Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಅಡುಗೆಮನೆಯ ರಾಣಿ, ಅರಿಶಿನದ ಚಿನ್ನದಂತಹ ಗುಣಗಳು
ಅರಿಶಿನವನ್ನು ಹಿಂದಿನ ಕಾಲದಿಂದಲೂ ಭಾರತೀಯರು ಅಡುಗೆ ಹಾಗೂ ಕೆಲವೊಂದು ಔಷಧಿಗಳಲ್ಲಿ ಬಳಸುತ್ತಾ ಬಂದಿದ್ದಾರೆ. ಇದರಲ್ಲಿರುವ ಕೆಲವೊಂದು ಔಷಧಿಯ ಗುಣಗಳು ತುಂಬಾ ಪರಿಣಾಮಕಾರಿಯಾಗಿ ರೋಗಗಳನ್ನು ನಿವಾರಣೆ ಮಾಡುತ್ತದೆ
ಅರಿಶಿನವನ್ನು ಹಿಂದಿನ ಕಾಲದಿಂದಲೂ ಭಾರತೀಯರು ಅಡುಗೆ ಹಾಗೂ ಕೆಲವೊಂದು ಔಷಧಿಗಳಲ್ಲಿ ಬಳಸುತ್ತಾ ಬಂದಿದ್ದಾರೆ. ಇದರಲ್ಲಿರುವ ಕೆಲವೊಂದು ಔಷಧಿಯ ಗುಣಗಳು ತುಂಬಾ ಪರಿಣಾಮಕಾರಿಯಾಗಿ ರೋಗಗಳನ್ನು ನಿವಾರಣೆ ಮಾಡುತ್ತದೆ ಮತ್ತು ಇನ್ನು ಕೆಲವು ಕಾಯಿಲೆಗಳು ಬರದಂತೆ ತಡೆಯುತ್ತದೆ. ಇದರಿಂದ ಅರಿಶಿನವನ್ನು ಹೆಚ್ಚಾಗಿ ಅಡುಗೆಗಳಲ್ಲಿ ಬಳಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮನಸ್ಸನ್ನು ಹಿಂಡುವ ಖಿನ್ನತೆಯ ನಿಯಂತ್ರಣಕ್ಕೆ- ಅರಿಶಿನ ಜ್ಯೂಸ್
ಬನ್ನಿ ಇಂದು ಬೋಲ್ಡ್ ಸ್ಕೈ ಈ ಲೇಖನದಲ್ಲಿ ಎರಡು ಪ್ರಮುಖ ಕಾಯಿಲೆಗಳಾದ ಯಕೃತ್ ಮತ್ತು ಮೆದುಳಿಗೆ ಸಂಬಂಧಿಸಿದ ಕಾಯಿಲೆಯನ್ನು ನಿವಾರಿಸಲು ಅರಿಶಿನವು ಹೇಗೆ ನೆರವಾಗಲಿದೆ ಎಂದು ನಿಮಗೆ ತಿಳಿಸಿಕೊಡಲಾಗುವುದು. ಅರಿಶಿನದಲ್ಲಿ ಉರಿಯೂತ ಶಮನಕಾರಿ ಹಾಗೂ ಆ್ಯಂಟಿಆ್ಸಕ್ಸಿಡೆಂಟ್ ಗುಣಗಳು ಸಮೃದ್ಧವಾಗಿದೆ. ಅಲ್ಲದೆ ಇದರಲ್ಲಿರುವ ಕುರ್ಕುಮಿನ್ ಎನ್ನುವಂತಹ ಅಂಶವು ಯಕೃತ್ನ ಉರಿಯೂತವನ್ನು ಕಡಿಮೆ ಮಾಡಿಕೊಂಡು ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆ ಮಾಡುವುದು. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
ಕುರ್ಕುಮಿನ್ನ ಮತ್ತೊಂದು ಲಾಭವೆಂದರೆ ಇದು ಬೆಟಾ ಅಮ್ಲಯ್ಡ್ ಪದರಗಳು ನಿರ್ಮಾಣವಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಅಲ್ಝೆಮರ್ ಕಾಯಿಲೆಯನ್ನು ತಡೆಯಬಹುದು. ಅದರಲ್ಲಿಯೂ ಅರಿಶಿನದೊಂದಿಗೆ ತೆಂಗಿನ ಹಾಲನ್ನು ಬಳಸಿದಾಗ ಇದರಲ್ಲಿ ಇರುವಂತಹ ಮಧ್ಯಮ ಸರಪಳಿಯ ಗ್ಲಿಸರೈಡ್ಗಳು ಖಿನ್ನತೆ ಬರದಂತೆ ನೋಡಿಕೊಂಡು ನೆನಪಿನ ಶಕ್ತಿಯ ಕಳೆದುಕೊಳ್ಳುವುದನ್ನು ತಡೆಯುವುದು ಮತ್ತು ಯಕೃತ್ ಅನ್ನು ಶುದ್ಧೀಕರಿಸಲು ನೆರವಾಗುವುದು.....

1#
ಒಂದು ಚಮಚ ಅರಿಶಿನ ತೆಗೆದುಕೊಳ್ಳಿ.

2#
ಒಂದು ಚಮಚ ತೆಂಗಿನ ಎಣ್ಣೆ

3#
ಎರಡು ಕಪ್ ತೆಂಗಿನ ಹಾಲು

4#
ಒಂದು ಚಿಟಿಕೆ ಕರಿಮೆಣಸಿನ ಹುಡಿ

5#
ಈ ಎಲ್ಲಾ ಸಾಮಗ್ರಿಗಳನ್ನು ಒಂದು ತವಾಗೆ ಹಾಕಿ ಬಿಸಿ ಮಾಡಿ.

5#
ಈ ಪಾನೀಯವನ್ನು ಬಿಸಿಯಾಗಿರುವಾಗಲೇ ಕುಡಿಯಿರಿ. ಅಥವಾ ಇದನ್ನು ಸೂಪ್ ಅಥವಾ ಪದಾರ್ಥಗಳಿಗೆ ಬಳಸಬಹುದು. ಇದನ್ನು ಪ್ರತೀದಿನ ಸೇವಿಸಿ.



Click it and Unblock the Notifications