Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಚಿಟಿಕೆ ಹೊಡೆಯುವುದರೊಳಗೆ, ಹಲ್ಲು ನೋವು ಮಂಗಮಾಯ!
ಹಲ್ಲು ನೋವಿನಷ್ಟು ಸಂಕಟ ನೀಡುವ ನೋವು ಮತ್ತೊಂದು ಇಲ್ಲವೆನ್ನಬಹುದು. ಹಲ್ಲು ನೋವಿನ ಸಮಯದಲ್ಲಿ ಯಾವುದೇ ರೀತಿಯ ದೈನಂದಿನ ಚಟುವಟಿಕೆಗಳನ್ನು ಮಾಡಲು ಸಾಧ್ಯವಾಗುವುದಿಲ್ಲ... ಚಿಂತಿಸದಿರಿ ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್...
ದೇವರೇ ಏನು ಬೇಕಾದರೂ ಕೊಡು ಆದರೆ ಹಲ್ಲು ನೋವು ಮಾತ್ರ ಕೊಡಬೇಡ ಎನ್ನುವ ಪ್ರಾರ್ಥನೆ ಹಲ್ಲು ನೋವು ಅನುಭವಿಸಿರುವ ಪ್ರತಿಯೊಬ್ಬರೂ ಮಾಡಿರುತ್ತಾರೆ. ಯಾಕೆಂದರೆ ಹಲ್ಲು ನೋವಿನಷ್ಟು ಸಂಕಟ ನೀಡುವ ನೋವು ಮತ್ತೊಂದು ಇಲ್ಲವೆನ್ನಬಹುದು. ಹಲ್ಲು ನೋವಿನ ಸಮಯದಲ್ಲಿ ಯಾವುದೇ ರೀತಿಯ ದೈನಂದಿನ ಚಟುವಟಿಕೆಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
ಆಹಾರ ಸೇವಿಸುವುದು ಕಷ್ಟವಾಗುತ್ತದೆ. ಹಲ್ಲು ನೋವು ಹೆಚ್ಚಾದಾಗ ತಲೆನೋವು, ಜ್ವರ ಕೂಡ ಕಾಣಿಸಿಕೊಳ್ಳಬಹುದು. ಇಂತಹ ಹಲ್ಲು ನೋವು ಯಾರಿಗೂ ಬರದಿರಲಿ ಎಂದು ಮನದಲ್ಲೇ ಅಂದುಕೊಳ್ಳುತ್ತೇವೆ. ಹಲ್ಲು ನೋವಿಗೆ ಪ್ರಮುಖವಾಗಿ ಬ್ಯಾಕ್ಟೀರಿಯಾ ಸೋಂಕು, ವಸಡಿನ ರೋಗ, ದುರ್ಬಲ ಹಲ್ಲುಗಳು ಪ್ರಮುಖ ಕಾರಣವಾಗಿದೆ.
ಬಾಲ್ಯದಲ್ಲಿ ಇರುವ ಹಲ್ಲುಗಳು ಕಿತ್ತು ಹೋಗಿ ಹೊಸ ಹಲ್ಲುಗಳು ಮೂಡಿ ಬರುತ್ತದೆ. ಇದರ ಬಳಿಕ ಬೆಳೆಯುತ್ತಾ ಇರುವಂತೆ ಯೌವನದಲ್ಲಿ ಕೊನೆಯ ಹಲ್ಲು ಬರುತ್ತದೆ. ಆದರೆ ಇದಕ್ಕೆ ಹೊರಬರಲು ಜಾಗವಿಲ್ಲದೆ ಇರುವ ಕಾರಣದಿಂದ ತುಂಬಾ ನೋವನ್ನು ಉಂಟು ಮಾಡುತ್ತದೆ.
ಆದರೆ ಈ ನೋವಿನೊಂದಿಗೆ ಸಂಪೂರ್ಣ ಹಲ್ಲುನೋವನ್ನು ನಿವಾರಣೆ ಮಾಡಲು ಮನೆಮದ್ದನ್ನು ಬಳಸಿಕೊಳ್ಳುವುದು ಹೇಗೆ ಎಂದು ಬೋಲ್ಡ್ ಸ್ಕೈ ನಿಮಗೆ ಹೇಳಿಕೊಡಲಿದೆ.....

ಬೇಕಾಗುವ ಸಾಮಗ್ರಿಗಳು
*ಬೆಳ್ಳುಳ್ಳಿ ರಸ 2-3 ಚಮಚ

ಬೇಕಾಗುವ ಸಾಮಗ್ರಿಗಳು
ಕಪ್ಪು ಉಪ್ಪು ಒಂದು ಚಿಟಿಕೆ

ಬೆಳ್ಳುಳ್ಳಿ
ಬೆಳ್ಳುಳ್ಳಿಯಲ್ಲಿ ಅಲಿಸಿನ್ ಎನ್ನುವಂತಹ ಉರಿಯೂತ ಶಮನಕಾರಿ ಗುಣವಿದೆ. ಇದು ವಸಡಿನ ಊತವನ್ನು ಕಡಿಮೆ ಮಾಡಿ ಹಲ್ಲಿನ ನೋವನ್ನು ನಿವಾರಿಸುತ್ತದೆ.

ಕಪ್ಪು ಉಪ್ಪು....
ಕಪ್ಪು ಉಪ್ಪಿನಲ್ಲಿ ಇರುವಂತಹ ನೈಸರ್ಗಿಕ ನಂಜುನಿರೋಧಕದೊಂದಿಗೆ ಸೋಡಿಯಂ ಇದೆ. ಇದು ಹಲ್ಲಿನಲ್ಲಿ ಬ್ಯಾಕ್ಟೀರಿಯಾದಿಂದ ಆಗುವಂತಹ ಸೋಂಕನ್ನು ನಾಶ ಮಾಡುವುದು. ಇದರಿಂದ ನೋವು ಕಡಿಮೆಯಾಗುವುದು.

ತಯಾರಿಸುವ ವಿಧಾನ
*ಒಂದು ಪಿಂಗಾಣಿಗೆ ಹೇಳಿದಷ್ಟು ಪ್ರಮಾಣದ ಸಾಮಗ್ರಿಗಳನ್ನು ಹಾಕಿಕೊಳ್ಳಿ.
*ಇದನ್ನು ಸರಿಯಾಗಿ ಪೇಸ್ಟ್ ಮಾಡಿಕೊಳ್ಳಿ.
*ಈ ಪೇಸ್ಟ್ ನ್ನು ಭಾದಿತ ಪ್ರದೇಶಕ್ಕೆ ಹಚ್ಚಿಕೊಂಡು ಹತ್ತು ನಿಮಿಷ ಕಾಲ ಹಾಗೆ ಬಿಡಿ.
*ನೋವು ಕಡಿಮೆಯಾಗುವ ತನಕ ಪ್ರತೀ ದಿನ ಹಚ್ಚಿಕೊಳ್ಳಿ.



Click it and Unblock the Notifications