Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಅರಿಶಿನ ಹಾಕಿ ಕುದಿಸಿದ ನೀರು ಕುಡಿದರೆ, ಲಿವರ್-ಮೆದುಳಿಗೆ ಬಹಳ ಒಳ್ಳೆಯದು
ಪ್ರತಿದಿನವೂ ಕೊಂಚ ಅರಿಶಿನದೊಂದಿಗೆ ಕುದಿಸಿದ ನೀರನ್ನು ಕುಡಿಯುತ್ತಾ ಬಂದರೆ ಹಲವು ರೀತಿಯ ಪ್ರಯೋಜನಗಳನ್ನು ಪಡೆಯಬಹುದು. ಈ ನೀರಿನ ಸೇವನೆಯಿಂದ ದಿನವನ್ನು ಪ್ರಾರಂಭಿಸಿದರೆ ಇಡಿಯ ದಿನ ಉಲ್ಲಾಸದಿಂದಿರಲು ಸಾಧ್ಯವಾಗುತ್ತದೆ.
ಅರಿಶಿನ ಎಷ್ಟು ಪ್ರಯೋಜನಕಾರಿ ಎಂದು ನಾವೆಲ್ಲಾ ಅರಿತಿದ್ದೇವೆ. ಇದರ ಆರೋಗ್ಯವೃದ್ದಿ ಗುಣದ ಕಾರಣ ಈ ಪುಡಿಯನ್ನು ಹಲವಾರು ತೊಂದರೆಗಳಿಗೆ ಔಷಧಿಯ ರೂಪದಲ್ಲಿ ಬಳಸಲಾಗುತ್ತದೆ. ಆದರೆ ಅರಿಶಿನ ಪುಡಿಯನ್ನು ಹಾಕಿ ಕುದಿಸಿದ ನೀರನ್ನು ಕುಡಿಯುವುದರಿಂದಲೂ ಹಲವರು ಆರೋಗ್ಯಕರ ಪ್ರಯೋಜನಗಳಿವೆ ಎಂದು ಗೊತ್ತಿತ್ತೇ? ವಿಶೇಷವಾಗಿ ದೇಹದ ಯಕೃತ್ (ಲಿವರ್) ಮತ್ತು ಮೆದುಳಿಗೆ ಈ ನೀರು ಉತ್ತಮವಾಗಿದೆ. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
ಈ ನೀರಿನ ಸೇವನೆಯಿಂದ ಯಾವ ಪ್ರಯೋಜನಗಳಿವೆ ಎಂಬುದನ್ನು ಇಂದಿನ ಲೇಖನದಲ್ಲಿ ಸಂಗ್ರಹಿಸಲಾಗಿದೆ. ಪ್ರತಿದಿನವೂ ಕೊಂಚ ಅರಿಶಿನದೊಂದಿಗೆ ಕುದಿಸಿದ ನೀರನ್ನು ಕುಡಿಯುತ್ತಾ ಬಂದರೆ ಹಲವು ರೀತಿಯ ಪ್ರಯೋಜನಗಳನ್ನು ಪಡೆಯಬಹುದು. ಈ ನೀರಿನ ಸೇವನೆಯಿಂದ ದಿನವನ್ನು ಪ್ರಾರಂಭಿಸಿದರೆ ಇಡಿಯ ದಿನ ಉಲ್ಲಾಸದಿಂದಿರಲು ಸಾಧ್ಯವಾಗುತ್ತದೆ.
ಅಲ್ಲದೇ ಇದರ ಸೇವನೆಯಿಂದ ಹಲವಾರು ಬಗೆಯ ಬ್ಯಾಕ್ಟೀರಿಯಾ, ವೈರಸ್ಸುಗಳ ವಿರುದ್ಧ ರಕ್ಷಣೆ ಮತ್ತು ಉರಿಯೂತ ಹಾಗೂ ವಿಕಿರಣದ ದುಷ್ಪರಿಣಾಮಗಳ ವಿರುದ್ಧವೂ ರಕ್ಷಣೆ ಒದಗಿಸುತ್ತದೆ. ವಿಶೇಷವಾಗಿ ಮೆದುಳು ಮತ್ತು ಯಕೃತ್ನ ಕ್ಷಮತೆಯನ್ನು ಹೆಚ್ಚಿಸುತ್ತದೆ...ಹಾಗಾದರೆ ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ನೋಡೋಣ...

ಮೆದುಳಿನ ಕ್ಷಮತೆ ಹೆಚ್ಚಿಸಲು ಅರಿಶಿನದ ನೀರು
ಅರಿಶಿನದಲಿರುವ ಕುರ್ಕುಮಿನ್ ಎಂಬ ಪೋಷಕಾಂಶ ಅಲ್ಜೀಮರ್ಸ್ ಕಾಯಿಲೆಗೆ ಶಮನ ನೀಡುವ ಗುಣ ಹೊಂದಿದೆ. ಅಲ್ಲದೇ ಈ ಕಾಯಿಲೆ ಬರಲು ಕಾರಣವಾಗುವ beta-amyloid plaque ಎಂಬ ಕಣಗಳು ಮೂಡದಂತೆ ತಡೆಯುವ ಮೂಲಕ ಈ ಕಾಯಿಲೆಯನ್ನು ದೂರವಿರಿಸುತ್ತದೆ. ಅಲ್ಲದೇ ಮೆದುಳಿನ ಕ್ಷಮತೆಯನ್ನೂ ಹೆಚ್ಚಿಸುತ್ತದೆ.

ಯಕೃತ್ನ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ
ಒಂದು ಸಂಶೋಧನೆಯ ಪ್ರಕಾರ ಅರಿಶಿನದಲ್ಲಿರುವ ಪ್ರಬಲ ಉರಿಯೂತ ನಿವಾರಕ ಮತ್ತು ಆಂಟಿ ಆಕ್ಸಿಡೆಂಟ್ ಗುಣ ಯಕೃತ್ನ ಕಾರ್ಯಕ್ಷಮತೆಗೆ ಅತಿ ಹೆಚ್ಚು ಸಹಕಾರ ನೀಡುವ ಮೂಲಕ ಯಕೃತ್ನ ಕ್ಷಮತೆಯನ್ನು ಹೆಚ್ಚಿಸುತ್ತದೆ.

ಕ್ಯಾನ್ಸರ್ನಿಂದ ರಕ್ಷಣೆ ನೀಡುತ್ತದೆ
ಇದರಲ್ಲಿರುವ ಕುರ್ಕುಮಿನ್ ಪೋಷಕಾಂಶದ ನೆರವಿನಿಂದ ಯಕೃತ್ ಕ್ಯಾನ್ಸರ್ ಬರುವ ಸಾಧ್ಯತೆ ಅಪಾರವಾಗಿ ಕಡಿಮೆಯಾಗುತ್ತದೆ. ಯಕೃತ್ ನಲ್ಲಿರುವ ಕೆಡಕುಕಾರಿ ಕಣಗಳ ಪರಿಣಾಮವನ್ನು ಕಡಿಮೆಗೊಳಿಸುವ ಮೂಲಕ ಕ್ಯಾನ್ಸರ್ ನಿಂದ ರಕ್ಷಣೆ ನೀಡುತ್ತದೆ. ಈ ನೀರನ್ನು ತಯಾರಿಸುವ ಬಗೆಯನ್ನು ಈಗ ನೋಡೋಣ:

ಅಗತ್ಯವಿರುವ ಸಾಮಾಗ್ರಿಗಳು
*¼ ಚಿಕ್ಕ ಚಮಚ ಅರಿಶಿನ ಪುಡಿ

ಅಗತ್ಯವಿರುವ ಸಾಮಾಗ್ರಿಗಳು
*1-2 ಕಪ್ ನೀರು

ತಯಾರಿಸುವ ವಿಧಾನ
ಮೊದಲು ನೀರನ್ನು ಬಿಸಿಮಾಡಿ, ಕುದಿಯಲು ಆರಂಭವಾದೊಡನೆ ಅರಿಶಿನ ಪುಡಿಯನ್ನು ಬೆರೆಸಿ ಮಧ್ಯಮ ಉರಿಯಲ್ಲಿ ಇನ್ನೂ ಹತ್ತು ನಿಮಿಷ ಕುದಿಯಲು ಬಿಡಿ.

ತಯಾರಿಸುವ ವಿಧಾನ
#2 ಬಳಿಕ ಉರಿ ಆರಿಸಿ ತಣಿಯಲು ಬಿಡಿ. ಉಗುರುಬೆಚ್ಚನೆ ತಣಿದ ಬಳಿಕ ಕುಡಿಯಿರಿ. ಅಡುಗೆಮನೆಯ ರಾಣಿ, ಅರಿಶಿನದ ಚಿನ್ನದಂತಹ ಗುಣಗಳು



Click it and Unblock the Notifications
