Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ದಿನಾ ಬೆಳಿಗ್ಗೆ ಮೂರು ಖರ್ಜೂರ ತಿಂದ್ರೆ 'ಬಿಪಿ' ನಿಯಂತ್ರಣಕ್ಕೆ ಬರುತ್ತೆ!
ನಮ್ಮ ಜೀವನ ಶೈಲಿಗೆ ಅನುಗುಣವಾಗಿ ಕೆಲವೊಂದು ರೋಗಗಳು ದೇಹದೊಳಗೆ ನುಸುಳುತ್ತದೆ. ಅದರಲ್ಲೂ ಇಂದಿನ ದಿನಗಳಲ್ಲಿ ಅತಿಯಾದ ರಕ್ತದೊತ್ತಡ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗುತ್ತಾ ಇದೆ. ಕೆಲವೊಂದು ಸಲ ಅತಿಯಾಗಿ ಕೋಪ ಬಂದಾಗ ನನ್ನ ರಕ್ತದೊತ್ತಡ ಹೆಚ್ಚಿಸಬೇಡ ಎನ್ನುವ ಮಾತು ಸಾಮಾನ್ಯವಾಗಿ ಕೇಳಿಬರುತ್ತದೆ. ರಕ್ತದೊತ್ತಡ ಹೆಚ್ಚಾದಾಗ ಹಲವಾರು ಸಮಸ್ಯೆಗಳು ಕಾಡುತ್ತದೆ.
ರಕ್ತದೊತ್ತಡ ಸಮಸ್ಯೆಯನ್ನು ಲಘುವಾಗಿ ಪರಿಗಣಿಸಿದರೆ ಅದರಿಂದ ಹಲವಾರು ಸಮಸ್ಯೆಗಳು ಉಂಟಾಗಬಹುದು. ಅಪಧಮನಿಗಳಲ್ಲಿ ರಕ್ತದ ಅಸಾಮಾನ್ಯ ಅರಿವನ್ನು ರಕ್ತದೊತ್ತಡವೆನ್ನಲಾಗುತ್ತದೆ. ರಕ್ತದೊತ್ತಡ ನಿಯಂತ್ರಣದಲ್ಲಿ ಇಲ್ಲದೆ ಹೋದರೆ ಅದರಿಂದ ಹೃದಯ ಕಾಯಿಲೆ, ಕಿಡ್ನಿ ವೈಫಲ್ಯ, ಹೃದಯ ವೈಫಲ್ಯ, ಪಾರ್ಶ್ವವಾಯು ಮುಂತಾದ ರೋಗಗಳು ಕಾಣಿಸಿಕೊಳ್ಳಬಹುದು. ರಕ್ತದೊತ್ತಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಕೆಲವೊಂದು ಮನೆಮದ್ದು ಉಪಯುಕ್ತವಾಗಿದೆ. ಒಂದು ತಿಂಗಳ ಒಳಗಡೆ ರಕ್ತದೊತ್ತಡ ಯಾವ ರೀತಿಯಲ್ಲಿ ನಿಯಂತ್ರಣಕ್ಕೆ ತರಬಹುದು ಎಂದು ತಿಳಿಯಿರಿ.
ಬೇಕಾಗುವ ಸಾಮಗ್ರಿಗಳು
*ಬೀಜವಿಲ್ಲದ ಖರ್ಜೂರ-3
*ಬಿಸಿ ನೀರು- 1 ಲೋಟ

ಸರಿಯಾದ ಪ್ರಮಾಣದಲ್ಲಿ ಈ ಮನೆಮದ್ದನ್ನು ನಿಯಮಿತವಾಗಿ ಬಳಸಿಕೊಂಡು ಹೋದರೆ ನೈಸರ್ಗಿಕವಾಗಿ ಅಧಿಕ ರಕ್ತದೊತ್ತಡ ಕಡಿಮೆ ಮಾಡಬಹುದು. ಸರಿಯಾದ ಆಹಾರ ಕ್ರಮ ಪಾಲಿಸಿಕೊಂಡು ದಿನನಿತ್ಯ ವ್ಯಾಯಾಮ ಮಾಡುತ್ತಿರಬೇಕು. ಹೀಗೆ ಮಾಡಿದರೆ ಮನೆಮದ್ದು ಉತ್ತಮ ಫಲಿತಾಂಶ ನೀಡಲಿದೆ.
ಈ ಮನೆಮದ್ದಿನೊಂದಿಗೆ ವೈದ್ಯರು ನಿಮಗೆ ಸೂಚಿಸಿದ ಔಷಧಿ ತೆಗೆದುಕೊಳ್ಳುತ್ತಾ ಇರಿ. ರಕ್ತದೊತ್ತಡದ ಲಕ್ಷಣ ಕಡಿಮೆಯಾದಾಗ ವೈದ್ಯರಲ್ಲಿ ಮಾತನಾಡಿ ಔಷಧಿ ಕಡಿಮೆ ಮಾಡಿಕೊಳ್ಳಬಹುದು. ಖರ್ಜೂರದಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಲಭ್ಯವಿದ್ದು, ಇದು ತುಂಬಾ ರುಚಿಕರ ಕೂಡ.
ಖರ್ಜೂರದಲ್ಲಿ ಕಬ್ಬಿಣಾಂಶ, ವಿಟಮಿನ್ ಎ, ಕ್ಯಾಲ್ಸಿಯಂ, ಆ್ಯಂಟಿಆಕ್ಸಿಡೆಂಟ್ ಇತ್ಯಾದಿ ಪೋಷಕಾಂಶಗಳಿವೆ. ಅಧಿಕ ರಕ್ತದೊತ್ತಡ ಸಮಸ್ಯೆ ನಿವಾರಣೆ ಮಾಡುವ ಜತೆಗೆ ದೃಷ್ಟಿ ಮಂದತೆ, ಮಲಬದ್ಧತೆ, ಕೋಶಗಳಿಗೆ ಆಗಿರುವ ಹಾನಿ ಇತ್ಯಾದಿಗಳನ್ನು ತಡೆಗಟ್ಟುವುದು. ಖರ್ಜೂರದಲ್ಲಿ ಇರುವಂತಹ ಅಧಿಕ ಪ್ರಮಾಣದ ಮೆಗ್ನಿಶಿಯಂ ರಕ್ತನಾಳಗಳನ್ನು ಸುಗಮಗೊಳಿಸಿ ರಕ್ತವು ಸರಾಗವಾಗಿ ಹರಿಯಲು ನೆರವಾಗುವುದು. ಇದರಿಂದ ರಕ್ತದ ಒತ್ತಡ ಕಡಿಮೆಯಾಗಿ ಅಧಿಕ ರಕ್ತದೊತ್ತಡದ ಸಮಸ್ಯೆಯು ನಿವಾರಣೆಯಾಗುವುದು.
ತಯಾರಿಸುವ ವಿಧಾನ
*ಬೆಳಿಗ್ಗೆ ಉಪಹಾರಕ್ಕೆ ಮೊದಲು ಮೂರು ಖರ್ಜೂರ ತಿನ್ನಿ
*ಖರ್ಜೂರ ತಿಂದ ತಕ್ಷಣ ಒಂದು ಲೋಟ ಬಿಸಿ ನೀರು ಕುಡಿಯಿರಿ
*ಈ ಮದ್ದನ್ನು ಒಂದು ತಿಂಗಳ ಕಾಲ ಮುಂದುವರಿಸಿ
*ಒಂದು ತಿಂಗಳ ಬಳಿಕವೂ ಈ ಮದ್ದನ್ನು ಮುಂದುವರಿಸಬಹುದಾಗಿದೆ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

