Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಲಿಂಬೆ ರಸ ಬೆರೆಸಿದ ನೀರು, ಅದೇನು ಮಾಯೆ, ಅದೇನು ಜಾದೂ!
ಲಿಂಬೆ ಹಣ್ಣು ಸಿಹಿ ಅಂಶದಿಂದ ಕೂಡಿಲ್ಲದಿದ್ದರೂ ತನ್ನ ಚಮತ್ಕಾರಿ ಆರೋಗ್ಯ ಸುಧಾರಕ ಅಂಶಗಳಿಂದ ಶ್ರೀಮಂತವಾಗಿದೆ. ಲಿಂಬೆಯಿಂದ ಹಲವಾರು ಆರೋಗ್ಯಕಾರಿ ಪ್ರಯೋಜನಗಳಿವೆ....
ದಿನದಲ್ಲಿ ಎಷ್ಟು ಲೋಟ ನೀರು ಕುಡಿಯುತ್ತೇವೆ ಎಂದು ಕೇಳಿದರೆ ಉತ್ತರ ಐದಕ್ಕಿಂತ ಕಡಿಮೆಯೇ ಇರಬಹುದು. ಯಾಕೆಂದರೆ ನೀರು ಕುಡಿಯುವಷ್ಟು ಉದಾಸೀನತೆಯನ್ನು ನಾವು ಬೇರೆ ಯಾವುದೇ ವಿಷಯದಲ್ಲೂ ಮಾಡಲ್ಲ. ಚಾ, ಕಾಫಿಯಾದರೆ ಅದಕ್ಕಿಂತ ಹೆಚ್ಚು ಸಲ ಕುಡಿಯುತ್ತೇವೆ.

ಬೆಳಿಗ್ಗೆ ಎದ್ದು, ಮಧ್ಯಾಹ್ನ ಮತ್ತು ಸಂಜೆ ಹೀಗೆ ಎಷ್ಟು ಬೇಕೋ ಅಷ್ಟು ಸಲ ಚಾ, ಕಾಫಿ ಕುಡಿಯುತ್ತೇವೆ. ಆದರೆ ನೀರು ಮಾತ್ರ ಕುಡಿಯಲ್ಲ. ಆದರೆ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವುದು ನೀರು. ನಾವು ಹೆಚ್ಚು ನೀರು ಕುಡಿಯಲೇಬೇಕು. ನೀರು ಕುಡಿಯದೆ ಇದ್ದರೆ ಹಲವಾರು ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ನೀರಿಗೆ ಸ್ವಲ್ಪ ಲಿಂಬೆರಸ ಬೆರೆಸಿ ಕುಡಿದರೆ ಅದು ತುಂಬಾ ಆರೋಗ್ಯಕಾರಿ. ಲಿಂಬೆ ಹಣ್ಣು- ಹುಳಿಯಾದರೂ, ಆರೋಗ್ಯಕ್ಕೆ ಸಿಹಿ!
ಮಾರುಕಟ್ಟೆಯಲ್ಲಿ ಸಿಗುವಂತಹ ಕೆಲವೊಂದು ಉತ್ಪನ್ನಗಳು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ ಎಂದು ಕೇಳುತ್ತವೆ. ಇದಕ್ಕೆ ಹಣ ಕೂಡ ಖರ್ಚು ಮಾಡಬೇಕಾಗುತ್ತದೆ. ಯಾವುದೇ ಖರ್ಚು ಇಲ್ಲದೆ ಹೆಚ್ಚಿಗೆ ನೀರು ಕುಡಿದರೆ ಚರ್ಮದ ಕಾಂತಿಯು ವೃದ್ಧಿಸುತ್ತದೆ.
ಅದರಲ್ಲೂ ನೀರಿಗೆ ಎರಡು ಮೂರು ಚಮಚ ಲಿಂಬೆರಸವನ್ನು ಹಾಕಿ ಕುಡಿದರೆ ಅದರಿಂದ ಕಪ್ಪುಕಲೆಗಳು, ವಯಸ್ಸಾಗುತ್ತಿರುವ ಲಕ್ಷಣ ಮತ್ತು ನೆರಿಗೆ ಮೂಡುವುದನ್ನು ತಡೆಯಬಹುದು. ಲಿಂಬೆರಸವು ತಂಪನ್ನು ಉಂಟು ಮಾಡುವ ಕಾರಣದಿಂದ ಅತಿಯಾದ ಉಷ್ಣತೆಯಲ್ಲಿ ಇದು ತುಂಬಾ ಪರಿಣಾಮಕಾರಿ. ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ!
ಅಜೀರ್ಣವೆನ್ನುವುದು ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಲ್ಲೂ ಕಂಡುಬರುತ್ತಿದೆ. ಆದರೆ ಬಿಸಿನೀರು ಮತ್ತು ಲಿಂಬೆರಸವು ಅಜೀರ್ಣಕ್ಕೆ ಒಳ್ಳೆಯ ಮದ್ದು. ಅಷ್ಟೇ ಅಲ್ಲದೆ ಲಿಂಬೆರಸವು ರಕ್ತವನ್ನು ಶುದ್ಧೀಕರಿಸುತ್ತದೆ, ಅಜೀರ್ಣ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ. ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಿ ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ.
ಅಷ್ಟೇ ಅಲ್ಲದೆ ಇದು ಬಾಯಿಯ ಕೆಟ್ಟ ವಾಸನೆ ಹಾಗೂ ಒಸಡುಗಳಲ್ಲಿ ರಕ್ತ ಸೋರುವುದನ್ನು ನಿವಾರಿಸುತ್ತದೆ. ಹಲ್ಲುಗಳು ಕೆಡುವುದನ್ನು ಇದು ತಡೆಯುವುದು. ಲಿಂಬೆರಸದಲ್ಲಿ ಇರುವಂತಹ ಪೊಟಾಶಿಯಂ ಅಧಿಕ ರಕ್ತದೊತ್ತಡವನ್ನು ನಿವಾರಿಸುವುದು. ಇದು ವಾಕರಿಕೆ ಹಾಗೂ ತಲೆತಿರುಗುವಿಕೆಯನ್ನು ತಡೆಯುತ್ತದೆ. ಲಿಂಬೆಯುಕ್ತ ನೀರಿನ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳು
ಲಿಂಬೆನೀರು ನಿಮ್ಮಲ್ಲಿನ ಒತ್ತಡ ಹಾಗೂ ಖಿನ್ನತೆಯನ್ನು ಕಡಿಮೆ ಮಾಡಿ ಒಳ್ಳೆಯ ಭಾವನೆ ಉಂಟು ಮಾಡುವುದು. ಅಷ್ಟೇ ಅಲ್ಲದೆ ಲಿಂಬೆರಸವು ಕಫವನ್ನು ಕಡಿಮೆ ಮಾಡುತ್ತದೆ. ಇದರಿಂದ ಅಸ್ತಮಾ ಇರುವವರು ಸರಿಯಾಗಿ ಉಸಿರಾಡಲು ನೆರವಾಗುವುದು. ಬೆಚ್ಚನೆ ನೀರಿನ ಜೊತೆ ಲಿಂಬೆ ಮತ್ತು ಜೇನು ಸೇವನೆ ಏಕೆ ಮಹತ್ವಪೂರ್ಣ
ಲಿಂಬೆನೀರಿನಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿಂದ ಗಂಟಲಿನ ಸೋಂಕು ಕಡಿಮೆಯಾಗುತ್ತದೆ. ಗಂಟಲಿನಲ್ಲಿ ಉಂಟಾಗಿರುವ ಕೆರೆತವನ್ನು ನಿವಾರಿಸಲು ಉಪ್ಪು ನೀರಿನಿಂದ ಸಾಧ್ಯವಾಗದಿದ್ದರೆ ಲಿಂಬೆನೀರಿನಿಂದ ಬಾಯಿ ಮುಕ್ಕಳಿಸಿಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications






