Just In
- 4 min ago ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- 1 hr ago ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- 2 hrs ago ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- 4 hrs ago ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
Don't Miss
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಳೆಗಾಲದಲ್ಲಿ ಸಾಧ್ಯವಾದಷ್ಟು ಇಂತಹ ಹಣ್ಣುಗಳನ್ನು ಸರಿಯಾಗಿ ತಿನ್ನಿ!
ಹೊರಗಡೆ ಕವಿದಿರುವ ಕಾರ್ಮೋಡ, ಮನೆಯೊಳಗೆ ಕೂತಿರುವ ನಮ್ಮ ಮನಸ್ಸಿಗೂ ಇದೇ ಕಾರ್ಮೋಡ ಆವರಿಸಿರುವುದು. ಮಳೆಗಾಲದಲ್ಲಿ ತುಂಬಾ ಉದಾಸೀನ ಭಾವ ಕಾಡುತ್ತಿರುತ್ತದೆ. ಇಂತಹ ಸಮಯದಲ್ಲಿ ಯಾವುದೇ ಕೆಲಸ ಮಾಡಲು ಮನಸ್ಸು ಕೂಡ ಆಗುವುದಿಲ್ಲ. ಹೊರಗಡೆ ಮಳೆ ಬರುತ್ತಾ ಇದ್ದರೆ ಏನಾದರೂ ಬಿಸಿಬಿಸಿಯಾಗಿರುವುದನ್ನು ತಿನ್ನಬೇಕೆಂದು ಮನಸ್ಸು ಹೇಳುತ್ತಾ ಇರುತ್ತದೆ. ಬಿಸಿಬಿಸಿಯಾದ ತಿಂಡಿಯೊಂದಿಗೆ ದಿನದ ಆರಂಭ ಮಾಡಿದರೆ ಮನಸ್ಸು ಉಲ್ಲಾಸಿತವಾಗಿರುವುದು.
ಬೆಳಗ್ಗಿನ ಉಪಾಹಾರಕ್ಕೆ ಹಣ್ಣುಗಳನ್ನು ಸೇವಿಸಿದರೆ ಅದರಿಂದ ದೇಹವು ತುಂಬಾ ಆರಾಮ ಮತ್ತು ಆರೋಗ್ಯವಾಗಿರುವುದು. ಮಳೆಗಾಲದಲ್ಲಿ ದೇಹವು ಹಲವಾರು ಸೋಂಕು, ಅಲರ್ಜಿ ಮತ್ತು ಅಜೀರ್ಣ ಸಮಸ್ಯೆಯಿಂದ ಬಳುವುದು. ಇಂತಹ ಕಾಯಿಲೆಗಳ ವಿರುದ್ಧ ಹೋರಾಡಲು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಾಗಿರಬೇಕು. ಜೀರ್ಣಕ್ರಿಯೆ ಪ್ರಕ್ರಿಯೆ ಕೂಡ ಮಳೆಗಾಲದಲ್ಲಿ ಕಡಿಮೆ ಇರುವುದು.
ಅದ್ಭುತ ಆರೋಗ್ಯ ಗುಣ ಹೊಂದಿರುವ ಹಣ್ಣಿನ ಸಿಪ್ಪೆಗಳು
ಇಂತಹ ಸಮಯದಲ್ಲಿ ಸರಿಯಾದ ಆಹಾರ ಸೇವನೆ ಅತೀ ಅಗತ್ಯ. ಮಳೆಗಾಲದಲ್ಲಿ ಎಣ್ಣೆಯುಕ್ತ ಆಹಾರ, ಬೀದಿಬದಿ ಆಹಾರ ಮತ್ತು ಒಮ್ಮೆಲೇ ತಯಾರಿಸಿ ಇಟ್ಟಂತಹ ಆಹಾರ ಸೇವಿಸಿದರೆ ಅದರಿಂದ ಹೊಟ್ಟೆಗೆ ಸಮಸ್ಯೆಯಾಗಬಹುದು. ಮಳೆಗಾಲದಲ್ಲಿ ಸಿಗುವಂತಹ ಕೆಲವು ಹಣ್ಣುಗಳು ಕಾಯಿಲೆ ದೂರ ಮಾಡುವ ಗುಣ ಹೊಂದಿದೆ. ಮಳೆಗಾಲದಲ್ಲಿ ಸೇವಿಸುವ ಹಣ್ಣೂಗಳ ಬಗ್ಗೆ ಬೋಲ್ಡ್ ಸ್ಕೈ ನಿಮಗೆ ಹೇಳಿಕೊಡಲಿದೆ.....
ಜಾಮೂನು
ಮಳೆಗಾಲದಲ್ಲಿ ಸೇವಿಸುವಂತಹ ಪ್ರಮುಖ ಹಣ್ಣುಗಳಲ್ಲಿ ಜಾಮೂನು ಪ್ರಮುಖವಾಗಿರುವಂತದ್ದಾಗಿದೆ. ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆಯಿದೆ ಮತ್ತು ಕಬ್ಬಿನಾಂಶ, ಫಾಲಟೆ, ಪೊಟಾಶಿಯಂ ಮತ್ತು ವಿಟಮಿನ್ ನಂತಹ ಹಲವಾರು ಪೋಷಕಾಂಶಗಳಿವೆ. ಇದನ್ನು ಮಳೆಗಾಲದಲ್ಲಿ ಸೇವಿಸಬೇಕು.
ಲಿಚಿ
ಮಳೆಗಾಲದಲ್ಲಿ ಸೇವಿಸಬಹುದಾದ ಮತ್ತೊಂದು ಪ್ರಮುಖ ಹಣ್ಣಿದಂರೆ ಲಿಚಿ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುವ ಕಾರಣದಿಂದ ದೇಹದಲ್ಲಿ ಪ್ರತಿರೋಧಕ ಶಕ್ತಿ ಶಕ್ತಿ ಹೆಚ್ಚಿಸಿ ದೇಹವನ್ನು ಬಲಿಷ್ಠವಾಗಿಸುವುದು. ಲಿಚಿಯಲ್ಲಿ ಆ್ಯಂಟಿಆಕ್ಸಿಡೆಂಟ್ ಸಮೃದ್ಧವಾಗಿದೆ. ಇದರಿಂದ ತೂಕ ಕಳೆದುಕೊಳ್ಳಲು ಸಾಧ್ಯವಾಗುವುದು.
ಪ್ಲಮ್ಸ್
ಇದು ದೇಹದಲ್ಲಿನ ಪ್ರತಿರೋಧಕ ಶಕ್ತಿಯನ್ನು ಸುಧಾರಿಸುವುದು. ಮಳೆಗಾಲದಲ್ಲಿ ಸಾಮಾನ್ಯವಾಗಿರುವ ಶೀತ ಮತ್ತು ಜ್ವರದಂತಹ ಸೋಂಕಿನಿಂದ ಇದು ದೇಹವನ್ನು ರಕ್ಷಿಸುವುದು.
ಚೆರ್ರಿ
ಮಳೆಗಾಲದಲ್ಲಿ ಹೆಚ್ಚಾಗಿ ಸಿಗುವ ಹಣ್ಣಾಗಿರುವ ಚೆರ್ರಿ ಸೋಂಕಿನ ವಿರುದ್ಧ ಹೋರಾಡಲು ನೆರವಾಗುವುದು. ಇದರಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್ ಮೆದುಳಿಗೆ ಶಮನ ನೀಡುವುದು ಮತ್ತು ಮೆದುಳಿಗೆ ವಿಶ್ರಾಂತಿ ನೀಡುವುದು.
ಪೀಚ್
ಮಳೆಗಾಲದಲ್ಲಿ ಸಿಗುವಂತಹ ಹಣ್ಣುಗಳಲ್ಲಿ ಒಂದಾಗಿರುವ ಪೀಚ್ ನಲ್ಲಿ ಕ್ಯಾಲರಿ ತುಂಬಾ ಕಡಿಮೆಯಿದೆ ಮತ್ತು ನಾರಿನಾಂಶವು ಹೆಚ್ಚಾಗಿದೆ. ಇದರಿಂದ ತೂಕ ಕಳೆದುಕೊಳ್ಳಲು ನೆರವಾಗುವುದು. ಇದರಲ್ಲಿರುವ ವಿಟಮಿನ್ ಸಿ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವುದು.
ದಾಳಿಂಬೆ
ದಾಳಿಂಬೆಯಲ್ಲಿ ಹಲವಾರು ರೀತಿಯ ಪೋಷಕಾಂಶಗಳಿವೆ. ಇದು ಮಳೆಗಾಲದಲ್ಲಿ ದೇಹದ ಪ್ರತಿರೋಧಕ ಶಕ್ತಿ ಹೆಚ್ಚಿಸುವುದು. ಇದರ ಬೀಜಗಳಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇರುವ ಕಾರಣದಿಂದ ಇದನ್ನು ಸೇವಿಸುವುದು ದೇಹಕ್ಕೆ ತುಂಬಾ ಹಿತಕರ.
ಸೇಬು
ದಿನಕ್ಕೊಂದು ಸೇಬು ಸೇವಿಸಿದರೆ ನೀವು ವೈದ್ಯರಿಂದ ದೂರವಿರಬಹುದು ಎನ್ನುವ ಮಾತಿದೆ. ಮಳೆಗಾಲದಲ್ಲಿ ಇದು ಹೆಚ್ಚಾಗಿ ಕಾರ್ಯನಿರ್ವಹಿಸುವುದು. ಮಳೆಗಾಲದಲ್ಲಿ ಕೆಲವು ತುಂಡು ಸೇಬು ಸೇವಿಸುವುದರಿಂದ ಹಲವಾರು ರೀತಿಯ ರೋಗಗಳಿಂದ ದೂರವಿರುವುದು. ಮಳೆಗಾಲದಲ್ಲಿ ಸೇಬು ಸೇವಿಸಿದರೆ ಹೆಚ್ಚಿನ ಲಾಭವಿದೆ.
ಬಾಳೆಹಣ್ಣು
ಬಾಳೆಹಣ್ಣಿನಲ್ಲಿ ವಿಟಮಿನ್ ಮತ್ತು ಖನಿಜಾಂಶಗಳು ಸಮೃದ್ಧವಾಗಿದೆ. ಮಳೆಗಾಲದಲ್ಲಿ ಬಾಳೆಹಣ್ಣು ಸೇವಿಸುವುದರಿಂದ ಇದು ಜೀರ್ಣಕ್ರಿಯೆ ಪ್ರಕ್ರಿಯೆಗೆ ತುಂಬಾ ನೆರವಾಗಲಿದೆ. ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸಿದರೆ ಅದರಿಂದ ಶೀತವಾಗುವ ಸಾಧ್ಯತೆಯಿದೆ.
ದಿನಕ್ಕೆರಡು ಬಾಳೆಹಣ್ಣು ಸೇವಿಸಿ, ವೈದ್ಯರಿಂದ ದೂರವಿರಿ!
ಪೀಯರ್ಸ್
ಮಳೆಗಾಲದಲ್ಲಿ ಸೋಂಕಿನ ವಿರುದ್ಧ ಹೋರಾಡಲು ದೇಹಕ್ಕೆ ಹೆಚ್ಚಿನ ಮಟ್ಟದ ವಿಟಮಿನ್ ಗಳ ಅಗತ್ಯವಿರುತ್ತದೆ. ಮಳೆಗಾಲದಲ್ಲಿ ವಾತಾವರಣದಲ್ಲಿ ಆರ್ದ್ರತೆ ಹೆಚ್ಚಾಗಿರುವ ಕಾರಣದಿಂದ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಾಗಿರುವುದು. ಮಳೆಗಾಲದಲ್ಲಿ ಪೀಯರ್ಸ್ ಸೇವಿಸಿದರೆ ಅದರಿಂದ ದೇಹಕ್ಕೆ ತುಂಬಾ ಒಳ್ಳೆಯದು.
ಪಪ್ಪಾಯಿ
ಪಪ್ಪಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚು ಮಾಡಲು ವಿಟಮಿನ್ ಅತೀ ಅಗತ್ಯವಾಗಿ ಬೇಕು. ಇದು ರೋಗಗಳ ವಿರುದ್ಧ ಹೋರಾಡುವುದು. ಇದರಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೂ ನೆರವಾಗುವುದು.