Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಎದೆಯುರಿ ಸಮಸ್ಯೆ- ಒಂದೆರಡು ದಿನಗಳಲ್ಲಿಯೇ ನಿಯಂತ್ರಣಕ್ಕೆ!
ಎದೆಯ ನಟ್ಟನಡುವಿನಲ್ಲಿ ಉರಿ ಅಥವಾ ತೀಕ್ಷ್ಣವಾದ ನೋವು ಕಾಣಿಸಿಕೊಂಡರೆ ಅದು ಬಹುತೇಕ ಎದೆಯುರಿಯ (heartburn) ಪ್ರಭಾವವಾಗಿರಬಹುದು. ಇದು ಹೊಟ್ಟೆಯ ಮೇಲ್ಭಾಗದಿಂದ ಹಿಡಿದು ಗಂಟಲವರೆಗೂ ವ್ಯಾಪಿಸಬಹುದು... ಮುಂದೆ ಓದಿ
ಎದೆಯುರಿ ಅಥವಾ ಹೊಟ್ಟೆಯ ಉರಿ ಊಟದ ಬಳಿಕ ಎದುರಾಗುವ ಸಾಮಾನ್ಯ ತೊಂದರೆಯಾಗಿದ್ದು ಹೊಟ್ಟೆಯಲ್ಲಿ ಅಜೀರ್ಣತೆಯಿಂದ ಉಂಟಾದ ಆಮ್ಲೀಯ ಗಾಳಿ ಅನ್ನನಾಳದ ಮೂಲಕ ಹೊರಬರಲು ಯತ್ನಿಸುವಾಗ ಹೊಟ್ಟೆಯ ಮೇಲ್ಭಾಗ ಮತ್ತು ಅನ್ನನಾಳದ ಒಳಗೆ ಮಾಡುವ ಉರಿಯಾಗಿದೆ. ಇನ್ನು ಎದೆಯುರಿ ಸಮಸ್ಯೆಗೆ ದಯವಿಟ್ಟು ಕಂಗಾಲಾಗದಿರಿ!
gastro esophageal reflux disease ಎಂದು ಕರೆಯಲಾಗುವ ಈ ಸ್ಥಿತಿ ಬಂದಾಗ ತಡೆಯಲು ಸಾಧ್ಯವಾಗದೇ ಉರಿ ಅನುಭವಿಸಬೇಕಾಗುತ್ತದೆ. ಬನ್ನಿ, ಈ ತೊಂದರೆಯನ್ನು ಸುಲಭ ಮನೆಮದ್ದುಗಳಿಂದ ಹೇಗೆ ಶಮನಿಸಬಹುದು ಎಂಬುದನ್ನು ನೋಡೋಣ...

ಎದೆಯುರಿ ಎಂದರೇನು?
ಹುಳಿತೇಗು, ಎದೆಯುರಿ, ಹೊಟ್ಟೆಯುರಿ ಮೊದಲಾದ ಹೆಸರುಗಳಿಂದ ಕರೆಯಲ್ಪಡುವ ಈ ತೊಂದರೆ ಎದೆಯ ಮೇಲ್ಭಾಗ ಅಂದರೆ ಗಂಟಲಿನ ಕೊಂಚವೇ ಕೆಳಗೆ ಅತೀವ ಉರಿಯನ್ನು ಉಅಂಟುಮಾಡುತ್ತದೆ. ಇದಕ್ಕೆ ಹೊಟ್ಟೆಯಲ್ಲಿ ಉತ್ಪತ್ತಿಯಾದ ಆಮ್ಲೀಯ ರಸ ಮತ್ತು ವಾಯುಗಳು ಕಾರಣವಾಗಿದ್ದು ಒತ್ತಡ ತಾಳಲಾರದೇ ಮೇಲ್ಮುಖವಾಗಿ ಒತ್ತಲ್ಪಡುತ್ತವೆ. ಇದಕ್ಕೆ ಆಸಮರ್ಪಕವಾದ ಆಹಾರಗಳ ಸಂಯೋಜನೆ, ಆಸಮರ್ಪಕ ಭಂಗಿಯಲ್ಲಿ ಪವಡಿಸುವುದು, ಹೊಟ್ಟೆಯ ಭಾಗದಲ್ಲಿ ಒತ್ತಡ ಹೇರುವುದು ಮೊದಲಾದವು ಎದೆಯುರಿಗೆ ಕಾರಣವಾಗಿದೆ. ಎದೆಯುರಿಗೆ pyrosis, cardialgia, ಅಥವಾ acid indigestion ಎಂಬ ಹೆಸರುಗಳೂ ಇವೆ.

ಎದೆಯುರಿಗೆ ಪರಿಹಾರ
ಅರ್ಧ ಲಿಂಬೆಯ ರಸ ಅಥವಾ ಒಂದು ದೊಡ್ಡ ಚಮಚ ಲಿಂಬೆಯ ಸಿದ್ಧ ರಸವನ್ನು ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಬೆರೆಸಿ ಇದಕ್ಕೆ ಕೊಂಚ ಜೇನು ಸೇರಿಸಿ ಬೆಳಿಗ್ಗೆದ್ದ ತಕ್ಷಣ ಖಾಲಿಹೊಟ್ಟೆಯಲ್ಲಿ ಕುಡಿದರೆ ರಾತ್ರಿಯ ಊಟದ ಪರಿಣಾಮವಾಗಿ ಉಂಟಾಗಿದ್ದ ಎದೆಯುರಿ ಕಡಿಮೆಯಾಗುತ್ತದೆ.

ಏಳೆಂಟು ಒಣದ್ರಾಕ್ಷಿ
ಒಂದು ವೇಳೆ ಈ ವಿಧಾನ ಇಷ್ಟವಾಗದಿದ್ದರೆ ಅಥವಾ ಮಧ್ಯಾಹ್ನದ ಊಟದ ಬಳಿಕ ತೊಂದರೆ ಎದುರಾದರೆ ಸುಮಾರು ಏಳೆಂಟು ಒಣದ್ರಾಕ್ಷಿಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಊಟದ ಬಳಿಕ ನೀರಿನ ಸಹಿತ ಕುಡಿಯಬೇಕು. ಈ ನೀರನ್ನೂ ಬೆಳಿಗ್ಗೆ ಪ್ರಥಮ ಆಹಾರವಾಗಿ ಸೇವಿಸುವ ಮೂಲಕ ದಿನದ ಆಹಾರಗಳ ಸೇವನೆಯಿಂದ ಎದೆಯುರಿ ಉಂಟಾಗುವುದಿಲ್ಲ.

ದಿನಕ್ಕೊಂದು ಬಾಳೆಹಣ್ಣು ತಿನ್ನಿ
ಊಟದ ಬಳಿಕ ಬಾಳೆಹಣ್ಣನ್ನು ತಿನ್ನುವ ಮೂಲಕ ಆಮ್ಲ ಉತ್ಪತ್ತಿಯಾಗದೇ ಇರಲು ಸಾಧ್ಯವಾಗುತ್ತದೆ. ಅಲ್ಲದೇ ಹೊಟ್ಟೆ ತುಂಬಿದಂತೆ ಅನ್ನಿಸುವುದರಿಂದ ಅನಗತ್ಯವಾಗಿ ಹೆಚ್ಚಿನ ಆಹಾರ ಸೇವನೆಯನ್ನು ತಡೆಯುತ್ತದೆ.

ತುಳಸಿ ಎಲೆಗಳನ್ನು ಜಗಿಯಿರಿ
ಎದೆಯುರಿಯನ್ನು ತಕ್ಷಣ ಕಡಿಮೆಗೊಳಿಸಲು ಉತ್ತಮ ವಿಧಾನವೆಂದರೆ ತುಳಸಿ ಎಲೆಗಳನ್ನು ಜಗಿಯುವುದು. ಅದರಲ್ಲೂ ಎದೆಯುರಿಯೊಂದಿಗೆ ವಾಕರಿಕೆಯೂ ಆವರಿಸಿದ್ದರೆ ಈ ಎಲೆಗಳು ತಕ್ಷಣ ಶಮನ ನೀಡುತ್ತವೆ ಹಾಗೂ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಶೀತ ಮೊದಲಾದ ತೊಂದರೆಗಳನ್ನೂ ನಿವಾರಿಸುತ್ತವೆ.ಆರೋಗ್ಯ ರಕ್ಷಕ- ತುಳಸಿ ಎಲೆಯ ವೈಶಿಷ್ಟ್ಯ ಒಂದೇ, ಎರಡೇ?

ತಣ್ಣಗಿನ ಹಸಿ ಹಾಲು ಕುಡಿಯಿರಿ
ತಕ್ಷಣಕ್ಕೆ ಎದೆಯುರಿಯನ್ನು ಶಮನಗೊಳಿಸಲು ಇನ್ನೊಂದು ಸಮರ್ಥ ವಿಧಾನವೆಂದರೆ ತಣ್ಣಗಿನ ಹಸಿ ಹಾಲನ್ನು ಕುಡಿಯುವುದು. ಇದರಿಂದಲೂ ಎದೆಯುರಿ ಮತ್ತು ವಾಕರಿಕೆ ತಕ್ಷಣ ಕಡಿಮೆಯಾಗುತ್ತದೆ.



Click it and Unblock the Notifications