Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು
ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದುರಾಗುವ ತಾಪತ್ರಯ ಒಂದೆರಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆಮಾಡಿದಾಗ ಇದನ್ನು ಕೆರೆದು ಹೊರಹಾಕುವ ಕ್ರಿಯೆಯೇ ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭಗಳಲ್ಲಿ ಕ್ಷಯ ಹಾಗೂ ಶ್ವಾಸಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು. ಮಧ್ಯರಾತ್ರಿ ಕಾಡುವ ಕೆಮ್ಮು, ಏನು ಮಾಡಬೇಕು?
ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿನ ಸಿರಪ್ಗಳನ್ನು ಶಿಫಾರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.
ಇದನ್ನೇ ನೆಪವಾಗಿಸಿ ಕೆಲವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂದಲೂ ಕೆಲವು ಅಡ್ಡಪರಿಣಾಮಗಳಿವೆ. ಸುಸ್ತು, ತಲೆ ಭಾರವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ. ಶೀತ, ಕೆಮ್ಮು ಉಪಟಳ ತಡೆಯುವ ಮನೆಮದ್ದು
ಅಗತ್ಯವಿರುವ ಸಾಮಾಗ್ರಿಗಳು:
*ಬಿಸಿಹಾಲು - ಒಂದು ಲೋಟ
*ಕಾಳುಮೆಣಸಿನ ಪುಡಿ - 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ)
*ಜೇನು - ಎರಡು ದೊಡ್ಡ ಚಮಚ
*ಈ ಮನೆಮದ್ದು ತುಂಬಾ ಸುಲಭವಾಗಿದ್ದು ಕೇವಲ ಹಾಲು, ಕಾಳುಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡುಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.
*ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರುವ ಸೋಂಕು ಹರಡುವ ಕ್ರಿಮಿಗಳನ್ನು ಹೊರಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ.
*ಈ ಮೂರೂ ಘಟಕಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ. ಶೀತ, ಕೆಮ್ಮು, ಕಫ ಹೋಗಲಾಡಿಸುವ ಕಷಾಯ
ಈ ಪೇಯವನ್ನು ತಯಾರಿಸುವ ಬಗೆ
2)ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

