Just In
- 1 hr ago ವಾರ ಭವಿಷ್ಯ (ಏಪ್ರಿಲ್20-27) : ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- 4 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 13 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 14 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
Don't Miss
- News ವೃದ್ಧರ ಗೌಪ್ಯ ಮತದಾನ ವೇಳೆ ಅಕ್ರಮ: ಸಿಪಿಎಂ ಏಜೆಂಟ್ ಹಸ್ತಕ್ಷೇಪ: Video Viral
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರೋಗ್ಯ ಟಿಪ್ಸ್: ಬಿರು ಬಿಸಿಲಿನ ದಾಹಕ್ಕೆ, ತಂಪುಣಿಸುವ 'ಮಜ್ಜಿಗೆ'
ಮೊಸರಿಗೆ ಕೊಂಚ ನೀರು ಸೇರಿಸಿ,ಇದಕ್ಕೆ ಹಸಿಮೆಣಸು, ಉಪ್ಪು, ಇಂಗು, ಜೀರಿಗೆ ಪುಡಿ, ಚಾಟ್ ಮಸಾಲಾ, ಕೊತ್ತಂಬರಿ ಸೊಪ್ಪು, ಶುಂಠಿ, ಬೇವಿನ ಸೊಪ್ಪು, ಬೆಳ್ಳುಳ್ಳಿ ಮೊದಲಾದವುಗಳನ್ನು ಕೊಂಚ ಕೊಂಚವಾಗಿ ಸೇರಿಸಿ ಮಿಕ್ಸಿಯಲ್ಲಿ ಗೊಟಾಯಿಸಿ ಕುಡಿದರೆ ಇದಕ್ಕ
ಬೇಸಿಗೆಯ ಜೊತೆಗೇ ಮಕ್ಕಳ ಪರೀಕ್ಷೆ ಮತ್ತು ರಜೆಗಳೂ ಸಾಲಾಗಿ ಬಂದಿವೆ. ನಿಧಾನಕ್ಕೆ ಕೆಲವು ಹಣ್ಣುಗಳೂ ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ. ಈ ಹೊತ್ತಿನಲ್ಲಿ ಹೊರಹೋಗದೇ ಮಳೆ ಬಂದಾಗ ಹೋಗಲಿಕ್ಕಾಗುತ್ತದೆಯೇ? ಆದರೆ ಸೆಖೆಗೆ ಏನು ಮಾಡುವುದು? ಇದಕ್ಕೆ ಏಸಿಯಲ್ಲಿ ಕುಳಿತುಕೊಳ್ಳುವುದು. ಆದರೆ ಇದರಿಂದ ಹೊರ ಹೋದಂತಾಗುವುದಿಲ್ಲವಲ್ಲ! ವಾವ್..ದೇಹಕ್ಕೆ ತಂಪುಣಿಸುವ ಮಜ್ಜಿಗೆ ಸಾ೦ಬಾರ್ ರೆಸಿಪಿ!
ಇನ್ನೊಂದು ಪರ್ಯಾಯವೆಂದರೆ ಐಸ್ ಕ್ರೀಂ ತಿನ್ನುವುದು, ಇದರಿಂದ ತೂಕ ಹೆಚ್ಚಾಗುತ್ತದಲ್ಲ! ಎಲ್ಲವೂ ನೋಡಬೇಕೆಂದರೆ ತಣ್ಣನೆಯ ಮಜ್ಜಿಗೆ ಕುಡಿಯುವುದೇ ಉತ್ತಮ. ಹೌದು ಆಯುರ್ವೇದದಲ್ಲಿ ಸಾತ್ವಿಕ ಆಹಾರ ಎಂದು ಪರಿಗಣಿಸಲ್ಪಟ್ಟ ಮಜ್ಜಿಗೆ ಬೇಸಿಗೆಯ ದಣಿವನ್ನು ಆರಿಸಲು ಉತ್ತಮವಾಗಿದೆ. ಮಜ್ಜಿಗೆ ಎಂದರೆ ವಾಸ್ತವವಾಗಿ ಮೊಸರಿನಿಂದ ಬೆಣ್ಣೆಯನ್ನು ಕಡೆದು ತೆಗೆದ ಬಳಿಕ ಉಳಿದ ನೀರು. ಆದರೆ ಇದು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗಲು ಸಾಧ್ಯವಿಲ್ಲ. ರುಚಿ ರುಚಿಯಾದ ಮಜ್ಜಿಗೆ ದೋಸೆ ರೆಸಿಪಿ
ಆದ್ದರಿಂದ ಮೊಸರಿಗೆ ಕೊಂಚ ನೀರು ಸೇರಿಸಿ ತೆಳ್ಳಗಾಗಿಸಿ, ಇದಕ್ಕೆ ಹಸಿಮೆಣಸು, ಉಪ್ಪು, ಜೀರಿಗೆ ಪುಡಿ, ಚಾಟ್ ಮಸಾಲಾ, ಕೊತ್ತಂಬರಿ ಸೊಪ್ಪು, ಶುಂಠಿ, ಬೇವಿನ ಸೊಪ್ಪು, ಬೆಳ್ಳುಳ್ಳಿ ಮೊದಲಾದವುಗಳನ್ನು ಕೊಂಚ ಕೊಂಚವಾಗಿ ಸೇರಿಸಿ ಮಿಕ್ಸಿಯಲ್ಲಿ ಗೊಟಾಯಿಸಿ ಕುಡಿದರೆ ಬೇಸಿಗೆಗೆ ಇದಕ್ಕಿಂತ ಉತ್ತಮವಾದ ಪೇಯ ಇನ್ನೊಂದಿಲ್ಲ... ಬನ್ನಿ ಮಜ್ಜಿಗೆಯ ಪ್ರಯೋಜನಗಳೇನು ಎಂಬುದನ್ನು ನೋಡೋಣ.....
ಜೀರ್ಣಕ್ರಿಯೆಗೆ ಬಹಳ ಒಳ್ಳೆಯದು....
ಮಜ್ಜಿಗೆಯಲ್ಲಿ ಮೊಸರು ಮುಖ್ಯವಾಗಿರುವ ಕಾರಣ ಮೊಸರಿನ ಗುಣಗಳೆಲ್ಲವೂ ಇದೆ. ಇದರಲ್ಲಿರುವ ಪ್ರೋಬಯೋಟಿಕ್ಸ್ ಅಥವಾ ಜೀರ್ಣಕ್ರಿಯೆಗೆ ಸಹಕರಿಸುವ ಪೋಷಕಾಂಶಗಳು ಜೀರ್ಣಾಂಗಗಳ ಹೊರೆಯನ್ನು ಕಡಿಮೆ ಮಾಡುತ್ತವೆ. ಅಲ್ಲದೇ ಮಜ್ಜಿಗೆಯಲ್ಲಿ ಸೇರಿಸಿರುವ ಜೀರಿಗೆ ಪುಡಿ ಮೊದಲಾದ ಮಸಾಲೆ ಪದಾರ್ಥಗಳು ಜೀರ್ಣಕ್ರಿಯೆಗೆ ಇನ್ನಷ್ಟು ಸಹಕರಿಸಿ ಜೀರ್ಣಕ್ರಿಯೆಯನ್ನು ಸುಲಭ ಮತ್ತು ಪರಿಪೂರ್ಣಗೊಳಿಸುತ್ತವೆ.
ಹೊಟ್ಟೆ ಉಬ್ಬರಿಕೆ ಮೊದಲಾದ ಸಮಸ್ಯೆಗೆ ರಾಮಬಾಣ
ಸಂಸ್ಕೃತಿಯಲ್ಲಿಯೂ ಅತಿಥಿಗಳು ಹೆಚ್ಚು ಉಂಡಷ್ಟೂ ಹೆಚ್ಚು ಸಂತೋಷಪಡುವುದರಿಂದ ಅತಿಥಿಗಳಿಗೆ ಬೇಡ ಬೇಡ ಎಂದರೂ ಇನ್ನೂ ಕೊಂಚ ಬಡಿಸುತ್ತೇವೆ. ಕಾರಣವಾಗಿ ಹೆಚ್ಚಿನ ಪ್ರಮಾಣದ ಮಸಾಲೆ ಹೊಟ್ಟೆ ಸೇರುತ್ತದೆ. ಇವು ಹೊಟ್ಟೆಯಲ್ಲಿ ಉರಿ, ಆಮ್ಲೀಯತೆ ಮೊದಲಾದ ತೊಂದರೆಗಳನ್ನು ಉಂಟುಮಾಡಬಹುದು. ಆದರೆ ಹಾಲಿನಲ್ಲಿರುವ ಪ್ರೋಟೀನುಗಳು ಮಜ್ಜಿಗೆಯಲ್ಲಿಯೂ ಇದ್ದು ಈ ಉರಿ ತರಿಸುವ ಮಸಾಲೆಗಳನ್ನು ತಟಸ್ಥವಾಗಿಸುತ್ತವೆ. ಆದ್ದರಿಂದ ಊಟದ ಕಡೆಯ ಆಹಾರವಾಗಿ ಮಜ್ಜಿಗೆಯನ್ನು ಸೇವಿಸುವ ಮೂಲಕ ಮಸಾಲೆಗಳ ಕಾರಣ ಎದುರಾಗಬಹುದಾಗಿದ್ದ ಉರಿ, ಆಮ್ಲೀಯತೆ, ಹೊಟ್ಟೆ ಉಬ್ಬರಿಕೆ ಮೊದಲಾದವು ಇಲ್ಲವಾಗುತ್ತವೆ.
ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ
ಮಜ್ಜಿಗೆಯಲ್ಲಿ ಕ್ಯಾಲ್ಸಿಯಂ ಹೊರತಾಗಿ ವಿವಿಧ ಪ್ರೋಟೀನುಗಳು, ವಿಟಮಿನ್ ಬಿ, ಪೊಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿವೆ. ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ಲ್ಯಾಕ್ಟಿಕ್ ಆಮ್ಲವಿದ್ದು ಜಠರದಲ್ಲಿರುವ ಪಾಥೋಜೆನ್ ಮತ್ತು ಕೆಟ್ಟ ಬ್ಯಾಕ್ಟೀರಿಯಾಗಳ ನಿವಾರಣೆಗೆ ಸಹಕರಿಸುತ್ತದೆ. ಪರಿಣಾಮವಾಗಿ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ
ನಿತ್ಯವೂ ಮಜ್ಜಿಗೆಯನ್ನು ಸೇವಿಸುವ ಮೂಲಕ ದೇಹಕ್ಕೆ ಹಲವು ರೀತಿಯ ಲಾಭಗಳಿವೆ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುವುದು, ರಕ್ತದೊತ್ತಡ ಸಮರ್ಪಕವಾಗಿರುವಂತೆ ನೋಡಿಕೊಳ್ಳುವುದು ಮೊದಲಾದವು ನೇರವಾದ ಲಾಭಗಳಾಗಿವೆ.
ದೇಹಕ್ಕೆ ತಂಪುಣಿಸುತ್ತದೆ
ಬೇಸಿಗೆಯ ಬಿಸಿಯಲ್ಲಿ ದೇಹವೂ ಬಿಸಿಯಾಗತೊಡಗುತ್ತದೆ. ಇದನ್ನು ತಣಿಸಲು ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆವರು ಹರಿಯಬೇಕಾಗುತ್ತದೆ. ಆಗ ದೇಹದಿಂದ ನಷ್ಟವಾಗುವ ನೀರನ್ನು ಬೇಗನೇ ಭರ್ತಿಮಾಡಿಕೊಳ್ಳದೇ ಇದ್ದರೆ ದ್ರವದ ಪ್ರಮಾಣ ಕಡಿಮೆಯಾಗಿ ದೇಹ ಹೆಚ್ಚು ಬಿಸಿಯಾಗಲು ಕಾರಣವಾಗುತ್ತದೆ. ಮಜ್ಜಿಗೆಯ ಸೇವನೆ ಈ ತೊಂದರೆಯಿಂದ ತಡೆಯುತ್ತದೆ ಹಾಗೂ ದೇಹವನ್ನು ತಂಪಾಗಿಡಲು ನೆರವಾಗುತ್ತದೆ. ಅಲ್ಲದೇ ರಜೋನಿವೃತ್ತಿ ಸಮಯ ಹತ್ತಿರಾಗುತ್ತಿರುವ ಮಹಿಳೆಯರಿಗೆ ಈ ದಿನಗಳ ಮುನ್ನ ಮತ್ತು ಹಿಂದಿನ ದಿನಗಳಲ್ಲಿ ಎದುರಾಗುವ ಸ್ರಾವದಿಂದಲೂ ಮಜ್ಜಿಗೆ ಉಪಶಮನ ನೀಡುತ್ತದೆ.