Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಮಲಬದ್ಧತೆ ನಿವಾರಣೆಗೆ ಇಲ್ಲಿದೆ ನೋಡಿ ನೈಸರ್ಗಿಕ ಜ್ಯೂಸ್
ಅನಾರೋಗ್ಯಕರ ಆಹಾರ ಕ್ರಮ, ಒತ್ತಡದ ಜೀವನ ಶೈಲಿಯಿಂದಾಗಿ ಇಂದಿನ ದಿನಗಳಲ್ಲಿ ಜನರಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಮನೆಯಿಂದ ಹೊರಗಡೆ ಏನೇ ತಿಂದರೂ ಅದು ಅಜೀರ್ಣವಾಗಿ ಸಮಸ್ಯೆಯನ್ನು ಉಂಟುಮಾಡಬಹುದು. ಇದರಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳುವ ಸಮಸ್ಯೆಯೆಂದರೆ ಅದೇ ಮಲಬದ್ಧತೆ. ಪ್ರತಿಯೊಬ್ಬರು ಒಂದಲ್ಲಾ ಒಂದು ದಿನ ಮಲಬದ್ಧತೆಗೆ ಒಳಗಾಗುತ್ತಾರೆ. ಇದು ಹೆಚ್ಚಿನ ಸಮಯ ಯಾರನ್ನೂ ಕಾಡುವುದಿಲ್ಲ.

ಆದರೆ ಕೆಲವೊಮ್ಮೆ ಇದು ತುಂಬಾ ನೋವನ್ನು ಉಂಟುಮಾಡುವ ಸ್ಥಿತಿ ನಿರ್ಮಾಣ ಮಾಡುತ್ತದೆ. ಆಹಾರ ಕ್ರಮ, ನೀರು ಕಡಿಮೆ ಕುಡಿಯುವುದು ಮತ್ತು ಜೀವನಶೈಲಿ ಇದಕ್ಕೆ ಪ್ರಮುಖ ಕಾರಣವಾಗಿದೆ. ಮಲಬದ್ಧತೆಯು ಒಂದು ದಿನಕ್ಕಿಂತ ಹೆಚ್ಚು ನಿಮ್ಮನ್ನು ಕಾಡಲು ಆರಂಭಿಸಿದರೆ ಆಗ ತಕ್ಷಣ ನೀವು ವೈದ್ಯರನ್ನು ಭೇಟಿಯಾಗಿ ಪರೀಕ್ಷಿಸಿಕೊಳ್ಳಬೇಕು. ಯಾಕೆಂದರೆ ಇದು ಮುಂದೆ ದೊಡ್ಡ ಸಮಸ್ಯೆ ಕಾಡಲಿದೆ ಎನ್ನುವ ಸುಳಿವಾಗಿರಬಹುದು.
ಕೆಲವೊಂದು ಸಂದರ್ಭಗಳಲ್ಲಿ ಪ್ಲೆಥ್ರಾ ಎನ್ನುವ ಔಷಧಿಯನ್ನು ನೀಡಲಾಗುತ್ತದೆ. ಆದರೆ ಯಾವಾಗಲೂ ಇದನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಯನ್ನು ಉಂಟುಮಾಡುವುದು. ಆದರೆ ಮನೆಯಲ್ಲಿ ಕೆಲವೊಂದು ಸಾಮಗ್ರಿಗಳನ್ನು ಬಳಸಿಕೊಂಡು ಮಲಬದ್ಧತೆಯನ್ನು ನಿವಾರಿಸಬಹುದಾಗಿದೆ. ಇದರಿಂದ ಯಾವುದೇ ಅಡ್ಡಪರಿಣಾಮವಿಲ್ಲ ಮತ್ತು ಸುರಕ್ಷಿತ ಕೂಡ..ಬನ್ನಿ ಅವು ಯಾವುದು ಎಂಬುದನ್ನು ನೋಡೋಣ ಮಲಬದ್ಧತೆ ಉಂಟುಮಾಡುವ 7 ಆಹಾರಗಳು
ಅಗತ್ಯವಿರುವ ಸಾಮಾಗ್ರಿಗಳು:
*ಸೇಬಿನ ಶಿರ್ಕಾ (apple cider vinegar) ಎರಡು ದೊಡ್ಡ ಚಮಚ
*ಜೇನು: ಎರಡು ದೊಡ್ಡ ಚಮಚ
*ಉಗುರು ಬೆಚ್ಚನೆಯ ನೀರು : ಒಂದು ಲೋಟ
ಸೇಬಿನ ಶಿರ್ಕಾದಲ್ಲಿ Acetobacter ಎಂಬ ಬ್ಯಾಕ್ಟೀರಿಯಾವಿದೆ. ಇದೊಂದು ಆರೋಗ್ಯಸ್ನೇಹಿ ಬ್ಯಾಕ್ಟೀರಿಯಾವಾಗಿದ್ದು ಹೊಟ್ಟೆಯಲ್ಲಿ ಆಹಾರವನ್ನು ಇನ್ನಷ್ಟು ಚಿಕ್ಕಗಾಗಿ ಒಡೆಯಲು ನೆರವಾಗುತ್ತದೆ. ಇದರಿಂದ ಮಲಬದ್ಧತೆಯಿಂದ ಪರಿಹಾರ ದೊರಕುತ್ತದೆ. ಆದರೆ ಈ ಶಿರ್ಕಾವನ್ನು ಹಸಿಯಾಗಿಯೇ ಅಂದರೆ ಬಿಸಿ ಮಾಡದೇ ಮತ್ತು ಶೋಧಿಸದೇ ಸೇವಿಸಬೇಕು.
ಜೇನು
ಇದರಲ್ಲಿರುವ ಯೂಗ್ಯನಾಲ್ ಎಂಬ ಪೋಷಕಾಂಶ ಹೊಟ್ಟೆಯಲ್ಲಿರುವ ಆರೋಗ್ಯಸ್ನೇಹಿ ಬ್ಯಾಕ್ಟೀರಿಯಾದ ಕ್ಷಮತೆ ಹೆಚ್ಚಿಸಲು ನೆರವಾಗುತ್ತದೆ. ಇದರಿಂದ ಹೊಟ್ಟೆಯಲ್ಲಿರುವ ಆಹಾರ ಪೂರ್ಣವಾಗಿ ಜೀರ್ಣಗೊಳ್ಳಲು ತನ್ಮೂಲಕ ಮಲಬದ್ದತೆಯಾಗದಿರಲು ನೆರವಾಗುತ್ತದೆ. ಮಲಬದ್ಧತೆ ಸಮಸ್ಯೆ ಬೆನ್ನು ಬಿಡದೆ ಕಾಡುತ್ತಿದೆಯೇ? ಕಾರಣ ತಿಳಿದುಕೊಳ್ಳಿ
ಪೇಯ ತಯಾರಿಸುವ ವಿಧಾನ:
೧) ಒಂದು ಲೋಟ ನೀರನ್ನು ಉಗುರುಬೆಚ್ಚಗಾಗುವಷ್ಟು ಬಿಸಿಮಾಡಿ
೨) ಇದಕ್ಕೆ ಶಿರ್ಕಾ ಮತ್ತು ಜೇನು ಬೆರೆಸಿ ಕಲಕಿ.
೩) ಈ ದ್ರವವನ್ನು ಚೆನ್ನಾಗಿ ಕಲಕಿ ಪ್ರತಿದಿನ ಬೆಳಿಗ್ಗೆ ಕುಡಿಯಿರಿ. ಅಲ್ಲದೇ ಕೊಂಚ ಕೊಂಚವಾಗಿ ಇಡಿಯ ದಿನ ಕುಡಿಯುತ್ತಿರಿ. ಒಂದು ವೇಳೆ ಊಟದ ಬಳಿಕ ಹೊಟ್ಟೆಯುಬ್ಬರಿಕೆ ಕಂಡುಬಂದರೆ ತಕ್ಷಣ ಈ ಪೇಯವನ್ನು ಒಂದು ಲೋಟದಷ್ಟು ಕುಡಿಯಿರಿ. ಮಲಬದ್ಧತೆ ಇದ್ದಾಗಲೂ ಈ ಪೇಯವನ್ನು ಕುಡಿಯಬಹುದು ಹಾಗೂ ತಕ್ಷಣ ಒತ್ತಡದಿಂದ ಪಾರಾಗಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

