Latest Updates
-
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ! -
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ!
ಈರುಳ್ಳಿ ನೋಡಲು ಚಿಕ್ಕದಾದರೂ ಮಾಡುವ ಕಾರುಬಾರು ದೊಡ್ಡದು
ನಮ್ಮ ಅಡುಗೆಯಲ್ಲಿ ಅತಿ ಸಾಮಾನ್ಯವಾದ ತರಕಾರಿ ಎಂದರೆ ಈರುಳ್ಳಿ ಮತ್ತು ಆಲುಗಡ್ಡೆ. ಅತಿ ಹೆಚ್ಚು ಕಾಲ ಕೆಡದಂತೆ ಕಾಪಾಡ ಬಹುದಾದ ಇವುಗಳ ಗುಣವೇ ಇದರ ವೈಶಿಷ್ಟ್ಯತೆ, ಕಡಿಮೆ ಬೆಲೆ ಮತ್ತು ವರ್ಷದ ಎಲ್ಲಾ ಕಾಲ ಸುಲಭವಾಗಿ ಲಭ್ಯವಾಗುವ ಈ ಎರಡು ತರಕಾರಿಗಳು ಪ್ರತಿ ಮನೆಯ ಅಡುಗೆ ಮನೆಯಲ್ಲಿ ಸದಾ ಇರುತ್ತವೆ. ಅದರಲ್ಲೂ ಈರುಳ್ಳಿ ಕತ್ತರಿಸಿದಾದ ಕಣ್ಣೀರು ಬರುತ್ತದೆ ಎಂಬ ಒಂದೇ ಅವಗುಣವನ್ನು ಬಿಟ್ಟರೆ ಬೇರೆಲ್ಲಾ ರೀತಿಯಲ್ಲಿ ಆಹಾರಕ್ಕಿಂತಲೂ ಔಷಧೀಯ ರೂಪದಲ್ಲಿಯೇ ಆರೋಗ್ಯಕ್ಕೆ ಪೂರಕವಾಗಿದೆ.
ಈರುಳ್ಳಿಯನ್ನು ಕತ್ತರಿಸುವಾಗ ನಮ್ಮ ಕಣ್ಣಲ್ಲಿ ನೀರು ಬರುತ್ತದೆಯಾದರೂ, ಹಾನಿಕಾರಕ ಗಾಳಿ ನಮಗೆ ತಗುಲದಂತೆ ನೋಡಿಕೊಳ್ಳುತ್ತದೆ. ನಾವು ತಯಾರಿಸುವ ಅಡುಗೆಯ ರುಚಿ ಮತ್ತು ಪರಿಮಳವನ್ನು ಕಾಪಾಡುವ ಈ ಈರುಳ್ಳಿಯ ಆರೋಗ್ಯ ಮಹಿಮೆ ಅಪಾರ. ಇದು ಕೇವಲ ಅಡುಗೆ ತಯಾರಿಸಲಷ್ಟೇ ಸೀಮಿತವಾಗಿಲ್ಲ. ಇದನ್ನು ಗಾಳಿಯಲ್ಲಿ ತೆರೆದಿಟ್ಟರೂ ಆರೋಗ್ಯ ಹೆಚ್ಚುವುದು. ಹಾಗಾದರೆ ಅದು ಹೇಗೆ ಎನ್ನುವ ನೂತನ ಮಾಹಿತಿ ಇಲ್ಲಿದೆ ನೋಡಿ...

ಸಲ್ಫ್ಯೂರಿಕ್ ಸಂಯುಕ್ತ
ಈರುಳ್ಳಿಯಲ್ಲಿ ಕೆಲವು ಸಲ್ಫ್ಯೂರಿಕ್ ಸಂಯುಕ್ತಗಳಿವೆ. ಇವು ಗಾಳಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಎದುರಿಸಲು ಸಹಾಯ ಮಾಡುತ್ತವೆ. ಅಡುಗೆಯಲ್ಲಿ ರುಚಿ ಮತ್ತು ಪರಿಮಳವನ್ನು ಹೆಚ್ಚಿಸಲು ಸಹ ಸಲ್ಫ್ಯೂರಿಕ್ ಸಂಯುಕ್ತಗಳೇ ಕಾರಣ.

ಕಾಲಲ್ಲಿ ಈರುಳ್ಳಿ
ಮಲಗುವಾಗ ಸಾಕ್ಸ್ ಧರಿಸಿ. ಅದರಲ್ಲಿ ಈರುಳ್ಳಿ ಚೂರನ್ನು ಹಾಕಿಕೊಂಡು ಮಲಗಬೇಕು ಅಥವಾ ಅಂಗಾಲಿಗೆ ಈರುಳ್ಳಿಯ ಸ್ಲೈಸ್ಅನ್ನು ಇಟ್ಟು ಬಟ್ಟೆ ಕಟ್ಟಿಕೊಂಡು ಮಲಗಿ. ಬೆಳಗ್ಗೆ ಇದನ್ನು ತೆಗೆಯಿರಿ. ಈ ಅಭ್ಯಾಸದಿಂದ ಗಾಳಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ದೇಹಕ್ಕೆ ಯಾವುದೇ ಸೋಂಕು ತಗಲದಂತೆ ನೋಡಿಕೊಳ್ಳುತ್ತದೆ.

ಈರುಳ್ಳಿ ಸೂಪ್
ಈರುಳ್ಳಿ ಸೂಪ್ ಮಾಡಿ ಕುಡಿಯುವುದರಿಂದ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದು. ಇದರಲ್ಲಿ ಕ್ವೆರ್ಸೆಟಿನ್ ಗುಣ ಇರುವುದರಿಂದ ಪ್ರತಿರಕ್ಷಣಾ(ಆಂಟಿಆಕ್ಸಿಡೆಂಟ್)ಶಕ್ತಿಯನ್ನು ಹೆಚ್ಚಿಸುವುದು. ಜೊತೆಗೆ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಬಲಪಡಿಸುವುದು.

ಸೂಪ್ ತಯಾರಿಗೆ ಸಲಕರಣೆ
* ಒಂದು ಚಮಚ ಹಿಮಾಲಯನ್ ಉಪ್ಪು
* 4 ಕಪ್ ನೀರು
* 3 ಈರುಳ್ಳಿ
* 3 ಬೆಳ್ಳುಳ್ಳಿ ಎಸಳು

ಸೂಪ್ ತಯಾರಿಸುವ ವಿಧಾನ
* ಮೊದಲು ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಕತ್ತರಿಸಿಕೊಳ್ಳಿ.
* ನಂತರ ಒಂದು ಪಾತ್ರೆಯಲ್ಲಿ ನೀರು ಮತ್ತು ಎಲ್ಲಾ ಸಲಕರಣೆಯನ್ನು ಸೇರಿಸಿ, ಕುದಿಸಿರಿ.
* 20 ನಿಮಿಷ ಕುದಿಸಿ. ಬಳಿಕ ಸೋಸಿ. ಬೆಚ್ಚಗಿರುವಾಗಲೇ ಸೇವಿಸಿ.
* ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದು.



Click it and Unblock the Notifications











