Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಈರುಳ್ಳಿ ನೋಡಲು ಚಿಕ್ಕದಾದರೂ ಮಾಡುವ ಕಾರುಬಾರು ದೊಡ್ಡದು
ನಮ್ಮ ಅಡುಗೆಯಲ್ಲಿ ಅತಿ ಸಾಮಾನ್ಯವಾದ ತರಕಾರಿ ಎಂದರೆ ಈರುಳ್ಳಿ ಮತ್ತು ಆಲುಗಡ್ಡೆ. ಅತಿ ಹೆಚ್ಚು ಕಾಲ ಕೆಡದಂತೆ ಕಾಪಾಡ ಬಹುದಾದ ಇವುಗಳ ಗುಣವೇ ಇದರ ವೈಶಿಷ್ಟ್ಯತೆ, ಕಡಿಮೆ ಬೆಲೆ ಮತ್ತು ವರ್ಷದ ಎಲ್ಲಾ ಕಾಲ ಸುಲಭವಾಗಿ ಲಭ್ಯವಾಗುವ ಈ ಎರಡು ತರಕಾರಿಗಳು ಪ್ರತಿ ಮನೆಯ ಅಡುಗೆ ಮನೆಯಲ್ಲಿ ಸದಾ ಇರುತ್ತವೆ. ಅದರಲ್ಲೂ ಈರುಳ್ಳಿ ಕತ್ತರಿಸಿದಾದ ಕಣ್ಣೀರು ಬರುತ್ತದೆ ಎಂಬ ಒಂದೇ ಅವಗುಣವನ್ನು ಬಿಟ್ಟರೆ ಬೇರೆಲ್ಲಾ ರೀತಿಯಲ್ಲಿ ಆಹಾರಕ್ಕಿಂತಲೂ ಔಷಧೀಯ ರೂಪದಲ್ಲಿಯೇ ಆರೋಗ್ಯಕ್ಕೆ ಪೂರಕವಾಗಿದೆ.
ಈರುಳ್ಳಿಯನ್ನು ಕತ್ತರಿಸುವಾಗ ನಮ್ಮ ಕಣ್ಣಲ್ಲಿ ನೀರು ಬರುತ್ತದೆಯಾದರೂ, ಹಾನಿಕಾರಕ ಗಾಳಿ ನಮಗೆ ತಗುಲದಂತೆ ನೋಡಿಕೊಳ್ಳುತ್ತದೆ. ನಾವು ತಯಾರಿಸುವ ಅಡುಗೆಯ ರುಚಿ ಮತ್ತು ಪರಿಮಳವನ್ನು ಕಾಪಾಡುವ ಈ ಈರುಳ್ಳಿಯ ಆರೋಗ್ಯ ಮಹಿಮೆ ಅಪಾರ. ಇದು ಕೇವಲ ಅಡುಗೆ ತಯಾರಿಸಲಷ್ಟೇ ಸೀಮಿತವಾಗಿಲ್ಲ. ಇದನ್ನು ಗಾಳಿಯಲ್ಲಿ ತೆರೆದಿಟ್ಟರೂ ಆರೋಗ್ಯ ಹೆಚ್ಚುವುದು. ಹಾಗಾದರೆ ಅದು ಹೇಗೆ ಎನ್ನುವ ನೂತನ ಮಾಹಿತಿ ಇಲ್ಲಿದೆ ನೋಡಿ...

ಸಲ್ಫ್ಯೂರಿಕ್ ಸಂಯುಕ್ತ
ಈರುಳ್ಳಿಯಲ್ಲಿ ಕೆಲವು ಸಲ್ಫ್ಯೂರಿಕ್ ಸಂಯುಕ್ತಗಳಿವೆ. ಇವು ಗಾಳಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಎದುರಿಸಲು ಸಹಾಯ ಮಾಡುತ್ತವೆ. ಅಡುಗೆಯಲ್ಲಿ ರುಚಿ ಮತ್ತು ಪರಿಮಳವನ್ನು ಹೆಚ್ಚಿಸಲು ಸಹ ಸಲ್ಫ್ಯೂರಿಕ್ ಸಂಯುಕ್ತಗಳೇ ಕಾರಣ.

ಕಾಲಲ್ಲಿ ಈರುಳ್ಳಿ
ಮಲಗುವಾಗ ಸಾಕ್ಸ್ ಧರಿಸಿ. ಅದರಲ್ಲಿ ಈರುಳ್ಳಿ ಚೂರನ್ನು ಹಾಕಿಕೊಂಡು ಮಲಗಬೇಕು ಅಥವಾ ಅಂಗಾಲಿಗೆ ಈರುಳ್ಳಿಯ ಸ್ಲೈಸ್ಅನ್ನು ಇಟ್ಟು ಬಟ್ಟೆ ಕಟ್ಟಿಕೊಂಡು ಮಲಗಿ. ಬೆಳಗ್ಗೆ ಇದನ್ನು ತೆಗೆಯಿರಿ. ಈ ಅಭ್ಯಾಸದಿಂದ ಗಾಳಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ದೇಹಕ್ಕೆ ಯಾವುದೇ ಸೋಂಕು ತಗಲದಂತೆ ನೋಡಿಕೊಳ್ಳುತ್ತದೆ.

ಈರುಳ್ಳಿ ಸೂಪ್
ಈರುಳ್ಳಿ ಸೂಪ್ ಮಾಡಿ ಕುಡಿಯುವುದರಿಂದ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದು. ಇದರಲ್ಲಿ ಕ್ವೆರ್ಸೆಟಿನ್ ಗುಣ ಇರುವುದರಿಂದ ಪ್ರತಿರಕ್ಷಣಾ(ಆಂಟಿಆಕ್ಸಿಡೆಂಟ್)ಶಕ್ತಿಯನ್ನು ಹೆಚ್ಚಿಸುವುದು. ಜೊತೆಗೆ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಬಲಪಡಿಸುವುದು.

ಸೂಪ್ ತಯಾರಿಗೆ ಸಲಕರಣೆ
* ಒಂದು ಚಮಚ ಹಿಮಾಲಯನ್ ಉಪ್ಪು
* 4 ಕಪ್ ನೀರು
* 3 ಈರುಳ್ಳಿ
* 3 ಬೆಳ್ಳುಳ್ಳಿ ಎಸಳು

ಸೂಪ್ ತಯಾರಿಸುವ ವಿಧಾನ
* ಮೊದಲು ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಕತ್ತರಿಸಿಕೊಳ್ಳಿ.
* ನಂತರ ಒಂದು ಪಾತ್ರೆಯಲ್ಲಿ ನೀರು ಮತ್ತು ಎಲ್ಲಾ ಸಲಕರಣೆಯನ್ನು ಸೇರಿಸಿ, ಕುದಿಸಿರಿ.
* 20 ನಿಮಿಷ ಕುದಿಸಿ. ಬಳಿಕ ಸೋಸಿ. ಬೆಚ್ಚಗಿರುವಾಗಲೇ ಸೇವಿಸಿ.
* ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದು.



Click it and Unblock the Notifications
