Just In
Don't Miss
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಿಡ್ನಿ'ಗೆ ತಗಲುವ ಸೋಂಕನ್ನು ಗುಣಪಡಿಸುವ ಮನೆಮದ್ದುಗಳು
ಒಂದು ವೇಳೆ ಕಿಡ್ನಿಗೆ ಏನಾದರೂ ಸೋಂಕು ತಗುಲಿದರೆ ಅದರಿಂದ ಕಿಡ್ನಿ ವೈಫಲ್ಯವಾಗುವ ಸಾಧ್ಯತೆಗಳು ಇವೆ. ಕಿಡ್ನಿಯು ವೈಫಲ್ಯಗೊಂಡರೆ ಸಂಪೂರ್ಣ ದೇಹದ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ.
ತುಂಬಾ ಸೂಕ್ಷ್ಮ ಹಾಗೂ ಅತೀ ಹೆಚ್ಚು ಕೆಲಸ ಮಾಡುವಂತಹ ಅಂಗವೆಂದರೆ ಅದು ಕಿಡ್ನಿ. ಇದು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಮೂತ್ರದ ಮೂಲಕವಾಗಿ ಹೊರಗೆ ಹಾಕುವ ಕೆಲಸ ಮಾಡುವುದು. ದೇಹವು ಆರೋಗ್ಯವಾಗಿರಲು ಕಿಡ್ನಿಯ ಪಾತ್ರ ಕೂಡ ಪ್ರಾಮುಖ್ಯತೆಯನ್ನು ಪಡೆದಿದೆ.
ಇದೇ ಕಿಡ್ನಿಗೆ ಏನಾದರೂ ಸೋಂಕು ತಗುಲಿದರೆ ಅದರಿಂದ ಕಿಡ್ನಿ ವೈಫಲ್ಯವಾಗುವ ಸಾಧ್ಯತೆಗಳು ಇವೆ. ಕಿಡ್ನಿಯು ವೈಫಲ್ಯಗೊಂಡರೆ ಸಂಪೂರ್ಣ ದೇಹದ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಕಿಡ್ನಿಯನ್ನು ಆರೋಗ್ಯವಾಗಿಡಲು ಕಿಡ್ನಿಗೆ ಯಾವುದೇ ರೀತಿಯ ಸೋಂಕು ತಗುಲದಂತೆ ನೋಡಿಕೊಳ್ಳಬೇಕು. ಕಿಡ್ನಿ ಕಲ್ಲು ಕರಗಿಸುವ, ಹಿತ್ತಲ ಗಿಡದ ಮದ್ದು
ರಕ್ತದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಿ ದೇಹದಲ್ಲಿನ ನೀರಿನ ಅಂಶವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಕಿಡ್ನಿ ಸೋಂಕನ್ನು ತಡೆಯುವಂತಹ ಕೆಲವೊಂದು ಮನೆಮದ್ದುಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ. ಇದರ ಬಗ್ಗೆ ತಿಳಿದುಕೊಳ್ಳುವ....
ಸರಿಯಾಗಿ ನೀರು ಕುಡಿಯಿರಿ
ಕಿಡ್ನಿಯಲ್ಲಿ ಸೋಂಕನ್ನು ಉಂಟುಮಾಡುವಂತಹ ಬ್ಯಾಕ್ಟೀರಿಯಾಗಳನ್ನು ಹೊರಗೆ ಹಾಕಬೇಕೆಂದರೆ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು. ಕಿಡ್ನಿ ಆರೋಗ್ಯಕ್ಕೆ ಎಷ್ಟು ನೀರು ಕುಡಿಯಬೇಕು?
ಗಿಡಮೂಲಿಕೆ ಜ್ಯೂಸ್
ವಿಟಮಿನ್ ಗಳಿಂದ ಹಾಗೂ ರಿಬೊಫ್ಲಾವಿನ್ ನಿಂದ ಸಮೃದ್ಧವಾಗಿರುವಂತಹ ಪಾರ್ಸ್ಲಿಯು ಕಿಡ್ನಿಯ ಸೋಂಕನ್ನು ಪರಿಣಾಮಕಾರಿಯಾಗಿ ನಿವಾರಣೆ ಮಾಡಲು ನೆರವಾಗುವುದು. ಕೆಲವು ಪಾರ್ಸ್ಲಿ ಎಲೆಗಳನ್ನು ನೀರಿಗೆ ಹಾಕಿ ಕುದಿಸಿ. ಅದನ್ನು ಗಾಳಿಸಿಕೊಂಡು ನೀರು ತಣ್ಣಗಾದ ಬಳಿಕ ಕುಡಿಯಿರಿ.
ಹಣ್ಣಿನ ಜ್ಯೂಸ್
ಕಿತ್ತಳೆ, ನಿಂಬೆ ಹಾಗೂ ದ್ರಾಕ್ಷಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುವುದು. ಮತ್ತು ಕಿಡ್ನಿಯನ್ನು ಸ್ವಚ್ಛವಾಗಿಟ್ಟುಕೊಂಡು ಯಾವುದೇ ಸೋಂಕು ಬರದಂತೆ ಕಾಪಾಡುವುದು.
ಅಡುಗೆ ಸೋಡಾ
ಒಂದು ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿಗೆ ಹಾಕಿಕೊಳ್ಳಿ. ಇದನ್ನು ಸರಿಯಾಗಿ ಕಲಸಿ ಮತ್ತು ಕುಡಿಯಿರಿ. ಇದನ್ನು ದಿನಾಲೂ ಮಾಡುವುದರಿಂದ ಕಿಡ್ನಿ ಸೋಂಕನ್ನು ತಡೆಯಬಹುದು. ಅಡುಗೆ ಸೋಡಾದಿಂದ ಬರೋಬ್ಬರಿ ಏಳು ಪ್ರಯೋಜನಗಳಿವೆ!
ಬೆಳ್ಳುಳ್ಳಿ
ಮೂತ್ರದ ಮೂಲಕ ಉಪ್ಪು ಹಾಗೂ ಇತರ ಕಲ್ಮಶವನ್ನು ಹೊರಹಾಕುವಲ್ಲಿ ಬೆಳ್ಳುಳ್ಳಿಯು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ದೈನಂದಿನ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿಕೊಳ್ಳಿ ಅಥವಾ ಪ್ರತೀದಿನ 2-3 ಬೆಳ್ಳುಳ್ಳಿಯನ್ನು ಸೇವನೆ ಮಾಡಿ.
ಆಲಿವ್ ಆಯಿಲ್
ಒಂದು ಚಮಚ ಆಲಿವ್ ತೈಲ ಮತ್ತು ಕೆಲವು ಹನಿ ನಿಂಬೆ ರಸವನ್ನು ಒಂದು ಲೋಟ ನೀರಿಗೆ ಹಾಕಿಕೊಳ್ಳಿ. ಇದನ್ನು ಸರಿಯಾಗಿ ಮಿಶ್ರಣ ಮಾಡಿಕೊಂಡು ದಿನದಲ್ಲಿ ಎರಡು ಸಲ ಇದನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಿ ಕಿಡ್ನಿಗೆ ಯಾವುದೇ ರೀತಿಯ ಸೋಂಕು ಬರದಂತೆ ತಡೆಯುತ್ತದೆ.
ಅಲೋವೆರಾ ಜ್ಯೂಸ್
ದಿನದಲ್ಲಿ ಎರಡು ಸಲ ಅಲೋವೆರಾ ಜ್ಯೂಸ್ ಅನ್ನು ಕುಡಿಯುವುದರಿಂದ ದೇಹದಲ್ಲಿನ ವಿಷಕಾರಿ ಅಂಶವು ಹೊರಹೋಗುತ್ತದೆ ಮತ್ತು ಕಿಡ್ನಿಯು ಸ್ವಚ್ಛವಾಗುತ್ತದೆ. ಇದರಿಂದ ಕಿಡ್ನಿಯ ಸೋಂಕನ್ನು ಪರಿಣಾಮಕಾರಿಯಾಗಿ ತಡೆಯಬಹುದು.