Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಎದೆಯುರಿ ಸಮಸ್ಯೆ- ಒಂದೆರಡು ದಿನಗಳಲ್ಲಿಯೇ ನಿಯಂತ್ರಣಕ್ಕೆ!
ಎದೆಯ ನಟ್ಟನಡುವಿನಲ್ಲಿ ಉರಿ ಅಥವಾ ತೀಕ್ಷ್ಣವಾದ ನೋವು ಕಾಣಿಸಿಕೊಂಡರೆ ಅದು ಬಹುತೇಕ ಎದೆಯುರಿಯ (heartburn) ಪ್ರಭಾವವಾಗಿರಬಹುದು. ಇದು ಹೊಟ್ಟೆಯ ಮೇಲ್ಭಾಗದಿಂದ ಹಿಡಿದು ಗಂಟಲವರೆಗೂ ವ್ಯಾಪಿಸಬಹುದು... ಮುಂದೆ ಓದಿ
ಎದೆಯುರಿ ಅಥವಾ ಹೊಟ್ಟೆಯ ಉರಿ ಊಟದ ಬಳಿಕ ಎದುರಾಗುವ ಸಾಮಾನ್ಯ ತೊಂದರೆಯಾಗಿದ್ದು ಹೊಟ್ಟೆಯಲ್ಲಿ ಅಜೀರ್ಣತೆಯಿಂದ ಉಂಟಾದ ಆಮ್ಲೀಯ ಗಾಳಿ ಅನ್ನನಾಳದ ಮೂಲಕ ಹೊರಬರಲು ಯತ್ನಿಸುವಾಗ ಹೊಟ್ಟೆಯ ಮೇಲ್ಭಾಗ ಮತ್ತು ಅನ್ನನಾಳದ ಒಳಗೆ ಮಾಡುವ ಉರಿಯಾಗಿದೆ. ಇನ್ನು ಎದೆಯುರಿ ಸಮಸ್ಯೆಗೆ ದಯವಿಟ್ಟು ಕಂಗಾಲಾಗದಿರಿ!
gastro esophageal reflux disease ಎಂದು ಕರೆಯಲಾಗುವ ಈ ಸ್ಥಿತಿ ಬಂದಾಗ ತಡೆಯಲು ಸಾಧ್ಯವಾಗದೇ ಉರಿ ಅನುಭವಿಸಬೇಕಾಗುತ್ತದೆ. ಬನ್ನಿ, ಈ ತೊಂದರೆಯನ್ನು ಸುಲಭ ಮನೆಮದ್ದುಗಳಿಂದ ಹೇಗೆ ಶಮನಿಸಬಹುದು ಎಂಬುದನ್ನು ನೋಡೋಣ...

ಎದೆಯುರಿ ಎಂದರೇನು?
ಹುಳಿತೇಗು, ಎದೆಯುರಿ, ಹೊಟ್ಟೆಯುರಿ ಮೊದಲಾದ ಹೆಸರುಗಳಿಂದ ಕರೆಯಲ್ಪಡುವ ಈ ತೊಂದರೆ ಎದೆಯ ಮೇಲ್ಭಾಗ ಅಂದರೆ ಗಂಟಲಿನ ಕೊಂಚವೇ ಕೆಳಗೆ ಅತೀವ ಉರಿಯನ್ನು ಉಅಂಟುಮಾಡುತ್ತದೆ. ಇದಕ್ಕೆ ಹೊಟ್ಟೆಯಲ್ಲಿ ಉತ್ಪತ್ತಿಯಾದ ಆಮ್ಲೀಯ ರಸ ಮತ್ತು ವಾಯುಗಳು ಕಾರಣವಾಗಿದ್ದು ಒತ್ತಡ ತಾಳಲಾರದೇ ಮೇಲ್ಮುಖವಾಗಿ ಒತ್ತಲ್ಪಡುತ್ತವೆ. ಇದಕ್ಕೆ ಆಸಮರ್ಪಕವಾದ ಆಹಾರಗಳ ಸಂಯೋಜನೆ, ಆಸಮರ್ಪಕ ಭಂಗಿಯಲ್ಲಿ ಪವಡಿಸುವುದು, ಹೊಟ್ಟೆಯ ಭಾಗದಲ್ಲಿ ಒತ್ತಡ ಹೇರುವುದು ಮೊದಲಾದವು ಎದೆಯುರಿಗೆ ಕಾರಣವಾಗಿದೆ. ಎದೆಯುರಿಗೆ pyrosis, cardialgia, ಅಥವಾ acid indigestion ಎಂಬ ಹೆಸರುಗಳೂ ಇವೆ.

ಎದೆಯುರಿಗೆ ಪರಿಹಾರ
ಅರ್ಧ ಲಿಂಬೆಯ ರಸ ಅಥವಾ ಒಂದು ದೊಡ್ಡ ಚಮಚ ಲಿಂಬೆಯ ಸಿದ್ಧ ರಸವನ್ನು ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಬೆರೆಸಿ ಇದಕ್ಕೆ ಕೊಂಚ ಜೇನು ಸೇರಿಸಿ ಬೆಳಿಗ್ಗೆದ್ದ ತಕ್ಷಣ ಖಾಲಿಹೊಟ್ಟೆಯಲ್ಲಿ ಕುಡಿದರೆ ರಾತ್ರಿಯ ಊಟದ ಪರಿಣಾಮವಾಗಿ ಉಂಟಾಗಿದ್ದ ಎದೆಯುರಿ ಕಡಿಮೆಯಾಗುತ್ತದೆ.

ಏಳೆಂಟು ಒಣದ್ರಾಕ್ಷಿ
ಒಂದು ವೇಳೆ ಈ ವಿಧಾನ ಇಷ್ಟವಾಗದಿದ್ದರೆ ಅಥವಾ ಮಧ್ಯಾಹ್ನದ ಊಟದ ಬಳಿಕ ತೊಂದರೆ ಎದುರಾದರೆ ಸುಮಾರು ಏಳೆಂಟು ಒಣದ್ರಾಕ್ಷಿಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಊಟದ ಬಳಿಕ ನೀರಿನ ಸಹಿತ ಕುಡಿಯಬೇಕು. ಈ ನೀರನ್ನೂ ಬೆಳಿಗ್ಗೆ ಪ್ರಥಮ ಆಹಾರವಾಗಿ ಸೇವಿಸುವ ಮೂಲಕ ದಿನದ ಆಹಾರಗಳ ಸೇವನೆಯಿಂದ ಎದೆಯುರಿ ಉಂಟಾಗುವುದಿಲ್ಲ.

ದಿನಕ್ಕೊಂದು ಬಾಳೆಹಣ್ಣು ತಿನ್ನಿ
ಊಟದ ಬಳಿಕ ಬಾಳೆಹಣ್ಣನ್ನು ತಿನ್ನುವ ಮೂಲಕ ಆಮ್ಲ ಉತ್ಪತ್ತಿಯಾಗದೇ ಇರಲು ಸಾಧ್ಯವಾಗುತ್ತದೆ. ಅಲ್ಲದೇ ಹೊಟ್ಟೆ ತುಂಬಿದಂತೆ ಅನ್ನಿಸುವುದರಿಂದ ಅನಗತ್ಯವಾಗಿ ಹೆಚ್ಚಿನ ಆಹಾರ ಸೇವನೆಯನ್ನು ತಡೆಯುತ್ತದೆ.

ತುಳಸಿ ಎಲೆಗಳನ್ನು ಜಗಿಯಿರಿ
ಎದೆಯುರಿಯನ್ನು ತಕ್ಷಣ ಕಡಿಮೆಗೊಳಿಸಲು ಉತ್ತಮ ವಿಧಾನವೆಂದರೆ ತುಳಸಿ ಎಲೆಗಳನ್ನು ಜಗಿಯುವುದು. ಅದರಲ್ಲೂ ಎದೆಯುರಿಯೊಂದಿಗೆ ವಾಕರಿಕೆಯೂ ಆವರಿಸಿದ್ದರೆ ಈ ಎಲೆಗಳು ತಕ್ಷಣ ಶಮನ ನೀಡುತ್ತವೆ ಹಾಗೂ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಶೀತ ಮೊದಲಾದ ತೊಂದರೆಗಳನ್ನೂ ನಿವಾರಿಸುತ್ತವೆ.ಆರೋಗ್ಯ ರಕ್ಷಕ- ತುಳಸಿ ಎಲೆಯ ವೈಶಿಷ್ಟ್ಯ ಒಂದೇ, ಎರಡೇ?

ತಣ್ಣಗಿನ ಹಸಿ ಹಾಲು ಕುಡಿಯಿರಿ
ತಕ್ಷಣಕ್ಕೆ ಎದೆಯುರಿಯನ್ನು ಶಮನಗೊಳಿಸಲು ಇನ್ನೊಂದು ಸಮರ್ಥ ವಿಧಾನವೆಂದರೆ ತಣ್ಣಗಿನ ಹಸಿ ಹಾಲನ್ನು ಕುಡಿಯುವುದು. ಇದರಿಂದಲೂ ಎದೆಯುರಿ ಮತ್ತು ವಾಕರಿಕೆ ತಕ್ಷಣ ಕಡಿಮೆಯಾಗುತ್ತದೆ.



Click it and Unblock the Notifications
