Latest Updates
-
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ!
ಅರಿಶಿನ ಬೆರೆಸಿದ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ
ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಏನಾದರೂ ಮಾಡುತ್ತಲೇ ಇರಬೇಕಾಗುತ್ತದೆ. ಅದರಲ್ಲೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಾವು ತೆಗೆದುಕೊಳ್ಳುವಂತಹ ಕೆಲವೊಂದು ಆಹಾರಗಳು, ಪಾನೀಯ ನಮ್ಮ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಇದಕ್ಕಾಗಿಯೇ ನಾವು ಬೆಳಿಗ್ಗೆ ಎದ್ದು ಬಿಸಿ ನೀರಿಗೆ ಲಿಂಬೆ ರಸ ಹಾಕಿ ಕುಡಿಯುವುದು, ಯಾವುದಾದರೂ ಹಣ್ಣುಗಳು ಜ್ಯೂಸ್ ಕುಡಿಯುವುದು ನಮ್ಮ ದೇಹಕ್ಕೆ ಒಳ್ಳೆಯದೇ. ಆದರೆ ನಾವು ಅಡುಗೆಯಲ್ಲಿ ಬಳಸುವಂತಹ ಅರಿಶಿನವು ನಮ್ಮ ಆರೋಗ್ಯಕ್ಕೆ ತುಂಬಾ ಪರಿಣಾಮಕಾರಿ ಎಂದು ನಿಮಗೆ ತಿಳಿದಿದೆಯಾ? ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
ಹೌದು, ಇದರಲ್ಲಿರುವ ಊರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ಗಳು, ಆಗಾಧ ಪ್ರಮಾಣದಲ್ಲಿರುವುದರಿಂದ. ಅರಿಶಿನ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅದರಲ್ಲೂ ಕರ್ಕ್ಯೂಮಿನಂತಹ ಅಂಶವು ವೈಜ್ಞಾನಿಕ ವಲಯದಲ್ಲಿ ಅರಿಶಿನಕ್ಕೆ ಒಂದು ಉನ್ನತ ಸ್ಥಾನವನ್ನು ನೀಡಿದೆ. ಅರಿಶಿನಲ್ಲಿ ಶಮನಕಾರಿ ಗುಣಗಳು ಇವೆ ಎನ್ನುವುದು ಇತ್ತೀಚಿನ ಕೆಲವೊಂದು ಅಧ್ಯಯನಗಳಿಂದ ತಿಳಿದುಬಂದಿದೆ. ಅರಿಶಿನ ಪುಡಿಯಲ್ಲಿ ಅಡಗಿದೆ ತ್ವಚೆಯ ಸೌಂದರ್ಯದ ರಹಸ್ಯ
ಅರಿಶಿನದ ನೀರನ್ನು ಸೇವಿಸಿದರೆ ಆರೋಗ್ಯ ವೃದ್ಧಿಸುವುದು. ಹಾಗಾದರೆ ಅರಿಶಿನದ ನೀರನ್ನು ಮಾಡುವುದು ಹೇಗೆ ಎನ್ನುವುದು ನೀವು ತಿಳಿದುಕೊಳ್ಳಿ. ಒಂದು ಲೋಟ ಬಿಸಿ ನೀರಿಗೆ ಒಂದು ಚಿಟಿಕೆಯಷ್ಟು ಅರಿಶಿನ ಪುಡಿ ಮತ್ತು ಒಂದು ಚಮಚ ಕರಿಮೆಣಸಿನ ಪುಡಿಯನ್ನು ಹಾಕಿ. ಇದನ್ನು ಸರಿಯಾಗಿ ಕಳಸಿ. ಇದನ್ನು ಬೆಳಗ್ಗಿನ ವೇಳೆ ಬಿಸಿ ಇರುವಾಗಲೇ ಬರೀ ಹೊಟ್ಟೆಗೆ ಸೇವಿಸಿ. ಬನ್ನಿ ಅರಿಶಿನ ನೀರನ್ನು ದಿನಾಲೂ ಕುಡಿದರೆ ಏನಾಗುತ್ತದೆ ಎನ್ನುವುದನ್ನು ತಿಳಿಯೋಣ..

ಅರಿಶಿನವು ರಕ್ಷಣೆ ನೀಡುವುದು
ಅರಿಶಿನದ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಅದು ನಿಮ್ಮ ದೇಹಕ್ಕೆ ರಕ್ಷಣೆಯನ್ನು ನೀಡುವುದು. ದೇಹದಲ್ಲಿ ಸೃಷ್ಟಿಯಾಗಬಹುದಾದ ಕೆಲವೊಂದು ರೀತಿಯ ಕ್ಯಾನ್ಸರ್ ಅನ್ನು ಇದು ಬರದಂತೆ ತಡೆಯುವುದು

ಮಧುಮೇಹ ತಡೆಯುವುದು
ಅರಿಶಿನ ನೀರನ್ನು ಕುಡಿಯುವುದರಿಂದ ಎರಡನೇ ಹಂತದ ಮಧುಮೇಹವನ್ನು ನಿವಾರಿಸಬಹುದು ಎಂದು ಕೆಲವೊಂದು ಅಧ್ಯಯನಗಳು ಹೇಳಿವೆ.

ಯಕೃತ್ಗೆ ಒಳ್ಳೆಯದು
ವಿಷಕಾರಿ ಅಂಶಗಳು ಯಕೃತ್ (ಲಿವರ್) ನ್ನು ನಾಶ ಮಾಡಲು ಪ್ರಯತ್ನಿಸುತ್ತದೆ. ಆದರೆ ಅರಿಶಿನವು ಇದನ್ನು ತಡೆದು ಯಕೃತ್ ಪುನರ್ಜೀವನ ಪಡೆಯಲು ನೆರವಾಗುವುದು.

ವಯನ್ಸಾಗುವುದನ್ನು ನಿಧಾನಗೊಳಿಸುವುದು
ಅರಿಶಿನದಲ್ಲಿರುವ ಆ್ಯಂಟಿಆಕ್ಸಿಡೆಂಟ್ ಗಳು ಚರ್ಮವು ನೆರಿಗೆ ಬೀಳದಂತೆ ತಡೆದು ನಿಮಗೆ ವಯಸ್ಸಾಗುವುದನ್ನು ನಿಧಾನಗೊಳಿಸುವುದು.

ಉರಿಯೂತ ನಿವಾರಣೆ
ಮಾರುಕಟ್ಟೆಯಲ್ಲಿ ಸಿಗುವಂತಹ ಹಲವಾರು ರೀತಿಯ ಉರಿಯೂತ ನಿವಾರಕ ಔಷಧಿಗಳಿಗಿಂತ ಅರಿಶಿನವು ಹೆಚ್ಚು ಪರಿಣಾಮಕಾರಿ ಎಂದು ಅಧ್ಯಯನಗಳು ಹೇಳಿವೆ.

ಸಂಧಿನೋವು ನಿವಾರಣೆ
ಅರಿಶಿನದಲ್ಲಿ ಉರಿಯೂತ ನಿವಾರಣ ಗುಣಗಳು ಇರುವ ಕಾರಣದಿಂದ ಇದು ಸಂಧಿಯಲ್ಲಿ ಉಂಟಾಗುವ ಊತ ಮತ್ತು ನೋವನ್ನು ಶಮನ ಮಾಡುವುದು.

ಹೃದಯಕ್ಕೆ ಒಳ್ಳೆಯದು
ಅರಿಶಿನದಲ್ಲಿ ಕರ್ಕ್ಯೂಮಿನ್ ಎನ್ನುವ ಅಂಶವಿದೆ. ಇದು ರಕ್ತನಾಳಗಳಲ್ಲಿ ರಕ್ತವು ಹೆಪ್ಪುಗಟ್ಟದಂತೆ ತಡೆಯುವುದು. ಇದರಿಂದ ಇದು ನಿಮ್ಮ ಹೃದಯಕ್ಕೆ ಒಳ್ಳೆಯದು.

ಕೆಲವೊಂದು ಕ್ಯಾನ್ಸರ್ ನಿವಾರಕ
ಅರಿಶಿನದಲ್ಲಿರುವ ಆ್ಯಂಟಿಆಕ್ಸಿಡೆಂಟ್ಗಳು ಕ್ಯಾನ್ಸರ್ನಿಂದ ಹಾನಿಗೊಳಗಾಗಿರುವ ಕೋಶಗಳನ್ನು ಸರಿಪಡಿಸುವುದು.



Click it and Unblock the Notifications