Latest Updates
-
ಹವಾಮಾನ ಇಲಾಖೆ ಎಚ್ಚರಿಕೆ: ಬಿರುಗಾಳಿ ಮಳೆಯಲ್ಲಿ ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ಸಂಬಂಧಗಳ ಆತಂಕ ಕಾಡ್ತಿದೆಯಾ? ನೆಮ್ಮದಿ ನೀಡುವ ಉಚಿತ ಸಹಾಯವಾಣಿಗಳು -
IMD ಮಳೆ ಮುನ್ಸೂಚನೆ: ಬಾಲ್ಕನಿ ಸುರಕ್ಷತೆಗೆ ಈ ಕ್ರಮಗಳನ್ನು ಪಾಲಿಸಿ -
ಆರೋಗ್ಯಕರ ಆಹಾರ ಪದ್ಧತಿ: ಬೇಸಿಗೆಯಲ್ಲಿ ಲವಲವಿಕೆಯಿಂದ ಇರಲು ಹೀಗೆ ಮಾಡಿ -
ಅನುಷ್ಕಾ ಶರ್ಮಾ ಸ್ಟೇಡಿಯಂ-ಕೋರ್ ಲುಕ್: ಕ್ರಿಕೆಟ್ ಸೀಸನ್ನ ಹೊಸ ಕ್ರೇಜ್ -
ಇಂದಿನ ರಾಶಿ ಭವಿಷ್ಯ: ನಿಮ್ಮ ಜೀವನದಲ್ಲಿ ಕಾದಿದೆ ಅಚ್ಚರಿಯ ಬದಲಾವಣೆ! -
ಅಹಮದಾಬಾದ್ ದೋಸೆ ಹಿಟ್ಟಿನ ಆತಂಕ: ನಿಮ್ಮ ಮಕ್ಕಳ ಆರೋಗ್ಯಕ್ಕೆ ಈ ಎಚ್ಚರಿಕೆ ಅಗತ್ಯ! -
ಫಿಟ್ನೆಸ್ ಕ್ರೇಜ್: ಮನೆಯಲ್ಲೇ ಫಿಟ್ ಆಗಿರೋದು ಹೇಗೆ? -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ!
ಈರುಳ್ಳಿ ನೋಡಲು ಚಿಕ್ಕದಾದರೂ ಮಾಡುವ ಕಾರುಬಾರು ದೊಡ್ಡದು
ನಮ್ಮ ಅಡುಗೆಯಲ್ಲಿ ಅತಿ ಸಾಮಾನ್ಯವಾದ ತರಕಾರಿ ಎಂದರೆ ಈರುಳ್ಳಿ ಮತ್ತು ಆಲುಗಡ್ಡೆ. ಅತಿ ಹೆಚ್ಚು ಕಾಲ ಕೆಡದಂತೆ ಕಾಪಾಡ ಬಹುದಾದ ಇವುಗಳ ಗುಣವೇ ಇದರ ವೈಶಿಷ್ಟ್ಯತೆ, ಕಡಿಮೆ ಬೆಲೆ ಮತ್ತು ವರ್ಷದ ಎಲ್ಲಾ ಕಾಲ ಸುಲಭವಾಗಿ ಲಭ್ಯವಾಗುವ ಈ ಎರಡು ತರಕಾರಿಗಳು ಪ್ರತಿ ಮನೆಯ ಅಡುಗೆ ಮನೆಯಲ್ಲಿ ಸದಾ ಇರುತ್ತವೆ. ಅದರಲ್ಲೂ ಈರುಳ್ಳಿ ಕತ್ತರಿಸಿದಾದ ಕಣ್ಣೀರು ಬರುತ್ತದೆ ಎಂಬ ಒಂದೇ ಅವಗುಣವನ್ನು ಬಿಟ್ಟರೆ ಬೇರೆಲ್ಲಾ ರೀತಿಯಲ್ಲಿ ಆಹಾರಕ್ಕಿಂತಲೂ ಔಷಧೀಯ ರೂಪದಲ್ಲಿಯೇ ಆರೋಗ್ಯಕ್ಕೆ ಪೂರಕವಾಗಿದೆ.
ಈರುಳ್ಳಿಯನ್ನು ಕತ್ತರಿಸುವಾಗ ನಮ್ಮ ಕಣ್ಣಲ್ಲಿ ನೀರು ಬರುತ್ತದೆಯಾದರೂ, ಹಾನಿಕಾರಕ ಗಾಳಿ ನಮಗೆ ತಗುಲದಂತೆ ನೋಡಿಕೊಳ್ಳುತ್ತದೆ. ನಾವು ತಯಾರಿಸುವ ಅಡುಗೆಯ ರುಚಿ ಮತ್ತು ಪರಿಮಳವನ್ನು ಕಾಪಾಡುವ ಈ ಈರುಳ್ಳಿಯ ಆರೋಗ್ಯ ಮಹಿಮೆ ಅಪಾರ. ಇದು ಕೇವಲ ಅಡುಗೆ ತಯಾರಿಸಲಷ್ಟೇ ಸೀಮಿತವಾಗಿಲ್ಲ. ಇದನ್ನು ಗಾಳಿಯಲ್ಲಿ ತೆರೆದಿಟ್ಟರೂ ಆರೋಗ್ಯ ಹೆಚ್ಚುವುದು. ಹಾಗಾದರೆ ಅದು ಹೇಗೆ ಎನ್ನುವ ನೂತನ ಮಾಹಿತಿ ಇಲ್ಲಿದೆ ನೋಡಿ...

ಸಲ್ಫ್ಯೂರಿಕ್ ಸಂಯುಕ್ತ
ಈರುಳ್ಳಿಯಲ್ಲಿ ಕೆಲವು ಸಲ್ಫ್ಯೂರಿಕ್ ಸಂಯುಕ್ತಗಳಿವೆ. ಇವು ಗಾಳಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಎದುರಿಸಲು ಸಹಾಯ ಮಾಡುತ್ತವೆ. ಅಡುಗೆಯಲ್ಲಿ ರುಚಿ ಮತ್ತು ಪರಿಮಳವನ್ನು ಹೆಚ್ಚಿಸಲು ಸಹ ಸಲ್ಫ್ಯೂರಿಕ್ ಸಂಯುಕ್ತಗಳೇ ಕಾರಣ.

ಕಾಲಲ್ಲಿ ಈರುಳ್ಳಿ
ಮಲಗುವಾಗ ಸಾಕ್ಸ್ ಧರಿಸಿ. ಅದರಲ್ಲಿ ಈರುಳ್ಳಿ ಚೂರನ್ನು ಹಾಕಿಕೊಂಡು ಮಲಗಬೇಕು ಅಥವಾ ಅಂಗಾಲಿಗೆ ಈರುಳ್ಳಿಯ ಸ್ಲೈಸ್ಅನ್ನು ಇಟ್ಟು ಬಟ್ಟೆ ಕಟ್ಟಿಕೊಂಡು ಮಲಗಿ. ಬೆಳಗ್ಗೆ ಇದನ್ನು ತೆಗೆಯಿರಿ. ಈ ಅಭ್ಯಾಸದಿಂದ ಗಾಳಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ದೇಹಕ್ಕೆ ಯಾವುದೇ ಸೋಂಕು ತಗಲದಂತೆ ನೋಡಿಕೊಳ್ಳುತ್ತದೆ.

ಈರುಳ್ಳಿ ಸೂಪ್
ಈರುಳ್ಳಿ ಸೂಪ್ ಮಾಡಿ ಕುಡಿಯುವುದರಿಂದ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದು. ಇದರಲ್ಲಿ ಕ್ವೆರ್ಸೆಟಿನ್ ಗುಣ ಇರುವುದರಿಂದ ಪ್ರತಿರಕ್ಷಣಾ(ಆಂಟಿಆಕ್ಸಿಡೆಂಟ್)ಶಕ್ತಿಯನ್ನು ಹೆಚ್ಚಿಸುವುದು. ಜೊತೆಗೆ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಬಲಪಡಿಸುವುದು.

ಸೂಪ್ ತಯಾರಿಗೆ ಸಲಕರಣೆ
* ಒಂದು ಚಮಚ ಹಿಮಾಲಯನ್ ಉಪ್ಪು
* 4 ಕಪ್ ನೀರು
* 3 ಈರುಳ್ಳಿ
* 3 ಬೆಳ್ಳುಳ್ಳಿ ಎಸಳು

ಸೂಪ್ ತಯಾರಿಸುವ ವಿಧಾನ
* ಮೊದಲು ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಕತ್ತರಿಸಿಕೊಳ್ಳಿ.
* ನಂತರ ಒಂದು ಪಾತ್ರೆಯಲ್ಲಿ ನೀರು ಮತ್ತು ಎಲ್ಲಾ ಸಲಕರಣೆಯನ್ನು ಸೇರಿಸಿ, ಕುದಿಸಿರಿ.
* 20 ನಿಮಿಷ ಕುದಿಸಿ. ಬಳಿಕ ಸೋಸಿ. ಬೆಚ್ಚಗಿರುವಾಗಲೇ ಸೇವಿಸಿ.
* ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದು.



Click it and Unblock the Notifications







