Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಹಾಲಿಗೆ ಜೀರಿಗೆ-ಕರಿಮೆಣಸಿನ ಪುಡಿ ಸೇರಿಸಿ ಕುಡಿದು ನೋಡಿ...
ರೋಗ ಬಂದ ಬಳಿಕ ಮಾತ್ರೆ ತೆಗೆದುಕೊಳ್ಳುವ ಬದಲು ರೋಗ ಬರದಂತೆ ನೋಡಿಕೊಳ್ಳುವುದೇ ಜಾಣತನ ಎಂದು ವೈದ್ಯರು ಹಲವಾರು ವರ್ಷಗಳಿಂದ ಹೇಳುತ್ತಾ ಬಂದಿದ್ದರೂ ಹೆಚ್ಚಿನವರು ಇದನ್ನು ಅಲಕ್ಷಿಸುತ್ತಿದ್ದರು. ಆದರೆ ಇಂದಿನ ಜನತೆ ಈ ಬಗ್ಗೆ ಹೆಚ್ಚು ಜಾಗರೂಕರಾಗಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಒಲವು ತೋರುತ್ತಿರುವುದು ಹಳ್ಳಿಗಳಿಂದ ನಗರದಲ್ಲಿ ಕಂಡುಬರುತ್ತಿದೆ.

ವಿಶೇಷವಾಗಿ ಇಂದಿನ ದಿನಗಳಲ್ಲಿ ವೈದ್ಯಕೀಯ ಚಿಕಿತ್ಸಾ ವೆಚ್ಚ ಮನೆ ಕಟ್ಟುವಷ್ಟೇ ಹೆಚ್ಚು ದುಬಾರಿಯಾಗುತ್ತಾ ಹೋಗುತ್ತಿರುವುದನ್ನು ಕಂಡು ಈ ಕ್ರಮ ಅನಿವಾರ್ಯವೂ ಆಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಕೆಲವಾರು ಆರೋಗ್ಯಕರ ಪೇಯಗಳಿವೆ, ಇವನ್ನು ನಿತ್ಯವೂ ಸೇವಿಸುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ಇದರಿಂದ ಹಲವು ರೋಗಗಳು ಆವರಿಸುವ ಸಾಧ್ಯತೆ ಅಪಾರವಾಗಿ ಕಡಿಮೆಯಾಗುತ್ತದೆ.
ಇಂತಹ ಒಂದು ಪ್ರಬಲ ಪೇಯವನ್ನು ಸುಲಭವಾಗಿ, ಮನೆಯಲ್ಲಿಯೇ ತಯಾರಿಸಿಕೊಳ್ಳುವ ವಿಧಾನವನ್ನು ಕೆಳಗೆ ನೀಡಲಾಗಿದೆ. ಇದಕ್ಕೆ ಹೆಚ್ಚು ಪರಿಕರಗಳೇನೂ ಅಗತ್ಯವಿಲ್ಲ. ಕೊಂಚ ಹಾಲು, ಜೀರಿಗೆ ಮತ್ತು ಕಾಳುಮೆಣಸಿನ ಪುಡಿ ಇದ್ದರೆ ಸಾಕು. ಈ ಆರೋಗ್ಯಕರ ಪೇಯ ತಯಾರಿಸುವ ವಿಧಾನ: ರೈತರ ಕಪ್ಪು ಬಂಗಾರ, ಕರಿಮೆಣಸು ಕಾಳಿನ ಪವರ್...
ಅಗತ್ಯವಿರುವ ಸಾಧನಗಳು:
*ಹಾಲು - 1 ಕಪ್
*ಜೀರಿಗೆಪುಡಿ - 1 ಚಿಕ್ಕ ಚಮಚ
*ಕಾಳುಮೆಣಸಿನ ಪುಡಿ - ½ ಚಿಕ್ಕ ಚಮಚ (ಇವೆರಡರ ಕಾಳುಗಳನ್ನು ಮಿಕ್ಸಿಯಲ್ಲಿ ಪುಡಿಮಾಡಿಕೊಂಡರೆ ಇನ್ನೂ ಉತ್ತಮ)
ಮನೆಯಲ್ಲಿಯೇ ತಯಾರಿಸಬಹುದಾದ ಈ ಪೇಯದಲ್ಲಿ ಹಲವು ವಿಟಮಿನ್ನುಗಳು ಮತ್ತು ಖನಿಜಗಳಿದ್ದು ನಮ್ಮ ದೇಹದ ಪ್ರತಿ ಜೀವಕೋಶಕ್ಕೂ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚುವ ಮೂಲಕ ದೇಹವನ್ನು ಪ್ರವೇಶಿಸುವ ವಿವಿಧ ರೋಗಾಣುಗಳನ್ನು ಕೊಂದು ದೇಹವನ್ನು ರಕ್ಷಿಸುತ್ತದೆ. ಈ ಪೇಯದ ಸೇವನೆಯಿಂದ ಸಾಮಾನ್ಯ ತೊಂದರೆಗಳಾದ ಕೆಮ್ಮು, ಶೀತ, ವೈರಲ್ ಜ್ವರ, ಅಜೀರ್ಣ ಮೊದಲಾದವುಗಳು ಸುಲಭವಾಗಿ ಗುಣವಾಗುತ್ತವೆ. ಜೀರಿಗೆ: ಸೌಂದರ್ಯದ ಸರ್ವ ಸಮಸ್ಯೆಗೆ ಒಂದೇ ಪರಿಹಾರ
ತಯಾರಿಕಾ ವಿಧಾನ:
*ಒಂದು ಕಪ್ ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ
*ಈಗ ಎರಡೂ ಪುಡಿಗಳನ್ನು ಹಾಲಿಗೆ ಬೆರೆಸಿ ಚೆನ್ನಾಗಿ ಕಲಕಿ ಮಿಶ್ರಣ ಮಾಡಿ.
*ಈ ಹಾಲನ್ನು ಪ್ರತಿ ರಾತ್ರಿ ಮಲಗುವ ಮುನ್ನ ದಿನದ ಅಂತಿಮ ಆಹಾರವಾಗಿ ಸೇವಿಸಿ ಕೊಂಚವೇ ನಡೆದಾಡಿ ಬಳಿಕ ಮಲಗಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



