Latest Updates
-
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ!
ಅಡುಗೆಮನೆಯ ಪುಟ್ಟ ಬೆಳ್ಳುಳ್ಳಿಯನ್ನು ಎಷ್ಟು ಹೊಗಳಿದರೂ ಸಾಲದು!
ಬೆಳ್ಳುಳ್ಳಿಯಲ್ಲಿರುವ ಆರೋಗ್ಯ ಲಾಭಗಳ ಬಗ್ಗೆ ಈಗಾಗಲೇ ಬೋಲ್ಡ್ ಸ್ಕೈ ಹಲವಾರು ಲೇಖನಗಳ ಮೂಲಕ ಓದುಗರಿಗೆ ಮಾಹಿತಿ ನೀಡಿದೆ. ಬೆಳ್ಳುಳ್ಳಿಯಲ್ಲಿರುವ ಆರೋಗ್ಯ ಗುಣಗಳನ್ನು ತಿಳಿದುಕೊಂಡಿರುವ ಓದುಗರು ಇದನ್ನು ಬಳಸಿಕೊಂಡು ಅದರ ಲಾಭ ಪಡೆದಿದ್ದಾರೆ. ಪ್ರತಿಯೊಂದು ಅಡುಗೆ ಮನೆಯಲ್ಲೂ ಸಿಗುವ ಬೆಳ್ಳುಳ್ಳಿಯನ್ನು ಖಾದ್ಯಕ್ಕೆ ರುಚಿ ಹಾಗೂ ಸುವಾಸನೆ ಹೆಚ್ಚಿಸಲು ಬಳಸಿಕೊಳ್ಳಲಾಗುತ್ತದೆ. ಆದರೆ ಹಿಂದಿನಿಂದಲೂ ಭಾರತೀಯರು ಬೆಳ್ಳುಳ್ಳಿಯಲ್ಲಿರುವ ಆರೋಗ್ಯ ಲಾಭಗಳನ್ನು ತಿಳಿದುಕೊಂಡು ವಿವಿಧ ರೀತಿಯಿಂದ ಅದನ್ನು ಬಳಸಿಕೊಂಡು ಬರುತ್ತಾ ಇದ್ದಾರೆ. ಹೆಚ್ಚಿನ ಆಯುರ್ವೇದ ಔಷಧಿಗಳಿಗೂ ಬೆಳ್ಳುಳ್ಳಿ ಬಳಸಲಾಗುತ್ತದೆ.
ಬೆಳ್ಳುಳ್ಳಿಯಲ್ಲಿ ಅಲಿಸಿನ್ ಎನ್ನುವ ಅಂಶವು ಪ್ರತಿಜೀವಕದಂತೆ ಕೆಲಸ ಮಾಡುವುದು ಮಾತ್ರವಲ್ಲದೆ ಹಲವಾರು ರೀತಿಯ ಸೋಂಕು ನಿವಾರಿಸುವುದು. ಬೆಳ್ಳುಳ್ಳಿಯಲ್ಲಿ ವಿಟಮಿನ್ ಸಿ, ಕ್ಯಾಲ್ಸಿಯಂ, ವಿಟಮಿನ್ ಬಿ6, ಕಬ್ಬಿನಾಂಶ ಮತ್ತು ಪೊಟಾಶಿಯಂನಂತಹ ಹಲವಾರು ಪೋಷಕಾಂಶಗಳು ಇದೆ. ಪ್ರತಿನಿತ್ಯವೂ ಬೆಳ್ಳುಳ್ಳಿ ಸೇವಿಸಿದರೆ ಅದರಿಂದ ದೇಹದ ಪ್ರತಿರೋಧಕ ಶಕ್ತಿ ಹೆಚ್ಚಾಗುವುದು. ಈ ಲೇಖನದಲ್ಲಿ ಮಳೆಗಾಲದಲ್ಲಿ ಕಾಣಿಸಿಕೊಳ್ಳುವಂತಹ ಕಾಲಿನ ಶಿಲೀಂಧ್ರ ಸಮಸ್ಯೆಯನ್ನು ಬೆಳ್ಳುಳ್ಳಿಯಿಂದ ನಿವಾರಣೆ ಮಾಡುವುದು ಹೇಗೆ ಎಂದು ತಿಳಿಯುವುದು. ಓದು ಮುಂದುವರಿಯಲಿ....

ಜಜ್ಜಿದ ಬೆಳ್ಳುಳ್ಳಿ ಪೇಸ್ಟ್
*3-6 ಬೆಳ್ಳುಳ್ಳಿ ಎಸಲುಗಳನ್ನು ತೆಗೆದುಕೊಂಡು ಸರಿಯಾಗಿ ಜಜ್ಜಿ ಪೇಸ್ಟ್ ಮಾಡಿ.
*ಇದಕ್ಕೆ ಒಂದು ಚಮಚ ಆಲಿವ್ ತೈಲ ಹಾಕಿ ಸರಿಯಾಗಿ ಮಿಶ್ರಣ ಮಾಡಿ.
*ಹತ್ತಿ ಉಂಡೆ ಬಳಸಿ ಈ ಔಷಧಿಯನ್ನು ಕಾಲಿನ ಭಾದಿತ ಭಾಗಗಳಿಗೆ ಹಚ್ಚಿಕೊಳ್ಳಿ.
*ದಿನದಲ್ಲಿ 2-3 ಸಲ ಇದನ್ನು ಹಚ್ಚಿಕೊಳ್ಳಿ ಅಥವಾ ಸೋಂಕು ಕಡಿಮೆಯಾಗುವ ತನಕ ಮುಂದುವರಿಸಿ.

ಬೆಳ್ಳುಳ್ಳಿ ಮತ್ತು ಅಲೋವೆರಾ
*ಒಂದು ತುಂಡು ತಾಜಾ ಅಲೋವೆರಾದಿಂದ ಅದರ ಲೋಳೆ ತೆಗೆಯಿರಿ.
*ಕೆಲವು ಬೆಳ್ಳುಳ್ಳಿ ಎಸಲುಗಳನ್ನು ಸರಿಯಾಗಿ ಜಜ್ಜಿಕೊಂಡು ಅದರ ಪೇಸ್ಟ್ ಮಾಡಿಕೊಳ್ಳಿ.
*ಇದಕ್ಕೆ ಅಲೋವೆರಾ ಲೋಳೆ ಹಾಕಿಕೊಂಡು ಸರಿಯಾಗಿ ಮಿಶ್ರಣ ಮಾಡಿ.
*ಸೋಂಕು ತಾಗಿರುವ ಜಾಗಕ್ಕೆ ಇದನ್ನು ಹಚ್ಚಿಕೊಳ್ಳಿ ಮತ್ತು 30 ನಿಮಿಷ ಕಾಲ ಹಾಗೆ ಬಿಡಿ.
*ತಣ್ಣೀರಿನಿಂದ ಇದನ್ನು ತೊಳೆಯಿರಿ.
*ಒಳ್ಳೆಯ ಫಲಿತಾಂಶ ಪಡೆಯಲು ದಿನದಲ್ಲಿ ಎರಡು ಸಲ ಬಳಸಿ.

ಬೆಳ್ಳುಳ್ಳಿ ಮತ್ತು ಆ್ಯಪಲ್ ಸೀಡರ್ ವಿನೇಗರ್
*3-6 ಬೆಳ್ಳುಳ್ಳಿ ಎಸಲು ತೆಗೆದುಕೊಂಡು ಅದನ್ನು ಪೇಸ್ಟ್ ಮಾಡಿ.
*ಇದಕ್ಕೆ ಒಂದು ಚಮಚ ಆ್ಯಪಲ್ ಸೀಡರ್ ವಿನೇಗರ್ ಹಾಕಿ ಮಿಶ್ರಣ ಮಾಡಿ.
*ಹತ್ತಿ ಉಂಡೆ ಬಳಸಿಕೊಂಡು ಈ ಮಿಶ್ರಣವನ್ನು ಕಾಲಿನ ಭಾದಿತ ಜಾಗಕ್ಕೆ ಹಚ್ಚಿಕೊಳ್ಳಿ.
*ಹತ್ತು ನಿಮಿಷ ಕಾಲ ಹಾಗೆ ಬಿಟ್ಟು ಬಳಿಕ ತೊಳೆಯಿರಿ.
*ಒಳ್ಳೆಯ ಫಲಿತಾಂಶ ಬೇಕಾದರೆ ದಿನದಲ್ಲಿ ಎರಡು ಸಲ ಇದನ್ನು ಬಳಸಿ.

ಬೆಳ್ಳುಳ್ಳಿ ಮತ್ತು ಅಡುಗೆ ಸೋಡಾ
*ಕೆಲವು ಬೆಳ್ಳುಳ್ಳಿ ಎಸಲುಗಳನ್ನು ತೆಗೆದುಕೊಂಡು ಜಜ್ಜಿಕೊಳ್ಳಿ ಮತ್ತು ಅದರ ರಸ ತೆಗೆಯಿರಿ.
*ಇದನ್ನು ಒಂದು ಸಣ್ಣ ಪಾತ್ರೆಗೆ ಹಾಕಿಕೊಳ್ಳಿ ಮತ್ತು ಒಂದು ಚಮಚ ಅಡುಗೆ ಸೋಡಾದೊಂದಿಗೆ ಮಿಶ್ರಣ ಮಾಡಿ.
*ಇದನ್ನು ಭಾದಿತ ಜಾಗಕ್ಕೆ ಹಚ್ಚಿಕೊಂಡು ಅದು ಒಣಗಲು ಬಿಡಿ. ನೀರಿನಿಂದ ತೊಳೆದ ಬಳಿಕ ಸರಿಯಾಗಿ ಒರೆಸಿಕೊಳ್ಳಿ.
*ಒಳ್ಳೆಯ ಫಲಿತಾಂಶಕ್ಕಾಗಿ ವಾರದಲ್ಲಿ ಒಂದು ಸಲ ಹೀಗೆ ಮಾಡಿ.



Click it and Unblock the Notifications