Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮುಟ್ಟಿನ ನೋವು, ಎಂಬ ಮಹಿಳೆಯರ ಕೊರಗು....
ಛೇ! ನಾನು ಹೆಣ್ಣಾಗಿ ಹುಟ್ಟಿದ್ದೆ ತಪ್ಪು. ಇಂತಹ ನೋವನ್ನು ಸಹಿಸಿಕೊಳ್ಳುವುದು ತುಂಬಾ ಕಷ್ಟ. ಈ ಯಾತನೆ ಯಾರಿಗೂ ಬರದಿರಲಿ. ಮುಂದಿನ ಜನ್ಮದಲ್ಲಿ ನನ್ನನ್ನು ಹೆಣ್ಣಾಗಿ ಹುಟ್ಟಿಸಬೇಡ ದೇವರೇ ಎಂದು ಕೈ ಮುಗಿಯುವುದು ಪ್ರತೀ ತಿಂಗಳ ಮುಟ್ಟಿನ ವೇಳೆ ಕೆಲವು ಹುಡುಗಿಯರು ನೋವನ್ನು ಅನುಭವಿಸುವಾಗ. ಇಂತಹ ನೋವು ಅನುಭವಿಸಿದವರಿಗೆ ಗೊತ್ತು. ಹೊಟ್ಟೆಯ ಕೆಳಭಾಗದಲ್ಲಿ ಕಾಣಿಸಿಕೊಳ್ಳುವಂತಹ ತಿಂಗಳ ಮುಟ್ಟಿನ ವೇಳೆಯ ನೋವು ಹುಡುಗಿಯರನ್ನು ದೈನಂದಿನ ಯಾವುದೇ ಕೆಲಸಗಳು ಮಾಡದಂತೆ ತಡೆಯುತ್ತದೆ. ಮುಟ್ಟಿನ ಹೊಟ್ಟೆ ನೋವಿನಿಂದ ಮುಕ್ತಿ ಹೇಗೆ?

ಮುಟ್ಟಿನ ವೇಳೆ ಹುಡುಗಿಯರು ನೋವು ಗರ್ಭಕೋಶದಲ್ಲಿನ ಸ್ನಾಯುಗಳ ಸೆಳೆದಿಂದಾಗಿ ಉಂಟಾಗುತ್ತದೆ. ಈ ಸ್ನಾಯುಗಳು ಹತ್ತಿರದ ರಕ್ತನಾಳಗಳಿಗೆ ಆಮ್ಲಜನಕ ಪೂರೈಕೆಯನ್ನು ನಿಲ್ಲಿಸುವುದರಿಂದ ನೋವು ಕಾಣಿಸಿಕೊಳ್ಳುವುದು. ಸ್ನಾಯು ಸೆಳೆತದ ಅವಧಿ ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಆದರೆ ನೋವಿನ ಪ್ರಮಾಣ ಮಾತ್ರ ಅದೇ ಆಗಿರುತ್ತದೆ. ಸಹಿಸಲು ಅಸಾಧ್ಯವಾಗಿರುವ ನೋವನ್ನು ಕಡಿಮೆ ಮಾಡಿಕೊಳ್ಳಲು ನೋವು ನಿವಾರಕ ಔಷಧಿಗಳನ್ನು ತೆಗೆದುಕೊಳ್ಳಬಹುದು. ಆದರೆ ಇದರಿಂದ ಅಡ್ಡಪರಿಣಾಮಗಳು ಜಾಸ್ತಿ. ಇದಕ್ಕಾಗಿ ಮನೆಮದ್ದನ್ನು ಉಪಯೋಗಿಸಿಕೊಂಡು ನೋವನ್ನು ನಿವಾರಿಸಬಹುದು. ನೋವನ್ನು ನಿವಾರಿಸಲು ಯಾವ ಮದ್ದನ್ನು ಬಳಸಿಕೊಳ್ಳಬೇಕು ಎಂದು ತಿಳಿದುಕೊಳ್ಳಿ.
ಮನೆಮದ್ದು ಮಾಡಲು ಬೇಕಾಗುವ ಸಾಮಗ್ರಿಗಳು
*ಜೀರಿಗೆ-2 ಚಮಚ
*ಜೇನು-1 ಚಮಚ
*ಅರಿಶಿನ-1 ಚಮಚ ಮುಟ್ಟಿನ ನೋವು ನಿವಾರಣೆಗೆ 13 ಮನೆಮದ್ದು
*ಜೀರಿಗೆಯಲ್ಲಿ ಸ್ನಾಯು ಸೆಳೆತವನ್ನು ನಿವಾರಿಸುವಂತಹ ಗುಣಗಳು ಅಪಾರವಾಗಿದೆ. ಇದನ್ನು ಪುರಾತನ ಕಾಲದಿಂದಲೂ ಸ್ನಾಯು ಸೆಳೆತದ ಔಷಧಿಗಳಲ್ಲಿ ಬಳಸಲಾಗುತ್ತಿತ್ತು. ಜೀರಿಗೆಯು ರಕ್ತನಾಳಗಳಿಗೆ ಸರಿಯಾಗಿ ರಕ್ತ ಹಾಗೂ ಆಮ್ಲಜನಕದ ಸಂಚಾರವಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ಗರ್ಭಕೋಶದಲ್ಲಿನ ಸ್ನಾಯುಗಳ ಸೆಳೆತ ಕಡಿಮೆಯಾಗಿ ಮುಟ್ಟಿನ ವೇಳೆ ಉಂಟಾಗುವ ನೋವು ಕಡಿಮೆಯಾಗುವುದು.
*ಅರಿಶಿನ ಮತ್ತು ಜೇನುತುಪ್ಪದಲ್ಲಿ ಉರಿಯೂತ ಶಮನಕಾರಿ ಗುಣಗಳು ಇವೆ. ಈ ಗುಣಗಳಿಂದ ಈ ಎರಡು ಸಾಮಗ್ರಿಗಳು ಮುಟ್ಟಿನ ವೇಳೆ ಉಂಟಾಗುವ ನೋವನ್ನು ಕಡಿಮೆ ಮಾಡುವುದು. ಮುಟ್ಟಿನ ವೇಳೆ ಹೊಟ್ಟೆ ಉಬ್ಬರವಾಗುವುದನ್ನು ಜೀರಿಗೆ, ಜೇನುತುಪ್ಪ ಮತ್ತು ಅರಿಶಿನ ಕಡಿಮೆ ಮಾಡುತ್ತದೆ.
ಮನೆಮದ್ದನ್ನು ಮಾಡುವ ವಿಧಾನ
*ಸ್ವಲ್ಪ ನೀರನ್ನು ಒಂದು ಸಣ್ಣ ಬಾಣಲೆಯಲ್ಲಿ ಬಿಸಿ ಮಾಡಿ. ಹೇಳಿರುವ ಸಾಮಗ್ರಿಗಳನ್ನು ಅಷ್ಟೇ ಪ್ರಮಾಣದಲ್ಲಿ ಬಾಣಲೆಗೆ ಹಾಕಿ.
*ನೀರು ಬಿಸಿಯಾಗುತ್ತಿರುವಂತೆ ಈ ಸಾಮಗ್ರಿಗಳು ನೀರಿನೊಂದಿಗೆ ಕುದಿಯಲು ಬಿಡಿ. ಬಳಿಕ ಇದನ್ನು ಒಂದು ಕಪ್ಗೆ ಹಾಕಿ. ಸ್ವಲ್ಪ ತಣ್ಣಗಾದಾಗ ಇದನ್ನು ಕುಡಿಯಿರಿ. ನೀರನ್ನು ಸೋಸಬೇಡಿ. ದಿನದಲ್ಲಿ ಎರಡರಿಂದ ಮೂರು ಸಲ ಇದನ್ನು ಕುಡಿದರೆ ನೋವು ಕಡಿಮೆಯಾಗುವುದು. ಮುಟ್ಟಿನ ನೋವು ನಿವಾರಣೆಗೆ 13 ಮನೆಮದ್ದು
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


