Latest Updates
-
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ?
ಬೇಸಿಗೆಯ ಬಿಸಿಯನ್ನು ತಂಪಾಗಿಸಲು ಆರೋಗ್ಯ ಟಿಪ್ಸ್
ಅಬ್ಬಾ ಬೇಸಿಗೆಯೆಂಬುದು ಧಗೆಯೊಂದಿಗೆ ಮೈಯಿಂದ ಸೋರಿಹೋಗುವ ಬೆವರನ್ನು ಸಾಕಷ್ಟು ದಯಪಾಲಿಸುತ್ತದೆ. ನೆತ್ತಿಯ ಮೇಲೆ ಸುಡುವ ಸೂರ್ಯ ನಮ್ಮಲ್ಲಿರುವ ಶಕ್ತಿಯನ್ನು ಹೀರಿಬಿಟ್ಟಿದ್ದಾನೆ ಎಂದೇ ನಮಗೆನಿಸುವಷ್ಟು ಆಯಾಸ, ಸುಸ್ತು, ಬಾಯಾರಿಕೆ ನಮಗುಂಟಾಗುತ್ತದೆ. ತಣ್ಣಗಿನ ನೀರಿನಲ್ಲೇ ಆದಷ್ಟು ಸಮಯ ಕಳೆದುಬಿಡುವಾ ಎಂಬ ಭಾವನೆ ನಮ್ಮಲ್ಲಿ ಉದ್ಭವವಾಗುವುದೇ ಬಿರುಬೇಸಿಗೆಯಲ್ಲಿ.
ಈ ಸಮಯದಲ್ಲಿ ಹಸಿವು ಕಡಿಮೆಯಾಗಿ ದ್ರವಾಹಾರದತ್ತಲೇ ಮನಸ್ಸು ವಾಲುತ್ತದೆ. ದೇಹಕ್ಕೆ ಸಾಧ್ಯವಾದಷ್ಟು ನೀರಿನ ಪೂರೈಕೆಯನ್ನು ಈ ಕಾಲದಲ್ಲಿ ನಾವು ಮಾಡುತ್ತಿರಬೇಕು. ಉಷ್ಣದ ಆಹಾರವನ್ನು ತ್ಯಜಿಸಿ ಆದಷ್ಟು ತಂಪಿನ ಆಹಾರದತ್ತ ನಾವು ಒಲವು ತೋರಿಸಬೇಕು. ಜೇನು ಮೊದಲಾದ ಉಷ್ಣ ಪದಾರ್ಥಗಳನ್ನು ಆದಷ್ಟು ಸೇವಿಸದಿರುವುದೇ ಉತ್ತಮವಾಗಿರುತ್ತದೆ.
ಆದಷ್ಟು ತಾಜಾ ಹಣ್ಣಿನ ರಸ, ಹಣ್ಣುಗಳ ಸೇವನೆ ಅಂತೆಯೇ ಲೀಟರುಗಟ್ಟಲೆ ನೀರನ್ನು ಸೇವಿಸುತ್ತಲೇ ಇರಬೇಕು. ಬೇಸಿಗೆಯಲ್ಲಿ ನೀವು ಏನು ಮಾಡಬೇಕು ಏನು ಮಾಡಬಾರದು ಎಂಬ ಚಿಕ್ಕ ಸಲಹೆಗಳನ್ನು ನಾವು ನಿಮ್ಮ ಹಿತಕ್ಕಾಗಿ ಇಂದಿಲ್ಲಿ ನೀಡಲಿದ್ದು ಇದರಿಂದ ಬೇಸಿಗೆಯ ಧಗೆಯನ್ನು ಕಡಿಮೆ ಮಾಡಿಕೊಳ್ಳುವುದು ಹೇಗೆ ಎಂಬ ಟಿಪ್ಸ್ ನಿಮಗೆ ದೊರೆಯುತ್ತದೆ. ಹಾಗಿದ್ದರೆ ಬನ್ನಿ ತಡ ಮಾಡದೇ ಕೆಳಗಿನ ಸ್ಲೈಡರ್ ಕ್ಲಿಕ್ ಮಾಡುತ್ತಾ ಬೇಸಿಗೆಯ ಬಿಸಿಯನ್ನು ತಂಪಾಗಿಸುವ ಬಗೆಯನ್ನು ಕಂಡುಕೊಳ್ಳಿ...

ಹೆಚ್ಚುಚ್ಚು ನೀರು ಕುಡಿಯಿರಿ
ಡೀಹೈಡ್ರೇಶನ್ ಅನ್ನು ಬೇಸಿಗೆ ಉಂಟುಮಾಡುತ್ತದೆ. ದೇಹದಲ್ಲಿ ನೀರು ಬೆವರಿನ ರೂಪದಲ್ಲಿ ಹರಿದು ಹೋಗುವುದು ಬೇಸಿಗೆಯಲ್ಲಾಗಿದ್ದು ಈ ಸಮಯದಲ್ಲಿ ದೇಹಕ್ಕೆ ಸಾಕಷ್ಟು ನೀರಿನ ಪೂರೈಕೆಯನ್ನು ನೀವು ಮಾಡಬೇಕಾಗುತ್ತದೆ. ನೀರನ್ನು ಆಗಾಗ್ಗೆ ಹೆಚ್ಚು ಪ್ರಮಾಣದಲ್ಲಿ ಸೇವಿಸುವುದರಿಂದ ನೀರಡಿಕೆಯನ್ನು ನೀಗಿಸಿಕೊಳ್ಳಬಹುದಾಗಿದೆ.

ಕೆಫೇನ್ ತ್ಯಜಿಸಿ
ನಮ್ಮ ಆರೋಗ್ಯಕ್ಕೆ ಹಾನಿಯನ್ನುಂಟು ಮಾಡು ಕೆಫೇನ್ ಮತ್ತು ಸಕ್ಕರೆ ಬೆರೆತ ಪಾನೀಯಗಳನ್ನು ಆದಷ್ಟು ಬೇಸಿಗೆಯಲ್ಲಿ ಕಡಿಮೆ ಸೇವಿಸುವುದು ಒಳಿತು. ಜೀರ್ಣಕ್ರಿಯೆ ವ್ಯವಸ್ಥೆಗೆ ಧಕ್ಕೆಯನ್ನು ತರುವ ಫಾಸ್ಫರಿಕ್ ಆಸಿಡ್ನ ರಚನೆಗೆ ಇದು ಕಾರಣವಾಗುವುದರಿಂದ ಇವುಗಳ ಸೇವನೆ ಬೇಡವೇ ಬೇಡ.

ಒಣ ಹಣ್ಣುಗಳನ್ನು ಸೇವಿಸದಿರಿ
ಒಣ ಹಣ್ಣುಗಳು ಆರೋಗ್ಯಕರ ಮತ್ತು ಪೋಷಕಾಂಶಭರಿತವಾಗಿರುತ್ತವೆ. ಅದಾಗ್ಯೂ ಇವುಗಳು ದೇಹದಲ್ಲಿ ಉಷ್ಣತೆಯನ್ನು ಉಂಟುಮಾಡುತ್ತವೆ ಆದ್ದರಿಂದ ಬೇಸಿಗೆಯಲ್ಲಿ ಇವುಗಳನ್ನು ಸೇವಿಸದಿರುವುದೇ ಒಳಿತು. ಬೇಸಿಗೆಯಲ್ಲಿ ಒಣಹಣ್ಣುಗಳ ಬದಲಿಗೆ ತಾಜಾ ಹಣ್ಣುಗಳನ್ನೇ ಅಧಿಕವಾಗಿ ಸೇವಿಸಿ.

ಉಷ್ಣ ಆಹಾರಗಳನ್ನು ಸೇವಿಸದಿರಿ
ಬೇಸಿಗೆಯಲ್ಲಿ ಉಷ್ಣವನ್ನುಂಟು ಮಾಡುವ ಆಹಾರಗಳನ್ನು ಸೇವಿಸದಿರಿ. ಪಾಲಾಕ್, ಕರಿಮೆಣಸು, ಮೂಲಂಗಿ, ಬೆಳ್ಳುಳ್ಳಿ, ಈರುಳ್ಳಿಯನ್ನು ಸೇವಿಸದಿರಿ. ಮಸಾಲೆ ಪದಾರ್ಥಗಳ ಸೇವನೆ ಆರೋಗ್ಯದ ಮೇಲೂ ಕೆಟ್ಟ ಪರಿಣಾಮವನ್ನು ಬೀರುತ್ತದೆ.

ಸಕ್ಕರೆ ಭರಿತ ಆಹಾರ ಸೇವನೆ ನಿಲ್ಲಿಸಿ
ದೇಹದ ಉಷ್ಣತೆನ್ನು ಸಕ್ಕರೆ ಇರುವ ಆಹಾರ ಪದಾರ್ಥಗಳೂ ಹೆಚ್ಚಿಸುತ್ತವೆ. ಜೇನು ಮತ್ತು ಕಾಕಂಬಿ ಸೇವನೆಯನ್ನು ಬಿಡಿ. ತರಕಾರಿ ಮತ್ತು ಹಣ್ಣುಗಳಲ್ಲಿ ಇರುವ ನೈಸರ್ಗಿಕ ಸಕ್ಕರೆಯನ್ನು ಅಧಿಕವಾಗಿ ಸೇವಿಸಿ.



Click it and Unblock the Notifications











