Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬೇಸಿಗೆ ಬಿಸಿಲು ಸುಡುವ ಮೊದಲೇ ಎಚ್ಚೆತ್ತುಕೊಳ್ಳಿ! ಆಹಾರ ಕ್ರಮ ಹೀಗಿರಲಿ
ಬೇಸಿಗೆಯಲ್ಲಿ ನಮ್ಮ ದೇಹದ ಉಷ್ಣಾಂಶ ಬಹಳ ಹೆಚ್ಚುತ್ತದೆ. ಈ ಹೆಚ್ಚಾದ ಉಷ್ಣದಿಂದ ಇನ್ನೂ ತೊಂದರೆಗಳು ಹೆಚ್ಚುತ್ತವೆ. ಬರುಬರುತ್ತಾ ಬಿಸಿ ಹೆಚ್ಚಾದಂತೆ ಬೇಗೆ ಅನುಭವಿಸುವ ಬದಲು ಮುಂಚಿನಿಂದಲೇ ಕೆಲವು ಟಿಪ್ಸ್ ಅನುಸರಿಸುವುದು ಜಾಣತನ....
ಬೇಸಿಗೆ ಬಂದೇಬಿಡ್ತು ಆಗಲೇ. ಶುರು ಆಗುತ್ತಲೇ ಬಿಸಿಲು ಹೀಗೆ ಸುಡುತ್ತಿದೆ. ಇನ್ನೂ ದಿನ ಉರುಳುತ್ತಾ ಹೇಗಪ್ಪಾ ತಡೆದುಕೊಳ್ಳುವುದು. ಬೇಸಿಗೆಯಲ್ಲಿ ನಮ್ಮ ದೇಹದ ಉಷ್ಣಾಂಶ ಬಹಳ ಹೆಚ್ಚುತ್ತದೆ. ಈ ಹೆಚ್ಚಾದ ಉಷ್ಣದಿಂದ ಇನ್ನೂ ತೊಂದರೆಗಳು ಹೆಚ್ಚುತ್ತವೆ. ಬರುಬರುತ್ತಾ ಬಿಸಿ ಹೆಚ್ಚಾದಂತೆ ಬೇಗೆ ಅನುಭವಿಸುವ ಬದಲು ಮುಂಚಿನಿಂದಲೇ ಕೆಲವು ಟಿಪ್ಸ್ ಅನ್ನು ಅನುಸರಿಸಿ ಈ ಉಷ್ಣವನ್ನು ತಡೆಗಟ್ಟುವುದು ಹೇಗೆ ಎಂದು ನೋಡೋಣ. ಬಾಡಿ ಹೀಟ್ ಕಮ್ಮಿ ಮಾಡುವ 9 ಪಾನೀಯಗಳು
ನಮ್ಮ ದೇಹದ ಆರೋಗ್ಯವೂ ಬಹಳಷ್ಟು ನಮ್ಮ ಆಹಾರ ಕ್ರಮದ ಮೇಲೆ ಅವಲಂಬಿತವಾಗಿರುತ್ತದೆ. ಹೀಗಾಗಿ, ಆಹಾರದ ಮೂಲಕ ನಮ್ಮ ಶರೀರವು ಬಿಸಿಲಿನ ಬೇಗೆಗೆ ಕುಗ್ಗಿ ಹೋಗದಂತೆ ಹೇಗೆ ಮುನ್ನೆಚ್ಚರ ವಹಿಸುವುದು ಎಂದು ತಿಳಿದುಕೊಳ್ಳೋಣ...

ಎಳನೀರು
ಎಳನೀರು ನಮಗೆ ಕಲ್ಪವೃಕ್ಷ ಕೊಟ್ಟ ವರ. ಇದಕ್ಕೆ ಸಾಟಿ ಇನ್ನೂ ಯಾವುದಿಲ್ಲ. ದಿಣ್ನಕ್ಕೆ ಒಮ್ಮೆ ಅಥವಾ ಎರಡು ದಿನಕ್ಕೊಮ್ಮೆ ಎಳನೀರನ್ನು ತಪ್ಪದೆ ಕುಡಿಯಿರಿ. ಎಳನೀರು ದೇಹಕ್ಕೆ ತಂಪು ಅಷ್ಟೇ ಅಲ್ಲದೆ ಬೇಸಿಗೆಯಲ್ಲಿ ದೇಹದ ನೀರಿನಂಶವನ್ನು ಕಾಪಾಡುತ್ತದೆ. ಎಳನೀರನ್ನು ದೊಡ್ಡವರೇ ಅಲ್ಲದೆ ಚಿಕ್ಕ ಮಕ್ಕಳು ಕೂಡ ಇಷ್ಟಪಟ್ಟು ಸೇವಿಸುತ್ತಾರೆ. ಏಳನೀರಿನಲ್ಲಿರುವ ಖನಿಜಾಂಶಗಳು ನಮಗೆ ಆಗುವ ಸುಸ್ತನ್ನು ಕೂಡ ಕಡಿಮೆ ಮಾಡುತ್ತವೆ. ನೀವು ಎಷ್ಟೇ ಅವಸರದಲ್ಲಿ ಇರಲಿ, ಕಛೇರಿಗೆ ಹೋಗುವಾಗ, ಅಥವಾ ಹೊರಗಡೆ ಶಾಪಿಂಗ್ ಅಥವಾ ಇನ್ನೇನಾದರೂ ವಿಷಯವಾಗಿ ಸುತ್ತುವಾಗ ದಾರಿಯಲ್ಲೊಂದು ಐದು ನಿಮಿಷ ವಿನಿಯೋಗಿಸಿ ಎಳನೀರನ್ನು ತಪ್ಪದೆ ಕುಡಿಯಿರಿ.ನೈಸರ್ಗಿಕ ಪಾನೀಯ ಎಳನೀರಿನ ಆರೋಗ್ಯಕಾರಿ ಪ್ರಯೋಜನಗಳು

ನಿಂಬೆಹಣ್ಣು
ನಿಂಬೆಹಣ್ಣು ಬೇಸಿಗೆಯಲ್ಲಿ ಬಹು ಉಪಯೋಗಿ. ಬಹಳಷ್ಟು ವಿಧದಲ್ಲಿ ಈ ನಿಂಬೆಹಣ್ಣನ್ನು ಸೇವಿಸಬಹುದು. ನಿಂಬೆ ಜ್ಯೂಸ್ ತಯಾರಿಸುವುದು ಸುಲಭ ಹಾಗೂ ರುಚಿಕರ ಕೂಡ. ಇನ್ನೂ ನಮ್ಮೆಲ್ಲರ ನೆಚ್ಚಿನ ಚಿತ್ರಾನ್ನ ಹೇಳಬೇಕೆ? ನಿಂಬೆಹಣ್ಣು ವಿಟಮಿನ್ ಸೀ ಆಗರ. ಇದು ದೇಹಕ್ಕೆ ಬಹಳಷ್ಟು ತಂಪು ನೀಡುತ್ತದೆ. ದಿನನಿತ್ಯ ಒಂದಲ್ಲ ಒಂದು ರೀತಿ ನಿಂಬೆ ಹಣ್ಣನು ಸೇವಿಸಿರಿ ಹಾಗೂ ತಂಪಾಗಿರಿ.

ಕಲ್ಲಂಗಡಿ
ಬೇಸಿಗೆ ಬಂತೆಂದರೆ ಪ್ರಕೃತಿ ನಮಗೆ ಕೂಡುವ ಕೊಡುಗೆ ಈ ಕಲ್ಲಂಗಡಿ. ಕಲ್ಲಂಗಡಿ ಹಣ್ಣು ತನ್ನ ನೀರಿನಂಶದಿಂದ ಬೇಸಿಗೆಯಲ್ಲಿ ನಮ್ಮ ಮಿತ್ರ. ಕಲ್ಲಂಗಡಿ ಹಣ್ಣಿನಲ್ಲಿ ಬಹಳಷ್ಟು ಪೋಷಕಾಂಶಗಳು ಹಾಗೂ ಆಂಟಿ ಆಕ್ಸಿಡೆಂಟ್ ಗಳು ಸಹ ಇದ್ದಾವೆ. ಇದರ ಕ್ಯಾಲೋರಿ ಅಂಶ ಬಹು ಕಡಿಮೆ. ಹೀಗಾಗಿ ಇದು ನಮ್ಮ ದೇಹದ ತೂಕ ನಿರ್ವಹಿಸಲು ಕೂಡ ಸಹಕಾರಿ. ಕಲ್ಲಂಗಡಿ ತಿನ್ನಲು ರುಚಿ. ಮಕ್ಕಳಿಗೆ ಅವರ ಲಂಚ್ ಬಾಕ್ಸ್ ನಲ್ಲಿ ಚಿಕ್ಕ ಚಿಕ್ಕ ತುಂಡುಗಳನ್ನು ಮಾಡಿ ಹಾಕಿ ಕಳಿಸಿ. ಕಛೇರಿಗೆ ಹೋಗುವವರು ತಮ್ಮ ಡೆಸ್ಕ್ನಲ್ಲೇ ಸುಲಭವಾಗಿ ತಿನ್ನಬಹುದು. ಹೀಗಾಗಿ ಮನೆಯಲ್ಲೇ ಕಟ್ ಮಾಡಿ ನೀವು ಸುಲಭವಾಗಿ ಕೊಂಡೊಯ್ಯಿರಿ. ಬಿರು ಬೇಸಿಗೆಗೆ ತಂಪಾದ ಮಸಾಲಾ ಕಲ್ಲಂಗಡಿ ಜ್ಯೂಸ್!

ಮಜ್ಜಿಗೆ
ಮಜ್ಜಿಗೆ ಇಲ್ಲದೆ ನಮ್ಮ ದಕ್ಷಿಣ ಭಾರತ ಉಂಟೆ. ಮಜ್ಜಿಗೆಯ ಬಗ್ಗೆ ಹೆಚ್ಚಾಗಿ ಹೇಳುವುದೇನು ಇಲ್ಲ. ಮನೆಯಲ್ಲಿ ಹಿರಿಯರು ಮಜ್ಜಿಗೆಯ ಗುಣಗಾನ ಬೇಸಿಗೆಯಲ್ಲಿ ತಪ್ಪದೆ ಮಾಡುತ್ತಾರೆ. ಮಜ್ಜಿಗೆಯೂ ಕೂಡ ದೇಹಕ್ಕೆ ತಂಪು ನೀಡುತ್ತದೆ. ಆದಷ್ಟು ಮನೆಯಲ್ಲಿಯೇ ಮಜ್ಜಿಗೆ ಮಾಡಿಕೊಳ್ಳುವುದು ಉತ್ತಮ. ಹೊರಗಡೆ ಮಜ್ಜಿಗೆ ತಯಾರಿಸಲು ಬಳಸುವ ನೀರು ಉತ್ತಮವಾಗಿಲ್ಲದೆ ಇರಬಹುದು. ಹೆಚ್ಚು ಕಷ್ಟಪಡುವ ಅಗತ್ಯವಿಲ್ಲದೆ ಮನೆಯಲ್ಲಿ ಮಜ್ಜಿಗೆ ತಯಾರಿಸಿ ಇಟ್ಟುಕೊಳ್ಳಿ. ಹೊರಗಿನಿಂದ ಬಂದೊಡನೆ ನೀವಾಗಲಿ ಅಥವಾ ಮನೆಗೆ ಬರುವ ಅಥಿತಿಗಾಗಲಿ ಮಜ್ಜಿಗೆ ಉತ್ತಮ ಪಾನೀಯ. ಮಜ್ಜಿಗೆಯಲ್ಲಿ ಸ್ವಲ್ಪ ಶುಂಟಿ ಕೊತ್ತಂಬರಿ ಹಾಕಿದರೆ ಇನ್ನೂ ಅದರ ರುಚಿ ಎರಡರಷ್ಟು ಆಗುತ್ತದೆ.

ಹೆಸರು ಬೇಳೆ
ಹೆಸರು ಬೆಳೆ ಇನ್ನೊಂದು ಪ್ರಮುಖ ಉಪಯೋಗಿ ವಸ್ತು. ನಿಮ್ಮ ಅಡಿಗೆಯಲ್ಲಿ ನಿಯಮಿತವಾಗಿ ಹೆಸರುಬೇಳೆ ಬಳಸಿ. ಪಾಯಸ, ಸಿಹಿ ಪೊಂಗಲ್, ಖಾರ ಪೊಂಗಲ್, ಕೋಸಂಬರಿ ಹೀಗೆ ಅನೇಕ ಬಗೆಯಲ್ಲಿ ಹೆಸರುಬೇಳೆಯನ್ನು ಸೇವಿಸ ಬಹುದು. ಹೆಸರುಬೇಳೆ ನಮ್ಮ ದೇಹಕ್ಕೆ ಬೇಕಾದ ಪ್ರೋಟೀನ್ ಕೂಡ ನೀಡುತ್ತದೆ. ಹೆಸರುಬೇಳೆ ಪಾನಕ /ಪಾಯಸ ಬಹು ರುಚಿ. ಬಿಸಿಲಿನ ದಾಹ ತಣಿಸುವ- ತಂಪು ತಂಪು ಮಜ್ಜಿಗೆ...

ಸೌತೆಕಾಯಿ
ಸೌತೆಕಾಯಿ ಬೇಸಿಗೆಯಲ್ಲಿ ಅತಿ ಹೆಚ್ಚು ಮಾರಾಟವಾಗುವುದೇನೋ. ಅಷ್ಟು ಡಿಮಾಂಡ್ ಇದೆ. ಸೌತೆಕಾಯಿ ಬೇಸಿಗೆಯಲ್ಲಿ ಮರೆಯದೆ ಉಪಯೋಗಿಸಬೇಕು. ಸೌತೆಕಾಯಿಯಲ್ಲಿ ಅತಿ ಕಡಿಮೆ ಕ್ಯಾಲೊರಿಗಳು ಇದ್ದು ಬಹಳಷ್ಟು ಪೋಷಕಾಂಶಗಳಿಂದ ಸಮೃದ್ದವಾಗಿದೆ. ಇದರಿಂದ ದೇಹಕ್ಕೆ ತಂಪು ಮಾತ್ರ ಅಲ್ಲದೆ ದೇಹದ ತೂಕವು ನಿಯಂತ್ರಣದಲ್ಲಿ ಇರುತ್ತದೆ.ದೇಹಕ್ಕೆ ತಂಪುಣಿಸುವ ಸೌತೆಕಾಯಿ ಜ್ಯೂಸ್ನ ಕರಾಮತ್ತೇನು?

ಕರಿದ ಪದಾರ್ಥಗಳನ್ನು ಹೆಚ್ಚಾಗಿ ತಿನ್ನಬೇಡಿ
ಇವೆಷ್ಟೆ ಅಲ್ಲದೆ, ನಾವು ಸೇವಿಸುವ ಆಹಾರದಲ್ಲೂ ಸ್ವಲ್ಪ ಗಮನ ವಹಿಸಬೇಕು. ಕರಿದ ಪದಾರ್ಥಗಳನ್ನು ಹೆಚ್ಚಾಗಿ ತಿನ್ನಬೇಡಿ. ಹೆಚ್ಚು ನೀರು ಕುಡಿಯಿರಿ. ಕಾಫಿ ಟೀ ಇಂದ ಸ್ವಲ್ಪ ದೂರ ಇದ್ದರೆ ಒಳ್ಳೆಯದು. ಇನ್ನೂ ಹೊರಗೆ ಹೋಗುವಾಗ ಕ್ಯಾಪ್ / ಟೋಪಿ ಧರಿಸಿ. ಬಿಸಿಲ ಬೇಗೆ ಹೆಚ್ಚು ಹೆಚ್ಚಾಗಿ ನಾವು ಏನಾದರೂ ತೊಂದರೆ ಅನುಭವಿಸುವ ಮೊದಲೇ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಬೇಸಿಗೆಯಲ್ಲೂ ಹಾಯಾಗಿ ಇರಬಹುದು.



Click it and Unblock the Notifications











