Latest Updates
-
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು!
ಟೀ ಕಾಫಿ ಬದಲಿಗೆ, ಬೀಟ್ರೂಟ್-ಕಿತ್ತಳೆ ಜ್ಯೂಸ್ ಕುಡಿಯಿರಿ
ನಿಮ್ಮ ನಿತ್ಯದ ಪ್ರಥಮ ಆಹಾರ ಯಾವುದು? ಹೆಚ್ಚಿನವರು ಇದಕ್ಕೆ ಕಾಫಿ ಅಥವಾ ಟೀ ಎಂಬ ಉತ್ತರ ನೀಡುತ್ತಾರೆ. ವಾಸ್ತವವಾಗಿ ಈ ಅಭ್ಯಾಸವನ್ನು ಬಲವಂತವಾಗಿ ಬ್ರಿಟಿಷರು ನಮಗೆ ಹಬ್ಬಿಸಿದ್ದೇ ಹೊರತು ಭಾರತೀಯರು ಹಿಂದೆ ಹಣ್ಣು ಮತ್ತು ತರಕಾರಿಗಳ ರಸವನ್ನೇ ದಿನದ ಪ್ರಥಮ ಆಹಾರವಾಗಿ ಸೇವಿಸ್ತುತಿದ್ದರು. ಹೌದು, ದಿನದ ಪ್ರಥಮ ಆಹಾರವಾಗಿ ಹಣ್ಣು ಮತ್ತು ತರಕಾರಿಗಳು ಅಥವಾ ಇವುಗಳ ರಸವನ್ನು ಸೇವಿಸುವುದರಲ್ಲಿ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ ಎಂಬುದನ್ನು ಸಂಶೋಧನೆಗಳು ದೃಢೀಕರಿಸಿದ್ದು ಹಲವಾರು ರೋಗಗಳಿಂದ ದೂರವಿರಬಹುದಾಗಿದೆ. ಬೀಟ್ರೂಟ್ ಜ್ಯೂಸ್, ಎಂದಾಕ್ಷಣ ಮುಖಸಿಂಡರಿಸಬೇಡಿ...
ಇಂದಿನವರಿಗೆ ಹೋಲಿಸಿದರೆ ನಮ್ಮ ಹಿರಿಯರು ಹೆಚ್ಚು ಆರೋಗ್ಯವಂತರಾಗಿರುವ ರಹಸ್ಯವೆಂದರೆ ಅವರ ಆಹಾರ ಸೇವನೆಯ ಕ್ರಮ ಮತ್ತು ಶ್ರಮಜೀವನ. ಚಿಕ್ಕಪುಟ್ಟ ತೊಂದರೆಗಳಿಗೆಲ್ಲಾ ಆಗ ವೈದ್ಯರ ಸಹಾಯ ಪಡೆಯುತ್ತಲೇ ಇರಲಿಲ್ಲ, ಬದಲಿಗೆ ಹಿತ್ತಲ ಗಿಡದ ಮದ್ದು ಮತ್ತು ಹತ್ತು ಹಲವು ಹಣ್ಣು ತರಕಾರಿಗಳ ಸೇವನೆಯ ಮೂಲಕವೇ ಉಪಶಮನ ಪಡೆಯಲಾಗುತ್ತಿತ್ತು. ಕಿತ್ತಳೆ- ಬಾಳೆಹಣ್ಣಿನ ಸಿಪ್ಪೆಯ ಪವರ್ಗೆ ಬೆರಗಾಗಲೇಬೇಕು..!
ಇಂತಹ ಒಂದು ಅತ್ಯುತ್ತಮ ಆಹಾರವೆಂದರೆ ಬೀಟ್ರೂಟ್ ಮತ್ತು ಕಿತ್ತಳೆ ಹಣ್ಣಿನ ಜ್ಯೂಸ್ನ ಸೇವನೆ. ಪ್ರತಿದಿನ ಒಂದು ಲೋಟ ಈ ಜ್ಯೂಸ್ ಅನ್ನು ಪ್ರಥಮ ಆಹಾರವಾಗಿ ಸೇವಿಸಿದರೆ ಎಷ್ಟೋ ಪ್ರಯೋಜನಗಳಿವೆ. ಬನ್ನಿ, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ....

ಬೀಟ್ರೂಟ್ ಮತ್ತು ಕಿತ್ತಳೆ ಹಣ್ಣಿನ ಜ್ಯೂಸ್ ತಯಾರಿಸುವ ವಿಧಾನ
*ಬೀಟ್ರೂಟ್ - ಮಧ್ಯಮ ಗಾತ್ರದ ಅರ್ಧ ಭಾಗ
*ಕಿತ್ತಳೆ ಹಣ್ಣಿನ ಜ್ಯೂಸ್ - ಅರ್ಧ ಕಪ್
*ಮೊದಲು ಇವೆರಡನ್ನೂ ಮಿಕ್ಸಿಯ ಬ್ಲೆಂಡರಿನಲ್ಲಿ ಹಾಕಿ ಚೆನ್ನಾಗಿ ಅರೆಯಿರಿ. ಈ ರಸವನ್ನು ಸೋಸದೇ ಹಾಗೇ ಕುಡಿಯಿರಿ.

ಸೇವನೆಯ ವಿಧಾನ
ಪ್ರತಿದಿನ ಮುಂಜಾನೆ ಎದ್ದು ಪ್ರಾತಃವಿಧಿಗಳನ್ನು ಪೂರೈಸಿದ ಬಳಿಕ ಒಂದು ಲೋಟ ಈ ಮಿಶ್ರಣವನ್ನು ನೇರವಾಗಿ ಕುಡಿದುಬಿಡಿ. ಬಳಿಕ ಕನಿಷ್ಠ ಮುಕ್ಕಾಲು ಗಂಟೆ ಏನನ್ನೂ ಸೇವಿಸದಿರಿ. ಬದಲಿಗೆ ಸಾಕಷ್ಟು ವ್ಯಾಯಾಮ ಅನುಸರಿಸಿ. ಇದರಿಂದ ಹಲವಾರು ಪ್ರಯೋಜನಗಳಿವೆ. ಇವುಗಳಲ್ಲಿ ಮುಖ್ಯವಾದವುಗಳನ್ನು ಮುಂದಿನ ಸ್ಲೈಡ್ ನಲ್ಲಿ ನೀಡಿದ್ದೇವೆ ಮುಂದೆ ಓದಿ...

ಅಧಿಕ ರಕ್ತದೊತ್ತಡವನ್ನು ನಿವಾರಿಸುತ್ತದೆ
ಈ ಮಿಶ್ರಣದಲ್ಲಿರುವ ನೈಟ್ರಿಕ್ ಆಮ್ಲ ಮತ್ತು ವಿಟಮಿನ್ ಸಿ ಪೆಡಸಾಗಿದ್ದ ರಕ್ತನಾಳಗಳನ್ನು ಸಡಿಲಿಸಿ ರಕ್ತಪರಿಚಲನೆ ಸುಗಮಗೊಳ್ಳಲು ನೆರವಾಗುತ್ತದೆ. ಇದರಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ.

ಕೆಲವು ವಿಧದ ಕ್ಯಾನ್ಸರ್ ಬರುವುದರಿಂದ ತಪ್ಪಿಸುತ್ತದೆ
ಕೆಲವು ಅಧ್ಯಯನಗಳಲ್ಲಿ ಈ ಮಿಶ್ರಣದಲ್ಲಿ ಪ್ರಬಲ ಫೈಟ್ರೋ ನ್ಯೂಟ್ರಿಯೆಂಟುಗಳಿದ್ದು ಇವು ಹಲವು ವಿಧದ ಕ್ಯಾನ್ಸರ್ ವಿರುದ್ದ ಹೋರಾಡುವ ಗುಣ ಹೊಂದಿದೆ ಎಂದು ಕಂಡುಕೊಳ್ಳಲಾಗಿದೆ. ವಿಶೇಷವಾಗಿ ಪ್ರಾಸ್ಟೇಟ್ ಗ್ರಂಥಿ, ಸ್ತನ ಮತ್ತು ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ರಕ್ಷಣೆ ನೀಡುತ್ತದೆ.

ಹುಟ್ಟಲಿರುವ ಮಗುವಿನಲ್ಲಿ ಊನಗಳ ಸಾಧ್ಯತೆ ಕಡಿಮೆ ಮಾಡುತ್ತದೆ
ಈ ಅದ್ಭುತ ರಸವನ್ನು ಗರ್ಭಿಣಿಯರು ನಿಯಮಿತವಾಗಿ ಸೇವಿಸಿದರೆ ಹುಟ್ಟಲಿರುವ ಮಗು ಪರಿಪೂರ್ಣ ಆರೋಗ್ಯವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ರಸದಲ್ಲಿರುವ ವಿಟಮಿನ್ ಬಿ, ಸಿ ಮತ್ತು ಫೋಲೇಟ್ ಗರ್ಭದಲ್ಲಿರುವ ಮಗುವಿಗೆ ಹೆಚ್ಚಿನ ಪೋಷಣೆ ನೀಡುತ್ತದೆ.

ಕರುಳ ಹುಣ್ಣುಗಳನ್ನು ಮಾಗಿಸುತ್ತದೆ
ಈ ರಸದಲ್ಲಿರುವ ಉರಿಯೂತ ನಿವಾರಕ ಗುಣ ಕರುಳು, ಜಠರಗಳಲ್ಲಿ ಆಗಿದ್ದ ಹುಣ್ಣುಗಳನ್ನು ಮಾಗಿಸುವ ಗುಣ ಹೊಂದಿದೆ. ಅಷ್ಟೇ ಅಲ್ಲ, ಜೀರ್ಣಕ್ರಿಯೆ ಸುಲಭಗೊಂಡು ಒಂದು ವೇಳೆ ಜೀರ್ಣಾಂಗಗಳ ಒಳಭಾಗದಲ್ಲಿ ಸೂಕ್ಷ್ಮಗೀರುಗಳಾಗಿದ್ದರೆ ವಾಸಿಯಾಗಲು ನೆರವಾಗುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಈ ದ್ರವದಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ, ಮ್ಯಾಂಗನೀಸ್ ಮತ್ತು ಇತರ ಪೋಷಕಾಂಶಗಳಿರುವ ಕಾರಣ ದೇಹದ ಪ್ರತಿ ಜೀವಕೋಶವೂ ಹೆಚ್ಚಿನ ಪೋಷಣೆ ಪಡೆಯುತ್ತದೆ. ಅಲ್ಲದೇ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಇದು ಒಟ್ಟಾರೆ ಆರೋಗ್ಯಕ್ಕೆ ಪೂರಕವಾಗಿದೆ.

ರಕ್ತಹೀನತೆಯನ್ನು ನಿವಾರಿಸುತ್ತದೆ
ಈ ದ್ರವದಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೋಷಕಾಂಶಗಳು ಆಹಾರದ ಮೂಲಕ ಲಭಿಸುವ ಕಬ್ಬಿಣದ ಅಂಶವನ್ನು ಹೆಚ್ಚಾಗಿ ಹೀರಿಕೊಳ್ಳಲು ನೆರವಾಗುತ್ತದೆ. ತನ್ಮೂಲಕ ರಕ್ತಹೀನತೆಯನ್ನು ನಿವಾರಿಸಲು ಸಾಧ್ಯವಾಗುತ್ತದೆ.



Click it and Unblock the Notifications











