Just In
- 3 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 3 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 4 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 5 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರಿಶಿನ ಬೆರೆಸಿದ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ
ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಏನಾದರೂ ಮಾಡುತ್ತಲೇ ಇರಬೇಕಾಗುತ್ತದೆ. ಅದರಲ್ಲೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಾವು ತೆಗೆದುಕೊಳ್ಳುವಂತಹ ಕೆಲವೊಂದು ಆಹಾರಗಳು, ಪಾನೀಯ ನಮ್ಮ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಇದಕ್ಕಾಗಿಯೇ ನಾವು ಬೆಳಿಗ್ಗೆ ಎದ್ದು ಬಿಸಿ ನೀರಿಗೆ ಲಿಂಬೆ ರಸ ಹಾಕಿ ಕುಡಿಯುವುದು, ಯಾವುದಾದರೂ ಹಣ್ಣುಗಳು ಜ್ಯೂಸ್ ಕುಡಿಯುವುದು ನಮ್ಮ ದೇಹಕ್ಕೆ ಒಳ್ಳೆಯದೇ. ಆದರೆ ನಾವು ಅಡುಗೆಯಲ್ಲಿ ಬಳಸುವಂತಹ ಅರಿಶಿನವು ನಮ್ಮ ಆರೋಗ್ಯಕ್ಕೆ ತುಂಬಾ ಪರಿಣಾಮಕಾರಿ ಎಂದು ನಿಮಗೆ ತಿಳಿದಿದೆಯಾ? ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
ಹೌದು, ಇದರಲ್ಲಿರುವ ಊರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ಗಳು, ಆಗಾಧ ಪ್ರಮಾಣದಲ್ಲಿರುವುದರಿಂದ. ಅರಿಶಿನ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅದರಲ್ಲೂ ಕರ್ಕ್ಯೂಮಿನಂತಹ ಅಂಶವು ವೈಜ್ಞಾನಿಕ ವಲಯದಲ್ಲಿ ಅರಿಶಿನಕ್ಕೆ ಒಂದು ಉನ್ನತ ಸ್ಥಾನವನ್ನು ನೀಡಿದೆ. ಅರಿಶಿನಲ್ಲಿ ಶಮನಕಾರಿ ಗುಣಗಳು ಇವೆ ಎನ್ನುವುದು ಇತ್ತೀಚಿನ ಕೆಲವೊಂದು ಅಧ್ಯಯನಗಳಿಂದ ತಿಳಿದುಬಂದಿದೆ. ಅರಿಶಿನ ಪುಡಿಯಲ್ಲಿ ಅಡಗಿದೆ ತ್ವಚೆಯ ಸೌಂದರ್ಯದ ರಹಸ್ಯ
ಅರಿಶಿನದ
ನೀರನ್ನು
ಸೇವಿಸಿದರೆ
ಆರೋಗ್ಯ
ವೃದ್ಧಿಸುವುದು.
ಹಾಗಾದರೆ
ಅರಿಶಿನದ
ನೀರನ್ನು
ಮಾಡುವುದು
ಹೇಗೆ
ಎನ್ನುವುದು
ನೀವು
ತಿಳಿದುಕೊಳ್ಳಿ.
ಒಂದು
ಲೋಟ
ಬಿಸಿ
ನೀರಿಗೆ
ಒಂದು
ಚಿಟಿಕೆಯಷ್ಟು
ಅರಿಶಿನ
ಪುಡಿ
ಮತ್ತು
ಒಂದು
ಚಮಚ
ಕರಿಮೆಣಸಿನ
ಪುಡಿಯನ್ನು
ಹಾಕಿ.
ಇದನ್ನು
ಸರಿಯಾಗಿ
ಕಳಸಿ.
ಇದನ್ನು
ಬೆಳಗ್ಗಿನ
ವೇಳೆ
ಬಿಸಿ
ಇರುವಾಗಲೇ
ಬರೀ
ಹೊಟ್ಟೆಗೆ
ಸೇವಿಸಿ.
ಬನ್ನಿ
ಅರಿಶಿನ
ನೀರನ್ನು
ದಿನಾಲೂ
ಕುಡಿದರೆ
ಏನಾಗುತ್ತದೆ
ಎನ್ನುವುದನ್ನು
ತಿಳಿಯೋಣ..
ಅರಿಶಿನವು ರಕ್ಷಣೆ ನೀಡುವುದು
ಅರಿಶಿನದ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಅದು ನಿಮ್ಮ ದೇಹಕ್ಕೆ ರಕ್ಷಣೆಯನ್ನು ನೀಡುವುದು. ದೇಹದಲ್ಲಿ ಸೃಷ್ಟಿಯಾಗಬಹುದಾದ ಕೆಲವೊಂದು ರೀತಿಯ ಕ್ಯಾನ್ಸರ್ ಅನ್ನು ಇದು ಬರದಂತೆ ತಡೆಯುವುದು
ಮಧುಮೇಹ ತಡೆಯುವುದು
ಅರಿಶಿನ ನೀರನ್ನು ಕುಡಿಯುವುದರಿಂದ ಎರಡನೇ ಹಂತದ ಮಧುಮೇಹವನ್ನು ನಿವಾರಿಸಬಹುದು ಎಂದು ಕೆಲವೊಂದು ಅಧ್ಯಯನಗಳು ಹೇಳಿವೆ.
ಯಕೃತ್ಗೆ ಒಳ್ಳೆಯದು
ವಿಷಕಾರಿ ಅಂಶಗಳು ಯಕೃತ್ (ಲಿವರ್) ನ್ನು ನಾಶ ಮಾಡಲು ಪ್ರಯತ್ನಿಸುತ್ತದೆ. ಆದರೆ ಅರಿಶಿನವು ಇದನ್ನು ತಡೆದು ಯಕೃತ್ ಪುನರ್ಜೀವನ ಪಡೆಯಲು ನೆರವಾಗುವುದು.
ವಯನ್ಸಾಗುವುದನ್ನು ನಿಧಾನಗೊಳಿಸುವುದು
ಅರಿಶಿನದಲ್ಲಿರುವ ಆ್ಯಂಟಿಆಕ್ಸಿಡೆಂಟ್ ಗಳು ಚರ್ಮವು ನೆರಿಗೆ ಬೀಳದಂತೆ ತಡೆದು ನಿಮಗೆ ವಯಸ್ಸಾಗುವುದನ್ನು ನಿಧಾನಗೊಳಿಸುವುದು.
ಉರಿಯೂತ ನಿವಾರಣೆ
ಮಾರುಕಟ್ಟೆಯಲ್ಲಿ ಸಿಗುವಂತಹ ಹಲವಾರು ರೀತಿಯ ಉರಿಯೂತ ನಿವಾರಕ ಔಷಧಿಗಳಿಗಿಂತ ಅರಿಶಿನವು ಹೆಚ್ಚು ಪರಿಣಾಮಕಾರಿ ಎಂದು ಅಧ್ಯಯನಗಳು ಹೇಳಿವೆ.
ಸಂಧಿನೋವು ನಿವಾರಣೆ
ಅರಿಶಿನದಲ್ಲಿ ಉರಿಯೂತ ನಿವಾರಣ ಗುಣಗಳು ಇರುವ ಕಾರಣದಿಂದ ಇದು ಸಂಧಿಯಲ್ಲಿ ಉಂಟಾಗುವ ಊತ ಮತ್ತು ನೋವನ್ನು ಶಮನ ಮಾಡುವುದು.
ಹೃದಯಕ್ಕೆ ಒಳ್ಳೆಯದು
ಅರಿಶಿನದಲ್ಲಿ ಕರ್ಕ್ಯೂಮಿನ್ ಎನ್ನುವ ಅಂಶವಿದೆ. ಇದು ರಕ್ತನಾಳಗಳಲ್ಲಿ ರಕ್ತವು ಹೆಪ್ಪುಗಟ್ಟದಂತೆ ತಡೆಯುವುದು. ಇದರಿಂದ ಇದು ನಿಮ್ಮ ಹೃದಯಕ್ಕೆ ಒಳ್ಳೆಯದು.
ಕೆಲವೊಂದು ಕ್ಯಾನ್ಸರ್ ನಿವಾರಕ
ಅರಿಶಿನದಲ್ಲಿರುವ ಆ್ಯಂಟಿಆಕ್ಸಿಡೆಂಟ್ಗಳು ಕ್ಯಾನ್ಸರ್ನಿಂದ ಹಾನಿಗೊಳಗಾಗಿರುವ ಕೋಶಗಳನ್ನು ಸರಿಪಡಿಸುವುದು.