Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಎದೆಯುರಿ ಸಮಸ್ಯೆ- ಒಂದೆರಡು ದಿನಗಳಲ್ಲಿಯೇ ನಿಯಂತ್ರಣಕ್ಕೆ!
ಎದೆಯ ನಟ್ಟನಡುವಿನಲ್ಲಿ ಉರಿ ಅಥವಾ ತೀಕ್ಷ್ಣವಾದ ನೋವು ಕಾಣಿಸಿಕೊಂಡರೆ ಅದು ಬಹುತೇಕ ಎದೆಯುರಿಯ (heartburn) ಪ್ರಭಾವವಾಗಿರಬಹುದು. ಇದು ಹೊಟ್ಟೆಯ ಮೇಲ್ಭಾಗದಿಂದ ಹಿಡಿದು ಗಂಟಲವರೆಗೂ ವ್ಯಾಪಿಸಬಹುದು... ಮುಂದೆ ಓದಿ
ಎದೆಯುರಿ ಅಥವಾ ಹೊಟ್ಟೆಯ ಉರಿ ಊಟದ ಬಳಿಕ ಎದುರಾಗುವ ಸಾಮಾನ್ಯ ತೊಂದರೆಯಾಗಿದ್ದು ಹೊಟ್ಟೆಯಲ್ಲಿ ಅಜೀರ್ಣತೆಯಿಂದ ಉಂಟಾದ ಆಮ್ಲೀಯ ಗಾಳಿ ಅನ್ನನಾಳದ ಮೂಲಕ ಹೊರಬರಲು ಯತ್ನಿಸುವಾಗ ಹೊಟ್ಟೆಯ ಮೇಲ್ಭಾಗ ಮತ್ತು ಅನ್ನನಾಳದ ಒಳಗೆ ಮಾಡುವ ಉರಿಯಾಗಿದೆ. ಇನ್ನು ಎದೆಯುರಿ ಸಮಸ್ಯೆಗೆ ದಯವಿಟ್ಟು ಕಂಗಾಲಾಗದಿರಿ!
gastro esophageal reflux disease ಎಂದು ಕರೆಯಲಾಗುವ ಈ ಸ್ಥಿತಿ ಬಂದಾಗ ತಡೆಯಲು ಸಾಧ್ಯವಾಗದೇ ಉರಿ ಅನುಭವಿಸಬೇಕಾಗುತ್ತದೆ. ಬನ್ನಿ, ಈ ತೊಂದರೆಯನ್ನು ಸುಲಭ ಮನೆಮದ್ದುಗಳಿಂದ ಹೇಗೆ ಶಮನಿಸಬಹುದು ಎಂಬುದನ್ನು ನೋಡೋಣ...

ಎದೆಯುರಿ ಎಂದರೇನು?
ಹುಳಿತೇಗು, ಎದೆಯುರಿ, ಹೊಟ್ಟೆಯುರಿ ಮೊದಲಾದ ಹೆಸರುಗಳಿಂದ ಕರೆಯಲ್ಪಡುವ ಈ ತೊಂದರೆ ಎದೆಯ ಮೇಲ್ಭಾಗ ಅಂದರೆ ಗಂಟಲಿನ ಕೊಂಚವೇ ಕೆಳಗೆ ಅತೀವ ಉರಿಯನ್ನು ಉಅಂಟುಮಾಡುತ್ತದೆ. ಇದಕ್ಕೆ ಹೊಟ್ಟೆಯಲ್ಲಿ ಉತ್ಪತ್ತಿಯಾದ ಆಮ್ಲೀಯ ರಸ ಮತ್ತು ವಾಯುಗಳು ಕಾರಣವಾಗಿದ್ದು ಒತ್ತಡ ತಾಳಲಾರದೇ ಮೇಲ್ಮುಖವಾಗಿ ಒತ್ತಲ್ಪಡುತ್ತವೆ. ಇದಕ್ಕೆ ಆಸಮರ್ಪಕವಾದ ಆಹಾರಗಳ ಸಂಯೋಜನೆ, ಆಸಮರ್ಪಕ ಭಂಗಿಯಲ್ಲಿ ಪವಡಿಸುವುದು, ಹೊಟ್ಟೆಯ ಭಾಗದಲ್ಲಿ ಒತ್ತಡ ಹೇರುವುದು ಮೊದಲಾದವು ಎದೆಯುರಿಗೆ ಕಾರಣವಾಗಿದೆ. ಎದೆಯುರಿಗೆ pyrosis, cardialgia, ಅಥವಾ acid indigestion ಎಂಬ ಹೆಸರುಗಳೂ ಇವೆ.

ಎದೆಯುರಿಗೆ ಪರಿಹಾರ
ಅರ್ಧ ಲಿಂಬೆಯ ರಸ ಅಥವಾ ಒಂದು ದೊಡ್ಡ ಚಮಚ ಲಿಂಬೆಯ ಸಿದ್ಧ ರಸವನ್ನು ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಬೆರೆಸಿ ಇದಕ್ಕೆ ಕೊಂಚ ಜೇನು ಸೇರಿಸಿ ಬೆಳಿಗ್ಗೆದ್ದ ತಕ್ಷಣ ಖಾಲಿಹೊಟ್ಟೆಯಲ್ಲಿ ಕುಡಿದರೆ ರಾತ್ರಿಯ ಊಟದ ಪರಿಣಾಮವಾಗಿ ಉಂಟಾಗಿದ್ದ ಎದೆಯುರಿ ಕಡಿಮೆಯಾಗುತ್ತದೆ.

ಏಳೆಂಟು ಒಣದ್ರಾಕ್ಷಿ
ಒಂದು ವೇಳೆ ಈ ವಿಧಾನ ಇಷ್ಟವಾಗದಿದ್ದರೆ ಅಥವಾ ಮಧ್ಯಾಹ್ನದ ಊಟದ ಬಳಿಕ ತೊಂದರೆ ಎದುರಾದರೆ ಸುಮಾರು ಏಳೆಂಟು ಒಣದ್ರಾಕ್ಷಿಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಊಟದ ಬಳಿಕ ನೀರಿನ ಸಹಿತ ಕುಡಿಯಬೇಕು. ಈ ನೀರನ್ನೂ ಬೆಳಿಗ್ಗೆ ಪ್ರಥಮ ಆಹಾರವಾಗಿ ಸೇವಿಸುವ ಮೂಲಕ ದಿನದ ಆಹಾರಗಳ ಸೇವನೆಯಿಂದ ಎದೆಯುರಿ ಉಂಟಾಗುವುದಿಲ್ಲ.

ದಿನಕ್ಕೊಂದು ಬಾಳೆಹಣ್ಣು ತಿನ್ನಿ
ಊಟದ ಬಳಿಕ ಬಾಳೆಹಣ್ಣನ್ನು ತಿನ್ನುವ ಮೂಲಕ ಆಮ್ಲ ಉತ್ಪತ್ತಿಯಾಗದೇ ಇರಲು ಸಾಧ್ಯವಾಗುತ್ತದೆ. ಅಲ್ಲದೇ ಹೊಟ್ಟೆ ತುಂಬಿದಂತೆ ಅನ್ನಿಸುವುದರಿಂದ ಅನಗತ್ಯವಾಗಿ ಹೆಚ್ಚಿನ ಆಹಾರ ಸೇವನೆಯನ್ನು ತಡೆಯುತ್ತದೆ.

ತುಳಸಿ ಎಲೆಗಳನ್ನು ಜಗಿಯಿರಿ
ಎದೆಯುರಿಯನ್ನು ತಕ್ಷಣ ಕಡಿಮೆಗೊಳಿಸಲು ಉತ್ತಮ ವಿಧಾನವೆಂದರೆ ತುಳಸಿ ಎಲೆಗಳನ್ನು ಜಗಿಯುವುದು. ಅದರಲ್ಲೂ ಎದೆಯುರಿಯೊಂದಿಗೆ ವಾಕರಿಕೆಯೂ ಆವರಿಸಿದ್ದರೆ ಈ ಎಲೆಗಳು ತಕ್ಷಣ ಶಮನ ನೀಡುತ್ತವೆ ಹಾಗೂ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಶೀತ ಮೊದಲಾದ ತೊಂದರೆಗಳನ್ನೂ ನಿವಾರಿಸುತ್ತವೆ.ಆರೋಗ್ಯ ರಕ್ಷಕ- ತುಳಸಿ ಎಲೆಯ ವೈಶಿಷ್ಟ್ಯ ಒಂದೇ, ಎರಡೇ?

ತಣ್ಣಗಿನ ಹಸಿ ಹಾಲು ಕುಡಿಯಿರಿ
ತಕ್ಷಣಕ್ಕೆ ಎದೆಯುರಿಯನ್ನು ಶಮನಗೊಳಿಸಲು ಇನ್ನೊಂದು ಸಮರ್ಥ ವಿಧಾನವೆಂದರೆ ತಣ್ಣಗಿನ ಹಸಿ ಹಾಲನ್ನು ಕುಡಿಯುವುದು. ಇದರಿಂದಲೂ ಎದೆಯುರಿ ಮತ್ತು ವಾಕರಿಕೆ ತಕ್ಷಣ ಕಡಿಮೆಯಾಗುತ್ತದೆ.



Click it and Unblock the Notifications