Latest Updates
-
ಲಿವ್-ಇನ್ ಸಂಬಂಧದಲ್ಲಿರುವ ಯುವ ಜೋಡಿಗಳಿಗೆ ಶಾಕ್: ಹೈಕೋರ್ಟ್ನಿಂದ ಹೊಸ ಆದೇಶ, ಇನ್ನು ರಕ್ಷಣೆ ಸಿಗಲ್ಲ! -
ಬಿಸಿಲಿಗೆ ಬಾಲ್ಕನಿ ಗಿಡಗಳು ಬಾಡುತ್ತಿವೆಯೇ? ಈ 5 ಸರಳ ಟ್ರಿಕ್ಸ್ ಬಳಸಿ ಗಿಡಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಿ! -
ಹಾಲಿನ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಹಾಳಾಗದಂತೆ ಆರೋಗ್ಯ ಕಾಪಾಡಿಕೊಳ್ಳಲು ಈ ಪರ್ಯಾಯ ಆಹಾರಗಳೇ ದಾರಿ! -
ರೆಡ್ ಕಾರ್ಪೆಟ್ ಮೇಲೆ ಸದ್ದು ಮಾಡುತ್ತಿರುವ 'ಸೀರೆ-ಗೌನ್' ಮ್ಯಾಜಿಕ್: 2026ರ ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ಆರೋಗ್ಯ ಹಾಳಾಗದಂತೆ ವರ್ಕೌಟ್ ಮಾಡಲು ಈ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅತ್ಯಗತ್ಯ, ಇಲ್ಲದಿದ್ದರೆ ಅಪಾಯ! -
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಚಿಟಿಕೆ ಹೊಡೆಯುವುದರೊಳಗೆ, ಹಲ್ಲು ನೋವು ಮಂಗಮಾಯ!
ಹಲ್ಲು ನೋವಿನಷ್ಟು ಸಂಕಟ ನೀಡುವ ನೋವು ಮತ್ತೊಂದು ಇಲ್ಲವೆನ್ನಬಹುದು. ಹಲ್ಲು ನೋವಿನ ಸಮಯದಲ್ಲಿ ಯಾವುದೇ ರೀತಿಯ ದೈನಂದಿನ ಚಟುವಟಿಕೆಗಳನ್ನು ಮಾಡಲು ಸಾಧ್ಯವಾಗುವುದಿಲ್ಲ... ಚಿಂತಿಸದಿರಿ ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್...
ದೇವರೇ ಏನು ಬೇಕಾದರೂ ಕೊಡು ಆದರೆ ಹಲ್ಲು ನೋವು ಮಾತ್ರ ಕೊಡಬೇಡ ಎನ್ನುವ ಪ್ರಾರ್ಥನೆ ಹಲ್ಲು ನೋವು ಅನುಭವಿಸಿರುವ ಪ್ರತಿಯೊಬ್ಬರೂ ಮಾಡಿರುತ್ತಾರೆ. ಯಾಕೆಂದರೆ ಹಲ್ಲು ನೋವಿನಷ್ಟು ಸಂಕಟ ನೀಡುವ ನೋವು ಮತ್ತೊಂದು ಇಲ್ಲವೆನ್ನಬಹುದು. ಹಲ್ಲು ನೋವಿನ ಸಮಯದಲ್ಲಿ ಯಾವುದೇ ರೀತಿಯ ದೈನಂದಿನ ಚಟುವಟಿಕೆಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
ಆಹಾರ ಸೇವಿಸುವುದು ಕಷ್ಟವಾಗುತ್ತದೆ. ಹಲ್ಲು ನೋವು ಹೆಚ್ಚಾದಾಗ ತಲೆನೋವು, ಜ್ವರ ಕೂಡ ಕಾಣಿಸಿಕೊಳ್ಳಬಹುದು. ಇಂತಹ ಹಲ್ಲು ನೋವು ಯಾರಿಗೂ ಬರದಿರಲಿ ಎಂದು ಮನದಲ್ಲೇ ಅಂದುಕೊಳ್ಳುತ್ತೇವೆ. ಹಲ್ಲು ನೋವಿಗೆ ಪ್ರಮುಖವಾಗಿ ಬ್ಯಾಕ್ಟೀರಿಯಾ ಸೋಂಕು, ವಸಡಿನ ರೋಗ, ದುರ್ಬಲ ಹಲ್ಲುಗಳು ಪ್ರಮುಖ ಕಾರಣವಾಗಿದೆ.
ಬಾಲ್ಯದಲ್ಲಿ ಇರುವ ಹಲ್ಲುಗಳು ಕಿತ್ತು ಹೋಗಿ ಹೊಸ ಹಲ್ಲುಗಳು ಮೂಡಿ ಬರುತ್ತದೆ. ಇದರ ಬಳಿಕ ಬೆಳೆಯುತ್ತಾ ಇರುವಂತೆ ಯೌವನದಲ್ಲಿ ಕೊನೆಯ ಹಲ್ಲು ಬರುತ್ತದೆ. ಆದರೆ ಇದಕ್ಕೆ ಹೊರಬರಲು ಜಾಗವಿಲ್ಲದೆ ಇರುವ ಕಾರಣದಿಂದ ತುಂಬಾ ನೋವನ್ನು ಉಂಟು ಮಾಡುತ್ತದೆ.
ಆದರೆ ಈ ನೋವಿನೊಂದಿಗೆ ಸಂಪೂರ್ಣ ಹಲ್ಲುನೋವನ್ನು ನಿವಾರಣೆ ಮಾಡಲು ಮನೆಮದ್ದನ್ನು ಬಳಸಿಕೊಳ್ಳುವುದು ಹೇಗೆ ಎಂದು ಬೋಲ್ಡ್ ಸ್ಕೈ ನಿಮಗೆ ಹೇಳಿಕೊಡಲಿದೆ.....

ಬೇಕಾಗುವ ಸಾಮಗ್ರಿಗಳು
*ಬೆಳ್ಳುಳ್ಳಿ ರಸ 2-3 ಚಮಚ

ಬೇಕಾಗುವ ಸಾಮಗ್ರಿಗಳು
ಕಪ್ಪು ಉಪ್ಪು ಒಂದು ಚಿಟಿಕೆ

ಬೆಳ್ಳುಳ್ಳಿ
ಬೆಳ್ಳುಳ್ಳಿಯಲ್ಲಿ ಅಲಿಸಿನ್ ಎನ್ನುವಂತಹ ಉರಿಯೂತ ಶಮನಕಾರಿ ಗುಣವಿದೆ. ಇದು ವಸಡಿನ ಊತವನ್ನು ಕಡಿಮೆ ಮಾಡಿ ಹಲ್ಲಿನ ನೋವನ್ನು ನಿವಾರಿಸುತ್ತದೆ.

ಕಪ್ಪು ಉಪ್ಪು....
ಕಪ್ಪು ಉಪ್ಪಿನಲ್ಲಿ ಇರುವಂತಹ ನೈಸರ್ಗಿಕ ನಂಜುನಿರೋಧಕದೊಂದಿಗೆ ಸೋಡಿಯಂ ಇದೆ. ಇದು ಹಲ್ಲಿನಲ್ಲಿ ಬ್ಯಾಕ್ಟೀರಿಯಾದಿಂದ ಆಗುವಂತಹ ಸೋಂಕನ್ನು ನಾಶ ಮಾಡುವುದು. ಇದರಿಂದ ನೋವು ಕಡಿಮೆಯಾಗುವುದು.

ತಯಾರಿಸುವ ವಿಧಾನ
*ಒಂದು ಪಿಂಗಾಣಿಗೆ ಹೇಳಿದಷ್ಟು ಪ್ರಮಾಣದ ಸಾಮಗ್ರಿಗಳನ್ನು ಹಾಕಿಕೊಳ್ಳಿ.
*ಇದನ್ನು ಸರಿಯಾಗಿ ಪೇಸ್ಟ್ ಮಾಡಿಕೊಳ್ಳಿ.
*ಈ ಪೇಸ್ಟ್ ನ್ನು ಭಾದಿತ ಪ್ರದೇಶಕ್ಕೆ ಹಚ್ಚಿಕೊಂಡು ಹತ್ತು ನಿಮಿಷ ಕಾಲ ಹಾಗೆ ಬಿಡಿ.
*ನೋವು ಕಡಿಮೆಯಾಗುವ ತನಕ ಪ್ರತೀ ದಿನ ಹಚ್ಚಿಕೊಳ್ಳಿ.



Click it and Unblock the Notifications