Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಚಿಟಿಕೆ ಹೊಡೆಯುವುದರೊಳಗೆ, ಹಲ್ಲು ನೋವು ಮಂಗಮಾಯ!
ಹಲ್ಲು ನೋವಿನಷ್ಟು ಸಂಕಟ ನೀಡುವ ನೋವು ಮತ್ತೊಂದು ಇಲ್ಲವೆನ್ನಬಹುದು. ಹಲ್ಲು ನೋವಿನ ಸಮಯದಲ್ಲಿ ಯಾವುದೇ ರೀತಿಯ ದೈನಂದಿನ ಚಟುವಟಿಕೆಗಳನ್ನು ಮಾಡಲು ಸಾಧ್ಯವಾಗುವುದಿಲ್ಲ... ಚಿಂತಿಸದಿರಿ ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್...
ದೇವರೇ ಏನು ಬೇಕಾದರೂ ಕೊಡು ಆದರೆ ಹಲ್ಲು ನೋವು ಮಾತ್ರ ಕೊಡಬೇಡ ಎನ್ನುವ ಪ್ರಾರ್ಥನೆ ಹಲ್ಲು ನೋವು ಅನುಭವಿಸಿರುವ ಪ್ರತಿಯೊಬ್ಬರೂ ಮಾಡಿರುತ್ತಾರೆ. ಯಾಕೆಂದರೆ ಹಲ್ಲು ನೋವಿನಷ್ಟು ಸಂಕಟ ನೀಡುವ ನೋವು ಮತ್ತೊಂದು ಇಲ್ಲವೆನ್ನಬಹುದು. ಹಲ್ಲು ನೋವಿನ ಸಮಯದಲ್ಲಿ ಯಾವುದೇ ರೀತಿಯ ದೈನಂದಿನ ಚಟುವಟಿಕೆಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
ಆಹಾರ ಸೇವಿಸುವುದು ಕಷ್ಟವಾಗುತ್ತದೆ. ಹಲ್ಲು ನೋವು ಹೆಚ್ಚಾದಾಗ ತಲೆನೋವು, ಜ್ವರ ಕೂಡ ಕಾಣಿಸಿಕೊಳ್ಳಬಹುದು. ಇಂತಹ ಹಲ್ಲು ನೋವು ಯಾರಿಗೂ ಬರದಿರಲಿ ಎಂದು ಮನದಲ್ಲೇ ಅಂದುಕೊಳ್ಳುತ್ತೇವೆ. ಹಲ್ಲು ನೋವಿಗೆ ಪ್ರಮುಖವಾಗಿ ಬ್ಯಾಕ್ಟೀರಿಯಾ ಸೋಂಕು, ವಸಡಿನ ರೋಗ, ದುರ್ಬಲ ಹಲ್ಲುಗಳು ಪ್ರಮುಖ ಕಾರಣವಾಗಿದೆ.
ಬಾಲ್ಯದಲ್ಲಿ ಇರುವ ಹಲ್ಲುಗಳು ಕಿತ್ತು ಹೋಗಿ ಹೊಸ ಹಲ್ಲುಗಳು ಮೂಡಿ ಬರುತ್ತದೆ. ಇದರ ಬಳಿಕ ಬೆಳೆಯುತ್ತಾ ಇರುವಂತೆ ಯೌವನದಲ್ಲಿ ಕೊನೆಯ ಹಲ್ಲು ಬರುತ್ತದೆ. ಆದರೆ ಇದಕ್ಕೆ ಹೊರಬರಲು ಜಾಗವಿಲ್ಲದೆ ಇರುವ ಕಾರಣದಿಂದ ತುಂಬಾ ನೋವನ್ನು ಉಂಟು ಮಾಡುತ್ತದೆ.
ಆದರೆ ಈ ನೋವಿನೊಂದಿಗೆ ಸಂಪೂರ್ಣ ಹಲ್ಲುನೋವನ್ನು ನಿವಾರಣೆ ಮಾಡಲು ಮನೆಮದ್ದನ್ನು ಬಳಸಿಕೊಳ್ಳುವುದು ಹೇಗೆ ಎಂದು ಬೋಲ್ಡ್ ಸ್ಕೈ ನಿಮಗೆ ಹೇಳಿಕೊಡಲಿದೆ.....

ಬೇಕಾಗುವ ಸಾಮಗ್ರಿಗಳು
*ಬೆಳ್ಳುಳ್ಳಿ ರಸ 2-3 ಚಮಚ

ಬೇಕಾಗುವ ಸಾಮಗ್ರಿಗಳು
ಕಪ್ಪು ಉಪ್ಪು ಒಂದು ಚಿಟಿಕೆ

ಬೆಳ್ಳುಳ್ಳಿ
ಬೆಳ್ಳುಳ್ಳಿಯಲ್ಲಿ ಅಲಿಸಿನ್ ಎನ್ನುವಂತಹ ಉರಿಯೂತ ಶಮನಕಾರಿ ಗುಣವಿದೆ. ಇದು ವಸಡಿನ ಊತವನ್ನು ಕಡಿಮೆ ಮಾಡಿ ಹಲ್ಲಿನ ನೋವನ್ನು ನಿವಾರಿಸುತ್ತದೆ.

ಕಪ್ಪು ಉಪ್ಪು....
ಕಪ್ಪು ಉಪ್ಪಿನಲ್ಲಿ ಇರುವಂತಹ ನೈಸರ್ಗಿಕ ನಂಜುನಿರೋಧಕದೊಂದಿಗೆ ಸೋಡಿಯಂ ಇದೆ. ಇದು ಹಲ್ಲಿನಲ್ಲಿ ಬ್ಯಾಕ್ಟೀರಿಯಾದಿಂದ ಆಗುವಂತಹ ಸೋಂಕನ್ನು ನಾಶ ಮಾಡುವುದು. ಇದರಿಂದ ನೋವು ಕಡಿಮೆಯಾಗುವುದು.

ತಯಾರಿಸುವ ವಿಧಾನ
*ಒಂದು ಪಿಂಗಾಣಿಗೆ ಹೇಳಿದಷ್ಟು ಪ್ರಮಾಣದ ಸಾಮಗ್ರಿಗಳನ್ನು ಹಾಕಿಕೊಳ್ಳಿ.
*ಇದನ್ನು ಸರಿಯಾಗಿ ಪೇಸ್ಟ್ ಮಾಡಿಕೊಳ್ಳಿ.
*ಈ ಪೇಸ್ಟ್ ನ್ನು ಭಾದಿತ ಪ್ರದೇಶಕ್ಕೆ ಹಚ್ಚಿಕೊಂಡು ಹತ್ತು ನಿಮಿಷ ಕಾಲ ಹಾಗೆ ಬಿಡಿ.
*ನೋವು ಕಡಿಮೆಯಾಗುವ ತನಕ ಪ್ರತೀ ದಿನ ಹಚ್ಚಿಕೊಳ್ಳಿ.



Click it and Unblock the Notifications