Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು 45 ನಿಮಿಷದಲ್ಲಿ ಟ್ಯಾಕ್ಸ್ ಫೈಲ್ ಮಾಡುವುದು ಹೇಗೆ? -
ಪ್ರವಾಹದ ನೀರು ಮನೆಯೊಳಗೆ ನುಗ್ಗಿದೆಯೇ? ಆಸ್ತಿ ಮತ್ತು ಆರೋಗ್ಯ ರಕ್ಷಣೆಗೆ ತಕ್ಷಣ ಮಾಡಬೇಕಾದ ಕೆಲಸಗಳಿವು -
ಬೆಂಗಳೂರಿನಲ್ಲಿ ಮೊಟ್ಟೆ ಬೆಲೆ ಏರಿಕೆ: ಬಜೆಟ್ ಉಳಿಸಲು ಇಲ್ಲಿದೆ ಬೆಸ್ಟ್ ಪ್ರೋಟೀನ್ ಆಯ್ಕೆಗಳು! -
ಇನ್ಸ್ಟಾಗ್ರಾಮ್ ಡೌನ್: ಆತಂಕ ಬೇಡ, ನಿಮ್ಮ ಅಕೌಂಟ್ ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಮಳೆ ರಜೆ ದಿನ ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ವಿಶ್ವ ಐವಿಎಫ್ ದಿನ: ಪೋಷಕರಾಗುವ ಕನಸಿಗೆ ದಂಪತಿಗಳು ಮಾಡಬೇಕಾದ ಸಿದ್ಧತೆಗಳೇನು? -
ಮುಂಬೈ-ಥಾಣೆ ಮಳೆ ಅಲರ್ಟ್: ನಿಮ್ಮ ಮನೆಗೆ ನೀರು ನುಗ್ಗದಂತೆ ತಡೆಯಲು ಈ 20 ನಿಮಿಷದ ಟಿಪ್ಸ್ ಫಾಲೋ ಮಾಡಿ -
ಮಕ್ಕಳ ಟಿಫಿನ್ ಬಾಕ್ಸ್ನಲ್ಲಿ ಅಡಗಿದೆ ಅಪಾಯ? ಪೋಷಕರು ಮರೆಯದೆ ಪಾಲಿಸಬೇಕಾದ ಸುರಕ್ಷತಾ ಸೂತ್ರಗಳು -
ರಾಮಾಯಣದಲ್ಲಿ ರಾವಣನಾಗಿ ಯಶ್: ಸ್ಯಾನ್ ಡಿಯಾಗೋ ಕಾಮಿಕ್-ಕಾನ್ನಲ್ಲಿ ಅಬ್ಬರಿಸಲು ಸಜ್ಜಾದ ರಾಕಿಂಗ್ ಸ್ಟಾರ್! -
ಅಂತರಾಷ್ಟ್ರೀಯ ಸ್ವಯಂ ಆರೈಕೆ ದಿನ: ಕೆಲಸದ ಒತ್ತಡ ಕಡಿಮೆ ಮಾಡಲು 12 ನಿಮಿಷದ ಈ ಸಿಂಪಲ್ ರೂಟೀನ್ ಫಾಲೋ ಮಾಡಿ!
ಕಿರಿಕಿರಿ ನೀಡುವ ಶೀತದ ಸಮಸ್ಯೆಗೆ 'ಆಹಾರ ಪಥ್ಯ' ಹೀಗಿರಲಿ...
ಬಿಟ್ಟು, ಬಿಡದೆ ಕಾಡುವ ಶೀತಕ್ಕೆ ಮನೆ ಮದ್ದು ಮಾಡುವುದೇ ಒಳ್ಳೆಯದು. ಶೀತವನ್ನು ತಕ್ಷಣ ಶಮನ ಮಾಡುವ ಪರಿಣಾಮಕಾರಿಯಾದ ಮನೆ ಮದ್ದು ಏನು ಎಂದು ಮೊದಲಿಗೆ ನೋಡೋಣ ಬನ್ನಿ....
ದೇಹಕ್ಕೆ ಸಣ್ಣ ಸಮಸ್ಯೆಯಾದರೂ ಅದರಿಂದ ಕಿರಿಕಿರಿ ಉಂಟಾಗುವುದು ಸಹಜ. ಅದರಲ್ಲೂ ಶೀತ ಹಾಗೂ ಕೆಮ್ಮು ಇದ್ದರೆ ಆಗ ಹೆಚ್ಚಿನ ಸಮಸ್ಯೆಯಾಗುತ್ತದೆ. ಯಾಕೆಂದರೆ ಶೀತವಿದ್ದರೆ ಗಂಟಲು ನೋವು ಇದ್ದೇ ಇರುತ್ತದೆ. ಗಂಟಲು ನೋವು ಇರುವುದರಿಂದ ದ್ರವ ಹಾಗೂ ಘನ ಆಹಾರ ಸೇವನೆ ಕಷ್ಟವಾಗುತ್ತದೆ. ಶೀತ, ಕೆಮ್ಮು ಉಪಟಳ ತಡೆಯುವ ಮನೆಮದ್ದು
ಶೀತವಿದ್ದರೆ ಮೂಗು ಕಟ್ಟಿದ್ದರೆ ಆಥವಾ ಮೂಗಿನಿಂದ ಸಿಂಬಳ ಸುರಿಯುತ್ತಾ ಇದ್ದರೆ ಅದು ದೊಡ್ಡ ಕಿರಕಿರಿಯುಂಟು ಮಾಡುವುದು. ಶೀತವಿದ್ದಾಗ ಹಸಿವು ಕೂಡ ಕಡಿಮೆಯಿರುತ್ತದೆ. ಶೀತ ಭಾದಿಸುವಾಗ ಹಸಿವನ್ನು ಹೆಚ್ಚಿಸಿಕೊಂಡು ಯಾವ ರೀತಿಯ ಆಹಾರವನ್ನು ಸೇವಿಸಬಹುದು ಎಂದು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು. ಸುವಾಸನೆಯಿರುವಂತಹ ಆಹಾರವನ್ನು ಸೇವಿಸಿ. ಶೀತ ಆದಾಗ ಏನು ಮಾಡಬೇಕು, ಏನು ಮಾಡಬಾರದು?
ಯಾಕೆಂದರೆ ಸುವಾಸನೆಯಿಂದ ನಿಮಗೆ ಹಸಿವು ಹೆಚ್ಚಾಗುವುದು. ಸುವಾಸನೆಯಿಂದ ಆಹಾರ ಹಾಗೂ ಪಾನೀಯವನ್ನು ಸೇವಿಸಬಹುದು. ಇದರಿಂದ ಹಸಿವು ಹೆಚ್ಚಾಗುವ ಸಾಧ್ಯತೆಯಿದೆ... ಮುಂದೆ ಓದಿ...

ಸೂಪ್ ಸೇವಿಸಿ
ಟೊಮೆಟೋದಂತಹ ತರಕಾರಿ ಸೂಪ್ ಅಥವಾ ಕೋಳಿಯ ಸೂಪ್ ಶೀತದಿಂದ ಪರಿಹಾರ ಪಡೆಯಲು ತುಂಬಾ ಒಳ್ಳೆಯದು. ಉಸಿರಾಟದ ನಾಳಗಳಲ್ಲಿ ಅಂಟಿಕೊಂಡಿರುವ ಕಫವನ್ನು ತೆಗೆಯಲು ಇದು ತುಂಬಾ ಸಹಕಾರಿ. ಬಿಸಿಯಾಗಿರುವ ಸೂಪ್ ಕಫವನ್ನು ತೆಳುವಾಗಿಸಿ ಮೂಗಿನಿಂದ ಹೊರಹೋಗಲು ನೆರವಾಗುವುದು. ಶೀತ, ಕೆಮ್ಮು, ಜ್ವರಕ್ಕೆಲ್ಲಾ ರಾಮಬಾಣ- ಬಿಸಿ ಬಿಸಿಯಾದ ಸೂಪ್!

ಬಿಸಿ ನೀರು ಕುಡಿಯಿರಿ
ಶೀತವಿದ್ದಾಗ ನೀರು ಕುಡಿಯಲು ನೀವು ಹಿಂಜರಿಯಬಹುದು. ಆದರೆ ದಿನವಿಡಿ ಬಿಸಿನೀರನ್ನು ಕುಡಿಯುತ್ತಾ ಇರಿ. ಯಾಕೆಂದರೆ ಶೀತ ಹಾಗೂ ಕೆಮ್ಮು ದೇಹದಲ್ಲಿ ನಿರ್ಜಲೀಕರಣವನ್ನು ಉಂಟು ಮಾಡುತ್ತದೆ. ಜೇನುತುಪ್ಪ ಮತ್ತು ಲಿಂಬೆರಸವನ್ನು ಬಿಸಿನೀರಿಗೆ ಹಾಕಿ ಕುಡಿಯುತ್ತಾ ಇರಿ. ಜೇನುತುಪ್ಪವು ಗಂಟಲಿಗೆ ಒಳ್ಳೆಯದು. ಲಿಂಬೆರಸದಲ್ಲಿರುವ ವಿಟಮಿನ್ ಸಿ ಪ್ರತಿರೋಧಕ ವ್ಯವಸ್ಥೆಯನ್ನು ಉತ್ತಮಪಡಿಸುವುದು. ಆರೋಗ್ಯದ ದೃಷ್ಟಿಯಿಂದ, ದಿನನಿತ್ಯ ಬಿಸಿ ನೀರು ಸೇವಿಸಿ

ಎಳೆ ನೀರು
ಎಳೆ ನೀರನ್ನು ಯಾವಾಗಲೂ ಕುಡಿಯುತ್ತಾ ಇರಿ. ಇದು ದೇಹವನ್ನು ನಿರ್ಜಲೀಕರಣದಿಂದ ರಕ್ಷಿಸುವುದು. ನೀವು ಕಾಯಿಲೆಗೆ ಬಿದ್ದಾಗ ಕಳೆದುಕೊಂಡಿರುವ ಪೋಷಕಾಂಶಗಳನ್ನು ಇದು ದೇಹಕ್ಕೆ ಒದಗಿಸುವುದು. ಅಲ್ಲದೇ ಹಸಿರು ಟೀ, ಕಪ್ಪು ಟೀ, ಶುಂಠಿ ಚಹಾ ಕುಡಿಯಿರಿ. ಇದು ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ ಮತ್ತು ಜ್ವರದ ವಿರುದ್ಧ ಹೋರಾಡುತ್ತದೆ. ಬೆಳ್ಳಂ ಬೆಳಿಗ್ಗೆ ಎದ್ದು ಎಳೆ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ

ಮೊಟ್ಟೆ, ಕೋಳಿ
ದೇಹದಲ್ಲಿ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಪ್ರೋಟೀನ್ನಿಂದ ಸಮೃದ್ಧವಾಗಿರುವ ಮೊಟ್ಟೆ, ಕೋಳಿ ಸೇವಿಸಿ. ಗೆಣಸು, ಹೂಕೋಸು, ಓಟ್ಸ್ ಮತ್ತು ಮೊಸರನ್ನು ಸೇವಿಸಿ. ಇದು ಪ್ರತಿರೋಧಕ ಶಕ್ತಿಯನ್ನು ವೃದ್ಧಿಸಿ ಉರಿಯೂತದ ವಿರುದ್ಧ ಹೋರಾಡುವುದು. ಹೊಸ ರುಚಿಯಲ್ಲಿ 6 ಬಗೆಯ ಮೊಟ್ಟೆಯ ರೆಸಿಪಿ



Click it and Unblock the Notifications