Latest Updates
-
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ!
ಮೂಲವ್ಯಾಧಿ ಬಂದರೆ ಆತಂಕ ಬೇಡ! ಇಲ್ಲಿದೆ ನೋಡಿ ಮನೆಮದ್ದುಗಳು
ಹೇಳಿಕೊಳ್ಳಲು ಸಾಧ್ಯವಾಗದೇ ಇರುವ ಕಾಯಿಲೆಗಳಲ್ಲೊಂದು ಮೂಲವ್ಯಾಧಿ. ಮಲವಿಸರ್ಜನೆ ಕಷ್ಟವಾಗಿ ನೋವು ನೀಡುವುದು ಈ ವ್ಯಾಧಿಯ ಪ್ರಮುಖ ಲಕ್ಷಣ, ಚಿಂತಿಸದಿರಿ ಆಯುರ್ವೇದ ಈ ತೊಂದರೆಗೆ ಅತ್ಯುತ್ತಮವಾದ ಪರಿಹಾರವನ್ನು ಒದಗಿಸಿದೆ, ಮುಂದೆ ಓದಿ...
ಆ ನೋವು, ಕಿರಿಕಿರಿ ಶತ್ರುವಿಗೆ ಬೇಡ, ಅದು ನನ್ನಿಂದಲೇ ಕೊನೆಗೊಳ್ಳಲಿ ಎಂದು ಪ್ರತಿಯೊಬ್ಬ ಪೈಲ್ಸ್ (ಮೂಲವ್ಯಾಧಿ) ರೋಗಿಯು ಬೇಡಿಕೊಳ್ಳುತ್ತಾನೆ. ಅದರ ನೋವು ಅಪಾರ. ಕೆಲವೊಮ್ಮೆ ಶೌಚಾಲಯದಲ್ಲಿ ಕುಳಿತುಕೊಳ್ಳಲು ಆಗದು. ನೋವಿನಿಂದ ನರಳಾಟ ಯಾರಿಗೂ ಬೇಡ ಎನ್ನುವಂತಾಗುತ್ತದೆ. ಆದರೆ ಜೀವನಶೈಲಿಯಿಂದಾಗಿ ಬರುವ ಇದನ್ನು ನಾವು ಸ್ವೀಕರಿಸಲೇ ಬೇಕು ಮತ್ತು ನೋವನ್ನು ಅನುಭವಿಸಬೇಕು. ಮೂಲವ್ಯಾಧಿಗೆ ಆಯುರ್ವೇದ ಚಿಕಿತ್ಸೆ-ತ್ವರಿತ ಸಾಂತ್ವನ
ರಕ್ತನಾಳಗಳು ಗುದನಾಳದ ಪ್ರದೇಶದಲ್ಲಿ ಉಬ್ಬಿ ಮತ್ತು ಊತ ಉಂಟಾದಾಗ ನೋವು ಹಾಗೂ ಅತಿಯಾದ ರಕ್ತಸ್ರಾವ ಉಂಟಾಗುತ್ತದೆ. ಮಲಬದ್ಧತೆ, ಜೀರ್ಣಾಂಗದ ಸಮಸ್ಯೆ, ಭಾರವಾದ ವಸ್ತುಗಳನ್ನು ಎತ್ತುವುದು, ಕರುಳನ್ನು ಕೆರಳಿಸುವ ಸಹಲಕ್ಷಣಗಳು, ಗರ್ಭಧಾರಣೆ ವೇಳೆ ಕರುಳಿಗೆ ಒತ್ತಡ ಬೀಳುವುದು, ಬೊಜ್ಜು ಮತ್ತು ಗುದ ಸಂಭೋಗ ಇತ್ಯಾದಿ ಪೈಲ್ಸ್ ಅಥವಾ ಮೂಲವ್ಯಾಧಿ ಕಾಣಿಸಿಕೊಳ್ಳಲು ಪ್ರಮುಖ ಕಾರಣವಾಗಿದೆ...ಚಿಂತಿಸದಿರಿ ಪೈಲ್ಸ್ ರೋಗಕ್ಕೆ ಅನಾವಶ್ಯಕ ದುಡ್ಡು ಖರ್ಚು ಮಾಡುವುದರ ಬದಲು ಈ ಮನೆಮದ್ದನ್ನು ಒಮ್ಮೆ ಪ್ರಯತ್ನಿಸಿ ನೋಡಿ....

ಮೂಲಂಗಿಯ ಜ್ಯೂಸ್ ಮಾಡಿ ಕುಡಿಯಿರಿ...
ಒಂದೆರಡು ಮೂಲಂಗಿಯನ್ನು ಚೆನ್ನಾಗಿ ತೊಳೆದು, ಸಣ್ಣಗೆ ಕತ್ತರಿಸಿ ಮಿಕ್ಸಿಯಲ್ಲಿ ನೀರಿನೊಂದಿಗೆ ಗೊಟಾಯಿಸಿ ಇದಕ್ಕೆ ಕೊಂಚವೇ ಉಪ್ಪು ಸೇರಿಸಿ ದಿನಕ್ಕೆ ಎರಡು ಬಾರಿ ಒಂದೊಂದು ಲೋಟ ಕುಡಿಯಿದರೆ, ಮೂಲವ್ಯಾಧಿ ನಿಯಂತ್ರಣಕ್ಕೆ ಬರುವುದು.

ಮುಟ್ಟಿದರೆ ಮುನಿ ಗಿಡದ ಎಲೆಗಳು
ಮುಟ್ಟಿದರೆ ಮುನಿ (ನಾಚಿಕೆ ಮುಳ್ಳು) ಗಿಡದ ಎಲೆಗಳನ್ನು ಒಣಗಿಸಿ ಪುಡಿ ಮಾಡಿ ಒಂದು ಲೋಟ ನೀರಿಗೆ ಒಂದು ಚಮಚ ಪುಡಿ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಮೂಲವ್ಯಾಧಿ ಸಮಸ್ಯೆ ನಿವಾರಣೆಗೆ ಒಳ್ಳೆಯದು.

ಸುವರ್ಣ ಗೆಡ್ಡೆಯ ಸಿಪ್ಪೆ
ಸುವರ್ಣ ಗೆಡ್ಡೆಯನ್ನು ಸಿಪ್ಪೆ ತೆಗೆದು ಒಣಗಿಸಿ ಕುಟ್ಟಿ ಪುಡಿ ಮಾಡಿ, ಆ ಪುಡಿಯನ್ನು ಪ್ರತಿ ದಿನ ಒಂದು ಚಮಚದಂತೆ ಜೇನುತುಪ್ಪಬೆರೆಸಿ ತಿನ್ನುವುದು ಒಳ್ಳೆಯದು.

ಸರಿಯಾಗಿ ನೀರು ಕುಡಿಯಿರಿ
ಸಾಕಷ್ಟು ನೀರು ಕುಡಿಯಿರಿ, ತುಂಬಾ ನೀರು ಕುಡಿದರೆ ಮಲಬದ್ಧತೆ ಸಮಸ್ಯೆ ಉಂಟಾಗುವುದಿಲ್ಲ. ನೀರು ಕಮ್ಮಿ ಕುಡಿದು ಮಲಬದ್ಧತೆ ಸಮಸ್ಯೆ ಕಾಣಿಸಿದರೆ ಪೈಲ್ಸ್ ಕಾಯಿಲೆ ಉಂಟಾಗುವುದು, ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ.

ಬಾಳೆಹಣ್ಣು
ಬಾಳೆ ಹಣ್ಣನ್ನು ಒಂದು ಕಪ್ ನೀರಿನಲ್ಲಿ ಹಾಕಿ ಬೇಯಿಸಿ, ಈ ನೀರನ್ನು ದಿನದಲ್ಲಿ 3 ಬಾರಿ ಕುಡಿಯಿರಿ. ಈ ರೀತಿ ಕುಡಿಯುವುದರಿಂದ ಮೂಲವ್ಯಾಧಿ ಸಮಸ್ಯೆ ನೈಸರ್ಗಿಕವಾಗಿ ಕಡಿಮೆಯಾಗುವುದು.

ಮಾವಿನ ಗೊರಟು
ಮಾವಿನ ಗೊರಟು ಸಂಗ್ರಹಿಸಿ ನೆರಳಲ್ಲಿ ಒಣಗಿಸಿ ಪುಡಿಮಾಡಿ ಇಡುತ್ತಾರೆ. ಈ ಪುಡಿ ಆಯುರ್ವೇದ ಅಂಗಡಿಯಲ್ಲೂ ಸಿಗುತ್ತದೆ. ಅದರ ಪುಡಿಯನ್ನು ದಿನಕ್ಕೆ ಎರಡು ಚಮಚದಂತೆ ಮುಂಜಾನೆ ಮತ್ತು ಸಂಜೆ ಜೇನಿನೊಡನೆ ಸೇವಿಸಿ.

ನೆಲ್ಲಿಕಾಯಿ ಪುಡಿ
ಒಂದು ಚಮಚ ನೆಲ್ಲಿಕಾಯಿ ಪುಡಿಯನ್ನು ಮೊಸರಿನಲ್ಲಿ ಬೆರೆಸಿ ಸೇವಿಸಬೇಕು.... ಇನ್ನೊಂದು ವಿಧಾನವೆಂದರೆ ಮೂಲಂಗಿಯನ್ನು ಅರೆದು ಪೇಸ್ಟ್ ಮಾಡಿ ಹಾಲಿನಲ್ಲಿ ಮಿಶ್ರ ಮಾಡಿ ಅದನ್ನು ಗುದದ್ವಾರದ ಸುತ್ತಲೂ ಹಚ್ಚಿದರೆ ಊತ ಕಡಿಮೆ ಆಗುತ್ತದೆ.

ಹಾಗಾಲಕಾಯಿ
ಹಾಗಾಲಕಾಯಿಯ ಖಾದ್ಯಗಳನ್ನು ತಿನ್ನುವುದು ಒಳ್ಳೆಯದು. ಅದರ ಎಲೆಯನ್ನು ಹಿಂಡಿ ರಸ ತೆಗೆದು ಆ ರಸವನನ್ನು ಊದಿದ ಭಾಗಕ್ಕೆ ಹಚ್ಚಿದರೆ ಉರಿ ಕಡಿಮೆಯಾಗುವುದು.



Click it and Unblock the Notifications