Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬೇಸಿಗೆಗೆ ದೇಹವನ್ನು ತಂಪಾಗಿಸುವ ಆಹಾರಗಳು-ತಪ್ಪದೇ ಸೇವಿಸಿ
ದಿನದಿಂದ ದಿನಕ್ಕೆ ಬಿಸಿಲಿನ ತಾಪವು ಹೆಚ್ಚಾಗುತ್ತಾ ಇದ್ದು, ಪ್ರತೀ ದಿನ ಬಿಸಿಲಿನ ಝಳಕ್ಕೆ ಸಿಲುಕುತ್ತಿರುವವರ ಸಂಖ್ಯೆ ಗಣನೀಯವಾಗಿ ಏರುತ್ತಾ ಇದೆ. ಕೆಲವೊಂದು ಕಡೆ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಜಲವೇ ಜೀವನ ಎನ್ನುವ ಮಾತಿದೆ. ಆದರೆ ನೀರು ಮಾತ್ರ ಸಿಗುತ್ತಿಲ್ಲ. ನೀರು ಸಿಗುವಂತಹ ಕಡೆಗಳಲ್ಲಿ ಅದರಲ್ಲಿ ಹಲವಾರು ರೀತಿಯ ಕಲ್ಮಶಗಳು ಒಳಗೊಂಡಿದೆ. ದೇಹದ ಮುಕ್ಕಾಲು ಭಾಗ ನೀರಿನಿಂದ ಆವೃತವಾಗಿದೆ ಎನ್ನಲಾಗುತ್ತಿದೆ. ಇಂತಹ ದೇಹವನ್ನು ಕಾಪಾಡಲು ಹೆಚ್ಚು ಹೆಚ್ಚು ನೀರು ಕುಡಿಯಬೇಕಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಆಗುವ 10 ಲಾಭಗಳು
ನೀರು ಕುಡಿಯದೆ ಇದ್ದರೆ ನಿರ್ಜಲೀಕರಣದಂತಹ ಸಮಸ್ಯೆ ಕಾಡುವುದು. ಬೇಸಿಗೆಯ ಈ ಹೊತ್ತಲ್ಲಿ ನಮ್ಮ ದೇಹವನ್ನು ತೇವಾಂಶದಿಂದ ಇಡುವುದು ಅನಿವಾರ್ಯವಾಗಿದೆ. ಕೇವಲ ನೀರು ಮಾತ್ರವಲ್ಲದೆ ಕೆಲವೊಂದು ಹಣ್ಣುಗಳು ಹಾಗೂ ತರಕಾರಿಗಳು ಕೂಡ ದೇಹವನ್ನು ತಂಪಾಗಿಡಬಲ್ಲದು. ಇದಕ್ಕಾಗಿ ಬೋಲ್ಡ್ ಸ್ಕೈ ದೇಹವನ್ನು ತಂಪಾಗಿಸುವಂತಹ ಕೆಲವೊಂದು ಆಹಾರಗಳ ಬಗ್ಗೆ ನಿಮಗೆ ತಿಳಿಸಿಕೊಡಲಿದೆ. ಇದನ್ನು ಸೇವಿಸಿ ನಿಮ್ಮ ದೇಹವನ್ನು ಬಿಸಿಲಿನಿಂದ ಕಾಪಾಡಿಕೊಳ್ಳಿ.....

ಮೊಸರು
ಮೊಸರು ದೇಹವನ್ನು ತಂಪಾಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಮೊಸರಿನಿಂದ ಮಜ್ಜಿಗೆ, ಲಸ್ಸಿ ಅಥವಾ ತರಕಾರಿ ಹಾಗೂ ಹಣ್ಣುಗಳನ್ನು ಹಾಕಿಕೊಂಡು ಸಲಾಡ್ ಮಾಡಿಕೊಳ್ಳಬಹುದು. ಹಣ್ಣುಗಳಿಂದ ಮಾಡಿರುವಂತಹ ಸಲಾಡ್ ಬೇಸಿಗೆಯಲ್ಲಿ ಸವಿಯಲು ತುಂಬಾ ಒಳ್ಳೆಯದು.ಪ್ರತಿ ದಿನ ಮೊಸರು ಸೇವಿಸಿದರೆ ಖಂಡಿತ ಮೋಸವಿಲ್ಲ

ಎಳನೀರು
ಈಗೀಗ ತುಂಬಾ ದುಬಾರಿಯಾಗುತ್ತಿರುವಂತಹ ಎಳನೀರು ನಮ್ಮ ದೇಹಕ್ಕೆ ತುಂಬಾ ಲಾಭಕಾರಿ. ಇದರಲ್ಲಿ ದೇಹವನ್ನು ತಂಪಾಗಿಸುವ ಹಲವಾರು ಗುಣಗಳು ಇವೆ. ಇದರಲ್ಲಿ ಸಕ್ಕರೆ, ವಿದ್ಯುದ್ವಿಚ್ಛೇದ್ಯಗಳು ಮತ್ತು ಪ್ರಮುಖ ಖನಿಜಾಂಶಗಳು ಇರುವ ಕಾರಣದಿಂದ ಇದು ದೇಹವನ್ನು ತೇವಾಂಶದಿಂದ ಇಡುತ್ತದೆ. ಬೆಳ್ಳಂ ಬೆಳಿಗ್ಗೆ ಎದ್ದು ಎಳೆ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ

ಕಲ್ಲಂಗಡಿ
ರಸ್ತೆ ಬದಿಯಲ್ಲಿ ತುಂಡು ಮಾಡಿ ಇಟ್ಟಿರುವಂತಹ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೆದರುತ್ತಿರಬಹುದು. ಇದಕ್ಕೆ ಹಲವಾರು ಕಾರಣಗಳು ಕೂಡ ಇದೆ. ಆದರೆ ಇಡೀ ಕಲ್ಲಂಗಡಿ ಹಣ್ಣನ್ನು ಮನೆಗೆ ತೆಗೆದುಕೊಂಡು ಹೋಗಿ ಅದನ್ನು ತುಂಡು ಮಾಡಿಕೊಂಡು ತಿನ್ನಿ ಅಥವಾ ಸಕ್ಕರೆ ಹಾಕದೆ ಜ್ಯೂಸ್ ಮಾಡಿಕೊಳ್ಳಿ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ ಗಳು ದೇಹಕ್ಕೆ ತುಂಬಾ ಪರಿಣಾಮಕಾರಿ. ಕಲ್ಲಂಗಡಿ ಜ್ಯೂಸ್: ಬೇಸಿಗೆಗೆ ದೇವರು ಕೊಟ್ಟಿರುವ ವರ!!

ಮುಳ್ಳುಸೌತೆ
ಮುಳ್ಳುಸೌತೆಯಲ್ಲಿ ಇರುವಂತಹ ನಾರಿನಾಂಶವು ಮಲಬದ್ಧತೆಯನ್ನು ದೂರವಿಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಅದರಂತೆ ಇದರ ಪ್ರತಿಯೊಂದು ತುಂಡು ಕೂಡ ತುಂಬಾ ರುಚಿಯಾಗಿರುತ್ತದೆ ಮತ್ತು ಮುಳ್ಳುಸೌತೆ ತಿಂದು ನೀವು ಬೇಸಿಗೆಯಲ್ಲಿ ತಂಪಾಗಿರಬಹುದು.

ಹಸಿರು ತರಕಾರಿಗಳು
ಹಸಿರು ತರಕಾರಿಗಳು ದೇಹಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಬೇಸಿಗೆಯಲ್ಲಿ ಇದನ್ನು ಹೆಚ್ಚು ಸೇವಿಸಿ. ಯಾಕೆಂದರೆ ಇದರಲ್ಲಿ ನೀರಿನಾಂಶ ಹೆಚ್ಚಾಗಿದೆ. ಹಸಿರು ತರಕಾರಿಗಳನ್ನು ಅರೆಬೇಯಿಸಿ ತಿನ್ನಬೇಕು. ಹಸಿರು ಎಲೆ ತರಕಾರಿಗಳ ವೈಶಿಷ್ಟ್ಯವೇನು ಗೊತ್ತೇ?

ಈರುಳ್ಳಿ
ಈರುಳ್ಳಿಯಲ್ಲಿ ತಂಪಾಗಿಸುವ ಒಳ್ಳೆಯ ಗುಣಗಳು ಇವೆ. ಇದನ್ನು ಯಾವುದೇ ಸಾರು, ರೈತಾ, ಸಲಾಡ್ ಮತ್ತು ಚಟ್ನಿಗೆ ಹಾಕಿ ಸೇವಿಸಬಹುದು. ಇದು ದೇಹವನ್ನು ತಂಪಾಗಿಡುತ್ತದೆ. ಕ್ವೆರ್ಸೆಟಿನ್ ಹೊಂದಿರುವಂತಹ ಕೆಂಪು ಈರುಳ್ಳಿಯು ಅಲರ್ಜಿಯನ್ನು ಕಡಿಮೆ ಮಾಡುತ್ತದೆ. ಈರುಳ್ಳಿಯನ್ನು ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಬಿಸಿಲಿನಾಘಾತದಿಂದ ಮುಕ್ತಿ ಸಿಗುವುದು.

ದೇಹವನ್ನು ಹೈಡ್ರೇಟ್ ಮಾಡಿಕೊಳ್ಳಿ
ಬೇಸಿಗೆ ಸಮಯದಲ್ಲಿ, ಬೆವರು ಮತ್ತು ಶಾಕ ನಿಮ್ಮ ದೇಹವನ್ನು ನಿರ್ಜಲೀಕರಣಗೊಳಿಸುತ್ತದೆ. ನೀರಿನ ಕೊರತೆ ನಿಮ್ಮ ದೇಹಕ್ಕೆ ಹಾನಿಕಾರಕ. ನಿಮ್ಮನ್ನು ಇನ್ನಷ್ಟು ಹಸಿವೆಗೆ ಇದು ದೂಡಬಹುದು. ತೂಕ ಇಳಿಸುವ ಮನಸ್ಸತ್ವವನ್ನು ಹೊಂದಿರುವವರು ಅತೀ ಹೆಚ್ಚು ನೀರನ್ನು ಕುಡಿಯಲೇಬೇಕು.

ಸೋಡಾಗಳನ್ನು ಸೇವಿಸದಿರಿ
ತಂಪಾದ ಪಾನೀಯಗಳನ್ನು ಬೇಸಿಗೆಯಲ್ಲಿ ಸೇವಿಸುವುದು ದೇಹಕ್ಕೆ ಹಿತಕಾರಿಯೇ. ಆದರೆ ಸೋಡಾದಿಂದ ಆದಷ್ಟು ದೂರವಿರುವುದು ಉತ್ತಮ. ನಿಮ್ಮ ದೇಹಕ್ಕೆ ಹಾನಿಕರವಾದ ತಂಪು ಪಾನೀಯ ಇದಾಗಿದೆ.



Click it and Unblock the Notifications











