Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಸಿಪ್ಪೆ ಎಂದು ತಾತ್ಸಾರ ಬೇಡ... ಇದರಲ್ಲಿಯೇ ಹೆಚ್ಚು ಪೋಷಕಾಂಶಗಳಿರುವುದು
ನಮಗೆ ಗೊತ್ತಿರುವ ಹಾಗೆ ಹಣ್ಣು ಮತ್ತು ತರಕಾರಿಗಳು ಅಗತ್ಯವಾದ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಅವು ನಮ್ಮ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇವುಗಳ ಸಿಪ್ಪೆಯೂ ಹೆಚ್ಚು ಆರೋಗ್ಯಕರವಾದದ್ದು ಎನ್ನುವುದನ್ನು ನಾವು ತಿಳಿದಿಲ್ಲ. ಸಾಮಾನ್ಯವಾಗಿ ನಾವು ಹಣ್ಣು ಹಾಗೂ ತರಕಾರಿಯನ್ನು ಬಳಸುವಾಗ ಅದರ ಸಿಪ್ಪೆಯನ್ನು ತೆಗೆದು ಕಸದ ಬುಟ್ಟಿಗೆ ಅಥವಾ ಗಿಡ-ಮರಗಳ ಬುಡಕ್ಕೆ ಹಾಕುತ್ತೇವೆ.
ಈ ಸಿಪ್ಪೆಗಳು ಎಷ್ಟು ವರ್ಣ ರಂಜಿತವಾಗಿ ಮನಸ್ಸಿಗೆ ಮುದ ನೀಡುತ್ತವೆಯೋ ಅಷ್ಟೇ ಪ್ರಮಾಣದಲ್ಲಿ ಪೌಷ್ಟಿಕಾಂಶವನ್ನು ಒದಗಿಸುತ್ತವೆ. ಕೆಲವು ವರದಿಯ ಪ್ರಕಾರ ಸಿಪ್ಪೆಗಳಿಂದ ಕ್ಯಾನ್ಸರ್ನಂತಹ ರೋಗಗಳನ್ನು ತಡೆಗಟ್ಟಬಹುದು. ಕೆಲವು ಹಣ್ಣು ಹಾಗೂ ತರಕಾರಿಗಳ ಸಿಪ್ಪೆ ಮತ್ತು ಬೀಜಗಳನ್ನು ಎಸೆಯುವುದರಿಂದ ಆರೋಗ್ಯಕರ ವಸ್ತುವನ್ನು ಎಸೆಯುತ್ತಿದ್ದೇವೆ ಎನ್ನುವುದನ್ನು ನಾವು ಅರಿಯಬೇಕು.
ಇವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ನಿತ್ಯ ನಾವು ಉಪಯೋಗಿಸುವಂತಹ ತರಕಾರಿಗಳ ಸಿಪ್ಪೆಯಿಂದ ಯಾವೆಲ್ಲಾ ಉಪಯೋಗಗಳನ್ನು ಪಡೆದುಕೊಳ್ಳಬಹುದು ಎನ್ನುವುದನ್ನು ತಿಳಿಯೋಣ ಬನ್ನಿ....

ಕಲ್ಲಂಗಡಿ ತೊಗಟೆ (ರಿಂಡ್ಸ್)
ಕಲ್ಲಂಗಡಿಯ ತೊಗಟೆಯು ಅಮೈನೋ ಆಮ್ಲದಿಂದ ಸಮೃದ್ಧವಾಗಿದೆ. ಇದು ರಕ್ತನಾಳದ ಹಿಗ್ಗುವಿಕೆಗೆ ಸಹಾಯವಾಗುತ್ತದೆ. ಇದನ್ನು ಸೇವಿಸುವುದರಿಂದ ರಕ್ತ ಪರಿಚಲನೆ ಸುಧಾರಣೆಗೊಂಡು ದೇಹವು ಆರೋಗ್ಯವಾಗಿರುವಂತೆ ಮಾಡುತ್ತದೆ.

ಸ್ಟ್ರಾಬೆರ್ರಿಯ ಎಲೆಗಳು
ಇದು ದೇಹದಲ್ಲಿರುವ ಹಾನಿಕಾರಕ ರಾಡಿಕಲ್ಸ್ನ್ನು ಹೊರ ಹಾಕಲು ಸಹಾಯ ಮಾಡುತ್ತದೆ. ಸ್ಟ್ರಾಬೆರ್ರಿ ಎಲೆಗಳ ಕಸಾಯ ಮಾಡಿ ಕುಡಿಯುವುದರಿಂದ ದೇಹವು ಆರೋಗ್ಯ ಪೂರ್ಣವಾಗಿರುತ್ತದೆ.

ಕಾನ್ ಕ್ಯೂಬ್ಸ್
ಕಾರ್ನ್ ಕಾಬ್ಸ್ಗಳು ಕ್ಯಾಲೋರಿಗಳನ್ನು ಕಡಿಮೆಮಾಡುತ್ತವೆ. ಮಧುಮೇಹಕ್ಕೆ, ಕಣ್ಣಿನ ಆರೋಗ್ಯ ಕಾಪಾಡಲು, ಹೃದಯ ನಾಳಗಳ ಆರೋಗ್ಯಕ್ಕೆ ಒಳ್ಳೆಯದು. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ನಿಂಬೆ ಹಣ್ಣಿನ ಸಿಪ್ಪೆ
ನಿಂಬೆ ಸಿಪ್ಪೆಯು ಫೈಬರ್ ಹಾಗೂ ಸಮೃದ್ಧವಾದ ವಿಟಮಿನ್ ಎ ಸತ್ವವನ್ನು ಒಳಗೊಂಡಿದೆ. ಇದು ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದನ್ನು ಸಿಟ್ರಿಕ್ ಹಣ್ಣುಗಳ ಜೊತೆಗೆ ಅಥವಾ ಜೇನುತುಪ್ಪ ಮತ್ತು ಮೊಸರು ಮಿಶ್ರಣದೊಂದಿಗೆ ಸೇವಿಸಬೇಕು.

ಕುಂಬಳಕಾಯಿ ಬೀಜ
ಕುಂಬಳಕಾಯಿ ಬೀಜದಲ್ಲಿ ಒಮೆಗಾ-3, ಸತು, ಮೆಗ್ನೀಸಿಯಮ್, ಫೈಬರ್, ಕ್ಯಾಲ್ಸಿಯಂ, ವಿಟಮಿನ್ ಬಿ ಸಮೃದ್ಧವಾಗಿದೆ. ಇದು ಉರಿಯೂತ, ಹೃದಯ ರೋಗ, ಕ್ಯಾನ್ಸರ್, ಸಂಧಿವಾತದ ಅಪಾಯವನ್ನು ತಡೆಯುತ್ತದೆ. ಈ ಬೀಜಗಳನ್ನು ಹುರಿದುಕೊಂಡು ಸೇವಿಸಬಹುದು. ಹಸಿಯ ಬೀಜವನ್ನು ಹಾಗೇ ಸೇವಿಸಬಹುದು. ಇಲ್ಲವಾದರೆ ಬ್ರೆಡ್ ಮತ್ತು ಸಲಾಡ್ಗಳ ಜೊತೆಯಲ್ಲೂ ಸೇವಿಸಬಹುದು.

ಕಿತ್ತಳೆ ಸಿಪ್ಪೆ
ಕಿತ್ತಳೆ ಸಿಪ್ಪೆಯು ಫೈಬರ್, ವಿಟಮಿನ್ ಮತ್ತು ಫ್ಲವೋನಾಯಿಡ್ಗಳ ಶಕ್ತಿಯಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರಕ್ತನಾಳಗಳ ರಕ್ಷಣೆ ಮತ್ತು ದೇಹದಲ್ಲಿ ಕಾಣಿಸಿಕೊಂಡ ಉರಿಯೂತಗಳ ನಿವಾರಣೆಗೆ ಸಹಾಯ ಮಾಡುತ್ತದೆ.

ಸೌತೆಕಾಯಿ ಸಿಪ್ಪೆ
ಸೌತೆಕಾಯಿ ಸಿಪ್ಪೆ ಫೈಬರ್ ಗುಣದ ಉತ್ತಮ ಮೂಲ ಎಂದು ಹೇಳಲಾಗುತ್ತದೆ. ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಜೊತೆಗೆ ಕರುಳಿನ ಕ್ಯಾನ್ಸರ್ ಆಗದಂತೆ ತಡೆಯುವುದು.

ಬೀಟ್ರೂಟ್ ಸಿಪ್ಪೆ
ಇದನ್ನು ಹುರಿದು ಅಥವಾ ಸೂಪ್ ಮಾಡಿ ಕುಡಿಯಬಹುದು. ಇದರಿಂದ ಉರಿಯೂತ ಮತ್ತು ಉತ್ಕರ್ಷಣ ನಿರೋಧಕ ಅಂಶವು ಹೆಚ್ಚುವುದು.



Click it and Unblock the Notifications