Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಬಾಳೆಹಣ್ಣಿನ ಸಿಪ್ಪೆ ಎಸೆಯಬೇಡಿ! ಇದರಿಂದ ಸಾಕಷ್ಟು ಪ್ರಯೋಜನಗಳಿವೆ...
ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುವುದು ಸಾಮಾನ್ಯ ಸಂಗತಿಯಾಗಿದೆ.ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರೆಯಾ ಎನ್ನುವ ಪ್ರಶ್ನೆ ಮನಸ್ಸಿನಲ್ಲಿ ಮೂಡಬಹುದು. ಆದರೆ ಬಾಳೆಹಣ್ಣಿನ ಸಿಪ್ಪೆಯಲ್ಲೂ ಪೋಷಕಾಂಶಗಳಿವೆ....
ಬಾಳೆಹಣ್ಣಿನ ಸಿಪ್ಪೆಯನ್ನು ಸಹ ಬಳಸಿಕೊಳ್ಳಬಹುದಾ? ಏನ್ರೀ, ತಿಂದು ಕಸದ ಬುಟ್ಟಿಗೆ ಎಸೆಯುವ ಸಿಪ್ಪೆಯಲ್ಲಿಯು ಸಹ ರಸ ಮಾಡಬಹುದು ಎಂದು ಹೇಳುತ್ತೀರೇನು? ಕೇಳದಿಕ್ಕೆ ತುಂಬಾ ವಿಲಕ್ಷಣವಾಗಿದೆ ಎಂಬ ಅನಿಸಿಕೆ ನಿಮ್ಮಿಂದ ವ್ಯಕ್ತವಾಗಬಹುದು. ಆದರೆ ಒಮ್ಮೆ ಯೋಚಿಸಿ, ಎಂತಹ ಒಂದು ಗೂಡಂಗಡಿಯಲ್ಲೂ ಸಹ ದೊರೆಯುವ, ಐದಡಿ ಜಾಗ ದೊರೆತರೆ ಬೆಳೆಯಬಹುದಾದ ಹಣ್ಣು ಅದೊಂದೆ!. ಎಲ್ಲಾ ಕಡೆಯಲ್ಲೂ ಸಿಗುತ್ತದೆ. ದಿನಕ್ಕೆರಡು ಬಾಳೆಹಣ್ಣು ಸೇವಿಸಿ, ವೈದ್ಯರಿಂದ ದೂರವಿರಿ!
ಎಲ್ಲರಿಗೂ ಕೈಗೆಟಕುವ ಬೆಲೆಯಲ್ಲಿ ಸಿಗುವ ಕೆಲವೇ ಕೆಲವು ಹಣ್ಣುಗಳಲ್ಲಿ ಇದು ಅಗ್ರ ಸ್ಥಾನದಲ್ಲಿದೆ. ಇದನ್ನು ತಿನ್ನುವುದರ ಜೊತೆಗೆ ಕಸಕ್ಕೆ ಎಸೆಯುವ ಅದರ ಸಿಪ್ಪೆಯಲ್ಲೂ ಸಹ ಪ್ರಯೋಜನಗಳನ್ನು ಪಡೆಯಬಹುದು. ಬಾಳೆ ಹಣ್ಣಿನ ತಿರುಳಿನಲ್ಲಿ ಪೋಷಕಾಂಶಗಳು ಮತ್ತು ಕಾರ್ಬೋಹೈಡ್ರೇಟ್ಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಬಾಳೆಹಣ್ಣು: ಆರೋಗ್ಯಕ್ಕೂ ಸೈ-ಸೌಂದರ್ಯಕ್ಕೂ ಜೈ!
ಈ ತಿರುಳಿನಲ್ಲಿ ವಿಟಮಿನ್ ಬಿ-6, ಬಿ- 12, ಮ್ಯಗ್ನೀಶಿಯಂ ಮತ್ತು ಪೊಟಾಶಿಯಂಗಳು ಅಧಿಕವಾಗಿರುತ್ತದೆ. ಅದರಲ್ಲೂ ಬಾಳೆಹಣ್ಣಿನ ತಿರುಳು ಕಪ್ಪು ಬಣ್ಣಕ್ಕೆ ತಿರುಗಿದಾಗ ಅದರಲ್ಲಿ ಸಕ್ಕರೆಯ ಪ್ರಮಾಣ ಅಧಿಕವಾಗಿರುತ್ತದೆ. ಹಾಗಾದರೆ ಬನ್ನಿ ಈ ಬಾಳೆ ಹಣ್ಣಿನ ಸಿಪ್ಪೆಯನ್ನು ಏನೆಲ್ಲಾ ಸದುಪಯೋಗಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣಾ..

ಹಲ್ಲು ಬಿಳಿಯಾಗಿಸುವುದು
ಪ್ರತಿದಿನ ಒಂದು ನಿಮಿಷಗಳ ಕಾಲ ಬಾಳೆಹಣ್ಣಿನ ಸಿಪ್ಪೆಯನ್ನು ನಿಮ್ಮ ಹಲ್ಲುಗಳ ಮೇಲೆ ಹಾಕಿ ಚೆನ್ನಾಗಿ ಉಜ್ಜಿ. ಇದರಿಂದ ನಿಮ್ಮ ಹಲ್ಲುಗಳಿಗೆ ಫಳ ಫಳ ಎನ್ನುವ ಹೊಳಪು ದೊರೆಯುತ್ತದೆ. ಇದನ್ನು ಮಾಡಲಿಲ್ಲವಾದಲ್ಲಿ ನೀವು ನಿಮ್ಮ ದಂತ ವೈದ್ಯರಿಗೆ ಸಾವಿರಾರು ರೂಪಾಯಿಯನ್ನು ವ್ಯಯಿಸಬೇಕಾಗುತ್ತದೆ.

ಮೊಡವೆಗಳಿಗೆ ರಾಮಬಾಣ
ಮೊಡವೆಗಳು ಉಂಟಾದಾಗ ಅದರ ಮೇಲೆ ಬಾಳೆಹಣ್ಣಿನ ಸಿಪ್ಪೆಯನ್ನು ಹಚ್ಚಿ. ಅದನ್ನು ಹಾಗೆಯೇ 30 ನಿಮಿಷ ಬಿಡಿ. ಇದರಿಂದ ನೋವು ಕಡಿಮೆಯಾಗುತ್ತದೆ. ಬಾಳೆಹಣ್ಣಿನ ಸಿಪ್ಪೆಯ ಜೊತೆಗೆ ಸಸ್ಯಜನ್ಯ ಎಣ್ಣೆಯನ್ನು ಬೆರೆಸಿ ಹಚ್ಚಿದರೆ ನೋವು ಮತ್ತಷ್ಟು ಕಡಿಮೆಯಾಗುತ್ತದೆ.

ಚರ್ಮದ ಗಂಟು ನಿವಾರಣೆ
ನಿಮಗೆ ಚರ್ಮದ ಗಂಟಿನಿಂದ ಯಾವುದೇ ಸಮಸ್ಯೆಯಾಗುತ್ತಾ ಇದ್ದರೆ ಬಾಳೆಹಣ್ಣಿನ ಸಿಪ್ಪೆಯಿಂದ ಇದನ್ನು ನಿವಾರಣೆ ಮಾಡಬಹುದು. ಭಾದಿತ ಪ್ರದೇಶಕ್ಕೆ ಬಾಳೆಹಣ್ಣಿನ ಸಿಪ್ಪೆಯನ್ನು ಉಜ್ಜಿಕೊಳ್ಳಿ ಮತ್ತು ಇದು ಬೇಗನೆ ನಿವಾರಣೆಯಾಗುವುದು.

ನೋಯುವ ಮಚ್ಚೆಗಳಿಗೆ
ಬಾಳೆಹಣ್ಣಿನಲ್ಲಿ ನೋವುನಿವಾರಕ ಗುಣಗಳು ಇವೆ. ಬಾಳೆಹಣ್ಣಿನ ಸಿಪ್ಪೆಯನ್ನು ನೋಯುತ್ತಿರುವ ಮಚ್ಚೆಗೆ ಉಜ್ಜಿದರೆ ನೋವು ಕಡಿಮೆಯಾಗುವುದು.

ತೂಕ ಕಳೆದುಕೊಳ್ಳಲು
ಇದನ್ನು ಓದಿ ಸ್ವಲ್ಪ ಅಚ್ಚರಿಯಾಗಬಹುದು. ಆದರೆ ಬಾಳೆಹಣ್ಣಿನ ಸಿಪ್ಪೆಯನ್ನು ತೂಕ ಕಳೆದುಕೊಳ್ಳಲು ಬಳಸಬಹುದು. ಪ್ರತೀ ದಿನ ಎರಡು ಬಾಳೆಹಣ್ಣುಗಳನ್ನು ಮಧ್ಯಾಹ್ನದ ಊಟದ ವೇಳೆ ಸೇವಿಸಿ. ಇದರ ಸಿಪ್ಪೆಗಳನ್ನು ಪ್ರತ್ಯೇಕವಾಗಿ ಸೇವಿಸಿ. ರಾತ್ರಿ ವೇಳೆ ಊಟ ಮಾಡಬೇಡಿ. ಯಾಕೆಂದರೆ ಬಾಳೆಹಣ್ಣಿನ ಸಿಪ್ಪೆಯು ಸರಿಯಾಗಿ ಕರಗಬೇಕು. ಅಧ್ಯಯನಗಳ ಪ್ರಕಾರ ಈ ಆಹಾರ ಕ್ರಮದಿಂದ ಸುಮಾರು 2.5 ಕೆಜಿಯಷ್ಟು ತೂಕ ಕಳೆದುಕೊಳ್ಳಬಹುದು.

ಕೀಟಗಳ ಕಡಿತಕ್ಕೆ
ಯಾವುದೇ ಕೀಟಗಳು ಕಚ್ಚಿದರೆ ಆ ಜಾಗಕ್ಕೆ ಬಾಳೆಹಣ್ಣಿನ ಸಿಪ್ಪೆಯನ್ನು ಉಜ್ಜಿಕೊಂಡರೆ ನೋವು ನಿವಾರಣೆಯಾಗುವುದು ಮತ್ತು ಭಾದಿತ ಪ್ರದೇಶವು ಬಾತುಕೊಳ್ಳುವುದು ಕಡಿಮೆಯಾಗುವುದು.

ಮುಖದ ಸುಕ್ಕು ನಿವಾರಣೆಯಾಗಲು...
ಬಾಳೆಹಣ್ಣಿನ ಸಿಪ್ಪೆಯು ಚರ್ಮಕ್ಕೆ ತೇವಾಂಶವನ್ನು ಒದಗಿಸುತ್ತವೆ. ಬಾಳೆಹಣ್ಣಿನ ಸಿಪ್ಪೆಗೆ ಸ್ವಲ್ಪ ಮೊಟ್ಟೆಯ ಲೋಳೆಯನ್ನು ಬೆರೆಸಿ, ಇದನ್ನು ಮುಖಕ್ಕೆ ಹಚ್ಚಿ ಐದು ನಿಮಿಷ ಬಿಡಿ. ನಂತರ ಮುಖ ತೊಳೆಯಿರಿ. ಇದರಿಂದ ಸುಕ್ಕುನಿವಾರಣೆಯಾಗುತ್ತದೆ.



Click it and Unblock the Notifications