Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಈರುಳ್ಳಿ ನೋಡಲು ಚಿಕ್ಕದಾದರೂ ಮಾಡುವ ಕಾರುಬಾರು ದೊಡ್ಡದು
ನಮ್ಮ ಅಡುಗೆಯಲ್ಲಿ ಅತಿ ಸಾಮಾನ್ಯವಾದ ತರಕಾರಿ ಎಂದರೆ ಈರುಳ್ಳಿ ಮತ್ತು ಆಲುಗಡ್ಡೆ. ಅತಿ ಹೆಚ್ಚು ಕಾಲ ಕೆಡದಂತೆ ಕಾಪಾಡ ಬಹುದಾದ ಇವುಗಳ ಗುಣವೇ ಇದರ ವೈಶಿಷ್ಟ್ಯತೆ, ಕಡಿಮೆ ಬೆಲೆ ಮತ್ತು ವರ್ಷದ ಎಲ್ಲಾ ಕಾಲ ಸುಲಭವಾಗಿ ಲಭ್ಯವಾಗುವ ಈ ಎರಡು ತರಕಾರಿಗಳು ಪ್ರತಿ ಮನೆಯ ಅಡುಗೆ ಮನೆಯಲ್ಲಿ ಸದಾ ಇರುತ್ತವೆ. ಅದರಲ್ಲೂ ಈರುಳ್ಳಿ ಕತ್ತರಿಸಿದಾದ ಕಣ್ಣೀರು ಬರುತ್ತದೆ ಎಂಬ ಒಂದೇ ಅವಗುಣವನ್ನು ಬಿಟ್ಟರೆ ಬೇರೆಲ್ಲಾ ರೀತಿಯಲ್ಲಿ ಆಹಾರಕ್ಕಿಂತಲೂ ಔಷಧೀಯ ರೂಪದಲ್ಲಿಯೇ ಆರೋಗ್ಯಕ್ಕೆ ಪೂರಕವಾಗಿದೆ.
ಈರುಳ್ಳಿಯನ್ನು ಕತ್ತರಿಸುವಾಗ ನಮ್ಮ ಕಣ್ಣಲ್ಲಿ ನೀರು ಬರುತ್ತದೆಯಾದರೂ, ಹಾನಿಕಾರಕ ಗಾಳಿ ನಮಗೆ ತಗುಲದಂತೆ ನೋಡಿಕೊಳ್ಳುತ್ತದೆ. ನಾವು ತಯಾರಿಸುವ ಅಡುಗೆಯ ರುಚಿ ಮತ್ತು ಪರಿಮಳವನ್ನು ಕಾಪಾಡುವ ಈ ಈರುಳ್ಳಿಯ ಆರೋಗ್ಯ ಮಹಿಮೆ ಅಪಾರ. ಇದು ಕೇವಲ ಅಡುಗೆ ತಯಾರಿಸಲಷ್ಟೇ ಸೀಮಿತವಾಗಿಲ್ಲ. ಇದನ್ನು ಗಾಳಿಯಲ್ಲಿ ತೆರೆದಿಟ್ಟರೂ ಆರೋಗ್ಯ ಹೆಚ್ಚುವುದು. ಹಾಗಾದರೆ ಅದು ಹೇಗೆ ಎನ್ನುವ ನೂತನ ಮಾಹಿತಿ ಇಲ್ಲಿದೆ ನೋಡಿ...

ಸಲ್ಫ್ಯೂರಿಕ್ ಸಂಯುಕ್ತ
ಈರುಳ್ಳಿಯಲ್ಲಿ ಕೆಲವು ಸಲ್ಫ್ಯೂರಿಕ್ ಸಂಯುಕ್ತಗಳಿವೆ. ಇವು ಗಾಳಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಎದುರಿಸಲು ಸಹಾಯ ಮಾಡುತ್ತವೆ. ಅಡುಗೆಯಲ್ಲಿ ರುಚಿ ಮತ್ತು ಪರಿಮಳವನ್ನು ಹೆಚ್ಚಿಸಲು ಸಹ ಸಲ್ಫ್ಯೂರಿಕ್ ಸಂಯುಕ್ತಗಳೇ ಕಾರಣ.

ಕಾಲಲ್ಲಿ ಈರುಳ್ಳಿ
ಮಲಗುವಾಗ ಸಾಕ್ಸ್ ಧರಿಸಿ. ಅದರಲ್ಲಿ ಈರುಳ್ಳಿ ಚೂರನ್ನು ಹಾಕಿಕೊಂಡು ಮಲಗಬೇಕು ಅಥವಾ ಅಂಗಾಲಿಗೆ ಈರುಳ್ಳಿಯ ಸ್ಲೈಸ್ಅನ್ನು ಇಟ್ಟು ಬಟ್ಟೆ ಕಟ್ಟಿಕೊಂಡು ಮಲಗಿ. ಬೆಳಗ್ಗೆ ಇದನ್ನು ತೆಗೆಯಿರಿ. ಈ ಅಭ್ಯಾಸದಿಂದ ಗಾಳಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ದೇಹಕ್ಕೆ ಯಾವುದೇ ಸೋಂಕು ತಗಲದಂತೆ ನೋಡಿಕೊಳ್ಳುತ್ತದೆ.

ಈರುಳ್ಳಿ ಸೂಪ್
ಈರುಳ್ಳಿ ಸೂಪ್ ಮಾಡಿ ಕುಡಿಯುವುದರಿಂದ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದು. ಇದರಲ್ಲಿ ಕ್ವೆರ್ಸೆಟಿನ್ ಗುಣ ಇರುವುದರಿಂದ ಪ್ರತಿರಕ್ಷಣಾ(ಆಂಟಿಆಕ್ಸಿಡೆಂಟ್)ಶಕ್ತಿಯನ್ನು ಹೆಚ್ಚಿಸುವುದು. ಜೊತೆಗೆ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಬಲಪಡಿಸುವುದು.

ಸೂಪ್ ತಯಾರಿಗೆ ಸಲಕರಣೆ
* ಒಂದು ಚಮಚ ಹಿಮಾಲಯನ್ ಉಪ್ಪು
* 4 ಕಪ್ ನೀರು
* 3 ಈರುಳ್ಳಿ
* 3 ಬೆಳ್ಳುಳ್ಳಿ ಎಸಳು

ಸೂಪ್ ತಯಾರಿಸುವ ವಿಧಾನ
* ಮೊದಲು ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಕತ್ತರಿಸಿಕೊಳ್ಳಿ.
* ನಂತರ ಒಂದು ಪಾತ್ರೆಯಲ್ಲಿ ನೀರು ಮತ್ತು ಎಲ್ಲಾ ಸಲಕರಣೆಯನ್ನು ಸೇರಿಸಿ, ಕುದಿಸಿರಿ.
* 20 ನಿಮಿಷ ಕುದಿಸಿ. ಬಳಿಕ ಸೋಸಿ. ಬೆಚ್ಚಗಿರುವಾಗಲೇ ಸೇವಿಸಿ.
* ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದು.



Click it and Unblock the Notifications