Latest Updates
-
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು?
ಮೂಲವ್ಯಾಧಿ ಬಂದರೆ ಆತಂಕ ಬೇಡ! ಇಲ್ಲಿದೆ ನೋಡಿ ಮನೆಮದ್ದುಗಳು
ಹೇಳಿಕೊಳ್ಳಲು ಸಾಧ್ಯವಾಗದೇ ಇರುವ ಕಾಯಿಲೆಗಳಲ್ಲೊಂದು ಮೂಲವ್ಯಾಧಿ. ಮಲವಿಸರ್ಜನೆ ಕಷ್ಟವಾಗಿ ನೋವು ನೀಡುವುದು ಈ ವ್ಯಾಧಿಯ ಪ್ರಮುಖ ಲಕ್ಷಣ, ಚಿಂತಿಸದಿರಿ ಆಯುರ್ವೇದ ಈ ತೊಂದರೆಗೆ ಅತ್ಯುತ್ತಮವಾದ ಪರಿಹಾರವನ್ನು ಒದಗಿಸಿದೆ, ಮುಂದೆ ಓದಿ...
ಆ ನೋವು, ಕಿರಿಕಿರಿ ಶತ್ರುವಿಗೆ ಬೇಡ, ಅದು ನನ್ನಿಂದಲೇ ಕೊನೆಗೊಳ್ಳಲಿ ಎಂದು ಪ್ರತಿಯೊಬ್ಬ ಪೈಲ್ಸ್ (ಮೂಲವ್ಯಾಧಿ) ರೋಗಿಯು ಬೇಡಿಕೊಳ್ಳುತ್ತಾನೆ. ಅದರ ನೋವು ಅಪಾರ. ಕೆಲವೊಮ್ಮೆ ಶೌಚಾಲಯದಲ್ಲಿ ಕುಳಿತುಕೊಳ್ಳಲು ಆಗದು. ನೋವಿನಿಂದ ನರಳಾಟ ಯಾರಿಗೂ ಬೇಡ ಎನ್ನುವಂತಾಗುತ್ತದೆ. ಆದರೆ ಜೀವನಶೈಲಿಯಿಂದಾಗಿ ಬರುವ ಇದನ್ನು ನಾವು ಸ್ವೀಕರಿಸಲೇ ಬೇಕು ಮತ್ತು ನೋವನ್ನು ಅನುಭವಿಸಬೇಕು. ಮೂಲವ್ಯಾಧಿಗೆ ಆಯುರ್ವೇದ ಚಿಕಿತ್ಸೆ-ತ್ವರಿತ ಸಾಂತ್ವನ
ರಕ್ತನಾಳಗಳು ಗುದನಾಳದ ಪ್ರದೇಶದಲ್ಲಿ ಉಬ್ಬಿ ಮತ್ತು ಊತ ಉಂಟಾದಾಗ ನೋವು ಹಾಗೂ ಅತಿಯಾದ ರಕ್ತಸ್ರಾವ ಉಂಟಾಗುತ್ತದೆ. ಮಲಬದ್ಧತೆ, ಜೀರ್ಣಾಂಗದ ಸಮಸ್ಯೆ, ಭಾರವಾದ ವಸ್ತುಗಳನ್ನು ಎತ್ತುವುದು, ಕರುಳನ್ನು ಕೆರಳಿಸುವ ಸಹಲಕ್ಷಣಗಳು, ಗರ್ಭಧಾರಣೆ ವೇಳೆ ಕರುಳಿಗೆ ಒತ್ತಡ ಬೀಳುವುದು, ಬೊಜ್ಜು ಮತ್ತು ಗುದ ಸಂಭೋಗ ಇತ್ಯಾದಿ ಪೈಲ್ಸ್ ಅಥವಾ ಮೂಲವ್ಯಾಧಿ ಕಾಣಿಸಿಕೊಳ್ಳಲು ಪ್ರಮುಖ ಕಾರಣವಾಗಿದೆ...ಚಿಂತಿಸದಿರಿ ಪೈಲ್ಸ್ ರೋಗಕ್ಕೆ ಅನಾವಶ್ಯಕ ದುಡ್ಡು ಖರ್ಚು ಮಾಡುವುದರ ಬದಲು ಈ ಮನೆಮದ್ದನ್ನು ಒಮ್ಮೆ ಪ್ರಯತ್ನಿಸಿ ನೋಡಿ....

ಮೂಲಂಗಿಯ ಜ್ಯೂಸ್ ಮಾಡಿ ಕುಡಿಯಿರಿ...
ಒಂದೆರಡು ಮೂಲಂಗಿಯನ್ನು ಚೆನ್ನಾಗಿ ತೊಳೆದು, ಸಣ್ಣಗೆ ಕತ್ತರಿಸಿ ಮಿಕ್ಸಿಯಲ್ಲಿ ನೀರಿನೊಂದಿಗೆ ಗೊಟಾಯಿಸಿ ಇದಕ್ಕೆ ಕೊಂಚವೇ ಉಪ್ಪು ಸೇರಿಸಿ ದಿನಕ್ಕೆ ಎರಡು ಬಾರಿ ಒಂದೊಂದು ಲೋಟ ಕುಡಿಯಿದರೆ, ಮೂಲವ್ಯಾಧಿ ನಿಯಂತ್ರಣಕ್ಕೆ ಬರುವುದು.

ಮುಟ್ಟಿದರೆ ಮುನಿ ಗಿಡದ ಎಲೆಗಳು
ಮುಟ್ಟಿದರೆ ಮುನಿ (ನಾಚಿಕೆ ಮುಳ್ಳು) ಗಿಡದ ಎಲೆಗಳನ್ನು ಒಣಗಿಸಿ ಪುಡಿ ಮಾಡಿ ಒಂದು ಲೋಟ ನೀರಿಗೆ ಒಂದು ಚಮಚ ಪುಡಿ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಮೂಲವ್ಯಾಧಿ ಸಮಸ್ಯೆ ನಿವಾರಣೆಗೆ ಒಳ್ಳೆಯದು.

ಸುವರ್ಣ ಗೆಡ್ಡೆಯ ಸಿಪ್ಪೆ
ಸುವರ್ಣ ಗೆಡ್ಡೆಯನ್ನು ಸಿಪ್ಪೆ ತೆಗೆದು ಒಣಗಿಸಿ ಕುಟ್ಟಿ ಪುಡಿ ಮಾಡಿ, ಆ ಪುಡಿಯನ್ನು ಪ್ರತಿ ದಿನ ಒಂದು ಚಮಚದಂತೆ ಜೇನುತುಪ್ಪಬೆರೆಸಿ ತಿನ್ನುವುದು ಒಳ್ಳೆಯದು.

ಸರಿಯಾಗಿ ನೀರು ಕುಡಿಯಿರಿ
ಸಾಕಷ್ಟು ನೀರು ಕುಡಿಯಿರಿ, ತುಂಬಾ ನೀರು ಕುಡಿದರೆ ಮಲಬದ್ಧತೆ ಸಮಸ್ಯೆ ಉಂಟಾಗುವುದಿಲ್ಲ. ನೀರು ಕಮ್ಮಿ ಕುಡಿದು ಮಲಬದ್ಧತೆ ಸಮಸ್ಯೆ ಕಾಣಿಸಿದರೆ ಪೈಲ್ಸ್ ಕಾಯಿಲೆ ಉಂಟಾಗುವುದು, ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ.

ಬಾಳೆಹಣ್ಣು
ಬಾಳೆ ಹಣ್ಣನ್ನು ಒಂದು ಕಪ್ ನೀರಿನಲ್ಲಿ ಹಾಕಿ ಬೇಯಿಸಿ, ಈ ನೀರನ್ನು ದಿನದಲ್ಲಿ 3 ಬಾರಿ ಕುಡಿಯಿರಿ. ಈ ರೀತಿ ಕುಡಿಯುವುದರಿಂದ ಮೂಲವ್ಯಾಧಿ ಸಮಸ್ಯೆ ನೈಸರ್ಗಿಕವಾಗಿ ಕಡಿಮೆಯಾಗುವುದು.

ಮಾವಿನ ಗೊರಟು
ಮಾವಿನ ಗೊರಟು ಸಂಗ್ರಹಿಸಿ ನೆರಳಲ್ಲಿ ಒಣಗಿಸಿ ಪುಡಿಮಾಡಿ ಇಡುತ್ತಾರೆ. ಈ ಪುಡಿ ಆಯುರ್ವೇದ ಅಂಗಡಿಯಲ್ಲೂ ಸಿಗುತ್ತದೆ. ಅದರ ಪುಡಿಯನ್ನು ದಿನಕ್ಕೆ ಎರಡು ಚಮಚದಂತೆ ಮುಂಜಾನೆ ಮತ್ತು ಸಂಜೆ ಜೇನಿನೊಡನೆ ಸೇವಿಸಿ.

ನೆಲ್ಲಿಕಾಯಿ ಪುಡಿ
ಒಂದು ಚಮಚ ನೆಲ್ಲಿಕಾಯಿ ಪುಡಿಯನ್ನು ಮೊಸರಿನಲ್ಲಿ ಬೆರೆಸಿ ಸೇವಿಸಬೇಕು.... ಇನ್ನೊಂದು ವಿಧಾನವೆಂದರೆ ಮೂಲಂಗಿಯನ್ನು ಅರೆದು ಪೇಸ್ಟ್ ಮಾಡಿ ಹಾಲಿನಲ್ಲಿ ಮಿಶ್ರ ಮಾಡಿ ಅದನ್ನು ಗುದದ್ವಾರದ ಸುತ್ತಲೂ ಹಚ್ಚಿದರೆ ಊತ ಕಡಿಮೆ ಆಗುತ್ತದೆ.

ಹಾಗಾಲಕಾಯಿ
ಹಾಗಾಲಕಾಯಿಯ ಖಾದ್ಯಗಳನ್ನು ತಿನ್ನುವುದು ಒಳ್ಳೆಯದು. ಅದರ ಎಲೆಯನ್ನು ಹಿಂಡಿ ರಸ ತೆಗೆದು ಆ ರಸವನನ್ನು ಊದಿದ ಭಾಗಕ್ಕೆ ಹಚ್ಚಿದರೆ ಉರಿ ಕಡಿಮೆಯಾಗುವುದು.



Click it and Unblock the Notifications
