Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಅಡುಗೆಮನೆಯ ರಾಣಿ, ಅರಿಶಿನದ ಚಿನ್ನದಂತಹ ಗುಣಗಳು
ಅರಿಶಿನವನ್ನು ಹಿಂದಿನ ಕಾಲದಿಂದಲೂ ಭಾರತೀಯರು ಅಡುಗೆ ಹಾಗೂ ಕೆಲವೊಂದು ಔಷಧಿಗಳಲ್ಲಿ ಬಳಸುತ್ತಾ ಬಂದಿದ್ದಾರೆ. ಇದರಲ್ಲಿರುವ ಕೆಲವೊಂದು ಔಷಧಿಯ ಗುಣಗಳು ತುಂಬಾ ಪರಿಣಾಮಕಾರಿಯಾಗಿ ರೋಗಗಳನ್ನು ನಿವಾರಣೆ ಮಾಡುತ್ತದೆ
ಅರಿಶಿನವನ್ನು ಹಿಂದಿನ ಕಾಲದಿಂದಲೂ ಭಾರತೀಯರು ಅಡುಗೆ ಹಾಗೂ ಕೆಲವೊಂದು ಔಷಧಿಗಳಲ್ಲಿ ಬಳಸುತ್ತಾ ಬಂದಿದ್ದಾರೆ. ಇದರಲ್ಲಿರುವ ಕೆಲವೊಂದು ಔಷಧಿಯ ಗುಣಗಳು ತುಂಬಾ ಪರಿಣಾಮಕಾರಿಯಾಗಿ ರೋಗಗಳನ್ನು ನಿವಾರಣೆ ಮಾಡುತ್ತದೆ ಮತ್ತು ಇನ್ನು ಕೆಲವು ಕಾಯಿಲೆಗಳು ಬರದಂತೆ ತಡೆಯುತ್ತದೆ. ಇದರಿಂದ ಅರಿಶಿನವನ್ನು ಹೆಚ್ಚಾಗಿ ಅಡುಗೆಗಳಲ್ಲಿ ಬಳಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮನಸ್ಸನ್ನು ಹಿಂಡುವ ಖಿನ್ನತೆಯ ನಿಯಂತ್ರಣಕ್ಕೆ- ಅರಿಶಿನ ಜ್ಯೂಸ್
ಬನ್ನಿ ಇಂದು ಬೋಲ್ಡ್ ಸ್ಕೈ ಈ ಲೇಖನದಲ್ಲಿ ಎರಡು ಪ್ರಮುಖ ಕಾಯಿಲೆಗಳಾದ ಯಕೃತ್ ಮತ್ತು ಮೆದುಳಿಗೆ ಸಂಬಂಧಿಸಿದ ಕಾಯಿಲೆಯನ್ನು ನಿವಾರಿಸಲು ಅರಿಶಿನವು ಹೇಗೆ ನೆರವಾಗಲಿದೆ ಎಂದು ನಿಮಗೆ ತಿಳಿಸಿಕೊಡಲಾಗುವುದು. ಅರಿಶಿನದಲ್ಲಿ ಉರಿಯೂತ ಶಮನಕಾರಿ ಹಾಗೂ ಆ್ಯಂಟಿಆ್ಸಕ್ಸಿಡೆಂಟ್ ಗುಣಗಳು ಸಮೃದ್ಧವಾಗಿದೆ. ಅಲ್ಲದೆ ಇದರಲ್ಲಿರುವ ಕುರ್ಕುಮಿನ್ ಎನ್ನುವಂತಹ ಅಂಶವು ಯಕೃತ್ನ ಉರಿಯೂತವನ್ನು ಕಡಿಮೆ ಮಾಡಿಕೊಂಡು ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆ ಮಾಡುವುದು. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
ಕುರ್ಕುಮಿನ್ನ ಮತ್ತೊಂದು ಲಾಭವೆಂದರೆ ಇದು ಬೆಟಾ ಅಮ್ಲಯ್ಡ್ ಪದರಗಳು ನಿರ್ಮಾಣವಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಅಲ್ಝೆಮರ್ ಕಾಯಿಲೆಯನ್ನು ತಡೆಯಬಹುದು. ಅದರಲ್ಲಿಯೂ ಅರಿಶಿನದೊಂದಿಗೆ ತೆಂಗಿನ ಹಾಲನ್ನು ಬಳಸಿದಾಗ ಇದರಲ್ಲಿ ಇರುವಂತಹ ಮಧ್ಯಮ ಸರಪಳಿಯ ಗ್ಲಿಸರೈಡ್ಗಳು ಖಿನ್ನತೆ ಬರದಂತೆ ನೋಡಿಕೊಂಡು ನೆನಪಿನ ಶಕ್ತಿಯ ಕಳೆದುಕೊಳ್ಳುವುದನ್ನು ತಡೆಯುವುದು ಮತ್ತು ಯಕೃತ್ ಅನ್ನು ಶುದ್ಧೀಕರಿಸಲು ನೆರವಾಗುವುದು.....

1#
ಒಂದು ಚಮಚ ಅರಿಶಿನ ತೆಗೆದುಕೊಳ್ಳಿ.

2#
ಒಂದು ಚಮಚ ತೆಂಗಿನ ಎಣ್ಣೆ

3#
ಎರಡು ಕಪ್ ತೆಂಗಿನ ಹಾಲು

4#
ಒಂದು ಚಿಟಿಕೆ ಕರಿಮೆಣಸಿನ ಹುಡಿ

5#
ಈ ಎಲ್ಲಾ ಸಾಮಗ್ರಿಗಳನ್ನು ಒಂದು ತವಾಗೆ ಹಾಕಿ ಬಿಸಿ ಮಾಡಿ.

5#
ಈ ಪಾನೀಯವನ್ನು ಬಿಸಿಯಾಗಿರುವಾಗಲೇ ಕುಡಿಯಿರಿ. ಅಥವಾ ಇದನ್ನು ಸೂಪ್ ಅಥವಾ ಪದಾರ್ಥಗಳಿಗೆ ಬಳಸಬಹುದು. ಇದನ್ನು ಪ್ರತೀದಿನ ಸೇವಿಸಿ.



Click it and Unblock the Notifications
