Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಅರಿಶಿನ ಬೆರೆಸಿದ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ
ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಏನಾದರೂ ಮಾಡುತ್ತಲೇ ಇರಬೇಕಾಗುತ್ತದೆ. ಅದರಲ್ಲೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಾವು ತೆಗೆದುಕೊಳ್ಳುವಂತಹ ಕೆಲವೊಂದು ಆಹಾರಗಳು, ಪಾನೀಯ ನಮ್ಮ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಇದಕ್ಕಾಗಿಯೇ ನಾವು ಬೆಳಿಗ್ಗೆ ಎದ್ದು ಬಿಸಿ ನೀರಿಗೆ ಲಿಂಬೆ ರಸ ಹಾಕಿ ಕುಡಿಯುವುದು, ಯಾವುದಾದರೂ ಹಣ್ಣುಗಳು ಜ್ಯೂಸ್ ಕುಡಿಯುವುದು ನಮ್ಮ ದೇಹಕ್ಕೆ ಒಳ್ಳೆಯದೇ. ಆದರೆ ನಾವು ಅಡುಗೆಯಲ್ಲಿ ಬಳಸುವಂತಹ ಅರಿಶಿನವು ನಮ್ಮ ಆರೋಗ್ಯಕ್ಕೆ ತುಂಬಾ ಪರಿಣಾಮಕಾರಿ ಎಂದು ನಿಮಗೆ ತಿಳಿದಿದೆಯಾ? ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
ಹೌದು, ಇದರಲ್ಲಿರುವ ಊರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ಗಳು, ಆಗಾಧ ಪ್ರಮಾಣದಲ್ಲಿರುವುದರಿಂದ. ಅರಿಶಿನ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅದರಲ್ಲೂ ಕರ್ಕ್ಯೂಮಿನಂತಹ ಅಂಶವು ವೈಜ್ಞಾನಿಕ ವಲಯದಲ್ಲಿ ಅರಿಶಿನಕ್ಕೆ ಒಂದು ಉನ್ನತ ಸ್ಥಾನವನ್ನು ನೀಡಿದೆ. ಅರಿಶಿನಲ್ಲಿ ಶಮನಕಾರಿ ಗುಣಗಳು ಇವೆ ಎನ್ನುವುದು ಇತ್ತೀಚಿನ ಕೆಲವೊಂದು ಅಧ್ಯಯನಗಳಿಂದ ತಿಳಿದುಬಂದಿದೆ. ಅರಿಶಿನ ಪುಡಿಯಲ್ಲಿ ಅಡಗಿದೆ ತ್ವಚೆಯ ಸೌಂದರ್ಯದ ರಹಸ್ಯ
ಅರಿಶಿನದ ನೀರನ್ನು ಸೇವಿಸಿದರೆ ಆರೋಗ್ಯ ವೃದ್ಧಿಸುವುದು. ಹಾಗಾದರೆ ಅರಿಶಿನದ ನೀರನ್ನು ಮಾಡುವುದು ಹೇಗೆ ಎನ್ನುವುದು ನೀವು ತಿಳಿದುಕೊಳ್ಳಿ. ಒಂದು ಲೋಟ ಬಿಸಿ ನೀರಿಗೆ ಒಂದು ಚಿಟಿಕೆಯಷ್ಟು ಅರಿಶಿನ ಪುಡಿ ಮತ್ತು ಒಂದು ಚಮಚ ಕರಿಮೆಣಸಿನ ಪುಡಿಯನ್ನು ಹಾಕಿ. ಇದನ್ನು ಸರಿಯಾಗಿ ಕಳಸಿ. ಇದನ್ನು ಬೆಳಗ್ಗಿನ ವೇಳೆ ಬಿಸಿ ಇರುವಾಗಲೇ ಬರೀ ಹೊಟ್ಟೆಗೆ ಸೇವಿಸಿ. ಬನ್ನಿ ಅರಿಶಿನ ನೀರನ್ನು ದಿನಾಲೂ ಕುಡಿದರೆ ಏನಾಗುತ್ತದೆ ಎನ್ನುವುದನ್ನು ತಿಳಿಯೋಣ..

ಅರಿಶಿನವು ರಕ್ಷಣೆ ನೀಡುವುದು
ಅರಿಶಿನದ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಅದು ನಿಮ್ಮ ದೇಹಕ್ಕೆ ರಕ್ಷಣೆಯನ್ನು ನೀಡುವುದು. ದೇಹದಲ್ಲಿ ಸೃಷ್ಟಿಯಾಗಬಹುದಾದ ಕೆಲವೊಂದು ರೀತಿಯ ಕ್ಯಾನ್ಸರ್ ಅನ್ನು ಇದು ಬರದಂತೆ ತಡೆಯುವುದು

ಮಧುಮೇಹ ತಡೆಯುವುದು
ಅರಿಶಿನ ನೀರನ್ನು ಕುಡಿಯುವುದರಿಂದ ಎರಡನೇ ಹಂತದ ಮಧುಮೇಹವನ್ನು ನಿವಾರಿಸಬಹುದು ಎಂದು ಕೆಲವೊಂದು ಅಧ್ಯಯನಗಳು ಹೇಳಿವೆ.

ಯಕೃತ್ಗೆ ಒಳ್ಳೆಯದು
ವಿಷಕಾರಿ ಅಂಶಗಳು ಯಕೃತ್ (ಲಿವರ್) ನ್ನು ನಾಶ ಮಾಡಲು ಪ್ರಯತ್ನಿಸುತ್ತದೆ. ಆದರೆ ಅರಿಶಿನವು ಇದನ್ನು ತಡೆದು ಯಕೃತ್ ಪುನರ್ಜೀವನ ಪಡೆಯಲು ನೆರವಾಗುವುದು.

ವಯನ್ಸಾಗುವುದನ್ನು ನಿಧಾನಗೊಳಿಸುವುದು
ಅರಿಶಿನದಲ್ಲಿರುವ ಆ್ಯಂಟಿಆಕ್ಸಿಡೆಂಟ್ ಗಳು ಚರ್ಮವು ನೆರಿಗೆ ಬೀಳದಂತೆ ತಡೆದು ನಿಮಗೆ ವಯಸ್ಸಾಗುವುದನ್ನು ನಿಧಾನಗೊಳಿಸುವುದು.

ಉರಿಯೂತ ನಿವಾರಣೆ
ಮಾರುಕಟ್ಟೆಯಲ್ಲಿ ಸಿಗುವಂತಹ ಹಲವಾರು ರೀತಿಯ ಉರಿಯೂತ ನಿವಾರಕ ಔಷಧಿಗಳಿಗಿಂತ ಅರಿಶಿನವು ಹೆಚ್ಚು ಪರಿಣಾಮಕಾರಿ ಎಂದು ಅಧ್ಯಯನಗಳು ಹೇಳಿವೆ.

ಸಂಧಿನೋವು ನಿವಾರಣೆ
ಅರಿಶಿನದಲ್ಲಿ ಉರಿಯೂತ ನಿವಾರಣ ಗುಣಗಳು ಇರುವ ಕಾರಣದಿಂದ ಇದು ಸಂಧಿಯಲ್ಲಿ ಉಂಟಾಗುವ ಊತ ಮತ್ತು ನೋವನ್ನು ಶಮನ ಮಾಡುವುದು.

ಹೃದಯಕ್ಕೆ ಒಳ್ಳೆಯದು
ಅರಿಶಿನದಲ್ಲಿ ಕರ್ಕ್ಯೂಮಿನ್ ಎನ್ನುವ ಅಂಶವಿದೆ. ಇದು ರಕ್ತನಾಳಗಳಲ್ಲಿ ರಕ್ತವು ಹೆಪ್ಪುಗಟ್ಟದಂತೆ ತಡೆಯುವುದು. ಇದರಿಂದ ಇದು ನಿಮ್ಮ ಹೃದಯಕ್ಕೆ ಒಳ್ಳೆಯದು.

ಕೆಲವೊಂದು ಕ್ಯಾನ್ಸರ್ ನಿವಾರಕ
ಅರಿಶಿನದಲ್ಲಿರುವ ಆ್ಯಂಟಿಆಕ್ಸಿಡೆಂಟ್ಗಳು ಕ್ಯಾನ್ಸರ್ನಿಂದ ಹಾನಿಗೊಳಗಾಗಿರುವ ಕೋಶಗಳನ್ನು ಸರಿಪಡಿಸುವುದು.



Click it and Unblock the Notifications