Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಈರುಳ್ಳಿ ನೋಡಲು ಚಿಕ್ಕದಾದರೂ ಮಾಡುವ ಕಾರುಬಾರು ದೊಡ್ಡದು
ನಮ್ಮ ಅಡುಗೆಯಲ್ಲಿ ಅತಿ ಸಾಮಾನ್ಯವಾದ ತರಕಾರಿ ಎಂದರೆ ಈರುಳ್ಳಿ ಮತ್ತು ಆಲುಗಡ್ಡೆ. ಅತಿ ಹೆಚ್ಚು ಕಾಲ ಕೆಡದಂತೆ ಕಾಪಾಡ ಬಹುದಾದ ಇವುಗಳ ಗುಣವೇ ಇದರ ವೈಶಿಷ್ಟ್ಯತೆ, ಕಡಿಮೆ ಬೆಲೆ ಮತ್ತು ವರ್ಷದ ಎಲ್ಲಾ ಕಾಲ ಸುಲಭವಾಗಿ ಲಭ್ಯವಾಗುವ ಈ ಎರಡು ತರಕಾರಿಗಳು ಪ್ರತಿ ಮನೆಯ ಅಡುಗೆ ಮನೆಯಲ್ಲಿ ಸದಾ ಇರುತ್ತವೆ. ಅದರಲ್ಲೂ ಈರುಳ್ಳಿ ಕತ್ತರಿಸಿದಾದ ಕಣ್ಣೀರು ಬರುತ್ತದೆ ಎಂಬ ಒಂದೇ ಅವಗುಣವನ್ನು ಬಿಟ್ಟರೆ ಬೇರೆಲ್ಲಾ ರೀತಿಯಲ್ಲಿ ಆಹಾರಕ್ಕಿಂತಲೂ ಔಷಧೀಯ ರೂಪದಲ್ಲಿಯೇ ಆರೋಗ್ಯಕ್ಕೆ ಪೂರಕವಾಗಿದೆ.
ಈರುಳ್ಳಿಯನ್ನು ಕತ್ತರಿಸುವಾಗ ನಮ್ಮ ಕಣ್ಣಲ್ಲಿ ನೀರು ಬರುತ್ತದೆಯಾದರೂ, ಹಾನಿಕಾರಕ ಗಾಳಿ ನಮಗೆ ತಗುಲದಂತೆ ನೋಡಿಕೊಳ್ಳುತ್ತದೆ. ನಾವು ತಯಾರಿಸುವ ಅಡುಗೆಯ ರುಚಿ ಮತ್ತು ಪರಿಮಳವನ್ನು ಕಾಪಾಡುವ ಈ ಈರುಳ್ಳಿಯ ಆರೋಗ್ಯ ಮಹಿಮೆ ಅಪಾರ. ಇದು ಕೇವಲ ಅಡುಗೆ ತಯಾರಿಸಲಷ್ಟೇ ಸೀಮಿತವಾಗಿಲ್ಲ. ಇದನ್ನು ಗಾಳಿಯಲ್ಲಿ ತೆರೆದಿಟ್ಟರೂ ಆರೋಗ್ಯ ಹೆಚ್ಚುವುದು. ಹಾಗಾದರೆ ಅದು ಹೇಗೆ ಎನ್ನುವ ನೂತನ ಮಾಹಿತಿ ಇಲ್ಲಿದೆ ನೋಡಿ...

ಸಲ್ಫ್ಯೂರಿಕ್ ಸಂಯುಕ್ತ
ಈರುಳ್ಳಿಯಲ್ಲಿ ಕೆಲವು ಸಲ್ಫ್ಯೂರಿಕ್ ಸಂಯುಕ್ತಗಳಿವೆ. ಇವು ಗಾಳಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಎದುರಿಸಲು ಸಹಾಯ ಮಾಡುತ್ತವೆ. ಅಡುಗೆಯಲ್ಲಿ ರುಚಿ ಮತ್ತು ಪರಿಮಳವನ್ನು ಹೆಚ್ಚಿಸಲು ಸಹ ಸಲ್ಫ್ಯೂರಿಕ್ ಸಂಯುಕ್ತಗಳೇ ಕಾರಣ.

ಕಾಲಲ್ಲಿ ಈರುಳ್ಳಿ
ಮಲಗುವಾಗ ಸಾಕ್ಸ್ ಧರಿಸಿ. ಅದರಲ್ಲಿ ಈರುಳ್ಳಿ ಚೂರನ್ನು ಹಾಕಿಕೊಂಡು ಮಲಗಬೇಕು ಅಥವಾ ಅಂಗಾಲಿಗೆ ಈರುಳ್ಳಿಯ ಸ್ಲೈಸ್ಅನ್ನು ಇಟ್ಟು ಬಟ್ಟೆ ಕಟ್ಟಿಕೊಂಡು ಮಲಗಿ. ಬೆಳಗ್ಗೆ ಇದನ್ನು ತೆಗೆಯಿರಿ. ಈ ಅಭ್ಯಾಸದಿಂದ ಗಾಳಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ದೇಹಕ್ಕೆ ಯಾವುದೇ ಸೋಂಕು ತಗಲದಂತೆ ನೋಡಿಕೊಳ್ಳುತ್ತದೆ.

ಈರುಳ್ಳಿ ಸೂಪ್
ಈರುಳ್ಳಿ ಸೂಪ್ ಮಾಡಿ ಕುಡಿಯುವುದರಿಂದ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದು. ಇದರಲ್ಲಿ ಕ್ವೆರ್ಸೆಟಿನ್ ಗುಣ ಇರುವುದರಿಂದ ಪ್ರತಿರಕ್ಷಣಾ(ಆಂಟಿಆಕ್ಸಿಡೆಂಟ್)ಶಕ್ತಿಯನ್ನು ಹೆಚ್ಚಿಸುವುದು. ಜೊತೆಗೆ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಬಲಪಡಿಸುವುದು.

ಸೂಪ್ ತಯಾರಿಗೆ ಸಲಕರಣೆ
* ಒಂದು ಚಮಚ ಹಿಮಾಲಯನ್ ಉಪ್ಪು
* 4 ಕಪ್ ನೀರು
* 3 ಈರುಳ್ಳಿ
* 3 ಬೆಳ್ಳುಳ್ಳಿ ಎಸಳು

ಸೂಪ್ ತಯಾರಿಸುವ ವಿಧಾನ
* ಮೊದಲು ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಕತ್ತರಿಸಿಕೊಳ್ಳಿ.
* ನಂತರ ಒಂದು ಪಾತ್ರೆಯಲ್ಲಿ ನೀರು ಮತ್ತು ಎಲ್ಲಾ ಸಲಕರಣೆಯನ್ನು ಸೇರಿಸಿ, ಕುದಿಸಿರಿ.
* 20 ನಿಮಿಷ ಕುದಿಸಿ. ಬಳಿಕ ಸೋಸಿ. ಬೆಚ್ಚಗಿರುವಾಗಲೇ ಸೇವಿಸಿ.
* ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದು.



Click it and Unblock the Notifications