Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಪಂಚ ಬಗೆಯ ಆಯುರ್ವೇದದಿಂದ ಶೀತ-ಕೆಮ್ಮುಗಳಿಗೆ ಪರಿಹಾರ
ಬೇಸಿಗೆಯಿಂದ ಮಳೆಗಾಲಕ್ಕೆ ಕಾಲಿಡುತ್ತಿದ್ದಂತೆ ವಾತಾವರಣದಲ್ಲಿ ಗಣನೀಯ ಬದಲಾವಣೆಯಾಗುತ್ತದೆ. ತಾಪದ ವಾತಾವರಣದಿಂದ ತಂಪಾದ ಹವಾಮಾನ ಆವರಿಸುತ್ತದೆ. ಒಮ್ಮಿಂದೊಮ್ಮೆಲೆ ಉಂಟಾಗುವ ಈ ಬಗೆಯ ಬದಲಾವಣೆಯಿಂದ ನಮ್ಮ ಆರೋಗ್ಯದಲ್ಲೂ ಏರುಪೇರು ಉಂಟಾಗುವುದು. ಅದರಲ್ಲೂ ಶೀತ ನೆಗಡಿ, ಕೆಮ್ಮು, ಗಂಟಲು ಕಿರಿಕಿರಿ ಮತ್ತು ಜ್ವರ ಸಾಮಾನ್ಯವಾಗಿ ಕಾಡುವ ಕಾಯಿಲೆಗಳು. ಇವು ಸಾಮಾನ್ಯವಾಗಿ ಬರುವ ಕಾಯಿಲೆ ಎನಿಸಿದರೂ ಇವುಗಳಿಂದ ದೇಹ ಬಹಳಷ್ಟು ದಣಿಯುತ್ತದೆ.
ಈ ರೀತಿಯ ಚಿಕ್ಕ ಪುಟ್ಟ ಕಾಯಿಲೆಗಳಿಗೆ ದುಬಾರಿ ಬೆಲೆಯ ಔಷಧವನ್ನು ಸೇವಿಸಬೇಕೆಂದಿಲ್ಲ. ಮನೆಯಲ್ಲಿರುವ ಕೆಲವು ಆಯುರ್ವೇದದ ವಸ್ತುಗಳಿಂದಲೇ ಕಡಿಮೆ ಮಾಡಬಹುದು. ಇವುಗಳ ಸೇವನೆಯಿಂದ ಯಾವುದೇ ಅಡ್ಡ ಪರಿಣಾಮಗಳುಂಟಾಗದೇ, ಬಹು ಬೇಗ ಚೇತರಿಕೆಯಾಗುತ್ತದೆ. ಈ ಮಳೆಗಾಲದಲ್ಲಿ ಮನೆಯಲ್ಲೊಬ್ಬರಿಗಾದರೂ ಕೆಮ್ಮು, ಶೀತವಾಗಿರುತ್ತದೆ ಅವರ ಆರೈಕೆಗೆ ಅನುಕೂಲವಾಗುವ ಐದು ಆಯುರ್ವೇದದ ಪರಿಹಾರ ಇಲ್ಲಿದೆ ನೋಡಿ....

ಶುಂಠಿ
ಸ್ವಲ್ಪ ಶುಂಠಿಯನ್ನು ಜಜ್ಜಿ ಒಂದು ಗ್ಲಾಸ್ ನೀರಿನಲ್ಲಿ ಕುದಿಸಿ. ನಂತರ ಸೋಸಿ ಚಹಾದಂತೆ ಸವಿದರೆ ಕಫ, ಕೆಮ್ಮು ಗುಣಮುಖವಾಗುವುದು.

ತುಳಸಿ
ಇದು ಪವಿತ್ರ ಸಸ್ಯವಷ್ಟೇ ಅಲ್ಲ, ಔಷಧೀಯ ಸಸ್ಯವು ಸಹ ಹೌದು. ಇದರಲಿರುವ ಆಂಟಿ ಬ್ಯಾಕ್ಟೀರಿಯಲ್, ಆಂಟಿಫಂಗಲ್ ಮತ್ತು ಉರಿಯೂತ ನಿವಾರಕ ಗುಣಗಳು ಇದನ್ನು ಶೀತ ಮತ್ತು ಕೆಮ್ಮಿನ ವಿರುದ್ಧ ಉತ್ತಮ ಮನೆಮದ್ದನ್ನಾಗಿ ಮಾಡಿವೆ. ತುಳಸಿ ಗಂಟಲು ನೋವನ್ನು ಸಹ ನಿವಾರಿಸುತ್ತದೆ. ಅದಕ್ಕಾಗಿ 10-12 ತುಳಸಿ ಎಲೆಗಳನ್ನು ತೆಗೆದುಕೊಂಡು, ತೊಳೆದು ನೀರಿನಲ್ಲಿ ಬೇಯಿಸಿಕೊಂಡು ಸೇವಿಸಿ.

ಶುಂಠಿ ಮತ್ತು ಮೆಣಸಿನಕಾಳು
ಸ್ವಲ್ಪ ಉಪ್ಪು, ಮೆಣಸಿನ ಕಾಳು, ಮತ್ತು ಶುಂಠಿಯನ್ನು ನೀರಲ್ಲಿ ಸೇರಿಸಿ, ಚೆನ್ನಾಗಿ ಕುದಿಸಿ. ಇದನ್ನು ನಿತ್ಯವೂ ಎರಡು ಬಾರಿ ಕುಡಿದರೆ ಶೀತ, ನೆಗಡಿ, ಅಜೀರ್ಣವೆಲ್ಲಾ ಶಮನವಾಗುವುದು.

ಅರಿಶಿನ
ಬೆಚ್ಚಗಿನ ನೀರಿನಲ್ಲಿ 2 ಚಮಚ ಅರಿಶಿನ ಪುಡಿಯನ್ನು ಸೇರಿಸಿ ಕುಡಿದರೆ ಎದೆ ಉರಿ, ಕೆಮ್ಮು ಮತ್ತು ಶೀತ ಶಮನಗೊಳ್ಳುವುದು.
ದಿನಕ್ಕೊಂದು ಲೋಟ ಅರಿಶಿನ ಬೆರೆಸಿದ ನೀರು-ಆಯಸ್ಸು ನೂರು!
ಜೇನುತುಪ್ಪ
ಬೆಚ್ಚಗಿನ ನೀರಿನಲ್ಲಿ ಒಂದು ಚಮಚ ಜೇನುತುಪ್ಪ, ಒಂದು ಚಮಚ ನಿಂಬೆ ರಸವನ್ನು ಬೆರೆಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಗಂಟಲು ಕಟ್ಟುವುದು ಮತ್ತು ಕೆಮ್ಮು ಕಡಿಮೆಯಾಗುವುದು.

ಅರಿಶಿನಪುಡಿ ಬೆರೆಸಿದ ಅರಿಶಿನ ಹಾಲು
ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿ ಹಾಲಿನಲ್ಲಿ ಒಂದು ಚಿಕ್ಕಚಮಚ ಅರಿಶಿನಪುಡಿ ಸೇರಿಸಿ ಕುಡಿಯುವ ಮೂಲಕ ಕೆಮ್ಮು ಮತ್ತು ಶೀತಕ್ಕೆ ಉತ್ತಮ ಪರಿಹಾರ ದೊರಕುತ್ತದೆ.

ಬಿಸಿ ನೀರು ಮತ್ತು ಬೆಳ್ಳುಳ್ಳಿ
ಕೆಲವೊಂದು ಬೆಳ್ಳುಳ್ಳಿ ಎಸಲುಗಳನ್ನು ಚೆನ್ನಾಗಿ ಜಜ್ಜಿ ಒಂದು ಲೋಟ ಬಿಸಿ ನೀರಿಗೆ ಹಾಕಿ, ಚೆನ್ನಾಗಿ ಕಲಸುಕೊಂಡು ದಿನಾ ಸೇವಿಸುತ್ತಾ ಬನ್ನಿ, ಅಥವಾ ಕಚ್ಛಾ ಬೆಳ್ಳುಳ್ಳಿಯ ಒಂದು ತುಣುಕನ್ನು 3-4 ಗಂಟೆಗಳಿಗೊಮ್ಮೆ ಹಾಗೆಯೇ ಸೇವಿಸುವುದರಿಂದ, ಸುಲಭವಾಗಿ ಶೀತವನ್ನು ನಿವಾರಿಸಿಕೊಳ್ಳಬಹುದು. ಬೆಳ್ಳುಳ್ಳಿಯಲ್ಲಿರುವ ವೈರಸ್ ನಿರೋಧಕ ಅಂಶಗಳು, ಶೀತವನ್ನು ದೂರ ಮಾಡುತ್ತವೆ. ನಿಮಗೆ ಹಾಗೆಯೇ ಸೇವಿಸಲು ಕಷ್ಟವಾದಲ್ಲಿ, ಇದನ್ನು ಜಜ್ಜಿ, ಜೇನು ತುಪ್ಪದ ಜೊತೆಗೆ ಸೇವಿಸಬಹುದು.

ಜೇನು ಮತ್ತು ಬೆಳ್ಳುಳ್ಳಿಯ ಟೀ
ಒಂದೆರಡು ಬೆಳ್ಳುಳ್ಳಿಯ ಎಸಳುಗಳನ್ನು ಚಿಕ್ಕದಾಗಿ ಹೆಚ್ಚಿ ಸಾಮಾನ್ಯ ಪ್ರಮಾಣದ ಅರ್ಧದಷ್ಟು ಟೀಪುಡಿಯೊಂದಿಗೆ ನೀರಿನಲ್ಲಿ ಕೊಂಚ ಕಾಲ ಕುದಿಸಿ ಬಳಿಕ ಸಕ್ಕರೆಯ ಬದಲಿಗೆ ಜೇನು ಸೇರಿಸಿ ಟೀ ತಯಾರಿಸಿ. ಹಾಲು ಅಗತ್ಯವಿಲ್ಲ ಎನಿಸಿದರೆ ಮೊದಲು ಕೊಂಚಕಾಲ ಬೆಳ್ಳುಳ್ಳಿಯನ್ನು ಕುದಿಸಿ ನಂತರ ಟೀಪುಡಿಹಾಕಿ ಕೊಂಚವೇ ಕುದಿಸಿ ಸೋಸಿಬಿಡಿ. ಈ ಟೀ ಅನ್ನು ದಿನವಿಡೀ ಬಿಸಿಬಿಸಿಯಾಗಿ ನಿಧಾನವಾಗಿ ಗುಟುಕರಿಸಿ. ಇದರಿಂದ ಗಂಟಲಿನಲ್ಲಿದ್ದ ಬ್ಯಾಕ್ಟೀರಿಯಾ ಮತ್ತು ವೈರಸ್ಸುಗಳು ನಿವಾರಣೆಯಾಗಿ ಉತ್ತಮ ಪರಿಹಾರ ದೊರಕುತ್ತದೆ.



Click it and Unblock the Notifications