಆಹಾರಗಳನ್ನು ಸೇವಿಸುವ ಮೂಲಕ ನೋವು ಕಡಿಮೆಯಾಗುವ ಜೊತೆಗೇ ಮಾನಸಿಕ ಕಿರಿಕಿರಿಯನ್ನು ಎದುರಿಸಿ ಸ್ಥಿಮಿತ ಕಾಯ್ದುಕೊಳ್ಳಲೂ ಸಾಧ್ಯವಾಗುತ್ತದೆ.
ಹದಿಹರೆಯದಿಂದ ಪ್ರಾರಂಭವಾಗುವ ಈ ದಿನಗಳು ರಜೋನಿವೃತ್ತಿಯವರೆಗೂ ಪ್ರತಿತಿಂಗಳೂ ಸಂಭವಿಸುವುದು ನೈಸರ್ಗಿಕ. ಈ ನಡುವೆ ಗರ್ಭಾಂಕುರವಾದರೆ ಮುಂದಿನ ಒಂಬತ್ತು ಗರ್ಭಾವಸ್ಥೆಯಾಗುತ್ತದೆ. ಆ ಬಳಿಕ ಈ ಕ್ರಿಯೆ ಮುಂದುವರೆಯಬೇಕು. ಪ್ರತಿ ತಿಂಗಳ ಸುಮಾರು ಮೂರರಿಂದ ಐದು ದಿನಗಳ ಕಾಲ ಹೊಟ್ಟೆಯಲ್ಲಿ ನೋವು ಮತ್ತು ರಕ್ತಸ್ರಾವ ಕಾಣಿಸಿಕೊಳ್ಳುತ್ತದೆ. ಇಡಿಯ ತಿಂಗಳು ಮಿಲನಕ್ಕಾಗಿ ಕಾದ ಅಂಡಾಣುವನ್ನು ವಿಸರ್ಜಿಸಿ ಹೊಸ ಅಂಡಾಣುವನ್ನು ಬಿಡುಗಡೆಗೊಳಿಸುವ ಕ್ರಿಯೆ ಈ ಅವಧಿಯಲ್ಲಿ ನಡೆಯುತ್ತದೆ. ಅನಿಯಮಿತ ಮುಟ್ಟಿನ ಸಮಸ್ಯೆಗಳನ್ನು ನಿವಾರಿಸುವುದು ಹೇಗೆ?
ಹಿಂದಿನ ದಿನಗಳಲ್ಲಿ ಈ ಅವಧಿಯಲ್ಲಿ ಮನೆಯ ಹೊರಗೆ ಅಥವಾ ಪ್ರತ್ಯೇಕವಾದ ಕೋಣೆಯೊಂದರಲ್ಲಿ ವಿಶ್ರಾಂತಿ ಪಡೆಯಲು ಬಿಡುತ್ತಿದ್ದರು. ಇದೇ ಕಾರಣಕ್ಕೆ ಈ ನೈಸರ್ಗಿಕ ಕ್ರಿಯೆಗೆ 'ಹೊರಗಾಗುವುದು' ಎಂಬ ಹೆಸರೂ ಇದೆ. ಆದರೆ ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಒಂದೊಂದು ಕ್ಷಣವೂ ಅಮೂಲ್ಯವಾಗಿರುವಾಗ ನಾಲ್ಕಾರು ದಿನ ಸುಮ್ಮನೇ ಕುಳಿತಿರುವುದು ಇಂದಿನ ಯುವತಿಯರಿಗೆ ಹೇಳಿಸದ ಮಾತು. ಯಮಯಾತನೆ ನೀಡುವ ಮುಟ್ಟಿನ ನೋವಿಗೆ ಪರಿಹಾರವೇನು?
ಆದರೆ ಈ ಅವಧಿಯಲ್ಲಿ ಕೆಲವು ಆಹಾರಗಳನ್ನು ಸೇವಿಸುವ ಮೂಲಕ ನೈಸರ್ಗಿಕ ಕ್ರಿಯೆಯ ಪರಿಣಾಮಗಳನ್ನು ಸುಲಭವಾಗಿ ಎದುರಿಸಲು ದೇಹವನ್ನು ಸಜ್ಜುಗೊಳಿಸಬಹುದು. ಬನ್ನಿ, ಈ ಆಹಾರಗಳು ಯಾವುವು ಎಂಬುದನ್ನು ಮುಂದೆ ಓದಿ....
ಹಾಲು
ಹಲವು ಬಗೆಯ ಪೋಷಕಾಂಶಗಳಿಂದ ಕೂಡಿರುವ ಹಾಲು ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯುತ್ತಮ ಆಹಾರವಾಗಿದೆ. ಇದರಲ್ಲಿರುವ ಕ್ಯಾಲ್ಸಿಯಂ ಹಾಗೂ ಇತರ ಪೋಶಕಾಂಶಗಳು ಕಳೆದುಕೊಂಡ ರಕ್ತವನ್ನು ಮತ್ತೆ ನವೀಕರಿಸಲು ನೆರವಾಗುತ್ತವೆ.
ಬಾದಾಮಿ
ಮಾಸಿಕ ದಿನಗಳಲ್ಲಿ ವಿಟಮಿನ್ ಇ ಅತಿ ಅಗತ್ಯವಾಗಿ ಬೇಕಾಗಿರುವ ಪೋಷಕಾಂಶವಾಗಿದೆ. ಬಾದಾಮಿಯಲಿ ಇದು ಹೇರಳವಾಗಿದ್ದು ಕೆಳಹೊಟ್ಟೆಯ ಉಬ್ಬರಿಕೆ ಮತ್ತು ನೋವನ್ನು ಕಡಿಮೆಗೊಳಿಸಲು ಬಹಳ ಹೆಚ್ಚಿನ ನೆರವು ನೀಡುತ್ತದೆ.
ಹಸಿರು ಸೊಪ್ಪುಗಳು
ಈ ಅವಧಿಯಲ್ಲಿ ಹಸಿರು ಮತ್ತು ದಪ್ಪನೆಯ ಎಲೆಗಳಿರುವ ಸೊಪ್ಪುಗಳನ್ನು ತಿನ್ನುವುದು ಅಗತ್ಯ. ವಿಶೇಷವಾಗಿ ಬಸಲೆ ಸೊಪ್ಪು ಮತ್ತು ಪಾಲಕ್. ಇವುಗಳಲ್ಲಿ ಅತ್ಯಧಿಕ ಪ್ರಮಾಣದ ಕಬ್ಬಿಣದ ಅಂಶವಿದ್ದು ರಕ್ತದ ಉತ್ಪಾದನೆಗೆ ನೆರವು ನೀಡುತ್ತದೆ. ಹೆಚ್ಚಿನ ಕಬ್ಬಿಣ ಸಿಗುವ ಮೂಲಕ ಉರಿಯೂತ ಮತ್ತು ನೋವನ್ನು ಕಡಿಮೆಯಾಗಿಸುತ್ತದೆ.
ಸೇಬುಹಣ್ಣು
ದಿನಕ್ಕೊಂದು ಸೇಬು ಮಾಸಿಕ ನೋವನ್ನೂ ದೂರವಿರಿಸಬಲ್ಲುದು. ಇದರಲ್ಲಿ ಉತ್ತಮ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಕರಗುವ ನಾರು ವಿಶೇಷವಾಗಿ ಮಲಬದ್ದತೆಯಾಗದಂತೆ ತಡೆದು ಮಾಸಿಕ ದಿನಗಳಲ್ಲಿ ಕನಿಷ್ಟ ನೋವಾಗುವಲ್ಲಿ ಸಹಕರಿಸುತ್ತದೆ.
ಕಪ್ಪು ಚಾಕಲೇಟು
ಕಪ್ಪು ಚಾಕಲೇಟಿನಲ್ಲಿಯೂ ಆಂಟಿ ಆಕ್ಸಿಡೆಂಟುಗಳು ಹೇರಳವಾಗಿದ್ದು ಮಾಸಿಕ ದಿನಗಳ ಉರಿಯೂತ, ನೋವು ಮತ್ತು ಸಂಕಟವನ್ನು ನಿವಾರಿಸಲು ನೆರವಾಗುತ್ತದೆ. ಅಲ್ಲದೇ ಈ ಪೋಷಕಾಂಶಗಳು ಅತಿ ಕಡಿಮೆ ಸಮಯದಲ್ಲಿ ರಕ್ತದಲ್ಲಿ ಹೀರಲ್ಪಡುವ ಕಾರಣ ನೋವನ್ನು ತಕ್ಷಣವೇ ಕಡಿಮೆಗೊಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ ನೋವು ಕಾಣಿಸಿಕೊಳ್ಳುವಂತೆ ಅನ್ನಿಸುತ್ತಿದ್ದಾಗಲೇ ಕೊಂಚ ಕಪ್ಪು ಚಾಕಲೇಟು ತಿಂದರೆ ನೋವು ವಿಪರೀತವಾಗುವುದಿಲ್ಲ.
ಬಾಳೆಹಣ್ಣು
ಮಾಸಿಕ ದಿನಗಳಲ್ಲಿ ತಿನ್ನಲೇಬೇಕಾದ ಇನ್ನೊಂದು ಆಹಾರವೆಂದರೆ ಬಾಳೆಹಣ್ಣು. ಇದರಲ್ಲಿ ಹೆಚ್ಚಿನ ಪ್ರಮಾಣದ ಮೆಗ್ನೀಶಿಯಂ ಇದ್ದು ಕೆಳಹೊಟ್ಟೆಯ ನೋವು ಮತ್ತು ಸೆಡೆತಗಳಿಂದ ರಕ್ಷಿಸುತ್ತದೆ. ಅಲ್ಲದೇ ಇದರಲ್ಲಿರುವ ಕರಗದ ನಾರು ಮಲಬದ್ದತೆಯಾಗದಂತೆ ಸಹಕರಿಸುತ್ತದೆ. ವಿಶೇಷವಾಗಿ ಮಾಸಿಕ ದಿನಗಳಲ್ಲಿ ಮನೋಭಾವನೆ ಏರುಪೇರಾಗದಿರಲು ಬಾಳೆಹಣ್ಣಿನ ಸೇವನೆ ಉತ್ತಮವಾಗಿದೆ.
ಅಗಸೆ ಬೀಜಗಳು
ಅಗಸೆ ಬೀಜ (Flax Seeds) ಸಹಾ ಮಾಸಿಕ ದಿನಗಳಲ್ಲಿ ಸೇವಿಸಲು ಯೋಗ್ಯವಾದ ಆಹಾರವಾಗಿದೆ. ಇದರಲ್ಲಿ ಉತ್ತಮ ಪ್ರಮಾಣದ ಒಮೆಗಾ 3 ಕೊಬ್ಬಿನ ಆಮ್ಲವಿದ್ದು ಕೆಳಹೊಟ್ಟೆಯ ನೋವನ್ನು ಕಡಿಮೆ ಮಾಡುವ ಕ್ಷಮತೆ ಹೊಂದಿದೆ.