Latest Updates
-
ಮಳೆಗಾಲದ ಬೆಳಗಿನ ವರ್ಕೌಟ್: ನಿಮ್ಮ ಪ್ಲಾನ್ ಉಲ್ಟಾಪಲ್ಟಾ ಆಗದಿರಲಿ, ಈ ಮುನ್ನೆಚ್ಚರಿಕೆ ಮರೆಯದಿರಿ! -
ಲಿವ್-ಇನ್ ಸಂಬಂಧ ಮುರಿದರೆ ಕ್ರಿಮಿನಲ್ ಕೇಸ್? ಸುಪ್ರೀಂ ಕೋರ್ಟ್ನಿಂದ ಬಂತು ಬಿಗ್ ಶಾಕ್! -
ಉರಿಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಹೀಟ್ ವೇವ್ ಎಚ್ಚರಿಕೆ: ಬಿಸಿಲಿನ ಬೇಗೆಯಿಂದ ಬಚಾವಾಗಲು ಈ ಪಾನೀಯಗಳೇ ಮದ್ದು! -
ಅನುಷ್ಕಾ ಶರ್ಮಾ ಐಪಿಎಲ್ ಲುಕ್: ಸಿಂಪಲ್ ಡ್ರೆಸ್ನಲ್ಲೇ ಮ್ಯಾಜಿಕ್ ಮಾಡಿದ್ದು ಹೇಗೆ? -
ಬಿಸಿಗಾಳಿ ಎಚ್ಚರಿಕೆ: ಏಪ್ರಿಲ್ ಬಿಸಿಲಿನಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಾಯಿಸುವುದು ಹೇಗೆ? -
ಪೊಲೀಸ್ ಕಿರುಕುಳದಿಂದ ಬೇಸತ್ತಿದ್ದೀರಾ? ಪ್ರೇಮಿಗಳಿಗೆ ರಕ್ಷಣೆ ನೀಡಲು ಹೈಕೋರ್ಟ್ ಕೊಟ್ಟಿದೆ ಬಿಗ್ ರಿಲೀಫ್! -
ಬಿಸಿಲ ಬೇಗೆಯಿಂದ ತತ್ತರಿಸಿದೆಯೇ? ನಿಮ್ಮ ಮನೆ ಮತ್ತು ಗಿಡಗಳನ್ನು ತಂಪಾಗಿರಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಸರಳ ಟಿಪ್ಸ್ ಪಾಲಿಸಿ: ಸುಡುವ ಬಿಸಿಲಿನಲ್ಲಿ ಆರೋಗ್ಯವಾಗಿರುವುದು ಹೇಗೆ? -
ಸುಡುವ ಬಿಸಿಲಿಗೆ ಸುಸ್ತಾದ್ರಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ಕೂಲಿಂಗ್ ಟಿಪ್ಸ್ ಮಿಸ್ ಮಾಡ್ಬೇಡಿ!
ಮನಸ್ಸನ್ನು ಹಿಂಡುವ ಖಿನ್ನತೆಯ ನಿಯಂತ್ರಣಕ್ಕೆ- ಅರಿಶಿನ ಜ್ಯೂಸ್
ಖಿನ್ನತೆಯು ಹೆಚ್ಚಿನ ಜನರನ್ನು ಕಾಡುವ ಒಂದು ಮಾನಸಿಕ ಸಮಸ್ಯೆಯಾಗಿದೆ. ತಜ್ಞರು ಹೇಳುವಂತೆ ಖಿನ್ನತೆಯು ಹಲವಾರು ಮಾನಸಿಕ ಮತ್ತು ದೈಹಿಕ ಸಮಸ್ಯೆಗಳನ್ನು ಉಂಟುಮಾಡುವುದರ ಮೂಲಕ ಸಾವಿಗೂ ಕಾರಣವಾಗುತ್ತದೆ ಎಂದಾಗಿದೆ. ಹೃದಯಾಘಾತ ಹಾಗೂ
ಪಕ್ಷಪಾತದಂತಹ ಭೀಕರ ದುರಂತಗಳಿಗೂ ಖಿನ್ನತೆ ಕಾರಣ. ಖಿನ್ನತೆಯನ್ನು ನಿಯಂತ್ರಿಸದೇ ಅದನ್ನು ಹಾಗೆಯೇ ಬಿಟ್ಟಲ್ಲಿ ರೋಗಿಗೆ ಅಪಾಯ ತಪ್ಪಿದ್ದಲ್ಲ. ಖಿನ್ನತೆಯನ್ನು ದೂರಾಗಿಸಲು ಮಾನಸಿಕ ಶಾಂತಿ ಮತ್ತು ಆರೋಗ್ಯವಂತ ಚಟುವಟಿಕೆಗಳೊಂದಿಗೆ ಖಿನ್ನತೆ ಪರಿಹರಿಸುವ ಪಾನೀಯವನ್ನು ನೀವು ಸೇವಿಸುವುದು ಉತ್ತಮ ಪರಿಹಾರವಾಗಿದೆ. ಈ ಪಾನೀಯವು ಅರಿಶಿನ, ಜೇನು ಹಾಗೂ ಹುಣಸೆ ಪೇಸ್ಟ್ ಮತ್ತು ನೀರನ್ನು ಒಳಗೊಂಡಿದೆ.

ಈ ಪಾನೀಯದಲ್ಲಿರುವ ಮುಖ್ಯ ಅಂಶವೇ ಅರಿಶಿನವಾಗಿದ್ದು, ನರದ ವ್ಯವಸ್ಥೆಯನ್ನು ಶಾಂತವಾಗಿಸುವ ಗುಣ ಅರಿಶಿನಕ್ಕಿದೆ. ನಿಮ್ಮ ಖಿನ್ನತೆಯನ್ನು ದೂರಮಾಡಿ ನಿಮ್ಮ ಮೂಡ್ ಅನ್ನು ಅರಿಶಿನ ಸರಿಮಾಡುತ್ತದೆ. ನಿತ್ಯವೂ ಈ ಪಾನೀಯದ ಸೇವನೆ ಮಾಡುವುದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಮಧುಮೇಹದಂತಹ ಸಮಸ್ಯೆಗಳನ್ನು ಹತ್ತಿರ ಸುಳಿಯಲೂ ಬಿಡುವುದಿಲ್ಲ ಅಂತೆಯೇ ಅತಿ ಮುಖ್ಯವಾಗಿ ನಿಮ್ಮ ಹೃದಯದ ಸ್ವಾಸ್ಥ್ಯವನ್ನು ಕಾಪಾಡುತ್ತದೆ. ಅರಿಶಿನವು ನಂಜುನಿರೋಧಕ ಸಾಂಬಾರು ಪದಾರ್ಥವಾಗಿರುವುದರಿಂದ ನೀವು ಅನುಭವಿಸುತ್ತಿರುವ ಸೋಂಕಿನಿಂದ ನಿಮಗೆ ಸಂರಕ್ಷಣೆಯನ್ನು ಒದಗಿಸುತ್ತದೆ. ಆದ್ದರಿಂದ ನಿತ್ಯದ ಜೀವನದಲ್ಲಿ ಈ ಪಾನೀಯವನ್ನು ಅತಿಮುಖ್ಯವಾಗಿ ನೀವು ಸೇವಿಸಲೇಬೇಕು. ಮಾನಸಿಕ ಖಿನ್ನತೆಗೆ ಎದೆಗುಂದುವುದು ಸರಿಯೇ?
ನೈಸರ್ಗಿಕ ಪದಾರ್ಥಗಳನ್ನು ಸೇರಿಸಿ ನಿಮ್ಮ ಮೂಡ್ ಅನ್ನು ಸರಿಪಡಿಸಿಕೊಳ್ಳಬಹುದು. ಡಾರ್ಕ್ ಚಾಕಲೇಟ್ ಇನ್ನೊಂದು ಉತ್ತಮ ಆಹಾರವಾಗಿದ್ದು ನಿಮ್ಮನ್ನು ಇದು ಖುಷಿಪಡಿಸುತ್ತದೆ. ಚಾಕಲೇಟ್ನಲ್ಲಿರುವ ಕೋಕಾ ಖಿನ್ನತೆಯ ಪರಿಹಾರಕ್ಕೆ ಹೇಳಿಮಾಡಿಸಿದ ಮದ್ದಾಗಿದೆ. ನಿಮ್ಮ ಮನಸ್ಸು ಸ್ಥಿಮಿತದಲ್ಲಿಲ್ಲ ಎಂಬಂತಹ ಸಂದರ್ಭದಲ್ಲಿ ಎರಡು ತುಂಡು ಚಾಕಲೇಟ್ ಸೇವಿಸಿ. ಕೋಕಾ ನಿಮ್ಮ ಮೆದುಳಿನ ಕೋಶಗಳನ್ನು ಸಂವಹಿಸಿ ನಿಮ್ಮನ್ನು ಸಂತಸದಿಂದ ತೇಲುವಂತೆ ಮಾಡುತ್ತದೆ.
ಇದರ ಜೊತೆಗೆ ಇತರೆ ಪಾನೀಯಗಳನ್ನು ನಿಮ್ಮ ಮೂಡ್ ಸರಿಪಡಿಸಲು ನಿಮಗೆ ಸೇವಿಸಿಕೊಳ್ಳಬಹುದಾಗಿದೆ. ಲಿಂಬೆ ರಸಕ್ಕೆ ಸ್ವಲ್ಪ ಜೇನು ಮತ್ತು ದಾಲ್ಚಿನ್ನಿ ಪುಡಿಯನ್ನು ಸೇರಿಸಿ ನಿಮ್ಮ ಮೂಡ್ ಅನ್ನು ಉತ್ತಮಪಡಿಸಿಕೊಳ್ಳಬಹುದು. ಹಾಗಿದ್ದರೆ ಸಮಯ ಹಾಳು ಮಾಡದೇ ಈ ಪಾನೀಯವನ್ನು ಹೇಗೆ ಸಿದ್ಧಪಡಿಸಿಕೊಳ್ಳುವುದು ಎಂಬುದನ್ನು ಕೆಳಗಿನ ಸ್ಲೈಡರ್ಗಳ ಮೂಲಕ ಅರಿತುಕೊಳ್ಳಿ.
ಖಿನ್ನತೆ ನಿವಾರಣೆ ಜ್ಯೂಸ್ ತಯಾರಿಸಲು
*ಜೇನು - 2 ಚಮಚ
*ನೀರು - 1 ಲೋಟ
*ಲಿಂಬೆ - 2
*ಅರಿಶಿನ ಹುಡಿ - 1 ಚಮಚ
*ಹುಣಸೆ ಪೇಸ್ಟ್ - 1 ಚಮಚ
ತಯಾರಿ:
*ಅರಿಶಿನವನ್ನು ನೀರಿಗೆ ಹಾಕಿ. ನಂತರ 20 ನಿಮಷಗಳ ಕಾಲ ಅರಿಶಿನ ನೀರನ್ನು ಕುದಿಸಿಕೊಳ್ಳಿ. ಆದ ನಂತರ ಸ್ಟವ್ನಿಂದ ಅದನ್ನು ಇಳಿಸಿಕೊಂಡು ಆರೋಗ್ಯಕರ ಅರಿಶಿನ ನೀರನ್ನು ಬಸಿದುಕೊಳ್ಳಿ. ಮಿಕ್ಸರ್ನಲ್ಲಿ ಅರಿಶಿನ ನೀರು, ಹುಣಸೆ ಪೇಸ್ಟ್ ಅನ್ನು ಹಾಕಿ.
*ಅಂತೆಯೇ ಮಿಕ್ಸರ್ಗೆ ಲಿಂಬೆ ರಸವನ್ನು ಬೆರೆಸಿಕೊಳ್ಳಿ. 5 ನಿಮಿಷಗಳ ಕಾಲ ಇದನ್ನು ತಿರುಗಿಸಿ. ನಿಮ್ಮ ಆರೋಗ್ಯಕರ ಅರಿಶಿನ ನೀರು ಸೇವಿಸಲು ಸಿದ್ಧವಾಗಿದೆ.
*ನಿಮ್ಮ ಖಿನ್ನತೆ ಮಟ್ಟ ತುಂಬಾ ಕೆಳಮಟ್ಟದಲ್ಲಿದೆ ಎಂದಾದಲ್ಲಿ, ದಿನದಲ್ಲಿ ಎರಡು ಬಾರಿ ಈ ಜ್ಯೂಸ್ ಅನ್ನು ನೀವು ಸೇವಿಸುತ್ತಿದ್ದೀರಿ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಕೆಲವೊಂದು ಸಂದರ್ಭಗಳಲ್ಲಿ ಈ ಪಾನೀಯವನ್ನು ನೀವು ಆಗಾಗ್ಗೆ ಸೇವಿಸುತ್ತೀರಿ ಎಂದಾದಲ್ಲಿ ಖಿನ್ನತೆ ಶಮನಕಾರಿ ಗುಳಿಗೆಗಳನ್ನು ನೀವು ಸೇವಿಸಬೇಕಾಗಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


